Connect with us

National - International

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲಿಸ್ ಠಾಣೆ ಮೇಲೆ ದಾಳಿ: ಬೊಮ್ಮಾಯಿ

Published

on

ನವದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನೇ ಚಾಲೆಂಜ್ ಮಾಡುವ ರೀತಿ ಕಾರ್ಯ ಚಟುವಟಿಕೆ ಮಾಡುತ್ತಿವೆ. ಪಿಎಫ್ ಐ ನಿಷೇಧ ಆಗಿದೆ. ಆದರೂ ಕೂಡ ಆ ಸಂಸ್ಥೆಯ ಕಾರ್ಯಕರ್ತರು ಬೇರೆ ಬೇರೆ ಹೆಸರಿನಲ್ಲಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ ಎಂದರು.

ಮಂಗಳೂರು, ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳಿಗೂ ಮೈಸೂರಿನಲ್ಲಿ ನಡೆದ ಘಟನೆಗೂ ಸಾಮ್ಯತೆ ಇದೆ. ನಮ್ಮ ಸರ್ಕಾರ ಇದ್ದಾಗ ಕಠಿಣ ಕ್ರಮ ಕೈಗೊಂಡು ಹಲವಾರು ಜನರನ್ನು ಜೈಲಿಗೆ ಹಾಕಿದ್ದೇವು. ಈ ಸರ್ಕಾರ ಬಂದ ಮೇಲೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿದರು. ಅವರು ಮಾಡಿದ ಘಟನೆಯ ವಿಡಿಯೊ ಸಿಸಿ ಟಿವಿಯಲ್ಲಿ ಸಿಕ್ಕರೂ ಅವರನ್ನು ಅಮಾಯಕರು ಎಂದರು. .ಅದರಿಂದ ಪ್ರೇರಣೆಗೊಂಡು ಈಗ ಮತ್ತೆ ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ದಾಳಿ, ಪೊಲಿಸ್ ವಾಹನದ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಪೊಲಿಸ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಡಿಸಿಪಿ ಕಾರ್ ಮೇಲೂ ದಾಳಿ ಮಾಡುವಷ್ಟು ಧೈರ್ಯ ಬಂದಿದೆ. ಈ ಧೈರ್ಯ ಎಲ್ಲಿಂದ ಬಂತು. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ, ರಾಜಕಾರಣಿಗಳ ಕುಮ್ಮಕ್ಕಿನಿಂದ ಈ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ ಎಂದು ಆರೋಪಿಸಿದರು.

ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಆಗಿದೆ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು. ಅವರು ಯಾವಾಗಲೂ ಸಂವಿಧಾನ, ರೂಲ್ ಆಫ್ ಲಾ ಅಂತ ಹೇಳುತ್ತಾರೆ. ಇವತ್ತು ರೂಲ್ ಆಫ್ ಲಾ ಪ್ರಕಾರ ಕ್ರಮ ಕೈಗೊಳ್ಳುತ್ತಾರಾ ? ಅಥವಾ ತುಷ್ಡೀಕರಣಕ್ಕಾಗಿ ಸುಮ್ಮನಾಗುತ್ತಾರೊ ಎನ್ನುವುದನ್ನು ಜನರು ನೋಡುತ್ತಾರೆ. ಇವರು ಸಂವಿಧಾನ ಬದ್ದವಾಗಿ ಆಡಳಿತ ಮಾಡುತ್ತಾರೊ ಅಥವಾ ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೊ ಎನ್ನುವನ್ನುದನ್ನು ನೋಡಿ ಜನರು ಮುಂದಿನ ತೀರ್ಮಾನ ಮಾಡುತ್ತಾರೆ‌. ಘಟನೆಯ ವಿಡಿಯೊವನ್ನು ಇಡಿ ಜಗತ್ತೇ ನೋಡಿದರು ಕಾಂಗ್ರೆಸ್ ನವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆಂದರೆ ಅವರು ಎಷ್ಟು ಭಂಡತನಕ್ಕೆ ಬಿದ್ದಿದ್ದಾರೆ ನೋಡಿ ಎಂದರು.

ಹೈಕಮಾಂಡ್ ತೀರ್ಮಾನ ಅಂತಿಮ: 
ರಾಜ್ಯದ ಬಿಜೆಪಿ ಗೊಂದಲ ಬಗೆ ಹರಿಸಲು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನಾವು ಅದಕ್ಕೆ ಬದ್ದ ರಾಗಿದ್ದೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಏನು ನೊಟಿಸ್ ಬಂದಿದೆ. ಅದಕ್ಕೆ ಅವರು ಏನು ಉತ್ತರ ಕೊಟ್ಟಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಅಂತಿಮವಾಗಿ ಹೈಕಮಾಂಡ್ ಪ್ರವೇಶ ಮಾಡಿರುವುದರಿಂದ ಇದು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ಮುಗಿಯುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.

Continue Reading

National - International

ಹನಿಟ್ರ್ಯಾಪ್‌ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

Published

on

ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್‌ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್‌ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್‌ ರಾಜ್ಯದ ವಕೀಲ ವಿನಯ್‌ ಕುಮಾರ್‌ ಸಿಂಗ್‌ ಎಂಬುವವರು ಸುಪ್ರೀಂಕೋರ್ಟ್‌ ಪಿಐಎಲ್‌ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ನೀವು ಜಾರ್ಖಂಡ್‌ ರಾಜ್ಯದವರು. ಇದರ ಬಗ್ಗೆ ನಿಮಗೇನು ಸಂಬಂಧ. ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್‌ಗೆ ಒಳಗಾಗುತ್ತಾರೆ. ಅದನ್ನು ಜಡ್ಜ್‌ಗಳು ನೋಡಿಕೊಳ್ಳುತ್ತಾರೆ ಎಂದು ವಕೀಲ ವಿನಯ್‌ ಕುಮಾರ್‌ ಸಿಂಗ್‌ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಈ ಮೂಲಕ ಹನಿಟ್ರ್ಯಾಪ್‌ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ ವಕೀಲ ವಿನಯ್‌ ಕುಮಾರ್‌ರಿಗೆ ತೀವ್ರ ಮುಖಭಂಗವಾಗಿದೆ.

