Connect with us

National

ಪಿಎಂ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ: ಪ್ರಹ್ಲಾದ್‌ ಜೋಶಿ

Published

on

ನವದೆಹಲಿ: ಕಾಂಗ್ರೆಸ್ ಸಂಸದರು ಸಂಸತ್ ಆವರಣದಲ್ಲಿ  ಪ್ರಧಾನಿ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಗೆ ಆಗಮಿಸುವ ಮುನ್ನ ಸಂಸತ್ತಿನಲ್ಲಿ ನಡೆದ ಘಟನೆ ತೀವ್ರ ಆಘಾತಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿ ಪೀಠದವರೆಗೂ, ಗದ್ದಲದ ನಡುವೆಯೂ ವಿರೋಧ ಪಕ್ಷದ ಸಂಸದರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ಇವರದ್ದು ಚರ್ಚೆ ಆಗಿರಲಿಲ್ಲ. ಪ್ರತಿಭಟನೆಯೂ ಆಗಿರಲಿಲ್ಲ. ಇದು ಕೇವಲ ಉದ್ದೇಶಪೂರ್ವಕವಾದಂತಹ ಪ್ರಚೋದನೆಯಾಗಿತ್ತು ಎಂದು ಆರೋಪ ಮಾಡಿದ್ದಾರೆ.

ಒಬ್ಬ ಸಂಸದರಾಗಿ ಸದನದ ಘನತೆ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ. ಆದರೆ, ಕಾಂಗ್ರೆಸ್ ಸಂಸದರ ನಡೆ ತೀವ್ರ ವಿರೋಧಾಭಾಸವಾಗಿದೆ. ಸಂಸತ್ತಿನ ಆವರಣದೊಳಗೆ ಗೌರವಾನ್ವಿತ ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್‌ಗಳನ್ನು ಹೊತ್ತೊಯ್ಯುವುದು ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್ ಅದೆಷ್ಟು ಕೆಳಮಟ್ಟಕ್ಕೆ ಇಳಿಯುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಖಜಾನೆ ಖಾಲಿ ಮಾಡಿದವರು ಮೊದಲು ತಮ್ಮನ್ನೇ ಪ್ರಶ್ನಿಸಿಕೊಳ್ಳಲಿ. ಭಾರತ-ಅಮೆರಿಕ ವಾಣಿಜ್ಯ ಒಪ್ಪಂದ ಟೀಕಿಸುವ ಮೊದಲು ಸಿಎಂ ಸಿದ್ದರಾಮಯ್ಯ ಅವರು, ಆರ್ಥಿಕ ಸಂಪದ್ಭರಿತವಾಗಿದ್ದ ರಾಜ್ಯದ ಖಜಾನೆ ಖಾಲಿ ಮಾಡಿರುವ ಬಗ್ಗೆ ತಮ್ಮನ್ನೊಮ್ಮೆ ಪ್ರಶ್ನೆ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಆರ್ಥಿಕ ಸಂಪತ್ತಿನಿಂದ ಕೂಡಿದ್ದ ಕರ್ನಾಟಕದ ಖಜಾನೆಯನ್ನು ಕಾಂಗ್ರೆಸ್ ಸರ್ಕಾರ ಇಂದು ಖಾಲಿ ಮಾಡಿದ್ದಲ್ಲದೆ, ಸಂಪೂರ್ಣ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿದೆ. ಹೂಡಿಕೆದಾರರ ವಿಶ್ವಾಸವನ್ನು ಸಹ ಕಳೆದುಕೊಂಡಿದೆ. ಇದೆಲ್ಲಾ ಏಕೆ? ಎಂಬುದನ್ನು ಸಿಎಂ ಉತ್ತರಿಸಲಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷ ಮೊದಲು ಭಾರತದ ಹಿತಾಸಕ್ತಿ  ಕುರಿತು ಉಪನ್ಯಾಸ ನೀಡುವುದೊಳಿತು. 2008ರಲ್ಲಿ 26/11ರ ನಂತರ ಮುಂಬೈ ಹೊತ್ತಿ ಉರಿಯುತ್ತಿದ್ದರೂ ಕಾಂಗ್ರೆಸ್ ಮೌನವಹಿಸಿತು. ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಗೃಹ ಸಚಿವರು ಬಾಹ್ಯ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪರಿಣಾಮ ಭಾರತ ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿತ್ತು ಎಂಬುದನ್ನು ತಿಳಿಸಿದ್ದಾರೆ.

