Education
Power Sprayer ಸಬ್ಸಿಡಿ ಯೋಜನೆ: ಕೇವಲ ರೂ.1,781 ಪಾವತಿಸಿ ಪವರ್ ಸ್ಪ್ರೇಯರ್ ಪಡೆಯಿರಿ.
ಕರ್ನಾಟಕ ರಾಜ್ಯ ಸರ್ಕಾರ ರೈತ ಬಂಧುಗಳಿಗೆ ಸಂತಸದ ಸುದ್ದಿ ನೀಡಿದ್ದು, ಸಹಾಯಧನ (ಸಬ್ಸಿಡಿ) ಯೋಜನೆಯಡಿ ಪವರ್ ಸ್ಪ್ರೇಯರ್ ಪಡೆಯುವ ಅವಕಾಶ ಲಭ್ಯವಾಗಿಸಿದೆ. ಈ ಯೋಜನೆಯಡಿ ಕೇವಲ, ರೂ.1,781/- ಪಾವತಿಸಿ ಯಂತ್ರವನ್ನು ಪಡೆಯಬಹುದಾಗಿದೆ.
ಯೋಜನೆಯ ಉದ್ದೇಶ:
ರೈತರಿಗೆ ಸ್ಪ್ರೇಯಿಂಗ್ ಕೆಲಸವನ್ನು ಸುಲಭಗೊಳಿಸಿ, ಸಮಯ ಮತ್ತು ಶ್ರಮ ಉಳಿಸಲು ಈ ಪವರ್ ಸ್ಪ್ರೇಯರ್ ಸಬ್ಸಿಡಿ ಯೋಜನೆ ರೂಪಿಸಲಾಗಿದೆ. ಯಂತ್ರದ ಸಹಾಯದಿಂದ ಕೀಟನಾಶಕ ಮತ್ತು ರಸಗೊಬ್ಬರಗಳನ್ನು ಸಮವಾಗಿ ಮತ್ತು ವೇಗವಾಗಿ ಸಿಂಪಡಿಸಬಹುದು.
ಸಹಾಯಧನದ ವಿವರಗಳು:
ಸಾಮಾನ್ಯ ವರ್ಗದ ರೈತರಿಗೆ:
ಪೂರ್ಣ ದರ: ₹10,219/-
ಸಬ್ಸಿಡಿ: ₹4,688/-
ರೈತನಿಂದ ಪಾವತಿ: ₹5,531/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ (SC/ST) ರೈತರಿಗೆ: ಪೂರ್ಣ ದರ: ₹9,375/-
ಸಬ್ಸಿಡಿ: ₹8,438/-
ರೈತನಿಂದ ಪಾವತಿ:₹1,781/-
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
1. ಆಧಾರ್ ಕಾರ್ಡ್
2. ಬ್ಯಾಂಕ್ ಪಾಸ್ ಬುಕ್
3. ಜಮೀನಿನ ಪಹಣಿ/RTC
4. ರೇಷನ್ ಕಾರ್ಡ್
5. ಪಾಸ್ಪೋರ್ಟ್ ಸೈಸ್ ಫೋಟೋ
6. ಬಾಂಡ್ ಪೇಪರ್
7. ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವ ವಿಧಾನ:
ರೈತ ಬಂಧುಗಳು ಸಮೀಪದ ರೈತ ಸಂಪರ್ಕ ಕೇಂದ್ರ (Raita Samparka Kendra)ಗೆ ಭೇಟಿ ನೀಡಿ ಅರ್ಜಿ ನಮೂನೆ ಪಡೆಯಬಹುದು.ಅಥವಾ ಆನ್ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.
ಎಲ್ಲಾ ದಾಖಲೆಗಳೊಂದಿಗೆ ಪೂರ್ಣ ಮಾಹಿತಿಯನ್ನು ಸಲ್ಲಿಸಿದ ಬಳಿಕ, ಸಹಾಯಧನ ಅನುಮೋದನೆ ದೊರೆಯುತ್ತದೆ.
ಸೂಚನೆಗಳು:
1.ಸಬ್ಸಿಡಿ ಲಭ್ಯತೆ ನಿಮ್ಮ ಜಿಲ್ಲೆಯ ಕೃಷಿ ಅಥವಾ ತೋಟಗಾರಿಕೆ ಇಲಾಖೆಯ ಅನುದಾಯ ಮಿತಿಯ ಮೇಲೆ ಅವಲಂಬಿತವಾಗಿರುತ್ತದೆ.
2.ಯಂತ್ರದ ಕಂಪನಿ ಹಾಗೂ ಮಾದರಿಗಳ ಪ್ರಕಾರ ದರದಲ್ಲಿ ಸ್ವಲ್ಪ ವ್ಯತ್ಯಾಸ ಇರಬಹುದು.
3.ಅರ್ಜಿಯ ವೇಳೆಗೆ ಅಧಿಕೃತ ದೃಢೀಕರಣ ಪತ್ರಗಳನ್ನು ಮಾತ್ರ ಸಲ್ಲಿಸುವುದು ಅತ್ಯಂತ ಅಗತ್ಯ.
ರಾಜ್ಯ ಸರ್ಕಾರ ನೀಡುತ್ತಿರುವ ಈ ಪವರ್ ಸ್ಪ್ರೇಯರ್ ಸಹಾಯಧನ ಯೋಜನೆಯು ರೈತರ ಶ್ರಮವನ್ನು ಕಡಿಮೆ ಮಾಡಿ ಉತ್ಪಾದನೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ. ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯಲ್ಲಿ ಮಾಹಿತಿ ಪಡೆದು ತಕ್ಷಣ ಅರ್ಜಿ ಸಲ್ಲಿಸಿ.
Education
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET) – 2025 ಅರ್ಜಿ ಆಹ್ವಾನ : ಹೊಸ ನಿಯಮ ತಿದ್ದುಪಡಿ ಪ್ರಕಟ!
ಈ ಬಾರಿ TET ನಿಯಮದಲ್ಲಿ ಪ್ರಮುಖ ತಿದ್ದುಪಡಿ ಮಾಡಲಾಗಿದ್ದು, ಶಿಕ್ಷಕ ವೃತ್ತಿಗೆ ಆಸಕ್ತರಾಗಿರುವ ಅಭ್ಯರ್ಥಿಗಳಿಗೆ ಇದು ಮಹತ್ವದ ಅವಕಾಶವಾಗಿದೆ.
ಪರೀಕ್ಷೆಯ ಕುರಿತು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET) ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 8ನೇ ತರಗತಿವರೆಗೆ ಶಿಕ್ಷಕರ ನೇಮಕಾತಿಗೆ ಅಗತ್ಯವಾದ ಅರ್ಹತಾ ಪರೀಕ್ಷೆಯಾಗಿದೆ. ಪ್ರತೀ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಈ ಪರೀಕ್ಷೆಯನ್ನು ಆಯೋಜಿಸುತ್ತದೆ.
ಪ್ರಮುಖ ತಿದ್ದುಪಡಿ: ಹಿಂದಿನ ಅಧಿಸೂಚನೆಯಲ್ಲಿ 1ರಿಂದ 5ನೇ ತರಗತಿಗಳಿಗೆ ಶಿಕ್ಷಕರಾಗಲು ಪದವಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ B.Ed ಓದುತ್ತಿರಬೇಕು ಅಥವಾ ಪಾಸಾಗಿರಬೇಕು ಎಂಬ ನಿಯಮ ಅನಿವಾರ್ಯವಾಗಿತ್ತು.ಆದರೆ ಈಗ ಈ ನಿಯಮವನ್ನು ಹಿಂಪಡೆಯಲಾಗಿದ್ದು, ಈ ಶರತ್ತು ಇದೀಗ ಕೈಬಿಡಲಾಗಿದೆ, ಹಾಗಾಗಿ ಪೂರ್ವ ನಿಯಮದಂತೆ ಅಭ್ಯರ್ಥಿಗಳಿಗೆ ಹೆಚ್ಚು ಸಡಿಲಿಕೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-11-2025
ಪರೀಕ್ಷೆಯ ದಿನಾಂಕ: 07-12-2025
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ(https://schooleducation.karnataka.gov.in/cacell/en) ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ತುಂಬಿ ಅರ್ಜಿ ಸಲ್ಲಿಸಬಹುದು.