Continue Reading

National - International

ಸುಪ್ರೀಂ ಕೋರ್ಟ್‌ ಅಂಗಳಕ್ಕೆ ಹನಿಟ್ರ್ಯಾಪ್‌ ಪ್ರಕರಣ

Published

on

ನವದೆಹಲಿ: ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್‌ ಪ್ರಕರಣವು ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಕರ್ನಾಟಕದಲ್ಲಿ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್‌ ನಡೆದಿದೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸುವಂತೆ ವಿನಯ್‌ಕುಮಾರ್‌ ಸಿಂಗ್‌ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (ಪಿಐಎಲ್‌) ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ವಿಧಾನಸಭೆ ಅಧಿವೇಶನದ ವೇಳೆ ಸ್ವತಃ ಸಚಿವರೇ ತಮ್ಮ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ವಿಶ್ವಾಸದ ದೃಷ್ಠಿಯಿಂದ ಕೋರ್ಟ್‌ ನಿಗಾದಲ್ಲಿ ಕೂಡಲೇ ತನಿಖೆ ನಡೆಸಬೇಕು ಎಂದು ವಿನಯ್‌ಕುಮಾರ್‌ ಸಿಂಗ್‌ ಮುಖ್ಯ ನಾಯಾಮೂರ್ತಿ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಶೀಘ್ರವೇ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ತೀರ್ಮಾನಿಸಿದ್ದು, ಹನಿಟ್ರ್ಯಾಪ್‌ ವಿಚಾರಣೆಯನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.

Continue Reading

National - International

ಅಣ್ಣಾಮಲೈ ಒಬ್ಬ ಪುವರ್‌ ಮ್ಯಾನ್‌: ಡಿಕೆ ಶಿವಕುಮಾರ್‌ ಹೀಗೇಳಿದ್ದೇಕೆ?

Published

on

ತಮಿಳುನಾಡು: ಜನಸಂಖ್ಯಾ ಆಧಾರಿತ ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಐಎನ್‌ಡಿಐಎ ಮೈತ್ತಿ ಪಕ್ಷಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು.

ಈ ಸಭೆಯಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭಾಗವಹಿಸಿದ್ದರು.

ಈ ಸಭೆ ವಿರುದ್ಧ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಮೇಕೆದಾಟು ಯೋಜನೆಗೆ ಮುಂದಾಗಿ ತಮಿಳುನಾಡು ರಾಜ್ಯದ ಜನರಿಗೆ ಅನ್ಯಾಯ ಮಾಡಿ, ಕ್ಷೇತ್ರ ಮರುವಿಂಗಡಣೆ ಸಭೆಗೆ ಹಾಜರಾಗಿದ್ದಾರೆ ಎಂದು ವಿರೋಧಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.

ಇನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆದ, ನಮ್ಮ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು ಶೋಷಿಸುತ್ತಿರುವ ಮತ್ತು ತಮಿಳುನಾಡು ಗಡಿ ಜಿಲ್ಲೆಗಳನ್ನು ಕೇರಳದ ವೈದ್ಯಕೀಯ ತ್ಯಾಜ್ಯವನ್ನು ಸುರಿಯುವ ಸ್ಥಳವನ್ನಾಗಿ ಪರಿವರ್ತಿಸುತ್ತಿರುವ ತಮ್ಮ INDIA ಮೈತ್ರಿಕೂಟದ ಪಾಲುದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಸಹೋದರ ಸಹೋದರಿಯರು ತಮ್ಮ ಮನೆಗಳ ಮುಂದೆ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬರೆದುಕೊಂಡದ್ದರು.

ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌, ಅಣ್ಣಾಮಲೈ ಒಬ್ಬ ಪುವರ್‌ ಮ್ಯಾನ್‌, ಕರ್ನಾಟಕದಲ್ಲಿ ಕೆಲಸ ನಿರ್ವಹಿಸುವ ವೇಳೆ ನನ್ನ ಶಕ್ತಿ ಬಗ್ಗೆ ಆತನಿಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆತನಿಗೆ ಶುಭವಾಗಲಿ ಎಂದು ನಸುನಕ್ಕರು.

https://x.com/annamalai_k/status/1903348499267326152

ಡಿಕೆ ರಿಯಾಕ್ಷನ್‌ಗೆ ಮತ್ತೊಂದು ಪೋಸ್ಟ್‌ ಮಾಡಿರುವ ಅಣ್ಣಾಮಲೈ, ಹೌದು, ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಗಮನಾರ್ಹ ಉಲ್ಲೇಖಕ್ಕಾಗಿ ಧನ್ಯವಾದಗಳು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ.

ಅಲ್ಲದೆ, ಈ ಬಡವನಿಗೆ ಶುಭ ಹಾರೈಸಿದ್ದಕ್ಕಾಗಿ ಧನ್ಯವಾದಗಳು ಮತ್ತು ಸಿದ್ದರಾಮಯ್ಯ ಅವರನ್ನು ಅವರ ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಲ್ಲಿ ನಿಮಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

Continue Reading

Trending

error: Content is protected !!