2020 ಮತ್ತು ಹಿಂದಿನ ವರ್ಷಗಳಲ್ಲಿ ನಮ್ಮ ಸೈನಿಕರು ಪಿಎಲ್‌ಎ ಆಕ್ರಮಣವನ್ನು ಎದುರಿಸುತ್ತಿದ್ದರೆ, ಇತ್ತ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಚೀನಾದ ಅಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದರು. ಯಾವುದೊಂದು ಬಹಿರಂಗವಾಗದಂತೆ ನೋಡಿಕೊಂಡರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀತಿಗಳು ನಿಷ್ಕ್ರಿಯಗೊಂಡವು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭಾರತದ ನೀತಿಗಳನ್ನು ದುರ್ಬಲಗೊಳಿಸಿ, ಅವಮಾನಿಸಲಾಯಿತು. ಜಾಗತಿಕ ವಿಶ್ವಾಸ ಮತ್ತು ಕಾರ್ಯತಂತ್ರದ ನಿಲುವನ್ನು ಹಾಳು ಮಾಡಿತು. ಅಲ್ಪಾವಧಿಯ ರಾಜಕೀಯಕ್ಕಾಗಿ ಭಾರತದ ಸ್ಥಾನಮಾನವನ್ನು ದುರ್ಬಲಗೊಳಿಸಿತು. ಇದೆಲ್ಲಾ ಗೊತ್ತಿಲ್ಲದ ವಿಚಾರವೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ದೃಢತೆ, ಆತ್ಮವಿಶ್ವಾಸ ಮತ್ತು ಅತ್ಯಂತ ಸ್ಪಷ್ಟವಾಗಿ ಜಾಗತಿಕವಾಗಿ ಯಶಸ್ವಿ ಮಾತುಕತೆ ನಡೆಸುತ್ತಿದೆ. ಕಾಂಗ್ರೆಸ್ ಇದನ್ನು ಅರಿತುಕೊಳ್ಳಲಿ. ಏನೇನೋ ಬಡಬಡಿಸುವುದನ್ನು ನಿಲ್ಲಿಸಲಿ ಎಂದು ತಿಳಿಸಿದ್ದಾರೆ.

National

ಸಮುದ್ರದಲ್ಲಿ ಅಕ್ರಮವಾಗಿ ತೈಲ ಮಾರಾಟ ಮಾಡುತ್ತಿದ್ದ ಹಡಗುಗಳು ವಶಕ್ಕೆ ಪಡೆದ ಕರಾವಳಿ ರಕ್ಷಣಾ ಪಡೆ

Published

on

ನವದೆಹಲಿ: ಭಾರತೀಯ ಕರಾವಳಿ ರಕ್ಷಣಾ ಪಡೆ ಹಾಗೂ ಸಮುದ್ರ ಮತ್ತು ವೈಮಾನಿಕ ಕಣ್ಗಾವಲು ಒಳಗೊಂಡ ಜಂಟಿ ಕಾರ್ಯಾಚರಣೆಯು ಮುಖ್ಯ ಅಂತರರಾಷ್ಟ್ರೀಯ ತೈಲ ಕಳ್ಳಸಾಗಣೆ ದಂಧೆಯನ್ನು ಭೇದಿಸಿದೆ. ಈ ಕಾರ್ಯಾಚರಣೆಯಲ್ಲಿ ಕರಾವಳಿ ರಕ್ಷಣಾ ಪಡೆ ಮುಂಬೈ ಬಳಿಯ ನೀರಿನಲ್ಲಿ ಅಕ್ರಮವಾಗಿ ತೈಲ ಕಳ್ಳಸಾಗಣೆ ಮಾಡುತ್ತಿದ್ದ ಮೂರು ಹಡಗುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯುದ್ಧಪೀಡಿತ ದೇಶಗಳಿಂದ ಈ ಗ್ಯಾಂಗ್ ದೊಡ್ಡ ಪ್ರಮಾಣದಲ್ಲಿ ಅಗ್ಗದ ತೈಲವನ್ನು ಖರೀದಿಸಿ ಈ ತೈಲವನ್ನು ಅಂತರರಾಷ್ಟ್ರೀಯ ನೀರಿನ ಮೂಲಕ ಸಾಗರದ ಮಧ್ಯದಲ್ಲಿರುವ ಇತರ ಮೋಟಾರ್ ಟ್ಯಾಂಕರ್‌ಗಳಿಗೆ ವರ್ಗಾಯಿಸುವ ಮೂಲಕ ಗಣನೀಯ ಲಾಭವನ್ನು ಗಳಿಸುತ್ತಿದ್ದರು. ಈ ಸಂಪೂರ್ಣ ಜಾಲವನ್ನು ವಿವಿಧ ದೇಶಗಳಲ್ಲಿರುವ ಹ್ಯಾಂಡ್ಲರ್‌ಗಳು ನಡೆಸುತ್ತಿದ್ದರು. ಅವರು ತೈಲ ಮಾರಾಟ ಮತ್ತು ವರ್ಗಾವಣೆಯನ್ನು ನಿರ್ವಹಿಸುತ್ತಿದ್ದರು.