TET ಹೊಸ ನಿಯಮ ತಿದ್ದುಪಡಿಯಿಂದ ಹೆಚ್ಚು ಅಭ್ಯರ್ಥಿಗಳಿಗೆ ಅವಕಾಶ ದೊರೆತಿದೆ. ಹಾಗೂ ಶಿಕ್ಷಕರಾಗುವ ಕನಸನ್ನು ಸಾಕಾರಗೊಳಿಸಲು ಇದು ಉತ್ತಮ ಅವಕಾಶವಾಗಿದೆ.
Education
ಬ್ಯಾಂಕ್ ಖಾತೆಗಳಲ್ಲಿ ಹೊಸ ಅಧ್ಯಾಯ: ಕುಟುಂಬದ ಭದ್ರತೆಗೆ ನಾಲ್ಕು ನಾಮನಿರ್ದೇಶಿತರ ಅವಕಾಶ
ಬ್ಯಾಂಕ್ ಖಾತೆದಾರರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೌಲಭ್ಯ ಸಿಗಲಿದೆ. ಈಗಿನವರೆಗೆ ಖಾತೆಗಳಲ್ಲಿ ಒಬ್ಬರ ನಾಮನಿರ್ದೇಶನಕ್ಕೆ ಮಾತ್ರ ಅವಕಾಶವಿತ್ತು, ನವೆಂಬರ್ 1, 2025ರಿಂದ ನಾಲ್ಕು ಜನರ ತನಕ ನಾಮನಿರ್ದೇಶಿತರನ್ನು ನೇಮಿಸಲು ಅವಕಾಶ ದೊರೆಯಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಹಣಕಾಸು ಇಲಾಖೆ ಪ್ರಕಟಿಸಿದೆ.
ಹೊಸ ನಿಯಮದ ಉದ್ದೇಶ :
ಖಾತೆದಾರರು ನಿಧನರಾದ ನಂತರ ಬ್ಯಾಂಕ್ ಹಣ ಅಥವಾ ಠೇವಣಿಗಳ ಹಕ್ಕು ಹಂಚಿಕೆಯಲ್ಲಿ ಅನಾವಶ್ಯಕ ತೊಂದರೆಗಳು, ಕಾನೂನು ವಿವಾದಗಳು ಉಂಟಾಗದಂತೆ ತಡೆಯುವುದು.
ಹೊಸ ನಾಮನಿರ್ದೇಶನ ವ್ಯವಸ್ಥೆ ಹೇಗಿರಲಿದೆ?
* ಖಾತೆದಾರರು ಗರಿಷ್ಠ ನಾಲ್ಕು ಜನರನ್ನು ನಾಮನಿರ್ದೇಶಿತರಾಗಿ ನಿಗದಿಪಡಿಸಬಹುದು.
* ಪ್ರತಿ ನಾಮನಿರ್ದೇಶಿತನಿಗೂ ಶೇಕಡಾವಾರು ಹಂಚಿಕೆ (ಉದಾ: 40%, 30%, 20%, 10%) ನಿಗದಿಪಡಿಸಬಹುದು.
* ಬ್ಯಾಂಕ್ ಲಾಕರ್ ಅಥವಾ ಸುರಕ್ಷಿತ ವಸ್ತುಗಳ ನಾಮನಿರ್ದೇಶನದ ಸಂದರ್ಭಗಳಲ್ಲಿ ಕ್ರಮಬದ್ಧ ನಾಮನಿರ್ದೇಶನ (successive nomination) ವ್ಯವಸ್ಥೆ ಅನ್ವಯಿಸುತ್ತದೆ.
* ಖಾತೆದಾರರು ಬಯಸಿದಾಗ ನಾಮನಿರ್ದೇಶನದ ಹೆಸರು ಅಥವಾ ಪ್ರಮಾಣ ಬದಲಾಯಿಸಲು ಅವಕಾಶವಿದೆ.
ಈ ನಿಯಮ ಜಾರಿಗೆ ಆಗುವ ದಿನಾಂಕ : 1/11/2025
ಬ್ಯಾಂಕ್ ಖಾತೆಗಳಿಗೆ ನಾಲ್ಕು ನಾಮನಿರ್ದೇಶನ ಅವಕಾಶ ನೀಡುವ ಹೊಸ ನಿಯಮ ಗ್ರಾಹಕರಿಗೆ ಭದ್ರತೆ, ಪಾರದರ್ಶಕತೆ ಮತ್ತು ವಿಶ್ವಾಸದ ಹೊಸ ಅಧ್ಯಾಯವನ್ನು ಆರಂಭಿಸಿದೆ. ಪ್ರತಿ ಖಾತೆದಾರರೂ ತಮ್ಮ ನಾಮನಿರ್ದೇಶನ ಮಾಹಿತಿಯನ್ನು ತಕ್ಷಣ ನವೀಕರಿಸಿಕೊಳ್ಳಬೇಕು.
