Mandya
ಸೌಜನ್ಯ ಆತ್ಮಕ್ಜೆ ಶಾಂತಿಕೋರಿ ಏ.04 ರಂದು ಉಪವಾಸ ಸತ್ಯಾಗ್ರಹ : ಪಚ್ಚೆ ನಂಜುಂಡಸ್ವಾಮಿ
ಮಂಡ್ಯ: ಸೌಜನ್ಯ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ, ಸೌಜನ್ಯ ಆತ್ಮಕ್ಕೆ ಶಾಂತಿ ಕೋರುವ ಸಲುವಾಗಿ ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ವತಿಯಿಂದ ಏಪ್ರಿಲ್ ೦೪ರಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಅಪರಾಧಿಯನ್ನು ದೋಷ ಮುಕ್ತಗೊಳಿಸಿದ್ದು, ನಿಜವಾದ ಅಪರಾಧಿ ಯಾರು ಎಂಬುದನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಲಾಗುವುದು ಎಂದರು.
ಕೃತ್ಯ ನಡೆದ ಸಮಯ ಸಾಕ್ಯಾಧಾರ ಕಲೆ ಹಾಕದೇ ಕರ್ತವ್ಯ ಲೋಪ ಎಸಗಿದ ಪೊಲೀಸ್, ಸಿಐಟಿ, ಸಿಬಿಐ ಅಧಿಕಾರಿಗಳನ್ನು ವಶಕ್ಕೆ ಪಡೆದು, ಬ್ರೈನ್ ಮ್ಯಾಪಿಂಗ್ ಮಾಡಿ ಸತ್ಯಾಸತ್ಯತೆ ಹೊರತಂದು ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಸದರಿ ಹೋರಾಟದಲ್ಲಿ ಗಿರೀಶ್ ಮಟ್ಟಣ್ಣನವರ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರನ್ನಾಗಿ ಮದ್ದೂರು ರಾಮಕೃಷ್ಣಯ್ಯ, ರಾಜ್ಯ ಕಾಯಾಧ್ಯಕ್ಷರಾಗಿ ವಿದ್ಯಾಸಾಗರ್ ರಾಮೇಗೌಡ, ರಾಜ್ಯ ಉಪಾಧ್ಯಕ್ಷರು, ಜಿಲ್ಲಾಧ್ಯಕ್ಷರಾಗಿ ಇಂಡುವಾಳು ಚಂದ್ರಶೇಖರ್, ರಾಜ್ಯ ಉಪಾಧ್ಯಕ್ಷರುಗಳಾಗಿ ಶಂಬೂನಹಳ್ಳಿ ಸುರೇಶ್, ಮನು ಸೋಮಯ್ಯ, ಅಣ್ಣೂರು ಮಹೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಂಜೇಶ್ಗೌಡ, ಕೀಳಘಟ್ಟ ನಂಜುಂಡಯ್ಯ, ಸೋ.ಸಿ.ಪ್ರಕಾಶ್, ಉಮೇಶ್ ಮದ್ದೂರು, ಶಿವಳ್ಳಿ ಚಂದ್ರಶೇಖರ್, ರಾಮಲಿಂಗೇಗೌಡ, ಸಂತೋಷ್ ಮಂಡ್ಯಗೌಡ ಅವರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಶೀಘ್ರವಾಗಿ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು
ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಳ್ಳಿ ಚಂದ್ರಶೇಖರ್, ಅಣ್ಣೂರು ಮಹೇಂದ್ರ, ಸಂತೋಷ್ ಮಂಡ್ಯಗೌಡ, ಪಣಕನಹಳ್ಳೀ ನಾಗಣ್ಣ, ಚಿಕ್ಕಮರಿಗೌಡ, ಮರಿಚನ್ನೇಗೌಡ ಇದ್ದರು.
Mandya
ಹುಟ್ಟಿನಿಂದಲೇ ಬರುವ ಖಾಯಿಲೆಗಳನ್ನು ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಿ: ಕೆ.ಆರ್.ನಂದಿನಿ



Mandya
ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ
ಮಂಡ್ಯ : ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಅಪೌಷ್ಠಿಕ ಮಕ್ಕಳನ್ನು ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ ಮಾಡುವ ಮೂಲಕ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಂತೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು.
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿನ ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಕರೆತರಲು ಮಕ್ಕಳ ತಾಯಂದಿರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಈವರೆಗೆ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಎಷ್ಟು ಮಕ್ಕಳು ದಾಖಲಾಗಿದ್ದಾರೆ, ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಹೊರಬಂದಿದ್ದಾರೆ ಎಂಬುದರ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದರು. ಮುಂದಿನ ಸಭೆಯಲ್ಲಿ ಅಂಕಿ- ಅಂಶಗಳೊಂದಿಗೆ ವರದಿ ನೀಡಬೇಕು. ಮಕ್ಕಳು ಹಾಗೂ ತಾಯಿಂದಿರಿಗೆ 14 ದಿನ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದು ತಿಳಿಸಿದರು.
ಪೌಷ್ಠಿಕಾಂಶ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳಿಗೆ ಹಾಗೂ ತಾಯಂದಿರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರಿಂದ ವ್ಯಾಪಕ ಅರಿವು ಮೂಡಿಸಲು ಅಗತ್ಯ ಕ್ರಮವಹಿಸುವಂತೆ ಸಿಇಓ ಅವರು ಸೂಚಿಸಿದರು.

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾಮ್ (ವಿಪರೀತ ಕಡಿಮೆ ತೂಕ ಮಕ್ಕಳು) ಮತ್ತು ಮ್ಯಾಮ್ (ಸಾಧಾರಣ ತೂಕದ ಮಕ್ಕಳು) ಮಕ್ಕಳನ್ನು ಗುರುತಿಸಿ ಮಕ್ಕಳನ್ನು ಎನ್ ಆರ್ ಸಿ ಕೇಂದ್ರಕ್ಕೆ ಕರೆತರುವಂತಹ ಜವಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಆಯಾ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಚಿಸಬೇಕು ಎಂದು ತಿಳಿಸಿದರು.
ಅಪೌಷ್ಠಿಕ ಮಕ್ಕಳನ್ನು ಸ್ಕ್ರೀನಿಂಗ್ ಮಾಡಿ ಸ್ಯಾಮ್ ಹಾಗೂ ಮ್ಯಾಮ್ ಗುರುತಿಸಲಾಗುತ್ತಿದೆ ಆದರೆ ತಾಯಿ ಹಾಗೂ ಮಕ್ಕಳನ್ನು ಒಪ್ಪಿಸಿ ಎನ್ ಆರ್ ಸಿ ಗೆ ಕರೆತರಲು ಕಷ್ಟವಾಗುತ್ತಿದೆ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲರು ಒಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಪ್ರತಿ ಸೋಮವಾರ ಕ್ಷೇತ್ರ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ತಮ್ಮ ವ್ಯಾಪ್ತಿಯಲ್ಲಿ ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಹಾಗೂ ಎಷ್ಟು ಮಕ್ಕಳನ್ನು ಎನ್ ಆರ್ ಸಿ ಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಪ್ರಸ್ತುತಪಡಿಸಲು ಕೋರಿದರು.

ಎನ್ ಆರ್ ಸಿ ಯಲ್ಲಿ ದಾಖಲಾಗಿರುವ ಸ್ಯಾಮ್ ಮತ್ತು ಮ್ಯಾಮ್ ಮಕ್ಕಳ ತಾಯಿಂದರ ಜೊತೆ ಮಾತನಾಡಿದ ಅವರು ಮಕ್ಕಳಿಗೆ ಮನೆಯಲ್ಲಿ ನೀಡುತ್ತಿರುವ ಪೌಷ್ಠಿಕ ಆಹಾರದ ಬಗ್ಗೆ ತಾಯಿಂದಿರಿಂದ ಮಾಹಿತಿ ಪಡೆದರು. ಅಂಗನವಾಡಿ ಕಾರ್ಯಕರ್ತೆಯರು ನೀಡಿದ ಸಲಹೆಯ ಮೇರೆಗೆ ಎನ್ ಆರ್ ಸಿ ಕೇಂದ್ರಕ್ಕೆ ಬಂದಿರುವುದಾಗಿ ತಾಯಿಂದಿರು ಮಾಹಿತಿ ನೀಡಿದರು.
