Connect with us

Kodagu

ಪೊನ್ನಂಪೇಟೆ ಪಟ್ಟಣ ಪಂಚಾಯಿತಿ: ಚೊಚ್ಚಲ ಬಜೆಟ್ ಮಂಡನೆ

Published

on

ಪೊನ್ನಂಪೇಟೆ : ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ನಂತರ ಇದೇ ಮೊದಲ ಬಾರಿಗೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಬಜೆಟ್ (ಆಯ-ವ್ಯಯ) ಮಂಡನೆಯಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಚೊಚ್ಚಲ ಮತ್ತು 2025-26ನೇ ಸಾಲಿನ ಬಜೆಟ್ ಮೊತ್ತವು ಒಟ್ಟು ರೂ. 71748000/- ಆಗಿರುತ್ತದೆ. ಪೊನ್ನಂಪೇಟೆ ತಾಲೂಕು ಘೋಷಣೆಯಾದ ನಂತರ ಕೇಂದ್ರ ಸ್ಥಾನ ಹೊಂದಿರುವ ಪೊನ್ನಂಪೇಟೆ ಪಟ್ಟಣದಲ್ಲಿದ್ದ ಗ್ರಾಮ ಪಂಚಾಯಿತಿ ಸರಕಾರದ ನಿಯಮಾವಳಿಯಂತೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿತ್ತು.

ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರಾದ ಆಲೀರ ಎಂ. ರಶೀದ್ ಮುಂದಿನ ಲೆಕ್ಕಪತ್ರ ಸಾಲಿನ ಬಜೆಟ್ ಅನ್ನು ಮಂಡಿಸಿದರು. ಪೊನ್ನಂಪೇಟೆಯು ದಿನೇ-ದಿನೇ ಬೆಳೆಯುತ್ತಿರುವ ಪಟ್ಟಣವಾಗಿದ್ದು, ಜನತೆಗೆ ಮೂಲಭೂತ ಸೌಕರ್ಯ ಒದಗಿಸುವುದು ಪಟ್ಟಣ ಪಂಚಾಯಿತಿಯ ಆದ್ಯ ಕರ್ತವ್ಯವಾಗಿರುತ್ತದೆ. ರಸ್ತೆ, ನೀರು, ಚರಂಡಿ, ನೈರ್ಮಲ್ಯ, ಬೀದಿ ದೀಪ ವ್ಯವಸ್ಥೆಗಳನ್ನು ಪಟ್ಟಣದ ಪ್ರಸಕ್ತ ಜನಸಂಖ್ಯೆಗೆ ಅನುಗುಣವಾಗಿ ವ್ಶೆಜ್ಞಾನಿಕ ರೂಪದಲ್ಲಿ ಜಾರಿಗೊಳಿಸಬೇಕಾಗಿದೆ ಎಂದು ಹೇಳಿದ ರಶೀದ್, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅತ್ಯುತ್ತಮ ಮೂಲಭೂತ ಸೌಲಭ್ಯ ಒದಗಿಸುವುದು ಮತ್ತು ಪಟ್ಟಣ ಪಂಚಾಯಿತಿಯನ್ನು ಆರ್ಥಿಕವಾಗಿ ಸದೃಡಗೊಳಿಸುವುದು ಮೊದಲ ಆದ್ಯತೆಯಾಗಿರುತ್ತದೆ ಎಂದು ತಿಳಿಸಿದರು.

