Chikmagalur
ಪಿ.ಎಂ. ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಪರಾಕ್ರಮ್ ದಿವಸ್ ಆಚರಣೆ

ಚಿಕ್ಕಮಗಳೂರು: ನಗರದ ಪಿ.ಎಂ. ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಗುರುವಾರ ಪರಾಕ್ರಮ್ ದಿವಸ್ ಆಚರಣೆ ನಡೆಸಲಾಯಿತು.
ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದ ಅಂಗವಾಗಿ ಪರಾಕ್ರಮ ಕಾರ್ಯಕ್ರಮವನ್ನು ಶಾಲೆಯಲ್ಲಿ ಅಂತಶಾಲಾ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿ ವಿಶೇಷವಾಗಿ ಆಚರಣೆ ಮಾಡಲಾಯಿತು
ಅಂತರ್ ಶಾಲಾ ರಸಪ್ರಶ್ನೆ ಸ್ಪರ್ಧೆಯನ್ನು ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಪಿ.ಮಾಲತಿ ಉದ್ಘಾಟಿಸಿದರು. ೯ ಮತ್ತು ೧೦ನೇ ತರಗತಿಯ ೧೧೦ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ನಗರದ ಸಾಯಿ ಏಂಜಲ್ಸ್, ಪ್ರಧಾನಮಂತ್ರಿ ಶ್ರೀ ಜವಾಹರ ನವೋದಯ ವಿದ್ಯಾಲಯ, ಇನ್ಫ್ಯಾಂಟ್ ಜೀಸಸ್ ಸ್ಕೂಲ್, ಸೇಂಟ್ ಮೇರಿಸ್ ಶಾಲೆ, ಮಹರ್ಷಿ ವಿದ್ಯಾ ಮಂದಿರ, ಮುರಾರ್ಜಿ ದೇಸಾಯಿ ಶಾಲೆಯ ಸಿ.ಬಿ.ಎಸ್.ಎ.ಇ. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಶಾಲೆಯ ಅರುಣ್ ಕುಮಾರ್ ರಾವತ್, ಸೂರಜ್ ಕುರಿಯಾಲ್, ಓಂ ನಾರಾಯಾಣ, ಎಸ್.ಟಿ.ಪ್ರಕಾಶ್ ಮತ್ತು ಬಿ.ಕೆ.ಚೈತ್ರ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು
Chikmagalur
ಭಾರೀ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮರ, ಕಿ.ಮೀ ಟ್ರಾಫಿಕ್ ಜಾಮ್

ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡಲ್ಲಿ ಬಿರುಗಾಳಿ ಮಳೆ ಅಬ್ಬರ ಮುಂದುವರಿದಿದ್ದು. ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಸರವಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಬಾಳೆಹೊನ್ನೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಹಸರವಳ್ಳಿ ಸಮೀಪ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು. ವಾಹನಗಳು ನಿಂತಲ್ಲೇ ನಿಂತಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾಸರರು ಪರದಾಟ ಪಡುವಂತಾಗಿತ್ತು. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Chikmagalur
ಧಾರಾಕಾರ ಮಳೆ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು. ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಗುದ್ದಿ ಕಾಲುವೆಗೆ ನುಗ್ಗಿತುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದಲ್ಲಿ ನಡೆದಿದೆ. ಸಖರಾಯಪಟ್ಟಣ – ಬಾಣಾವರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು. ಕಾರು ಗುದ್ದಿದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಪುಡಿ ಪುಡಿಯಾಗಿದ್ದು. ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Chikmagalur
ಮರ ಬಿದ್ದು ಬೈಕ್ ಸವಾರ ದು*ರ್ಮರಣ

ಚಿಕ್ಕಮಗಳೂರು : ಬೈಕ್ ಸವಾರನ ಮೇಲೆ ಮರದ ಕೊಂಬೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಎಲೆಕಲ್ ಎಲೆಕಲ್ಲು ಬಳಿ ನಡೆದಿದೆ. ಖಾoಡ್ಯಾ ಹೋಬಳಿಯ ಕಡಬಗೆರೆ ನಿವಾಸಿಯಾದ ಅನಿಲ್ ರುಜಾರಿಯೋ (55) ಮರದ ಕೊಂಬೆ ಬಿದ್ದು ಮೃತಪಟ್ಟ ಬೈಕ್ ಸವಾರ. ಬೈಕ್ ನಲ್ಲಿ ತೆರಳುತ್ತಿದ್ದಾಗ ಏಕಾಏಕಿಮರದ ಕೊಂಬೆ ಅನಿಲ್ ರುಜಾರಿಯೋ ಮೇಲೆ ಬಿದ್ದಿದೆ. ಆಂಬುಲೆನ್ಸ್ ಬರೋದು ತಡವಾಗುತ್ತೆಂದು ಅಗ್ನಿಶಾಮಕ ವಾಹನದಲ್ಲಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆಯಲ್ಲಿ ತೀವ್ರ ಗಾಯಗೊಂಡಿದ್ದ ಅನಿಲ್ ಸಾವನ್ನಪ್ಪಿದ್ದಾರೆ. ಇನ್ನು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಇದು 4ನೇ ಬಲಿಯಾಗಿದೆ.
-
Hassan12 hours ago
ಹಾಸನದ ಖಾಸಗಿ ಶಾಲಾ-ಕಾಲೇಜಿಗೆ ಬಾಂಬ್ ಹಾಕುವ ಬೆದರಿಕೆ
-
Kodagu10 hours ago
ಪಂಚಾಯತಿಯಲ್ಲಿ ಶೇ.25 ನಿಧಿಯಲ್ಲಿ ಹೊಲಿಗೆ ಯಂತ್ರ ವಿತರಣೆ.
-
Mandya6 hours ago
ಕೆ.ಆರ್.ಪೇಟೆ ದೇವಿರಮ್ಮಣ್ಣಿ ಕೆರೆಯಲ್ಲಿ ಬಲೆಗೆ ಬಿದ್ದ ಬಂಗಾರ ಬಣ್ಣದ ಗೌರಿ ಮೀನು
-
Chikmagalur13 hours ago
ಕೊಪ್ಪ ತಾಲ್ಲೂಕಿನಲ್ಲಿ ಬೃಹತ್ ಗಾತ್ರದ ಮರ ಉರುಳಿ ರಸ್ತೆ ಬಂದ್
-
Kodagu12 hours ago
ಕೊಡವರ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಅಪಾರ
-
Kodagu13 hours ago
ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೊಡವ ಸಮಾಜ
-
Chikmagalur10 hours ago
ಮರ ಬಿದ್ದು ಬೈಕ್ ಸವಾರ ದು*ರ್ಮರಣ
-
Mysore9 hours ago
ಜಾತಿಗಣತಿ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ?