Connect with us

Hassan

ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್

Published

on

Prajwal Revanna: ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್, ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಆದ ಸಂಸದ !

Prajwal Revanna: ದೇಶದಲ್ಲಿ ತೀವ್ರ ಆಕ್ರೋಶ ಸೃಷ್ಟಿಸಿದ್ದ ಹಾಸನ ಸರಣಿ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಕಡೆಗೂ ಪೊಲೀಸ್ ಪಾಲಾಗಿದ್ದಾರೆ. ಕಳೆದ ತಿಂಗಳು 26ನೇ ತಾರೀಕಿನಂದು ಲೋಕಸಭಾ ಚುನಾವಣೆ ನಡೆದ ನಂತರ ಭಾರತ ತೊರೆದು ವಿದೇಶದಲ್ಲಿ ಭೂಗತರಾಗಿದ್ದ ಪ್ರಜ್ವಲ್ ರೇವಣ್ಣ ಇದೀಗ ಬೆಂಗಳೂರಿಗೆ ಬಂದಿಳಿದಿದ್ದಾರೆ. ಪ್ರಜ್ವಲ್ ನನ್ನು ನಿನ್ನೆ ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮರು ಕ್ಷಣವೇ ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.

2900 ಪ್ಲಾಸ್ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊಗಳು ಬಹಿರಂಗವಾಗಿವೆ ಎನ್ನುವ ಆಪಾದನೆಯ ಬೆನ್ನಲ್ಲೇ ಏ.26 ರಂದು ರಾತ್ರೋರಾತ್ರಿ ಜರ್ಮನಿಗೆ ಪಲಾಯನ ಮಾಡಿದ್ದರು ಪ್ರಜ್ವಲ್ ರೇವಣ್ಣ. ತದನಂತರ ಕಳೆದ 35 ದಿನಗಳಿಂದ ಅವರು ಭೂಗತರಾಗಿದ್ದು, ಹಲೋ, ದೇಶಗಳನ್ನು ಕ್ರಮಿಸಿದ್ದರು. ಮೊದಲು ದುಬೈ, ನಂತರ ಲಂಡನ್ ಅಲ್ಲಿಂದ ಜರ್ಮನಿಗೆ ಕ್ರೇನ್ ಮೂಲಕ ಪ್ರಯಾಣ ಹೀಗೆ ತಮ್ಮ ಇರುವು ಗುರುತಿಸಿ ಕೊಳ್ಳದಂತೆ ವಾಸ್ತವ್ಯ ಬದಲಿಸಿದ್ದ ಆತ ಮೊನ್ನೆ ಮೊನ್ನೆ, ಅಂದರೆ ಮೇ 27ರಂದು ವಿದೇಶದಿಂದಲೇ ಒಂದು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಆತ ಶುಕ್ರವಾರ (ಮೇ 31) ರಾಜ್ಯಕ್ಕೆ ಮರಳಿ ಎಸ್‌ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು. ಇದೀಗ ಹೇಳಿದಂತೆಯೇ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್ ರೇವಣ್ಣ ಇಳಿದಾಗಿದೆ. ತಕ್ಷಣ ಅವರನ್ನು ಎಸ್ಐಟಿ ಪೊಲೀಸರು ಸುತ್ತುವರಿದಿದ್ದಾರೆ.

ಪ್ರಜ್ವಲ್ ರೇವಣ್ಣ ಶುಕ್ರವಾರ ರಾತ್ರಿ ಬರುವ ಸೂಚನೆ ಕೊಟ್ಟಂತೆ ಜರ್ಮನಿಯ ಮ್ಯೂನಿಚ್‌ನಿಂದ ಗುರುವಾರ ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಬುಕ್ಕಿಂಗ್ ಮಾಡಿದ್ದರು. ಲುಫ್ತಾನ್ನಾ ಏರ್‌ಲೈನ್ಸ್ ವಿಮಾನದಲ್ಲಿನ ಬ್ಯುಸಿನೆಸ್ ಕ್ಲಾಸ್ ನಲ್ಲಿ ಆತ ಟಿಕೆಟ್ ಕಾಯ್ದಿರಿಸಿದ್ದರು. ನಿನ್ನೆ ಸಂಜೆ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.05ಕ್ಕೆ ಮ್ಯೂನಿಚ್‌ನಿಂದ ಪ್ರಜ್ವಲ್ ರೇವಣ್ಣರನ್ನು ಹೊತ್ತ ವಿಮಾನ ತಡರಾತ್ರಿ 12.50 ಕ್ಕೆ ಬೆಂಗಳೂರಿಗೆ ಬಂದಿತ್ತು.

ಪ್ರಜ್ವಲ್‌ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆದಿತ್ತು. ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರೊಂದಿಗೆ ಬೆಳಗ್ಗೆ ಸಭೆ ನಡೆಸಿದ್ದರು. ಯಾವುದೇ ಕಾನೂನು ಸಮಸ್ಯೆಯಾಗದಂತೆ ಭದ್ರತಾ ಕ್ರಮಗಳ ಕುರಿತು ಎಸ್‌ಐಟಿ ಅಧಿಕಾರಿಗಳ ಮನವಿಯಂತೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು. ಇಂದು ಪೊಲೀಸರು ಅವರನ್ನು ತೀವ್ರ ತನಿಖೆಗೆ ಒಳಪಡಿಸುವ ಸಂಭವವಿದೆ.

Continue Reading
Click to comment

Leave a Reply

Your email address will not be published. Required fields are marked *

Hassan

ರಾಷ್ಟ್ರೀಯ ಹೆದ್ದಾರಿ -75ರಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಲತಾಕುಮಾರಿ ಆದೇಶ

Published

on

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕು ಬೆಂಗಳೂರು-ಮಂಗಳೂರು NH 75ರ 222+900ರಲ್ಲಿ ಮಂಜ್ರಾಬಾದ್ ಕೋಟೆಯ ಸಮೀಪ ದೋಣಿಗಲ್ ಪ್ರದೇಶದಲ್ಲಿ ರಸ್ತೆ ಕಾಮಗಾರಿ ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದು ಪಕ್ಕದ ಭೂಮಾಲಿಕರುಗಳು ಕಾಮಗಾರಿಯನ್ನು ತಡೆದು ನಿಲ್ಲಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಹಾಸನ ಬೈ ಪಾಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ-75ರ ದೋಣಿಗಲ್ ವಿಭಾಗದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಾಗಿರುವುದರಿಂದ ಫೆಬ್ರವರಿ .9 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು-ಮಂಗಳೂರು NH-75ರ 222+900 ರಿಂದ 223+700 ದೋಣಿಗಾಲ್ ರಸ್ತೆಯಿಂದ ಕೆಸಗನಹಳ್ಳಿ ರಸ್ತೆವರೆಗೆ ಕಾಮಗಾರಿ ನಡೆಯಲಿದ್ದು ಸದರಿ ಕಾಮಗಾರಿ ನೆಡೆದಿದ್ದು, ಕಾಮಗಾರಿ ನಡೆಯುವ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಪ್ರದೇಶ ಅವಧಿಯಲ್ಲಿ 5 ಜನರಿಗಿಂತ ಹೆಚ್ಚು ಗುಂಪಾಗಿ ಸೇರುವಂತ್ತಿಲ್ಲ, ಈ ಅವಧಿಯಲ್ಲಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತ್ತಿಲ್ಲ, ಯಾವುದೇ ರೀತಿಯ ಪ್ರಚಾರ ಸಾಮಾಗ್ರಿಗಳನ್ನು ಹಿಡಿದುಕೊಂಡು ಘೋಷಣೆ ಕೂಗಿ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ. ಈ ಆದೇಶವು ಕಾಮಗಾರಿ ನಡೆಸುವ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತ್ತಿಲ್ಲ ಹಾಗೂ ಮೇಲ್ಕಂಡ ನಿಬಂಧನೆಗಳನ್ನು ಉಲಂಘಿಸಿದಲ್ಲಿ ಸಂಭಂಧಪಟ್ಟವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Continue Reading