ಇದೇ ವೇಳೆ ಮಿಮ್ಸ್ ಹೆಚ್.ಒ.ಡಿ ಡಾ. ಶ್ರೀಧರ್, ಎನ್ ಆರ್ ಸಿ ನೊಡೆಲ್ ಅಧಿಕಾರಿ ಡಾ. ಮಂಜುಳಾ, ಆರ್. ಸಿ. ಹೆಚ್ ಡಾ. ಅಶ್ವತ್, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಸೋಮಶೇಖರ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Mandya
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿ.ಪಂ. ಸಿಇಓ ಭೇಟಿ
ಮಂಡ್ಯ: ಕೃಷ್ಣರಾಜಪೇಟೆ ತಾಲೂಕಿನ ರಂಗನಾಥ ಪುರ ಕ್ರಾಸ್ ಗ್ರಾಮ ಪಂಚಾಯಿತಿಯ ಆದಿಹಳ್ಳಿ ಗ್ರಾಮದಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಸತಿ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿ/ವಿದ್ಯಾರ್ಥಿನಿಯರ ಕೊಠಡಿಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ ಹಾಗೂ ಕುಡಿಯುವ ನೀರು, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.
ದ್ವಿತೀಯ ಪಿ.ಯು.ಸಿ ವಿಜ್ಞಾನ ಪ್ರಯೋಗಾಲಯಕ್ಕೆ ಭೇಟಿ ನೀಡಿ ಜೀವಕೋಶವನ್ನು ಸೂಕ್ಷ್ಮದರ್ಶಕ ಯಂತ್ರದ ಮೂಲಕ ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿರುವುದನ್ನು ವೀಕ್ಷಿಸಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಶಾಲೆಯಲ್ಲಿನ ಗಣಕಯಂತ್ರ ಕೊಠಡಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಭವಿಷ್ಯದಲ್ಲಿ ಯಾವ ರೀತಿಯ ಸೇವೆಗೆ ಸೇರಬೇಕು ಎಂಬ ಕನಸನ್ನು ಹೊಂದಿದ್ದೀರಿ ಎಂಬ ಬಗ್ಗೆ ಮಾಹಿತಿ ಪಡೆದು ಕನಸು ಸಾಕಾರಗೊಳಿಸಿಕೊಳ್ಳಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರಿಗೆ ಸಿ.ಬಿ.ಎಸ್.ಇ ಪಠ್ಯಕ್ರಮ ಇರುವ ಶಾಲೆ ಇದಾಗಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸುವಂತೆ ಪ್ರೋತ್ಸಾಹಿಸಿದರು.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗೀ ನಿಮ್ಮ ಜೀವನದ ಗುರಿ ತಲುಪಲು ಹಾಗೂ ನಿಮ್ಮ ಕನಸನ್ನು ಸಕಾರಗೊಳಿಸಿಕೊಳ್ಳಲು ವಿದ್ಯಾಬ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಂಡ್ಯ ಉಪವಿಭಾಗದ ತಾಲ್ಲೂಕು ವಿಸ್ತರಣಾಧಿಕಾರಿ ರುದ್ರೇಶ್, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.
-
Mandya10 hours agoಜಿಲ್ಲಾಧಿಕಾರಿಗಳಿಂದ ಗುತ್ತಲು ಕೆರೆಗೆ ಭೇಟಿ ಮತ್ತು ಪರಿಶೀಲನೆ
-
State8 hours agoIPL, ಟಿ-20 ವಿಶ್ವಕಪ್ ಕ್ರಿಕೆಟ್ ಸಂಬಂಧ ಸಿಎಂ, ಡಿಸಿಎಂರನ್ನು ಭೇಟಿ ಮಾಡಿದ ವೆಂಕಟೇಶ್ ಪ್ರಸಾದ್
-
Chamarajanagar2 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Mandya8 hours agoಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಡಿಸಿ ಭೇಟಿ
-
State3 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan6 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan5 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Kodagu2 hours agoಪ್ರಧಾನಿ ಬಗ್ಗೆ ಅವಹೇಳನ – ಮಡಿಕೇರಿಯ ಮೂವರ ಬಂಧನ