ಕರಾವಳಿ ರಕ್ಷಣಾ ಪಡೆಯ ತಂತ್ರಜ್ಞಾನ ಸಕ್ರಿಯಗೊಳಿಸಿದ ವ್ಯವಸ್ಥೆಗಳು ಭಾರತೀಯ ವಿಶೇಷ ಆರ್ಥಿಕ ವಲಯದಲ್ಲಿ ಮೋಟಾರ್ ಟ್ಯಾಂಕರ್‌ನ ಅನುಮಾನಾಸ್ಪದ ಚಟುವಟಿಕೆಯನ್ನು ಪತ್ತೆಹಚ್ಚಿದವು. ಡಿಜಿಟಲ್ ತನಿಖೆಯಲ್ಲಿ ಇತರ ಎರಡು ಹಡಗುಗಳು ಹಡಗಿನ ಸಮೀಪಕ್ಕೆ ಬರುತ್ತಿದ್ದು, ತೈಲ ಸಂಬಂಧಿತ ಸರಕುಗಳ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿರಬಹುದು ಎಂದು ತಿಳಿದುಬಂದಿದೆ, ಇದರ ಪರಿಣಾಮವಾಗಿ ಭಾರತ ಸೇರಿದಂತೆ ಕರಾವಳಿ ದೇಶಗಳಿಗೆ ಗಮನಾರ್ಹ ಸುಂಕ ನಷ್ಟವಾಗಿದೆ.

ವಿಶೇಷ ತಂಡಗಳು ಹಡಗುಗಳನ್ನು ಹತ್ತಿ, ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸಿ, ಅವುಗಳನ್ನು ವಶಪಡಿಸಿಕೊಂಡವು. ಈ ಹಡಗುಗಳನ್ನು ಈಗ ಮುಂಬೈಗೆ ತರಲಾಗುವುದು, ಅಲ್ಲಿ ಕಸ್ಟಮ್ಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಹೆಚ್ಚಿನ ತನಿಖೆ ನಡೆಸುತ್ತವೆ. ಕರಾವಳಿ ದೇಶಗಳ ಕಾನೂನು ಜಾರಿ ಸಂಸ್ಥೆಗಳು ಪತ್ತೆಹಚ್ಚುವುದನ್ನು ತಪ್ಪಿಸಲು ಈ ಹಡಗುಗಳು ಆಗಾಗ್ಗೆ ತಮ್ಮ ಗುರುತುಗಳನ್ನು ಬದಲಾಯಿಸುತ್ತಿವೆ ಎಂದು ತನಿಖೆಗಳು ಬಹಿರಂಗಪಡಿಸಿವೆ. ಹಡಗುಗಳ ಮಾಲೀಕರು ಇತರ ದೇಶಗಳಲ್ಲಿ ನೆಲೆಸಿದ್ದಾರೆ ಎಂದು ಪ್ರಾರಂಭಿಕ ತನಿಖೆಗಳು ಬಹಿರಂಗಪಡಿಸಿವೆ.