Education
ಎಸ್.ಬಿ.ಐ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ಗೆ ಅರ್ಜಿ ಆಹ್ವಾನ : ₹75,000 ರೂ.ವರೆಗೆ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
ದೇಶದ ಪ್ರಮುಖ ಬ್ಯಾಂಕುಗಳಲ್ಲೊಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನ ಸಾಮಾಜಿಕ ಉದ್ದೇಶದ ವಿಭಾಗವಾದ ಎಸ್.ಬಿ.ಐ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ₹75,000 ವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ಈ ಯೋಜನೆ ಸಹಕಾರಿಯಾಗಲಿದೆ.
ಅರ್ಹತೆಗಳು:
* ಈ ಸ್ಕಾಲರ್ಶಿಪ್ಗೆ ಭಾರತದಲ್ಲಿನ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಲ್ಲಿ ಪ್ರಸ್ತುತ 6ನೇ ತರಗತಿಯಿಂದ 12ನೇ ತರಗತಿಯವರೆಗೆ ಅಥವಾ ಪದವಿ ಮಟ್ಟದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
* ಕುಟುಂಬದ ವಾರ್ಷಿಕ ಆದಾಯ ₹3 ಲಕ್ಷಕ್ಕಿಂತ ಕಡಿಮೆ ಇರಬೇಕು.
* ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ಅಂಕಗಳನ್ನು ಪಡೆದಿರಬೇಕು.
ಆರ್ಥಿಕ ನೆರವು:
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ₹10,000 ರಿಂದ ₹75,000 ವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಂತದ ಆಧಾರದ ಮೇಲೆ ಮೊತ್ತ ಬದಲಾಗುತ್ತದೆ.
ಅರ್ಜಿ ಹೇಗೆ ಸಲ್ಲಿಸಬೇಕು?
ಅರ್ಜಿಯನ್ನು ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ಸಲ್ಲಿಸಬೇಕು. ವಿದ್ಯಾರ್ಥಿಗಳು ಅಧಿಕೃತ ಪೋರ್ಟಲ್ www.sbifoundation.in ಅಥವಾ ಭೇಟಿ ನೀಡಿ ವಿದ್ಯಾರ್ಥಿಯ ವೈಯಕ್ತಿಕ ವಿವರಗಳು, ವಿದ್ಯಾಸಂಸ್ಥೆಯ ಪ್ರಮಾಣಪತ್ರಗಳು, ಅಂಕಪಟ್ಟಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಅಪ್ಲೋಡ್ ಮಾಡಿ ಅರ್ಜಿ ಪೂರ್ಣಗೊಳಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ನವೆಂಬರ್ 15, 2025.
ಈ ವಿದ್ಯಾರ್ಥಿವೇತನ ಯೋಜನೆಯು ಆರ್ಥಿಕ ಹಿನ್ನಡೆಯ ಕಾರಣದಿಂದ ವಿದ್ಯಾಭ್ಯಾಸ ತೊರೆಯುವ ವಿದ್ಯಾರ್ಥಿಗಳಿಗೆ ಹೊಸ ಆಶೆಯಾಗಿ ಪರಿಣಮಿಸಿದ್ದು, ಹಲವು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ದಾರಿಯನ್ನು ತೆರೆಯಲಿದೆ.ಇಂತಹ ಅವಕಾಶವನ್ನು ಸದುಪಯೋಗಿಸಿಕೊಳ್ಳಿ.
-
State8 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan5 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
State21 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Chikmagalur24 hours agoವಿದ್ಯಾರ್ಥಿಗಳಿಗೆ ಉಚಿತ ಪಠ್ಯ ನೋಟ್ ಪುಸ್ತಕ ವಿತರಣೆ, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ: ಮಧು ಬಂಗಾರಪ್ಪ
-
National22 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Mysore23 hours agoನಾಳೆಯಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಉಚಿತ ಥೈರಾಯ್ಡ್ ತಪಾಸಣೆ
-
Hassan8 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Chikmagalur11 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
