Connect with us

Location

ಯಡಿಯೂರಪ್ಪ ನಿರ್ಧಾರಕ್ಕೆ ಬೆಂಬಲವಿದೆ; ಪ್ರತಾಪ್ ಸಿಂಹ

Published

on

ಯಡಿಯೂರಪ್ಪ ನಿರ್ಧಾರಕ್ಕೆ ಬೆಂಬಲವಿದೆ; ಪ್ರತಾಪ್ ಸಿಂಹ

ಮೈಸೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

ಯಡಿಯೂರಪ್ಪ ಅವರು ನಮ್ಮ ಪಕ್ಷದ ಪ್ರಶ್ನಾತಿತ ನಾಯಕರುಏಕಾಂಗಿಯಾಗಿ ರಾಜ್ಯ ಸುತ್ತಿ ಪಕ್ಷ ಕಟ್ಟಿದ್ದಾರೆ
ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಯಡಿಯೂರಪ್ಪ ಕಾರಣ
ಅವರೇ ಈ ಹೇಳಿಕೆ ನೀಡಿದ್ದಾರೆ ಎಂದರೆ ನಮ್ಮ ಅದಕ್ಕೆ ಸಹಮತವಿದೆ ರಾಜ್ಯದಲ್ಲಿ ಎರಡೆರಡು ಭಾರಿ ಬಿಜೆಪಿಯನ್ನೂ ಅಧಿಕಾರಕ್ಕೆ ತಂದವರು ಯಡಿಯೂರಪ್ಪ
ಕೇಂದ್ರ ನಾಯಕರ ಜೊತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬಂದಿರುತ್ತಾರೆ ಅವರು ಏನೇ ನಿರ್ಧಾರ ತೆಗೆದುಕೊಂಡರು ನಮ್ಮ ಬೆಂಬಲ ಸದಾ ಇದ್ದೇ ಇರುತ್ತೆ
ಯಡಿಯೂರಪ್ಪ ಸಾಹೇಬ್ರು ಏನೇ ನಿರ್ಧಾರ ತೆಗೆದುಕೊಂಡಿದ್ದರು ಪಕ್ಷದ ಹಿತದೃಷ್ಟಿಯಿಂದಲೆ ಯೋಚಿಸಿಯೇ ತೀರ್ಮಾನ ಕೈಗೊಂಡಿರುತ್ತಾರೆ ಎಂದರು.

  1. ರಾಜ್ಯದ ಜನ ಪ್ರಜ್ಞಾವಂತರು ಕೆಲವೊಮ್ಮೆ ಯಮರುತ್ತಾರೆ
    ವಿಧಾನಸಭೆಯಲ್ಲಿ ಗ್ಯಾರೆಂಟಿ ಯೋಜನೆಗೆ ಜನ ಯಮರಿದ್ದರುಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು
    ರಾಜ್ಯದ ಜನಕ್ಕೆ ಈಗ ತಪ್ಪಿನ ಅರಿವಾಗಿದೆ
    ಲೋಕಸಭಾ ಚನಾವಣೆಯಲ್ಲಿ ಬಿಜೆಪಿಗೆ ಜನರು ಮತ ನೀಡುತ್ತಾರೆಮೋದಿ ಮತ್ತೊಮ್ಮೆ ಪ್ರಧಾನಿ ಆಗ್ತಾರೆ ಎಂದು
    ಸಂಸದ ಪ್ರತಾಪ್ ಸಿಂಹ ತಿಳಿಸಿದರು
Continue Reading
Click to comment

Leave a Reply

Your email address will not be published. Required fields are marked *

Chamarajanagar

ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ ಸವಾರಿಗೆ ಗಾಯ

Published

on

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಬೆಟ್ಟದಮಾದಹಳ್ಳಿ ಹಾಗೂ ಭೋಗಯ್ಯನಹುಂಡಿಯ ಮುಖ್ಯ ರಸ್ತೆಯಲ್ಲಿ ಎರಡು ಸ್ಕೋಟರ್ ಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತ್ತು.

ಗಾಯಾಳುಗಳಾದ ಭೋಗಯ್ಯನಹುಂಡಿ ಗ್ರಾಮದ ಸುನಿ ಹಾಗೂ ಬೆಟ್ಟದಮಾದಹಳ್ಳಿ ಗ್ರಾಮದ ರಂಗಸ್ವಾಮಿ ಎಂಬುವರ ಬೈಕ್ ಗಳ ನಡುವಿನ ಡಿಕ್ಕಿಯಾಗಿ ಇಬ್ಬರಿಗೂ ತಲೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

Continue Reading

Mysore

ಮೇ.04ರಂದು ಭಗೀರಥ ಜಯಂತಿಯನ್ನು ಆಚರಣೆ

Published

on

 ಮಹದೇವಸ್ವಾಮಿ ಪಟೇಲ್

ನಂಜನಗೂಡು  : ಮೇ ನಾಲ್ಕರಂದು ಸಾಂಕೇತಿಕವಾಗಿ ಭಗೀರಥ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.

ನಂಜನಗೂಡು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

ಬಳಿಕ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಅವರನ್ನು ಆಹ್ವಾನ ಮಾಡಿ ಅದ್ದೂರಿಯಾಗಿ ಭಗಿರಥ ಜಯಂತಿಯನ್ನು ನಡೆಸಲು ಸಮಾಜದ ಮುಖಂಡರು ಸಲಹೆ ನೀಡಿದ್ದೀರಿ. ಇಂದು ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುತ್ತೇನೆ. ಮುಖ್ಯಮಂತ್ರಿಗಳು ದಿನಾಂಕ ಸೂಚಿಸಿದ ಬಳಿಕ, ಕಾರ್ಯಕ್ರಮ ರೂಪ ರೇಷೆ ಬಗ್ಗೆ ಮತ್ತೊಂದು ಸಭೆಯನ್ನು ಕರೆದು ತೀರ್ಮಾನ ಮಾಡೋಣ. ಕಳೆದ ಬಾರಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಚರ್ಚಾ ಸ್ಪರ್ಧೆ ಮಾಡಿ ಅರ್ಥಪೂರ್ಣ ಜಯಂತಿಯನ್ನು ಆಚರಿಸಲಾಗಿತ್ತು. ಅದೇ ಮಾದರಿಯಲ್ಲಿ ಜಯಂತಿ ನಡೆಸೋಣ ಎಂದರು. ಜಿಲ್ಲಾ ಮಟ್ಟಕ್ಕಿಂತ ತಾಲೂಕು ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಜಯಂತಿ ಕಾರ್ಯಕ್ರಮ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಪಕ್ಷದ ಮಾಜಿ ತಾಲೂಕು ಅಧ್ಯಕ್ಷ ಮೂಗಶಟ್ಟಿ ಮಾತನಾಡಿ ನಿಮ್ಮ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಕರೆಸಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ಜನರನ್ನು ಸೇರಿಸುವ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ ಎಂದರು

ನಂತರ ಹೆಮ್ಮರಗಾಲ ಸೋಮಣ್ಣ ಮಾತನಾಡಿ, ಭಗೀರಥ ಜಯಂತಿ ಆಚರಣೆ ಮಾಡಿ ಮೂರು ವರ್ಷಗಳಾಗಿವೆ. ಮುಖ್ಯಮಂತ್ರಿ ಅವರನ್ನು ಕರೆಸಿ, ನಂಜನಗೂಡು ಶಾಸಕರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ಜಯಂತಿ ಆಚರಿಸಲು ಸಮಾಜದ ಮುಖಂಡರು ತೀರ್ಮಾನಿಸಿದ್ದಾರೆ. ಸಭೆಗೆ ಸಮಾಜದ 10,000ಕ್ಕೂ ಹೆಚ್ಚು ಜನರ ಸೇರುವ ನಿರೀಕ್ಷೆ ಇದೆ ಎಂದರು.

ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮೂಗ ಶೆಟ್ಟಿ, ಹೆಮ್ಮರಗಾಲ ಸೋಮಣ್ಣ, ಹಾಡ್ಯ ರಂಗಸ್ವಾಮಿ, ಹೆಡತಲೆ ದೊರೆಸ್ವಾಮಿ ನಾಯಕ, ಲತಾ ಸಿದ್ದಶೆಟ್ಟಿ, ಕರಳಪುರ ನಾಗರಾಜು, ಟಿಪಿ ಶಿವಣ್ಣ, ಗೋವಿಂದರಾಜು, ಮಹದೇವ್, ಮುದ್ದು ಮಾದ ಶೆಟ್ಟಿ, ಸಿದ್ದರಾಜು, ನಾಗಮಣಿ ಶಂಕ್ರಪ್ಪ, ಬಾಲಚಂದ್ರ, ಕಲ್ಲಂಗಡಿ ಮಹದೇವಸ್ವಾಮಿ, ತರದಲೆ ಮಹದೇವು, ಶ್ರೀನಿವಾಸ್, ಸಿದ್ಧ ಶೆಟ್ಟಿ ಸೇರಿದಂತೆ ಇತರರು ಹಾಜರಿದ್ದರು.

Continue Reading

Chamarajanagar

ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ

Published

on

ಹನೂರು : ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಹೃದಯಘಾತದಿಂದ ನಿಧನ..

ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ನಿವಾಸಿ ಪರಶುರಾಮ್( 32) ಮೃತಪಟ್ಟ ದುರ್ದೈವಿ.

ಕಳೆದ 9 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಕಳೆದ 2 ವರ್ಷಗಳಿಂದ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗುಪ್ತ ಮಾಹಿತಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ಬೆಳಿಗ್ಗೆ ಕುಸಿದು ಬಿದಿದ್ದು ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ, ಮೃತ ವ್ಯಕ್ತಿಯು ರಾಯಚೂರು ಜಿಲ್ಲೆಯವರಾಗಿದ್ದು ಕುಟುಂಸ್ಥರಿಗೆ ರಾಮಾಪುರ ಪೊಲೀಸರು ಮಾಹಿತಿ ನೀಡಿ ಮೃತ ವ್ಯಕ್ತಿಯ ಶವವನ್ನು ಚಾಮರಾಜನಗರದ ಸೀಮ್ಸ್ ಆಸ್ಪತ್ರೆ ಇರಿಸಲಾಗಿದ್ದು, ಕುಟುಂಬಸ್ಥರು ಬಂದಾಗ ಅವರಿಗೆ ಹಸ್ತಾಂತರಿಸಲಾಗುವುದು ಎನ್ನಲಾಗಿದೆ..

ಸಂತಾಪ : ಮೃತ ಪರುಶುರಾಮ್ ಅವರಿಗೆ ಸಾವಿನ ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕವಿತಾ, ಡಿವೈಎಸ್ಪಿ ಧರ್ಮೇಂದ್ರ, ಇನ್ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ, ರಾಮಾಪುರ ಠಾಣೆಯ ಸಿಬ್ಬಂದಿ ಮೃತ ವ್ಯಕ್ತಿಗೆ ಸಂತಾಪ ಸೂಚಿಸಿದ್ದಾರೆ…

Continue Reading

Trending

error: Content is protected !!