Hassan

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ದರ್ಜೆ–ವೇತನ, ಬಾಡಿಗೆ ಹೆಚ್ಚಳ: ಸರ್ಕಾರದ ವಿರುದ್ಧ ಎಂಎಲ್‌ಸಿ ಡಾ. ಸೂರಜ್ ರೇವಣ್ಣ ಅಸಮಾಧಾನ

Published

on

ಹಾಸನ: ನಿಗಮ–ಮಂಡಳಿ ಅಧ್ಯಕ್ಷರಿಗೆ ಸಚಿವ ದರ್ಜೆ ಸ್ಥಾನಮಾನ ನೀಡಿ, ವೇತನ ಹಾಗೂ ಬಾಡಿಗೆ ಹೆಚ್ಚಳ ಮಾಡುವ ವಿಚಾರದ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಎಂಎಲ್‌ಸಿ ಡಾ. ಸೂರಜ್ ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಲಗಳಲೆ ಗ್ರಾಮದಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿರುವುದು ಇಡೀ ರಾಜ್ಯದ ಜನರಿಗೆ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಹೇಳಿದರು. “ನಾವೇನು ವಿಶೇಷವಾಗಿ ಹೇಳಬೇಕಿಲ್ಲ. ಒಂದೆಡೆ ಗ್ಯಾರೆಂಟಿಗಳ ಹಾವಳಿ, ಮತ್ತೊಂದೆಡೆ ಅನುದಾನದ ಅಭಾವ ಎದುರಾಗಿದೆ” ಎಂದು ಟೀಕಿಸಿದರು.


ವಿರೋಧ ಪಕ್ಷದವರು ಮಾತ್ರವಲ್ಲ, ಆಡಳಿತ ಪಕ್ಷದ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ, ಅಭಿವೃದ್ಧಿ ಆಗುತ್ತಿಲ್ಲ ಎಂದು ಪಕ್ಷದ ಸಭೆಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಳಲು ತೋಡಿಕೊಳ್ಳುತ್ತಿರುವುದು ರಾಜ್ಯದ ಆರ್ಥಿಕ ಸ್ಥಿತಿಯ ಪ್ರತಿಬಿಂಬವಾಗಿದೆ. ಈ ವಿಚಾರಗಳು ಈಗ ಬಹಿರಂಗವಾಗಿ ಚರ್ಚೆಯಾಗುತ್ತಿವೆ ಎಂದು ಹೇಳಿದರು.

“ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸರ್ಕಾರ ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೋ ನೋಡಬೇಕಿದೆ. ಎಲ್ಲೂ ಶಾಶ್ವತವಾದ, ಸಾರ್ವಜನಿಕರಿಗೆ ನಿಜಕ್ಕೂ ಅನುಕೂಲವಾಗುವ ಹಾಗೂ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.


ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದ್ದರು. ಆದರೆ ಇಂದಿನ ಪರಿಸ್ಥಿತಿ ಮತ್ತು ಆಗಿನ ಪರಿಸ್ಥಿತಿಯನ್ನು ಹೋಲಿಸಿ ಚಿಂತನೆ ಮಾಡಬೇಕಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಸಲಹೆ ನೀಡಿದರು.
“ಈ ಗ್ಯಾರೆಂಟಿಗಳೆಲ್ಲಾ ಚುನಾವಣೆಗೆ ಮಾತ್ರ ಸೀಮಿತ. ಇದರಿಂದ ರಾಜ್ಯದ ಯಾರಿಗೂ ದೀರ್ಘಾವಧಿಯಲ್ಲಿ ಒಳ್ಳೆಯದಾಗುವುದಿಲ್ಲ” ಎಂದು ಡಾ. ಸೂರಜ್ ರೇವಣ್ಣ ಹೇಳಿದರು.

ವರಿಷ್ಠರ ತೀರ್ಮಾನವೇ ಅಂತಿಮ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಾಜಿ ಶಾಸಕ ಪ್ರೀತಂಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಅದರ ಬಗ್ಗೆ ನಮ್ಮ ಪಕ್ಷದ ಹಾಗೂ ಬಿಜೆಪಿ ಪಕ್ಷದ ವರಿಷ್ಠರು ಕುಳಿತು ತೀರ್ಮಾನ ಮಾಡುತ್ತಾರೆ. ನಮ್ಮ ಅಭಿಪ್ರಾಯದಲ್ಲಿ ಪಕ್ಷ ಸದೃಢವಾಗಿ ಸಾಗುತ್ತಿದೆ” ಎಂದರು.

ಡಿಸಿಸಿ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಹುತೇಕ ಚುನಾವಣೆಗಳಲ್ಲಿ ನಮ್ಮ ಪಕ್ಷ ಮೇಲುಗೈ ಸಾಧಿಸಿದ್ದು, ಯಾವುದೇ ಒಳ–ಹೊರ ಬೆಂಬಲವಿಲ್ಲದೆ ಜಯ ಸಾಧಿಸಿ ಉತ್ತಮ ಸ್ಥಿತಿಯಲ್ಲಿ ಇದೆ ಎಂದು ಹೇಳಿದರು. ಈ ಯಶಸ್ಸನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಸ್ಪಷ್ಟಪಡಿಸಿದರು.

 

“ಅವರು ಈ ರೀತಿಯ ಹೇಳಿಕೆಗಳನ್ನು ಹೊಸದಾಗಿ ಕೊಡುತ್ತಿಲ್ಲ. ಹಿಂದೆಯೂ ನೀಡಿದ್ದಾರೆ, ಈಗಲೂ ಕೊಡುತ್ತಿದ್ದಾರೆ, ಮುಂದೆಯೂ ಕೊಡುತ್ತಾರೆ. ಅದಕ್ಕೆ ಪ್ರತಿಕ್ರಿಯೆ ನೀಡದೇ ಇರುವುದು ಉತ್ತಮ” ಎಂದರು.

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಅದರ ಬಗ್ಗೆ ನಮಗೆ ಅಪಾರ ಗೌರವವಿದೆ. ನಮ್ಮ ಪಕ್ಷ ಹಾಗೂ ಬಿಜೆಪಿ ಕಾರ್ಯಕರ್ತರು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ಆದರೆ ಬಿಜೆಪಿ ಪಕ್ಷದಲ್ಲಿಯೇ ಕೆಲವರು ಈ ಪವಿತ್ರ ಮೈತ್ರಿಗೆ ತೊಂದರೆ ನೀಡುವ ದುರುದ್ದೇಶ ಹೊಂದಿದ್ದಾರೆ. ಆದರೆ ಅವರು ಅದರಲ್ಲಿ ಸಫಲರಾಗುವುದಿಲ್ಲ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಕುರಿತು ನಮ್ಮ ಪಕ್ಷದ ವರಿಷ್ಠರು, ಶಾಸಕರು ಹಾಗೂ ಜಿಲ್ಲೆಯ ಮುಖಂಡರ ಅಭಿಪ್ರಾಯ ಪಡೆದು ಮುಂದಿನ ಪ್ರತಿಕ್ರಿಯೆ ನೀಡಲಾಗುವುದು ಎಂದು ಡಾ. ಸೂರಜ್ ರೇವಣ್ಣ ಹೇಳಿದರು.

Continue Reading

Hassan

MCE ಆಡಳಿತ ಮಂಡಳಿ ಜಟಾಪಟಿ: ಫೆ. 12ಕ್ಕೆ ಅವಿಶ್ವಾಸ ನಿರ್ಣಯ ಮಂಡನೆಗೆ ಹೈಕೋರ್ಟ್ ಆದೇಶ

Published

on

ಹಾಸನ: ನಗರದ ಮಲೆನಾಡು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಜಟಾಪಟಿಗೆ ಸಂಬಂಧಿಸಿದಂತೆ ಹೈ ಕೋರ್ಟ್ ಮತ್ತೊಮ್ಮೆ ಅವಿಶ್ವಾಸ ನಿರ್ಣಯಕ್ಕೆ ಅವಕಾಶ ನೀಡಿದ್ದು ಕೋರ್ಟ್ ನಿಂದಲೇ ವೀಕ್ಷಕರನ್ನು ನೇಮಕ ಮಾಡಿದೆ.

ಮಲೆನಾಡು‌ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲಾ ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಬಿ.ಆರ್. ಗರುದೇವ್ ಅವರ ತಂಡ ಸಲ್ಲಿಸಿದ್ದ ಮೇಲ್ಮನವಿಯನ್ನು ಮಾನ್ಯ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಿತು.

ಹಾಸನ ಜಿಲ್ಲಾ ನ್ಯಾಯಾಲಯವು ಆರ್.ಟಿ. ದೇವೇಗೌಡ ಅವರನ್ನು ಅಧ್ಯಕ್ಷರಾಗಿ, ಜಗದೀಶ್ ಚೌಡುವಳ್ಳಿ ಅವರನ್ನು ಕಾರ್ಯದರ್ಶಿಯಾಗಿ ಹಾಗೂ ಪಾರ್ಶ್ವನಾಥ್ ಅವರನ್ನು ಖಜಾಂಚಿಗಳಾಗಿ ಮುಂದುವರಿಸಲು ಅನುಮತಿ ನೀಡಿದ್ದು, ಆಡಳಿತ ಮಂಡಳಿಯ ಕಾರ್ಯನಿರ್ವಹಣೆಗೆ ಯಾವುದೇ ಅಡ್ಡಿ ಉಂಟುಮಾಡಬಾರದೆಂದು ಮಧ್ಯಂತರ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.

ವಿಚಾರಣೆ ನಡೆಸಿದ ಹೈಕೋರ್ಟ್, ಫೆಬ್ರವರಿ 12ರಂದು 2/3 ಸಂಖ್ಯಾಬಲದ ಮಾನದಂಡದಂತೆ ಮತ್ತೊಮ್ಮೆ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶ ನೀಡಿದೆ. ಅಲ್ಲದೆ, ಅವಿಶ್ವಾಸ ನಿರ್ಣಯದ ಸಂಪೂರ್ಣ ಪ್ರಕ್ರಿಯೆಗೆ ಹೈಕೋರ್ಟ್‌ನಿಂದಲೇ ವೀಕ್ಷಕರನ್ನು ನೇಮಿಸಲಾಗಿದ್ದು, ಪ್ರಕ್ರಿಯೆಯ ಕುರಿತ ವರದಿಯನ್ನು ಫೆಬ್ರವರಿ 16ರಂದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಮಲೆನಾಡು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜಗದೀಶ್ ಚೌಡುವಳ್ಳಿ, ಒಟ್ಟು 24 ನಿರ್ದೇಶಕರ ಪೈಕಿ ಕನಿಷ್ಠ 16 ನಿರ್ದೇಶಕರ ಬೆಂಬಲ ಅವಿಶ್ವಾಸ ನಿರ್ಣಯಕ್ಕೆ ಅಗತ್ಯವಿದೆ. ಪ್ರಸ್ತುತ ತಮ್ಮ ಪರವಾಗಿ 10 ನಿರ್ದೇಶಕರ ಸ್ಪಷ್ಟ ಬೆಂಬಲವಿದ್ದು, ಇನ್ನೂ 2–3 ನಿರ್ದೇಶಕರು ಬೆಂಬಲ ನೀಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಾವು ಮೊದಲ ದಿನದಿಂದಲೇ ನ್ಯಾಯಾಲಯದ ಆದೇಶಗಳನ್ನು ಗೌರವಿಸಿ, ಸಂಪೂರ್ಣ ಕಾನೂನುಬದ್ಧವಾಗಿ ಆಡಳಿತ ನಡೆಸಿಕೊಂಡು ಬಂದಿದ್ದೇವೆ. ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಗೌರವದಿಂದ ಸ್ವಾಗತಿಸುತ್ತೇವೆ. ಮುಂದಿನ ಅವಿಶ್ವಾಸ ನಿರ್ಣಯದಲ್ಲಿಯೂ ಜಯ ಸಾಧಿಸಿ, ಜನಪರ ಆಡಳಿತವನ್ನು ಮುಂದುವರೆಸುವೆವು ಎಂಬ ದೃಢ ವಿಶ್ವಾಸವಿದೆ ಎಂದು ಅವರು ಹೇಳಿದರು.

Continue Reading

Trending

error: Content is protected !!