Chamarajanagar
ಉತ್ತಂಗೇರಿ ಹುಂಡಿಯಲ್ಲಿ ಪಡಿತರ ವಿತರಣೆ
ದಿನಾಂಕ 27.02.2024ರಂದು ನಡೆದ ಕೆ ಡಿ ಪಿ ಸಭೆಯಲ್ಲಿ ಮಾಡಳ್ಳಿ ಗ್ರಾಮಕ್ಕೆ ಸೇರಿದ ಉತ್ತಂಗೇರಿ ಹುಂಡಿಯಲ್ಲಿ ಪಡಿತರ ವಿತರಣೆ ಮಾಡಿಕೊಡುವಂತೆ ಸಾಮೂಹಿಕ ನಾಯಕತ್ವ ರೈತರ ಸಂಘ ತಾಲೂಕು ಉಪಾಧ್ಯಕ್ಷರಾದ ಉತ್ತಂಗೇರ ಹುಂಡಿ ಮಹೇಶ್ ನೇತೃತ್ವದಲ್ಲಿ. ಗುಂಡ್ಲುಪೇಟೆ ಆಹಾರ ನಾಗರೀಕ ಸರಬರಾಜು & ಗ್ರಾಹಕರ ವ್ಯವಹಾರಗಳ ಇಲಾಖೆಗೆ ..ಮನವಿ ಮಾಡಿಕೊಂಡಿದ್ದರು ಅದರಂತೆ ಇಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವಿವರಗಳು ಇಲಾಖೆಯು ಉತಂಗೇರಹುಂಡಿ ಗ್ರಾಮಕ್ಕೆ ಆಗಮಿಸಿ ಮಡಳ್ಳಿ ಗ್ರಾಮದಲ್ಲಿರುವ . ಶ್ರೀ ಸೌಮ್ಯ ನ್ಯಾಯಬೆಲೆ ಅಂಗಡಿಯ. ಮಾಲೀಕರ ಒಪ್ಪಿಗೆ ಮೇರೆಗೆ ಒಂದೇ ಲೈಸನ್ಸ್ ಅಡಿಯಲ್ಲಿ ಮಡಳ್ಳಿ ಗ್ರಾಮ ಹಾಗೂ ಉತ್ತಂಗೇರ ಹುಂಡಿ ಗ್ರಾಮಗಳಲ್ಲಿ . ಪಡಿತರ ಪದಾರ್ಥಗಳನ್ನು ವಿತರಿಸಲು ಅನುವು ಮಾಡಿಕೊಟ್ಟರು.

