Hassan
ಅಂದು ದೇಶ ಸೇವೆ ಇಂದು ಸಮಾಜ ಸೇವೆ ಮಾಜಿ ಸೈನಿಕ ಪಕ್ಷೇತರ ಅಭ್ಯರ್ಥಿಗೆ ಮತ ಕೊಡಿ: ಜೆ.ಡಿ. ಬಸವರಾಜು ಮನವಿ

ಹಾಸನ: ದೇಶ ಕಾಯುವ ಸೈನಿಕನಿಗೆ ಮತ ಕೊಟ್ಟು ಭ್ರಷ್ಟಾಚಾರ ಮುಕ್ತ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಮಾಜಿ ಸೈನಿಕ ಹಾಗೂ ಪಕ್ಷೇತರ ಅಭ್ಯರ್ಥಿ ಜೆ.ಡಿ. ಬಸವರಾಜ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ದೇಶದ ಅಭಿವೃದ್ಧಿ ಯಾಗಬೇಕೆಂದರೆ ರೈತ ಮತ್ತು ಯೋಧ ಅತ್ಯಂತ ಮುಖ್ಯವಾಗುತ್ತಾರೆ. ಇವರಿಬ್ಬರು ಸಮೃದ್ಧವಾಗಿ ಮತ್ತು ಸದೃಢವಾಗಿದ್ದರೇ ದೇಶ ಸುಭಿಕ್ಷವಾಗಿರುತ್ತದೆ. ನಾನು ದೇಶ ಕಾಯುವ ಪುಣ್ಯ ಕೆಲಸವನ್ನು ಮಾಡಿ ಬಂದವನು. ಭಾರತೀಯ ಸೇನೆಯ ಸೈನಿಕನಾಗಿ ದೇಶಕ್ಕಾಗಿ ನಾನು ಕುಟುಂಬವನ್ನು ಬಿಟ್ಟು ದೂರದ ಊರಲ್ಲಿ ಭಾರತೀಯ ಸೈನ್ಯದ ಸೈನಿಕನಾಗಿ ದೇಶಕ್ಕಾಗಿ ನಿಶ್ವಾರ್ಥ ಸೇವೆ ಮಾಡಿದ್ದು, ಬೇರೆ ರೂಪದಲ್ಲಿ ಸಾಮಾಜಿಕ ಸೇವೆ ಮಾಡುವುದಕ್ಕೆ ಸಿದ್ಧನಾಗಿದ್ದೇನೆ. ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಭಾರತದ ಭವಿಷ್ಯ ಭದ್ರವಾಗಿರಬೇಕೆಂದರೆ ನಮ್ಮ ಯುವ ಸಮಾಜ ಗಟ್ಟಿಯಾಗಿರಬೇಕು. ಯುವ ಸಮಾಜದಲ್ಲಿ ನಾಯಕತ್ವ, ದೇಶ ಪ್ರೇಮ, ಸಮಾಜ ಸೇವರ ಸಮಾನೋಭಾವನೆ ಇರಬೇಕು ಎಂದರು. ಹಾಸನದಲ್ಲಿ ಒಂದು ಸೈನಿಕ ಶಾಲೆ ಮಾಡಿ ನಮ್ಮ ಹಾಸನದ ಯುವ ಸಮಾಜವನ್ನು ಸಮರ್ಥ ಸಮಾಜವನ್ನಾಗಿ ಮಾಡಬೇಕೆನ್ನುವುದು ನನ್ನ ಕನಸಾಗಿದೆ ಎಂದರು. ನಮ್ಮಲ್ಲಿ ಸೇನೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಹೊತ್ತವರು ಸಾಕಷ್ಟು ಮಂದಿಯಿದ್ದಾರೆ. ಅಂತವರಿಗೆಂದು ನಮ್ಮ ಕ್ಷೇತ್ರದಲ್ಲಿ ಒಂದು ಅರ್ಮ್ ಫೋರ್ಸ್ ಟ್ರೈನಿಂಗ್ ಅಕಾಡೆಮಿಯನ್ನು ತೆರೆಯಬೇಕಿದೆ. ಮೊದಲೆಲ್ಲ ಉನ್ನತ ವಿದ್ಯಾಭ್ಯಾಸ ಪಡೆಯಬೇಕೆಂದರೆ ಬೆಂಗಳೂರೋ ಅಥವಾ ಇನ್ನಾವುದೋ ದೊಡ್ಡ ನಗರಕ್ಕೇ ಹೋಗಬೇಕಿತ್ತು. ಆದರೆ ಈಗ ನಮ್ಮ ಹಾಸನದಲ್ಲಿಯೇ ಮೂರು ಇಂಜಿನಿಯರಿಂಗ್ ಕಾಲೇಜುಗಳು ಸ್ಥಾಪನೆಗೊಂಡಿವೆ. ವೈದ್ಯಕೀಯ ಪದವಿಯನ್ನೂ ನಾವು ಇಲ್ಲೇ ಪಡೆಯಬಹುದಾಗಿದೆ. ಆದರೆ ನಮ್ಮಲ್ಲಿ ಇಂಜಿನಿಯರಿಂಗ್ ಪದವಿ ಪಡೆಯುವ ಇಂಜಿನಿಯರ್ ಕಾಲೇಜುಗಳು ಕೆಲಸಕ್ಕೆಂದು ಮತ್ತೆ ಬೇರಾವುದೋ ದೊಡ್ಡ ಸಿಟಿ ಹುಡುಕಿಕೊಂಡು ಹೋಗಬೇಕಾಗಿರುವ ಪರಿಸ್ಥಿತಿಯಿದೆ. ಈ ಸ್ಥಿತಿ ಬದಲಾಗಬೇಕಿದೆ. ನಮ್ಮ ಹಾಸನದಲ್ಲಿ ಐಟಿ ಕಂಪನಿಗಳು ಬಂದು ನೆಲೆಸಬೇಕು. ನಮ್ಮ ಹಾಸನ ಕೂಡ ಒಂದು ಮಿನಿ ಐಟಿ ಹಬ್ ಆಗಬೇಕಿದೆ. ಕೇವಲ ಐಟಿ ಮಾತ್ರವಲ್ಲ. ನಮ್ಮಲ್ಲಿ ಬೇರೆ ಎಲ್ಲ ರೀತಿಯ ಉದ್ಯೋಗಾವಕಾಶಗಳೂ ಸೃಷ್ಟಿಯಾಗಬೇಕು. ನಮ್ಮ ಕ್ಷೇತ್ರದಲ್ಲಿ ಯಾವೊಬ್ಬ ಯುವಕ, ಯುವತಿಯೂ ಕೆಲಸ ಸಿಗದೆ ಪರದಾಡುವಂತೆ ಇರಬಾರದು ಎಂದು ಅಭಿಪ್ರಾಯಪಟ್ಟರು.
ನಮ್ಮ ರೈತರು ವರ್ಷ ಪೂರ್ತಿ ಕಷ್ಟ ಪಟ್ಟು ದುಡಿದು ಬೆಳೆ ಬೆಳೆಯುತ್ತಾರೆ. ನಂತರ ಅದನ್ನು ಯಾವುದೋ ಮಧ್ಯವರ್ತಿಗಳ ಕೈಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ. ಇದರಿಂದ ಮಧ್ಯವರ್ತಿಗಳು ಲಾಭ ಪಡೆಯುತ್ತಾರೆಯೇ ಹೊರತು ರೈತರು ಲಾಭ ಪಡೆಯುವುದಿಲ್ಲ. ರೈತರು ಬೆಳೆಯುವ ಬೆಳೆಯನ್ನೇ ಅವರು ಬೇರೆ ಬೇರೆ ಉತ್ಪನ್ನಗಳಾಗಿಸಿ ಅದರಿಂದ ಸಾಕಷ್ಟು ಲಾಭ ಪಡೆಯುತ್ತಾರೆ. ಆದರೆ ಆ ಕಲಸ ನಮ್ಮಲ್ಲೇ ಆಗಬೇಕು. ದೂರದ ಊರಿಗೆ ನಾವು ಬೆಳೆದ ಬೆಳೆ ಕಳುಹಿಸಿ ಕೊನೆಗೆ ಅದನ್ನೇ ಬೇರೆ ಉತ್ಪನ್ನದ ರೂಪದಲ್ಲಿ ದುಬಾರಿ ಬೆಲೆಗೆ ಕೊಂಡುಕೊಳ್ಳುವಂತಿರಬಾರದು. ನಮ್ಮ ಬೆಳೆ ನಮ್ಮಲ್ಲೇ ಉತ್ಪನ್ನವಾಗಬೇಕು. ನಿಸ್ವಾರ್ಥವಾಗಿ ದುಡಿಯುವುದು ಮಾತ್ರವಲ್ಲದೆ ಸಮಾಜವನ್ನೂ ಅದೇ ರೀತಿಯಲ್ಲಿ ಬದಲಾಗಿಸುವ ಅವಶ್ಯಕತೆಯಿದೆ. ಮೊದಲು ನಮ್ಮ ಹಾಸನ ಭ್ರಷ್ಟಾಚಾರ ಮುಕ್ತವಾಗಬೇಕು. ನಂತರ ನಮ್ಮ ರಾಜ್ಯ, ನಂತರ ನಮ್ಮ ದೇಶ. ಹೀಗೆ ಪ್ರತಿ ಕ್ಷೇತ್ರವೂ ಭ್ರಷ್ಟಾಚಾರ ಮುಕ್ತವಾಗಬೇಕು. ಅದರತ್ತ ಕೆಲಸ ಮಾಡುವುದಕ್ಕೆ ನಾನು ಭದ್ಧವಾಗಿದ್ದೇನೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸೈನಿಕರಾದ ರಂಗನಾಥ್, ಕಾಳೇಗೌಡ, ಗೋವಿಂದೇಗೌಡ, ಮೋಹನ್ ರಾಜ್ ಇತರರು ಉಪಸ್ಥಿತರಿದ್ದರು.
Hassan
ಇನ್ನು 15 ದಿನದಲ್ಲಿ ಎಲ್ಲಾ ಶಾಸಕರ ಜೊತೆ ವಿವಿ ಉಳಿಸಿ ಹೋರಾಟ ಸಮಿತಿಯಿಂದ ಸಿಎಂ ಭೇಟಿ: ಸಂಸದ ಶ್ರೇಯಸ್ ಪಟೇಲ್

ಹಾಸನ: ಪಕ್ಷ ಭೇದ ಮರೆತು ಪ್ರಾಮಾಣಿಕವಾಗಿ ನಿಮ್ಮ ಜೊತೆ ಹಾಸನ ವಿವಿ ಉಳಿಸುವ ಕೆಲಸವನ್ನು ಮಾಡಲಾಗುವುದು. ಎಲ್ಲಾ ಶಾಸಕರ ಒಟ್ಟುಗೂಡಿ, ನಮ್ಮ ಜೊತೆ ಸಮಿತಿಯಿಂದ 15 ಜನರ ತಂಡ ಈ ವಾರದಲ್ಲಿ ದಿನ ನಿಗಧಿ ಮಾಡಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡುವ ಕೆಲಸ ಮಾಡಿ ಗಮನ ಸೆಳೆಯಲಾಗುವುದು ಎಂದು ಸಂಸದ ಶ್ರೇಯಸ್. ಎಂ. ಪಟೇಲ್ ಭರವಸೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಾಸನ ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಭಾನುವಾರ ಕರೆಯಲಾಗಿದ್ದ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಸದ ಶ್ರೇಯಸ್.ಎಂ. ಪಟೇಲ್ ಮಾತನಾಡಿ, ವಿಶ್ವ ವಿದ್ಯಾಲಯದ ಕುರಿತು ದುಂಡು ಮೇಜಿನ ಸಭೆಯಲ್ಲಿ ಮೌಲ್ಯಾಧರಿತ ಚರ್ಚೆಗಳು ನಡೆದಿದ್ದು, ಅಭಿವೃದ್ಧಿ ಮತ್ತು ಯೋಗಕ್ಷೇಮ ಬಂದಾಗ ಪಕ್ಷ ಮರೆತು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕಾಗುತ್ತದೆ. ಎಲ್ಲಾರ ಪರ ನಿಂತು ಕೊಳ್ಳುವ ಕೆಲಸ ಮಾಡಲಾಗುವುದು ಎಂದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಲಾಗುವುದು. ಸಮಿತಿ ವರದಿ ಕೂಡ ಇಲ್ಲಿವರೆಗೂ ಬಂದಿರುವುದಿಲ್ಲ. ವಿಶ್ವವಿದ್ಯಾಲಯವನ್ನು ಮುಚ್ಚುವ ನಿರ್ಧಾರವನ್ನು ಇಲ್ಲಿವರೆಗೂ ತೆಗೆದುಕೊಂಡಿರುವುದಿಲ್ಲ. ಯಾರು ಗಾಬರಿ ಪಡಬಾರದೆಂದು ಶಿಕ್ಷಣ ಸಚಿವರು ಹೇಳಿದ್ದು, ಈಗ ಅಧಿವೇಶನ ನಡೆಯುತ್ತಿರುವುದರಿಂದ ಎಲ್ಲಾ ಶಾಸಕರು ಒಳಗೊಂಡಂತೆ ಸಮಿತಿ ರಚಿಸಿ ಸಿಎಂ, ಡಿಸಿಎಂ ಹಾಗೂ ಸಚಿವರನ್ನು ಭೇಟಿ ಮಾಡಿ ಆಗಬಹುದಾದಂತಹ ಬೇಡಿಕೆಯನ್ನು ಮುಂದಿಟ್ಟು ಮನವಿಯನ್ನು ಮಾಡೋಣ ಎಂದರು.