Continue Reading

National

U-19 World Cup| ವೈಭವ್‌ನ ಶತಕ: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

Published

on

ಹರಾರೆ: ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯಂಗ್‌ ಇಂಡಿಯಾ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್- 19 ವಿಶ್ವಕಪ್‌ ಫೈನಲ್‌ನಲ್ಲಿ ಭಾರತ v/s ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್​ಗಳಿಂದ ಸೋಲಿಸಿದ್ದು, ಭಾರತ ಸತತ ಆರನೇ ಬಾರಿಗೆ ಅಂಡರ್- 19 ವಿಶ್ವಕಪ್ ಎತ್ತಿಹಿಡಿದಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಗಳಿಸಿತ್ತು.  ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವೂ 311 ರನ್​ಗಳಿಗೆ ಆಲೌಟ್ ಆಗುವ ಮೂಲಕ 100 ರನ್​ಗಳಿಂದ ಸೋಲೊಪ್ಪಿಕೊಂಡಿತು. ಭಾರತದ ಈ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್​ಗಳ  ಇನ್ನಿಂಗ್ಸ್ ಆಡಿದರು. ವೈಭವ್ ಅವರ ಈ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 15 ಬೌಂಡರಿಗಳು ಸೇರಿದ್ದವು.

ವೈಭವ್‌ನ ಸ್ಫೋಟಕ ಶತಕ

ಈ ವೇಳೆ ವೈಭವ್ 39 ಎಸೆತಗಳಲ್ಲಿ ವೇದಾಂತ್ ತ್ರಿವೇದಿ ಅವರೊಂದಿಗೆ ಮೂರನೇ ವಿಕೆಟ್‌ಗೆ 89 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ವೈಭವ್ ವಿಕೆಟ್ ಪತನವಾದಾಗ ತಂಡದ ಮೊತ್ತ 251 ರನ್‌ ಆಗಿತ್ತು. ಇದರ ನಂತರ ಉಳಿದ 7 ಆಟಗಾರರು ಸ್ಕೋರ್​ ಬೋರ್ಡ್​ಗೆ 160 ರನ್ ಸೇರಿಸಿದರು. ವೇದಾಂತ್ 36 ಎಸೆತಗಳಲ್ಲಿ 32 ರನ್ ಗಳಿಸಿದರೆ, ವಿಹಾನ್ ಮಲ್ಹೋತ್ರಾ 36 ಎಸೆತಗಳಲ್ಲಿ 30 ರನ್ ಬಾರಿಸಿದರು. ಅಭಿಗ್ಯಾನ್ ಕುಂಡು 31 ಎಸೆತಗಳಲ್ಲಿ 40 ರನ್, ಅಂಬ್ರಿಸ್ ಕೇವಲ 18 ರನ್, ಕನಿಷ್ಕ್ ಚೌಹಾಣ್ 20 ಎಸೆತಗಳಲ್ಲಿ ಅಜೇಯ 37 ರನ್ ಗಳಿಸಿದರು. ಇಂಗ್ಲೆಂಡ್ ಪರ ಜೇಮ್ಸ್ ಮಿಂಟೊ ಮೂರು ವಿಕೆಟ್ ಪಡೆದರೆ, ಸೆಬಾಸ್ಟಿಯನ್ ಮಾರ್ಗನ್ ಮತ್ತು ಅಲೆಕ್ಸ್ ಗ್ರೀನ್ ತಲಾ ಎರಡು ವಿಕೆಟ್ ಪಡೆದಿದ್ದಾರೆ.

 ಏಕಾಂಗಿ ಹೋರಾಟ ಮಾಡಿದ ಫಾಕ್ನರ್ ಆಟ ವ್ಯರ್ಥ

ಭಾರತ ನೀಡಿದ 412 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 40.2 ಓವರ್‌ಗಳಲ್ಲಿ 311 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಏಕಾಂಗಿ ಹೋರಾಟ ನಡೆಸಿದ ಕ್ಯಾಲೆಬ್ ಫಾಕ್ನರ್ 67 ಎಸೆತಗಳಲ್ಲಿ 115 ರನ್‌ಗಳ ಇನ್ನಿಂಗ್ಸ್ ಆಡಿದರು. ಆದರೆ ಇನ್ನೊಂದು ತುದಿಯಿಂದ ಅವರಿಗೆ ಉತ್ತಮ ಬೆಂಬಲ ಸಿಗಲಿಲ್ಲ. ಫಾಕ್ನರ್ ಹೊರತುಪಡಿಸಿ ಬೆನ್ ಡಾಕಿನ್ಸ್ 66 ಮತ್ತು ಬೆನ್ ಮೇಯಸ್ 45 ರನ್‌ಗಳ ಇನ್ನಿಂಗ್ಸ್ ಆಡಿದರು. ನಾಯಕ ಥಾಮಸ್ 31 ರನ್​ಗಳನ್ನು ನೀಡಿದರು. ಇಂಗ್ಲೆಂಡ್ ತಂಡ ಉತ್ತಮ ಪಡೆಯಿತ್ತಾದರೂ ಮಧ್ಯಮ ಓವರ್​ಗಳಲ್ಲಿ ಎಂಟು ಎಸೆತಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಇದರಿಂದಾಗಿ ತಂಡಕ್ಕೆ ಬೃಹತ್ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿಲ್ಲ.

ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ಐಸಿಸಿ ಅಂಡರ್‌-19 ವಿಶ್ವಕಪ್‌ 2026ರ ಟ್ರೋಫಿಗೆ ‘ಯಂಗ್‌ ಇಂಡಿಯಾ’ ಮುತ್ತಿಟ್ಟಿದೆ.‌ ಹರಾರೆಯಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ವೈಭವ್‌ ಸೂರ್ಯವಂಶಿ ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್‌ ನೆರವಿನಿಂದ ಇಂಗ್ಲೆಂಡ್‌ ವಿರುದ್ಧ ಭಾರತ 100 ರನ್‌ಗಳ ಭರ್ಜರಿ ಜಯಗಳಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

Continue Reading

National

ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ನ್ಯಾಯಾಂಗ ಆಗ್ರಹಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

Published

on

ನವದೆಹಲಿ: ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ  ನ್ಯಾಯಾಂಗ ಆಗ್ರಹಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್ ಹೇಳಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿಯ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ಕೊನೆಗೊಳಿಸಲು ಅನುಮತಿ ನೀಡಿದೆ.

ಈ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವೂ ಈ ತೀರ್ಪು ಪ್ರಕಟಿಸಿದೆ.

ಪ್ರಕರಣವೊಂದರಲ್ಲಿ ಬಾಲಕಿ ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಗರ್ಭ ಧರಿಸಿದ್ದಳು. ಪ್ರಸ್ತುತ ಅವಳು ಗರ್ಭವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯವೂ, ಆಕೆಯ ಪುನರುತ್ಪಾದಕ ಸ್ವಾಯತ್ತತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಿ ಹೇಳಿತು. ಆಕೆಯ ಇಚ್ಛೆಯ ವಿರುದ್ಧ ಗರ್ಭವನ್ನು ಮುಂದುವರಿಸಲು ಒತ್ತಾಯಿಸಲಾಗದು ಎಂದು ಪೀಠ ತಿಳಿಸಿತು.

ಪ್ರಕರಣದಲ್ಲಿ ಬಾಲಕಿ ಅಪ್ರಾಪ್ತೆಯಾಗಿದ್ದಾಗ ಯುವಕನೊಂದಿಗಿನ ಸಂಬಂಧದಲ್ಲಿ ಗರ್ಭ ಧರಿಸಿದ್ದಳು. ಇದು ಸಮ್ಮತಿಯಿಂದ ಆಗಿರಲಿ ಅಥವಾ ಇಲ್ಲದಿರಲಿ, ಬಾಲಕಿ ಮಗುವನ್ನು ಹೊರುವ ಇಚ್ಛೆಯನ್ನು ಹೊಂದಿಲ್ಲ ಎಂಬುದು ಮುಖ್ಯವಾಗಿದೆ ಎಂದು ಕೋರ್ಟ್ ಗಮನಿಸಿದೆ.

ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಎಲ್ಲಾ ಅಗತ್ಯ ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿ ಗರ್ಭಪಾತದ ಕಾರ್ಯವಿಧಾನವನ್ನು ನಡೆಸಲು ಕೋರ್ಟ್ ನಿರ್ದೇಶಿಸಿದೆ. ಬಾಲಕಿಯು ಗರ್ಭಪಾತಕ್ಕೆ ಒಪ್ಪಿಗೆ ನೀಡುವ ಲಿಖಿತ ಘೋಷಣೆಯನ್ನು ಸಲ್ಲಿಸಬೇಕು ಎಂದು ಆದೇಶ ಮಾಡಲಾಗಿದೆ.
Continue Reading

Trending

error: Content is protected !!