ಆರ್ಥಿಕ ಕ್ರೋಡೀಕರಣ ಮತ್ತು ಜನರ ಬೇಡಿಕೆಯನ್ನು ಪರಿಗಣಿಸಿ ಪ್ರಸಕ್ತ ಬಜೆಟ್ ಅನ್ನು ತಯಾರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ತಕ್ಕ ಆದಾಯ ಮೂಲಗಳಾದ ತೆರಿಗೆ ಸಂಗ್ರಹ ಹಾಗೂ ಸರಕಾರದ ವಿವಿಧ ಯೋಜನೆಯ ಅನುದಾನ ಪಡೆಯಲು ನಿರ್ಧರಿಸಲಾಗಿದೆ. ಇವೆಲ್ಲವನ್ನು ಈ ಬಜೆಟ್ ಒಳಗೊಂಡಿದ್ದು, ಪಟ್ಟಣ ಪಂಚಾಯಿತಿಗೆ ಬರುವ ಆದಾಯಗಳಲ್ಲಿ ಆಸ್ತಿ ತೆರಿಗೆ, ವಾಣಿಜ್ಯ ಮಳಿಗೆ ಬಾಡಿಗೆ, ಉದ್ದಿಮೆ ಪರವಾನಗಿ, ಮಾರುಕಟ್ಟೆ ಬಾಡಿಗೆಗಳು ಹಾಗೂ ಇತರೆ ಶುಲ್ಕಗಳು ಮತ್ತು ಸರ್ಕಾರದಿಂದ ಬಿಡುಗಡೆ ಆಗುವ ಎಸ್.ಎಫ್.ಸಿ. ಅನುದಾನ, ಹಣಕಾಸು ಆಯೋಗದ ಅನುದಾನ, ಎಸ್.ಎಫ್.ಸಿ.ವಿಶೇಷ ಅನುದಾನ ಪ್ರಮುಖವಾಗಿವೆ. ಇವೆಲ್ಲವನ್ನು ಅಂದಾಜಿಸಿಕೊಂಡು ಪೊನ್ನಂಪೇಟೆ ಪಟ್ಟಣ ಪಂಚಾಯಿತಿಗೆ ಹೊಸದಾಗಿ ಸೇರಿಕೊಂಡಿರುವ ವಿಭಾಗಗಳಲ್ಲಿ ಚರಂಡಿ ನಿರ್ಮಾಣ, ಬೀದಿ ದೀಪ ಅಳವಡಿಕೆ, ನೀರು ವಿತರಣಾ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆಗೆ ಪ್ರಮುಖ ಆದ್ಯತೆ ಮತ್ತು ವಾಣಿಜ್ಯ ಮಳಿಗೆಗಳ ಮತ್ತು ಸ್ಥಿರಾಸ್ತಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ರಶೀದ್ ತಮ್ಮ ಬಜೆಟ್ ಭಾಷಣದಲ್ಲಿ ವಿವರಿಸಿದರು.

2025-26ನೇ ಸಾಲಿನಲ್ಲಿ ಒಟ್ಟು ರೂ. 70826727 ಮೊತ್ತದ ಆದಾಯವನ್ನು ನಿರೀಕ್ಷಿಸಲಾಗಿದೆ. ಈ ಪೈಕಿ ಎಸ್.ಎಫ್.ಸಿ. ವಿಶೇಷ ಅನುದಾನ ರೂ. 150 ಲಕ್ಷ, ಎಸ್.ಎಫ್.ಸಿ. ಅನುದಾನ ರೂ. 70 ಲಕ್ಷ, 15ನೇ ಹಣಕಾಸು ಅನುದಾನ ರೂ. 80ಲಕ್ಷ, ವಿದ್ಯುತ್ ಅನುದಾನ ರೂ. 75 ಲಕ್ಷ, ನೀರಿನ ಅಭಾವ ಅನುದಾನ ರೂ. 10ಲಕ್ಷ, ಎಸ್.ಎಫ್.ಸಿ. ವೇತನ ಅನುದಾನ ರೂ. 74.90ಲಕ್ಷ, ಕಟ್ಟಡ ಕಾಯ್ದೆಗಳಿಗೆ ಸಂಬಂಧಿಸಿದ ಶುಲ್ಕಗಳು ರೂ.5ಲಕ್ಷ, ಮಾರುಕಟ್ಟೆಗಳ,ವಾಹನ ನಿಲುಗಡೆ ಮತ್ತು ಸಂತೆ ಸುಂಕದ ಹರಾಜಿನ ಆದಾಯ ರೂ. 7.5ಲಕ್ಷ, ವಾಣಿಜ್ಯ ಮಳಿಗೆ ಬಾಡಿಗೆ ರೂ. 6.86ಲಕ್ಷ, ಆಸ್ತಿ ತೆರಿಗೆ ರೂ. 51.58ಲಕ್ಷ, ಉದ್ದಿಮೆ ಪರವಾನಿಗೆ ರೂ. 5ಲಕ್ಷ, ನೈರ್ಮಲ್ಯ ಮತ್ತು ಘನತ್ಯಾಜ್ಯ ವಸ್ತು ನಿರ್ವಹಣೆಗೆ ರೂ. 4.5ಲಕ್ಷ, ಪರಿಶಿಷ್ಟ ಜಾತಿ/ಪ.ಪಂ ಶ್ರೇಯೋಭಿವೃದ್ಧಿ ನಿಧಿಯಿಂದ ರೂ. 5ಲಕ್ಷ, ಇತರೆ ಬಡಜನರ ಕಲ್ಯಾಣ ನಿಧಿಯ ಶೇ.7.25%ರಂತೆ ರೂ.3ಲಕ್ಷ, ಅಂಗವಿಕಲರಿಗೆ ಶ್ರೇಯೋಭಿವೃದ್ಧಿ ನಿಧಿಯ ಶೇ.5%ರಂತೆ ರೂ. 2ಲಕ್ಷ ಮತ್ತು ಸ್ವಚ್ಛ್ ಭಾರತ ಯೋಜನೆ ಅನುದಾನದಿಂದ ರೂ. 5ಲಕ್ಷ ಅನುದಾನದ ನಿರೀಕ್ಷೆ ಹೊಂದಲಾಗಿದೆ ಎಂದು ರಶೀದ್ ಹೇಳಿದರು.

ಪ್ರಸ್ತುತ ಹಣಕಾಸು ಸಾಲಿನಲ್ಲಿ ಒಟ್ಟು ರೂ. 71110000/- ಮೊತ್ತದ ಖರ್ಚನ್ನು ಅಂದಾಜಿಸಲಾಗಿದೆ. ಈ ಪೈಕಿ
ನೌಕರರ ವೇತನಕ್ಕೆ ರೂ.1.05 ಕೋಟಿ, 15ನೇ ಹಣಕಾಸು ಯೋಜನೆ ಕಾಮಗಾರಿಗಳಿಗಾಗಿ ರೂ.80ಲಕ್ಷ, ನೈರ್ಮಲ್ಯ ಮತ್ತು ಘನತ್ಯಾಜ್ಯ ವಸ್ತು ನಿರ್ವಹಣೆಗೆ ರೂ. 86ಲಕ್ಷ, ನೀರು ಸರಬರಾಜು ಮೂಲಗಳು ಮತು ವಿತರಣಾ ವ್ಯವಸ್ಥೆ ಮತ್ತು ನಿರ್ವಹಣೆಗೆ ರೂ. 35ಲಕ್ಷ, ಬೀದಿ ದೀಪಗಳ ಅಭಿವೃದ್ಧಿಗಾಗಿ ರೂ. 10ಲಕ್ಷ, ಉದ್ಯಾನವನಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ರೂ.15ಲಕ್ಷ, ನಾಗರಿಕ ವಿನ್ಯಾಸಗಳಿಗಾಗಿ ರೂ. 5ಲಕ್ಷ, ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ನಿರ್ಮಾಣ ಕಾಮಗಾರಿಗಳಿಗೆ ರೂ. 20ಲಕ್ಷ, ಚರಂಡಿಗಳಿಗಾಗಿ (ರಸ್ತೆ ಬದಿ ಮತ್ತು ಮಳೆ ನೀರು ಚರಂಡಿ) ರೂ.25ಲಕ್ಷ, ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ರೂ. 30ಲಕ್ಷ, ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ರೂ.25ಲಕ್ಷ, ಕಛೇರಿ ಉಪಕರಣಗಳ ಖರೀದಿಗಾಗಿ ರೂ. 7ಲಕ್ಷ, ನೀರು ಸರಬರಾಜು ಮತ್ತು ಬೀದಿ ದೀಪಗಳ ವಿದ್ಯುತ್ ವೆಚ್ಚಕ್ಕೆ ರೂ. 77ಲಕ್ಷ, ಪರಿಶಿಷ್ಟ ಜಾತಿ/ಪ.ಪಂ ಶ್ರೇಯೋಭಿವೃದ್ಧಿಗೆ ಯೋಜನೆಗಳಿಗಾಗಿ ರೂ. 5ಲಕ್ಷ, ಇತರೆ ಬಡಜನರ ಕಲ್ಯಾಣ ನಿಧಿ ಶೇ.7.25%ರ ಯೋಜನೆಗಳಿಗೆ ರೂ.3ಲಕ್ಷ ಮತ್ತು ಅಂಗವಿಕಲರಿಗೆ ಶ್ರೇಯೋಭಿವೃದ್ಧಿಯ ಶೇ. 5%ರ ಯೋಜನೆಗಳಿಗೆ ರೂ. 2ಲಕ್ಷ ಅನುದಾನವನ್ನು ಖರ್ಚು ಮಾಡುವ ಗುರಿ ಹೊಂದಲಾಗಿದೆ ಎಂದು ಬಜೆಟ್ ಮಂಡಿಸಿದ ರಶೀದ್ ಮಾಹಿತಿ ನೀಡಿದರು. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ 2025 26 ನೇ ಸಾಲಿನ ಆಯ-ವ್ಯಯದ ಘೋಸ್ವಾರೆಯಲ್ಲಿ ಒಟ್ಟು ರೂ. 638641/- ಮೊತ್ತದ ಉಳಿತಾಯ ಸಾಧಿಸುವ ಗುರಿಯೂ ಹೊಂದಲಾಗಿದೆ ಎಂದು ರಶೀದ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಸಭೆಯಲ್ಲಿ ಮುಖ್ಯಾಧಿಕಾರಿಗಳಾದ ಎಸ್. ಗೋಪಿ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.

Continue Reading

Kodagu

ಮುದ್ದಂಡ ಕಪ್ ಹಾಕಿ ಉತ್ಸವ : ಫೈನಲ್ಸ್ ಗೆ ಶ್ರೇಷ್ಠ ಆಟಗಾರರ ಆಗಮನ : ಉತ್ಸವ ಸಮಿತಿಯಿಂದ ಸನ್ಮಾನ

Published

on

ಮಡಿಕೇರಿ : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.೨೭ ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.


೧೯೭೫ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. ೧೯೭೨ ಮ್ಯುನಿಚ್ ಒಲಂಪಿಕ್ಸ್, ೧೯೭೩ ವಿಶ್ವಕಪ್, ೧೯೭೬ ಮಾಂಟ್ರಿಲ್ ಒಲಂಪಿಕ್ಸ್ ನ ಎಲ್ಲಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪದಕ ಗಳಿಸಿದ ಖ್ಯಾತಿ ಇವರದ್ದು.
ವಿಶ್ವಕಪ್ ಹಾಕಿ ಭೂಪಟದಲ್ಲಿ ಭಾರತ ಹಾಕಿ ತಂಡದ ಹೆಸರನ್ನು ಅಜರಾಮರಗೊಳಿಸಿದ ಕೊಡಗಿನ ವೀರ, ೧೯೭೫ ವಿಶ್ವಕಪ್ ಹಾಕಿ ವಿಜೇತ ತಂಡದ ಆಟಗಾರ ಪೈಕೇರ ಕಾಳಯ್ಯ, ೧೯೮೦ ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನಾಯಕ, ಭಾರತ ತಂಡದ ತರಬೇತುದಾರ, ವಿಶ್ವಕಪ್ ಹಾಗೂ ಒಲಂಪಿಕ್ಸ್ ನಲ್ಲಿ ಹೆಸರು ಗಳಿಸಿದ, ದಕ್ಷಿಣ ರೈಲ್ವೆ ತಂಡದ ಅದ್ಭುತ ಆಟಗಾರ ಪದ್ಮಶ್ರೀ ಪುರಸ್ಕೃತ ವಾಸುದೇವ ಭಾಸ್ಕರ್, ೧೯೮೦ ಮಾಸ್ಕೋ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ, ೧೯೮೪ ಲಾಸ್ ಏಂಜಲೀಸ್ ಒಲಂಪಿಕ್ಸ್, ೧೯೮೮ ಸಿಯೋಲ್ ಒಲಂಪಿಕ್ಸ್ ನ ನಾಯಕ, ವಿಶ್ವಕಪ್ ಚಾಂಪಿಯನ್ಸ್ ಟ್ರೋಫಿ ಹಾಗೂ ಇನ್ನು ಹಲವು ಪಂದ್ಯಾವಳಿಗಳಲ್ಲಿ ಆಡಿದ ಕೊಡಗಿನ ಏಕೈಕ ಆಟಗಾರ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಎಂ.ಎಂ.ಸೋಮಯ್ಯ ಆಗಮಿಸಲಿದ್ದಾರೆ.
೧೯೬೮ ಒಲಂಪಿಕ್ಸ್ ನ ಗೋಲ್ ಕೀಪರ್ ಆಗಿ ಪ್ರತಿನಿಧಿಸಿದ ಆಟಗಾರ. ಒಲಂಪಿಕ್ಸ್, ವಿಶ್ವಕಪ್, ಚಾಂಪಿಯನ್ ಟ್ರೋಫಿ, ಏಷ್ಯನ್ ಗೇಮ್ಸ್ ಗಳಲ್ಲಿ ಟೆಕ್ನಿಕಲ್ ಅಫಿಶಿಯಲ್ ಆಗಿ ಬಹಳಷ್ಟು ವರ್ಷ ಸೇವೆ ಸಲ್ಲಿಸಿದ ಹಾಗೂ ಹಾಕಿ ಪಂದ್ಯಾವಳಿಯ ಬಗ್ಗೆ ಅಪಾರ ಅನುಭವವಿರುವ ಮುನೀರ್ ಸೇಟ್, ೧೯೯೬ ಹಾಗೂ ೨೦೦೦ ಒಲಂಪಿಕ್ಸ್ ಆಟಗಾರ. ಏಷ್ಯನ್ ಗೇಮ್ಸ್, ವಿಶ್ವಕಪ್ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಮಹಮ್ಮದ್ ರಿಯಾಜ್ ಅವರು ಆಗಮಿಸಲಿದ್ದಾರೆ.
ಈ ಹಾಕಿ ದಿಗ್ಗಜರನ್ನು ಅರ್ಥಪೂರ್ಣವಾಗಿ ಬರಮಾಡಿಕೊಂಡು ತೆರೆದ ಜೀಪಿನಲ್ಲಿ ಕೊಡಗಿನ ಸಾಂಪ್ರದಾಯಿಕ ದುಡಿಕೊಟ್ ಪಾಟ್ ನೊಂದಿಗೆ ಮೈದಾನದ ಸುತ್ತ ಮೆರವಣಿಗೆ ಮಾಡಲಾಗುವುದು ಎಂದು ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು.
ಕೊಡವ ಕೌಟುಂಬಿಕ ಹಾಕಿ ಮೂರು ಬಾರಿ ಲಿಮ್ಕಾ ದಾಖಲೆ, ಒಂದು ಬಾರಿ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಇಂದು ಕೊಡವ ಹಾಕಿ ವಿಶ್ವ ವಿಖ್ಯಾತ ಪಡೆದಿದೆ. ಎಲ್ಲಾ ಕ್ರೀಡಾ ಪ್ರೇಮಿಗಳು ಮುದ್ದಂಡ ಹಾಕಿ ಹಬ್ಬದ ಕೊನೆಯ ದಿನದ ಅದ್ಭುತ ಕ್ಷಣವನ್ನು ವೀಕ್ಷಿಸಬೇಕು ಎಂಬುವುದು ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿಯ ಬಯಕೆ ಎಂದು ಅವರು ಹೇಳಿದರು.
::: ಹಾಕಿ ಜನಕನ ಕನಸು ನನಸು :::
ಕೌಟುಂಬಿಕ ಹಾಕಿಯ ಜನಕ ಪಾಂಡಂಡ ಕುಟ್ಟಪ್ಪ ಅವರು ವಿಶ್ವಕಪ್ ವಿಜೇತರು ಹಾಗೂ ಒಲಂಪಿಕ್ ನಲ್ಲಿ ಚಿನ್ನ ಗೆದ್ದ ಕೊಡಗಿನ ಆಟಗಾರರನ್ನು ಒಂದೇ ವೇದಿಕೆಗೆ ಕರೆತರಬೇಕೆಂಬ ಕನಸು ಕಂಡಿದ್ದರು, ಅದು ಇಂದು ನನಸಾಗುತ್ತಿದೆ.
ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ, ವಿಶ್ವಕಪ್ ವಿಜೇತರಾದ ಕಾಳಯ್ಯ ಹಾಗೂ ಗೋವಿಂದ ಅವರು ವಿಶ್ವಕಪ್ ಗೆದ್ದು ೫೦ ವರ್ಷ ತುಂಬಿದ ಸಡಗರದಲ್ಲಿದ್ದಾರೆ. ಇದೇ ಪ್ರಥಮ ಬಾರಿಗೆ ಹಾಕಿ ಪ್ರೇಮಿಗಳ ಸಮ್ಮುಖದಲ್ಲಿ ಇವರನ್ನು ಗೌರವಿಸಬೇಕು ಎಂಬ ತೀರ್ಮಾನವನ್ನು ಕೊಡವ ಹಾಕಿ ಅಕಾಡೆಮಿ ಹಾಗೂ ಮುದ್ದಂಡ ಕುಟುಂಬದವರು ತೆಗೆದುಕೊಂಡಿದ್ದಾರೆ ಎಂದು ರಶಿನ್ ಸುಬ್ಬಯ್ಯ ತಿಳಿಸಿದರು.
೧೯೮೦ರ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ೪೫ ವರ್ಷಗಳು ತುಂಬಿದ ಸಂಭ್ರಮದಲ್ಲಿರುವ ಪದ್ಮಶ್ರೀ ಪುರಸ್ಕೃತ ವಾಸುದೇವ ಭಾಸ್ಕರನ್ ಹಾಗೂ ಕೊಡಗಿನವರಾದ ಮನೆಯಪಂಡ ಸೋಮಯ್ಯ ಅವರನ್ನು ಕೂಡ ಸನ್ಮಾನಿಸಿ ಗೌರವಿಸಲಾಗುವುದು ಎಂದರು.

Continue Reading

Kodagu

ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ರಚನೆ ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಆಯ್ಕೆ

Published

on

ಮಡಿಕೇರಿ : ಕೊಡಗು ಗೌಡ ಸಮಾಜಗಳ ಒಕ್ಕೂಟದ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಆನಂದ್ ಕರಂದ್ಲಾಜೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ರಾಜೇಶ್ ತೇನನ, ಎರಡನೇ ಬಾರಿಗೆ ಕಾರ್ಯದರ್ಶಿಯಾಗಿ ಉದಯ್ ಪೇರಿಯನ, ಖಜಾಂಚಿಯಾಗಿ ನವೀನ್ ಅಂಬೆಕಲ್, ಜಂಟಿ ಕಾರ್ಯದರ್ಶಿಯಾಗಿ ಕೊಡಪಾಲು ಗಣಪತಿ, ನಿರ್ದೇಶಕರುಗಳಾಗಿ ಪೇರಿಯನ ಜಯಾನಂದ, ಚಿಲ್ಲನ ಗಣಿಪ್ರಸಾದ್, ಕೊಡಗನ ಹ?, ಕುಯ್ಯಮುಡಿ ಅಶ್ವಿನಿ ಕುಮಾರ್, ಬೇಕಲ್ ಬಿಪಿನ್, ಪುಳಕಂಡ್ರ ಸುದೀಪ್, ಕುಯ್ಯಮುಡಿ ರಂಜು ಪಾಣತ್ತಲೆ, ಜಗದೀಶ್ ಮಂದಪ್ಪ, ಕೊಂಬಾರನ ರೋ?ನ್, ಮೊಟ್ಟನ ಕರುಣ, ಪುದಿಯನೆರವನ ರೇವತಿ ರಮೇಶ್ ಹಾಗೂ ಕುಂಬುಗೌಡನ ಜಲಜ ವಿನೋದ್ ನೇಮಕಗೊಂಡಿದ್ದಾರೆ.
ಮಡಿಕೇರಿಯ ಗೌಡ ಸಮಾಜದಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ ಅವರು ನೂತನ ಅಧ್ಯಕ್ಷ ಆನಂದ್ ಕರಂದ್ಲಾಜೆ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಆನಂದ್ ಕರಂದ್ಲಾಜೆ ಅವರು ಗೌಡ ಸಮಾಜಗಳ ಹಾಗೂ ಜನಾಂಗ ಬಾಂಧವರ ಪ್ರಗತಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಜನಾಂಗಗಳೊಂದಿಗೆ ಅರೆಭಾ? ಒಕ್ಕಲಿಗ ಗೌಡರು ಶಾಂತಿ ಮತ್ತು ಸಮನ್ವಯತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಈ ಸಾಮರಸ್ಯವನ್ನು ಹೀಗೆ ಮುಂದುವರಿಸಲು ಆದ್ಯತೆ ನೀಡಲಾಗುವುದು. ಗೌಡ ಜನಾಂಗವನ್ನು ಮತ್ತಷ್ಟು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಕಾರ್ಯ ಚಟುವಟಿಕೆಗಳನ್ನು ರೂಪಿಸಿ ಒಗ್ಗಟ್ಟಿನಿಂದ ಮುನ್ನಡೆಯಲಾಗುವುದು ಎಂದರು.

Continue Reading

Kodagu

ಪೋಷಣ್ ಪಾಕ್ವಾಡ್, ಸೀಮಂತ ಕಾರ್ಯಕ್ರಮ

Published

on

ಮಡಿಕೇರಿ : ಬೆಟ್ಟಗೇರಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಾಕ್ವಾಡ್, ಸೀಮಂತ ಕಾರ್ಯಕ್ರಮ ಹಾಗೂ ಆಯುಷ್ ಕಾರ್ಯಕ್ರಮ ಶನಿವಾರ ನಡೆಯಿತು.
ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರದ ಡಾಕ್ಟರ್ ಶುಭ, ಆಯುಷ್ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ, ಸ್ಥಳೀಯವಾಗಿ ಸಿಗುವ ಔಷಧಿ ಗುಣ ಇರುವ ಸೊಪ್ಪುಗಳನ್ನು ತಂದು ಅದರ ಮಹತ್ವದ ಬಗ್ಗೆ ತಿಳಿಸಿದರು. ಆರೋಗ್ಯಕರ ಜೀವನಶೈಲಿ ಬಗ್ಗೆ, ಆಹಾರ ಪದ್ಧತಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಯೋಗ ಶಿಕ್ಷಕಿ ಪವಿತ್ರ ಯೋಗದ ಮಹತ್ವ ತಿಳಿಸುತ್ತಾ ಎಲ್ಲಾ ಫಲಾನುಭವಿಗಳಿಗೆ ಯೋಗಾಭ್ಯಾಸ ಮಾಡಿಸಿದರು. ಪ್ರಭಾರ ಸಾಹಿತ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಸಾವಿರ ದಿನಗಳ ಮಹತ್ವ, ಅಪೌಷ್ಟಿಕತೆ ಬರದಂತೆ ತಡೆಯುವ ಆಹಾರ ಪದ್ಧತಿ, ಪೌಷ್ಟಿಕ ಆಹಾರ ಸೇವನೆ ಬಗ್ಗೆ, ತೂಕದ ಮಹತ್ವ, ಸ್ವಚ್ಛತೆ, ಕೈ ತೊಳೆಯುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಆಯುಷ್ ಇಲಾಖೆಗೆ ಸಂಬಂಧಿಸಿದ ಆರೋಗ್ಯ ಪದ್ಧತಿಯನ್ನು ಒಳಗೊಂಡ ಹಿತ್ತಲೊಳಗಿರಲವ್ವ ಹತ್ತು ಮೂಲಿಕೆಗಳು ಹಾಗೂ ಆಯುಷ್ ಆರೋಗ್ಯ ಕೈಪಿಡಿಯನ್ನು ವಿತರಣೆ ಮಾಡಲಾಯಿತು. ಇದರೊಂದಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಟಾನಿಕ್ ಮತ್ತು ಮಾತ್ರೆಗಳು ವಿತರಿಸಲಾಯಿತು.
ಬೆಟ್ಟಗೇರಿ ಅಂಗನವಾಡಿ ಕಾರ್ಯಕರ್ತೆ ಬಿ ಎಂ ಪುಷ್ಪಾವತಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸುವುದರೊಂದಿಗೆ ನಿರೂಪಣೆ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸುರಕ್ಷಾಧಿಕಾರಿ ಕೃತಿಕಾರಾಣಿ, ರತಿ, ಆಶಾ ಕಾರ್ಯಕರ್ತೆ ಜಯಚಿತ್ರ, ಆಶಾ ಕಾರ್ಯಕರ್ತೆ ಪ್ರಮೀಳಾ ಹಾಜರಿದ್ದರು.

Continue Reading

Trending

error: Content is protected !!