ಶಾಸಕ ಎ. ಮಂಜು ಮಾತನಾಡಿ, ವಿಶ್ವವಿದ್ಯಾಲಯ ಇಲ್ಲೆ ಉಳಿಸುವ ನಿಟ್ಟಿನಲ್ಲಿ ಆಗಬೇಕಾದ ಕೆಲಸ ತಡವಾಗಿದೆ ಎಂಬುದು ನನ್ನ ಭಾವನೆ. ಕಾಲೇಜುಗಳನ್ನು ಯಾವ ಸರಕಾರ ಬಂದರೂ ಮುಚ್ಚುವುದಕ್ಕೆ ಆಗುವುದಿಲ್ಲ. ಆದರೇ ವಿಲೀನಗೊಳಿಸಲಾಗುತ್ತದೆ. ಹಳ್ಳಿ ಸೇರಿದಂತೆ ಎಲ್ಲಾ ಮಕ್ಕಳಿಗೂ ವಿಧ್ಯೆ ಸಿಗಬೇಕಾದರೇ ವಿವಿಗಳು ಆಯಾ ಜಿಲ್ಲೆ ಇರಬೇಕು. ಆಗ ಮಾತ್ರ ಹೆಚ್ಚಿನ ಅವಕಾಶಗಳು ದೊರೆಯುತ್ತದೆ. ವಿಶ್ವವಿದ್ಯಾಲಯದ ಅಭಿವೃದ್ಧಿ ಆಗಬೇಕು. ಹೆಚ್ಚಿನ ಹೋರಾಟಕ್ಕೆ ಮುಂದಾದ ಜಿಲ್ಲೆ ಇದ್ದರೇ ಹಾಸನ. ಈ ಹೋರಾಟದಲ್ಲಿ ಯಾವ ರಾಜಕಾರಣ ಆಗಬಾರದು. ವಿವಿ ರಾಜ್ಯ ಸರಕಾರದಿಂದ ಮಾತ್ರ ನಡೆಯುವುದಿಲ್ಲ. ಕೇಂದ್ರದ ಯುಜಿಸಿ ಸ್ಕೇಲ್ ಕೂಡ ಇದೆ ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ ಮಾತನಾಡಿ, ವಿದ್ಯಾರ್ಥಿಗಳ ಮೊದಲ ಆಯ್ಕೆ ಸರಕಾರ ಶಿಕ್ಷಣ ಸಂಸ್ಥೆಗಳು. ಇಂಜಿನಿಯರ್, ವೈದ್ಯಕೀಯ ಯಾವುದೇ ಆಗಿರಲಿ ಸರಕಾರಿ ಸಂಸ್ಥೆಗಳಿಗೆ ಬರಲು ಮುಂದಾಗುತ್ತಾರೆ. ಸೀಟು ಇಲ್ಲದಾಗ ಅನಿವಾರ್ಯವಾಗಿ ಖಾಸಗೀ ಕಡೆ ಹೋಗುತ್ತಾರೆ. ಏನಾದರೂ ಈ ರೀತಿ ತಾತ್ಸರ ಮಾಡಿದರೇ ಮುಂದಿನ ದಿನಗಳಲ್ಲಿ ಖಾಸಗೀ ಶಿಕ್ಷಣ ಸಂಸ್ಥೆಯವರು ಉನ್ನತ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಮುಂದಾದರೇ ಆ ಖಾಸಗೀಯವರು ಮಾಡಿದ ನಿರ್ಣಯದಂತೆ ಉನ್ನತ ಶಿಕ್ಷಣ ಸಾಗುತ್ತದೆ ಎಂದು ಎಚ್ಚರಿಸಿದರು.
ಇದರಿಂದ ಯಾವ ಯಾವ ಸಂಸ್ಥೆ ಯಾವ ಯಾವ ಮೌಲ್ಯವನ್ನು ಭಿತ್ತಬಹುದು. ಸರಕಾರದವರು ಹೀಗೆ ಮುಂದುವರೆದರೇ ಬಂಡವಾಳ ಶಾಹಿಗಳು ತಮಗೆ ಬೇಕಾದ ಮೌಲ್ಯಗಳನ್ನು ಯುವ ತಲೆಮಾರಿಗೆ ಬಿತ್ತುತ್ತಾರೆ. ಇದುಉನ್ನತ ಶಿಕ್ಷಣದ ದೊಡ್ಡ ದುರಂತದ ಸಂಗತಿ ಆಗಿತು ಎಂದು ಬೇಸರವ್ಯಕ್ತಪಡಿಸಿದರು.
ಹಸಿರುಭೂಮಿ ಪ್ರತಿಷ್ಠಾನದ ಬಿ.ಕೆ. ಮಂಜುನಾಥ್ ಮಾತನಾಡಿ, ಸರಕಾರದಲ್ಲಿ ಗೊಂದಲವಿದ್ದು, ಜನರಲ್ಲಿ ವಿಶ್ವವಿದ್ಯಾಲಯ ಉಳಿಯುತ್ತದೆಯೂ ಇಲ್ಲವೊ ಎಂಬುದು ಬೇರೂರಿದೆ. ಈ ಕಮಿಟಿ ಶಾಸಕರು. ಸಂಸದರು ಎಲ್ಲಾ ಸೇರಿ ಸಭೆ ಮಾಡಿ ದೃಢವಾದ ನಿಲುವು ತೆಗೆದುಕೊಂಡರೇ ಖಂಡಿತ ಸರಕಾರ ಒಪ್ಪಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಹಾಸನ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿಯ ಡಾ. ವೈ.ಎಸ್. ವೀರಭದ್ರಪ್ಪ, ಆರ್.ಪಿ. ವೆಂಕಟೇಶ್ ಮೂರ್ತಿ, ಧರ್ಮೇಶ್, ಹೆಚ್.ಕೆ. ಸಂದೇಶ್, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಹೆಚ್.ಪಿ. ಮೋಹನ್, ಹಿರಿಯ ಪತ್ರಕರ್ತ ವೆಂಕಟೇಶ್, ಹೆಚ್.ಆರ್. ನವೀನ್ ಕುಮಾರ್, ಎಂ.ಜಿ. ಪೃಥ್ವಿ, ಸಾಹಿತಿ ರೂಪ ಹಾಸನ್, ತಾರಾಚಂದನ್, ರಮೇಶ್, ಎಣ.ಬಿ. ಪುಷ್ಪ, ಸಮೀರ್ ಅಹಮದ್ ಇತರರು ಉಪಸ್ಥಿತರಿದ್ದರು.
Hassan
ಯಶಸ್ವಿಗೊಂಡ ಪತಂಜಲಿ ಯೋಗಾ ಪರಿವಾರದ ಮಹಿಳಾ ದಿನಾಚರಣೆ

ಹಾಸನ: ನಗರದ ಹಾಸನಾಂಬೆ ದೇವಾಲಯ ರಸ್ತೆ ಬಳಿ ಇರುವ ಶ್ರೀ ಕನ್ನಿಕಾಪರಮೇಶ್ವರಿ ಯೋಗಾ ಕೇಂದ್ರದಲ್ಲಿ ಭಾನುವಾರ (ಮಾ.16) ಹೋಳಿ ಹುಣ್ಣಿಮೆ ಹಾಗೂ ಮಹಿಳಾ ದಿನಚರಣೆಯೂ ಸಂಭ್ರಮದಿಂದ ಯಶಸ್ವಿಯಾಗಿ ಆಚರಿಸಲಾಯಿತು.
ಇದೆ ವೇಳೆ ಶ್ರೀ ಕನ್ನಿಕಾ ಪರಮೇಶ್ವರಿ ಯೋಗ ಕೇಂದ್ರದ ಸಾಧಕಿ ಹಾಗೂ ಪತಂಜಲಿ ಜಿಲ್ಲಾ ಪ್ರಭಾರಿ ಶಾರದ ಧರ್ಮಾನಂದ್ ಮತ್ತು ಜಿಲ್ಲಾ ಸಂರಕ್ಷಕರಾದ ಲೋಕನಾಥ್ ಮಾತನಾಡಿ, ನಾವುಗಳು ಪತಾಂಜಲಿ ಪರಿವಾರದಿಂದ ಮಹಿಳಾ ದಿನಾಚರಣೆ ಮತ್ತು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಪಾದರ್ಪಣೆ ಮಾಡಿದ್ದು, ಮಹಿಳೆಯರಿಗೆ ಗೌರವ ಕೊಡುವುದಕ್ಕಾಗಿ ಈ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕುಟುಂಬದಲ್ಲಿ ಎಲ್ಲಾವನ್ನು ನಿಬಾಯಿಸಿಕೊಂಡು ಬರುವವಳು ಮಹಿಳೆ. ತಾಯಿ ಶಕ್ತಿ ಆಕೆಯಲ್ಲಿದೆ ಎಂದು ಹೇಳಿದರು.
ಕಾರ್ಯಕ್ರಮವು ಹೋಳಿ ಹುಣ್ಣಿಮೆ ಹಾಗೂ ಮಹಿಳಾ ದಿನಚರಣೆಯ ಮೊದಲು ಅಗ್ನಿಹೋತ್ರದೊಂದಿಗೆ ಪ್ರಾರಂಭವಾಯಿತು. ಇದೆ ವೇಳೆ ಮಹಿಳಾ ಪೌರಕಾರ್ಮಿಕರಾದ ರಾಗಿಣಿ ಹಾಗೂ ನೇತ್ರಾವತಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಇದೆ ವೇಳೆ ಮಹಿಳೆಯರಿಂದಲೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಮಹಿಳೆಯರಿಗೆ ಆಟೋಟ ಸ್ಪರ್ದ ನಡೆಸಿ ಬಹಮಾನ ವಿತರಿಸಿದರು. ನಂತರ ಬಣ್ಣ ಬಣ್ಣದ ಹೂವಿನ ಎಸಳುಗಳಿಂದ ಮಹಿಳೆಯರು ಹೋಳಿ ಹುಣ್ಣಿಮೆ ಆಚರಿಸಿ ಸಂಭ್ರಮಿಸಿದರು.
ಇದೆ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಹಿಳಾ ಪತಂಜಲಿ ಯೋಗ ಸಮಿತಿಯ ನಿಕಟಪೂರ್ವ ಜಿಲ್ಲಾ ಪ್ರಭಾರಿಗಳಾದ ಹೇಮಲತಾ, ಪತಂಜಲಿ ಜಿಲ್ಲಾ ಪ್ರಭಾರಿ ಎಂ.ವಿ. ಗಿರೀಶ್, ಕಿಸಾನ್ ಸೇವಾ ಸಮಿತಿ ಜಿಲ್ಲಾ ಪ್ರಭಾರಿ ನಾಗೇಶ್, ಜಿಲ್ಲಾ ಸಹ ಪ್ರಭಾರಿ ಧರ್ಮಾನಂದ್, ಪತಂಜಲಿ ಜಿಲ್ಲಾ ಸಹ ಪ್ರಭಾರಿ ದೊರೆಸ್ವಾಮಿ, ತವರು ಚಾರಿಟಬಲ್ ಟ್ರಸ್ಟ್ ನ ಡಾ. ಪಾಲಾಕ್ಷ ಇತರರು ಉಪಸ್ಥಿತರಿದ್ದರು.
Hassan
ಕಾಡಾನೆಯಿಂದ ಮೃತಪಟ್ಟ ಸುಶೀಲಮ್ಮ ಕುಟುಂಬಕ್ಕೆ ಶಂಕರ್ ಗೌಡ ಸಾಂತ್ವಾನ

ವರದಿ ಸತೀಶ್ ಚಿಕ್ಕಕಣಗಾಲು
ಹಾಸನ: ಕಾಡಾನೆಯಿಂದ ಮೃತಪಟ್ಟ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವೃದ್ಧ ಮಹಿಳೆ ಸುಶೀಲಮ್ಮ ಕುಟುಂಬಕ್ಕೆ ನವಕರ್ನಾಟಕ ಯುವಶಕ್ತಿಯ ರಾಜ್ಯ ಸಂಘಟನೆಯ ಉಪಾಧ್ಯಕ್ಷರಾದ ಶಂಕರ್ ಗೌಡ ನೇತೃತ್ವದಲ್ಲಿ ಸದಸ್ಯರೊಂದಿಗೆ ಸ್ಥಳಕ್ಕೆ ಆಗಮಿಸಿ ಕುಟುಂಬಕ್ಕೆ ಸಾಂತ್ವಾನ ಹೇಳಿ 25 ಸಾವಿರ ರೂಪಾಯಿಗಳ ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನವಕರ್ನಾಟಕ ಯುವಶಕ್ತಿಯ ರಾಜ್ಯ ಸಂಘಟನೆಯ ಉಪಾಧ್ಯಕ್ಷರಾದ ಶಂಕರ್ ಗೌಡ, ಮಲೆನಾಡು ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಿದ್ದು, ರೈತರು ಬೆಳೆದ ಬೆಳೆಗಳನ್ನು ಪ್ರತಿದಿನ ನಾಶಪಡಿಸುತ್ತಿವೆ. ಅಲ್ಲದೆ ಮನಷ್ಯರ ಮೇಲೆ ದಾಳಿ ಮಾಡುತ್ತಿವೆ. ಇದಕ್ಕೆ ಸರ್ಕಾರ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು. ಪ್ರಾಣಿಗಳ ಹತ್ಯೆ ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಈ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು
ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನವಕರ್ನಾಟಕ ಯುವಶಕ್ತಿ. ರಾಜ್ಯ ಸಂಘಟನೆಯ ಉದ್ಯಮ ಘಟಕದ ರಾಜ್ಯಾದ್ಯಕ್ಷರಾದ ಸಂದೇಶ್ ಶೆಟ್ಟಿ, ಯುವ ಘಟಕ ರಾಜ್ಯಾದ್ಯಕ್ಷರಾದ ಪ್ರಭಾಸ್ ಶೆಟ್ಟಿ, ಉದ್ಯಮ ಘಟಕದ ರಾಜ್ಯ ಉಪಾಧ್ಯಕ್ಷರಾದ ಚಂದ್ರ ರಾಜ್ ಜೈನ್, ರವಿರಾಜ್ ಶೆಟ್ಟಿ, ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ನಂದೀಶ್, ಬೇಲೂರು ತಾಲೂಕು ಘಟಕದ ಅಧ್ಯಕ್ಷ ಭಾನುಪ್ರಕಾಶ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಸಾದ್, ಜಿಲ್ಲಾ ಯುವ ಘಟಕದ ಜಿಲ್ಲಾಧ್ಯಕ್ಷ ನಿಖಿಲ್, ವಿದ್ಯಾರ್ಥಿ ಘಟಕ ಅಧ್ಯಕ್ಷರಾದ ಶಮಿತ್ ಎಚ್.ವಿ. ಹೇಮರಾಜ್, ದರ್ಶನ್ ಮುಂತಾದವರು ಹಾಜರಿದ್ದು ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದರು.
-
State20 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu18 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
Hassan24 hours ago
ಬೆಳಮೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆರ್ ಎಸ್ ನಟರಾಜ್ ಆಯ್ಕೆ
-
Chamarajanagar23 hours ago
ಸತತ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಎಂ.ಪಿ.ಸುನೀಲ್ ಆಯ್ಕೆ
-
National - International20 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu21 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State21 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Hassan23 hours ago
ಗಮನಸೆಳೆದ ತಿಂಗಳ ಮಾಮನ ತೇರು: ಚಂದ್ರನಿಗೆ ಮದುವೆ ಮಾಡಿದ ನಿವಾಸಿಗಳು