ಈ ದಿನ ಸಾಮೂಹಿಕ ನಾಯಕತ್ವದ ರೈತ ಸಂಘ ಹಾಗೂ ಹಸಿರು ಸೇನೆಯ ಸಮ್ಮುಖದಲ್ಲಿ ಪಡಿತರ ಪದಾರ್ಥಗಳನ್ನು ಉತಂಗೇರ ಹುಂಡಿ ನ್ಯಾಯಬೆಲೆ ಅಂಗಡಿ ಉಪ ಕೇಂದ್ರದಲ್ಲಿ ವಿತರಿಸಲಾಯಿತು..
ಗ್ರಾಮಸ್ಥರ ಮನವಿ ಸ್ಪಂದಿಸಿದ ಆಹಾರ ನಾಗರೀಕ ಸರಬರಾಜು & ಗ್ರಾಹಕರ ವಿವರಗಳ ಇಲಾಖೆ ಅವರಿಗೆ ಉತ್ತಂಗೇರಹುಂಡಿ ಗ್ರಾಮಸ್ಥರು ಧನ್ಯವಾದಗಳು ತಿಳಿಸಿದರು
ಗುಂಡ್ಲುಪೇಟೆ ತಾಲೂಕಿನಲ್ಲಿ ಇಂತಹ ಸಮಸ್ಯೆಗಳು ಹಲವಾರು ಗ್ರಾಮಗಳಲ್ಲಿದ್ದು ಅವುಗಳನ್ನು ಸಹ ಬಗೆ ಬಗೆಹರಿಸಬೇಕೆಂದು ಸಾಮೂಹಿಕ ನಾಯಕತ್ವದ ರೈತರ ಸಂಘ ಹಾಗೂ ಹಸಿರು ಸೇನೆಯಗಳು. ಸಂಘಟನೆಗಳು ಮನವಿ ಮಾಡಿದರು
ಈ..ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾದ ವೀರನಪುರ ನಾಗಪ್ಪ ತಾಲೂಕು ಉಪಾಧ್ಯಕ್ಷ ಉತ್ತಂಗೇರ ಹುಂಡಿ ಮಹೇಶ್ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಯ್ಯನಪುರ ಪುಟ್ಟೇಗೌಡ ಹೊಸಪುರ ಮರಿಸ್ವಾಮಿ ಜಿಲ್ಲಾ ಉಪಾಧ್ಯಕ್ಷರಾದ.ಹಸಗೂಲಿ ಮಹೇಶ್..ತಾಲೂಕು ಮಂಡಳಿ ಅಧ್ಯಕ್ಷರಾದ ಮಾಡಳ್ಳಿ ಪಾಪಣ್ಣ ಕೋಟೆಕೆರೆ ಮಹದೇವ್ ಜಿಲ್ಲಾ ಸಂಚಾಲಕರದ ಶ್ರೀನಿವಾಸ್ ಬೆಟ್ಟದ ಮಾದಳ್ಳಿ. ಹಸಿರು ಸೇನೆ ತಾಲೂಕು ಅಧ್ಯಕ್ಷರಾದ ಪ್ರಸಾದ. ಕಮರಹಳ್ಳಿ ಲೋಕೇಶ್ ಕಾರ್ಯದರ್ಶಿ ಕೊಡಳ್ಳಿ ಸ್ವಾಮಿ ವಸಂತಗೌಡ ಕೂತನೂರು ರಾಜೇಶ್ ಬರಗಿ ಸಿದ್ದರಾಜು ಶಿವಪುರ ಗುರುಸ್ವಾಮಿ ಕೊಡಳ್ಳಿ ಸೋಮಶೇಖರ್ ಯಜಮಾನ ಶಿವಣ್ಣೇಗೌಡ ಬೆಳ್ಳಶೆಟ್ಟಿ ಬೆಟ್ಟದಮಾದಳ್ಳಿ ಸಿದ್ದರಾಜು ಮಂಚಹಳ್ಳಿ ನಂಜುಂಡ ಉತ್ತಂಗೇರ.ಹುಂಡಿ ಗ್ರಾಮಸ್ಥರು ಹಾಜರಿದ್ದರು.
Chamarajanagar
ಡಿ. 9, 10 ರಂದು ನಗರದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಡಿ.9 ಮತ್ತು 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ.ಮಾದೇಗೌಡ, ಕೆ. ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Chamarajanagar
ಮಹಾಪರಿನಿರ್ವಾಣ ದಿನ: ಮೊಂಬತ್ತಿ ಮೆರವಣಿಗೆ
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮೊಂಬತ್ತಿ ಮೆರವಣಿಗೆ ನಡೆಯಿತು.
ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ರಾಜಗಿರಿ ಬುದ್ಧವಿಹಾರ, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಸಹಯೋಗದಲ್ಲಿ ಹಾಗೂ ಗ್ರಾಮದ ಯಜಮಾನರುಗಳ ಮಾರ್ಗದರ್ಶನದಲ್ಲಿ ಇಂದು ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಲಾಯಿತು.

ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೊಂಬತ್ತಿ ಮೆರವಣಿಗೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ರಾಜಗಿರಿ ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.
Chamarajanagar
ಅಪರಿಚಿತ ಶವ : ವಾರಸುದಾರರ ಪತ್ತೆಗೆ ಸಹಕರಿಸಲು ಮನವಿ
ಚಾಮರಾಜನಗರ: ಬೇಡರಪುರ ಗ್ರಾಮದ ಬಳಿಯಿರುವ ಪ್ರೇಸ್ಟೀಜ್ ಫ್ಯಾಕ್ಟರಿಯ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ವಾರಸುದಾರರ ಸುಳಿವಿಗೆ ಸಹಕರಿಸಲು ಕೋರಲಾಗಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು, 158 ಸೆಂ.ಮೀ ಎತ್ತರ, ಕೋಲು ಮುಖ, ತೆಳ್ಳನೆ ಶರೀರ, ಎಣ್ಣೆಗೆಂಪು ಮೈ ಬಣ್ಣ ಹೊಂದಿದ್ದು, ಕುರುಚಲು ಗಡ್ಡ, ಕಪ್ಪು ಮೀಸೆ ಹಾಗೂ ಕಪ್ಪು, ಬಿಳಿ ಮಿಶ್ರಿತ ತಲೆ ಕೂದಲು ಇರುತ್ತದೆ. ಕಪ್ಪು, ಹಸಿರು ಮತ್ತು ಬಿಳಿ ಮಿಶ್ರಿತ ಗೆರೆಗಳುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದು, ಎದೆಯ ಭಾಗದಲ್ಲಿ ಎಸು ಎಂಬ ಹಚ್ಚೆ ಇರುತ್ತದೆ.

ಇವರ ವಾರಸದಾರರು ಇದ್ದಲ್ಲಿ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
-
Hassan23 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Mandya22 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Mysore21 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Kodagu23 hours agoಸ್ಥಳೀಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪೂರ್ಣಗೊಂಡ ಸಿದ್ಧತೆ:ನಾಳೆ ಮಾಯಮುಡಿಯಲ್ಲಿ ತೋಕ್ ನಮ್ಮೆ
-
Mysore20 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Chamarajanagar20 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Kodagu20 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
-
Hassan21 hours agoನಾವು ತೆರೆದ ಪುಸ್ತಕ ಎಲ್ಲವನ್ನೂ ಎದುರಿಸೋದಕ್ಕೆ ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ
