Hassan
ಪೆನ್ ಡ್ರೈವ್ ಪ್ರಕರಣ ಕುರಿತು ಪೊಲೀಸ್ ಇಲಾಖೆಗೆ ದೂರು ಎಷ್ಟೆ ಪ್ರಬಾವಿ ಆಗಿದ್ರು ಬಂಧಿಸಲಿ: ಹೆಚ್.ಎಸ್. ಲಿಂಗೇಗೌಡ
ಹಾಸನ : ಈಗಾಗಲೇ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿ ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಅವರು ಎಷ್ಟೆ ಪ್ರಭಾವಿ ಆಗಿದ್ದರೂ ಕೂಡಲೇ ಬಂದಿಸಬೇಕು. ಪೆನ್ ಡ್ರೈವ್ ಪ್ರಕರಣದ ಬಗ್ಗೆ ತಮ್ಮ ಪಕ್ಷದ ವತಿಯಿಂದ ಪೊಲೀಸ್ ಇಲಾಖೆಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹೆಚ್.ಎಸ್. ಲಿಂಗೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪೆನ್ ಡ್ರೈವ್ ಪ್ರಕರಣದಿಂದ ಹಾಸನ ಜಿಲ್ಲೆಯ ಗೌರವ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹಾಳಾಗುತ್ತಿದೆ ಜೊತೆಗೆ ಒಂದಲ್ಲ ಎರಡಲ್ಲ ನೂರಾರು ಮಹಿಳೆಯರ ಮಾನ ಮರ್ಯಾದೆ ಕೂಡ ಬೀದಿಯಲ್ಲಿ ಹರಾಜ್ ಆಗುತ್ತದ್ದು, ಈ ಘಟನೆ ಬಗ್ಗೆ ಕೂಡಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪೊಲೀಸ್ ಇಲಾಖೆ ಕೂಡಲೇ ವಿಡಿಯೋದ ಮೂಲ ಹಾಗೂ ವಿಡಿಯೋದಲ್ಲಿರುವ ಮಹಿಳೆಯರ ಬಗ್ಗೆ ತನಿಖೆ ನಡೆಸಿ ವೀಡಿಯೋ ಯಾರು ಮಾಡಿದ್ದು, ಎಂಬುದನ್ನು ಪತ್ತೆ ಹಚ್ಚಿ ಅವರು ಎಂಥಾ ಪ್ರಭಾವಿಗಳಾಗಿದ್ದರು ಅವರ ವಿರುದ್ಧ ಕೂಡ ಕೇಸು ದಾಖಲಿಸಿ ಜೈಲಿಗಟ್ಟುವ ಕೆಲಸ ಮಾಡಬೇಕು ಇಲ್ಲವಾದರೆ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷಿತ ಇಲ್ಲ ಎಂಬುದು ಸಾಬೀತಾಗುತ್ತದೆ ಎಂದರು.
ತಮ್ಮ ಕಾಮದಾಟಕ್ಕೆ ತಮ್ಮ ಕಷ್ಟ ಹೇಳಿಕೊಳ್ಳಲು ಬಂದ ಮಹಿಳೆಯರನ್ನು ಎಲ್ಲ ಸಲದ ಆಮಿಷಗಳನ್ನು ಒಡ್ಡಿ ಬಳಸಿಕೊಂಡಿರುವ ಅನೇಕ ಉದಾಹರಣೆಗಳಿವೆ. ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದಿದೆ ವಿಡಿಯೋ ಒರಿಜಿನಲ್ ಅಥವಾ ಎಡಿಟಿಂಗ್ ವಿಡಿಯೋ ಇದೆಯಾ ಎಂಬುದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಪ್ರಜ್ವಲ್ ರೇವಣ್ಣ ನವರ ಕಾರು ಚಾಲಕ ಕಾರ್ತಿಕ್ ರವರು ಡಿ ನಮ್ಮ ೧೩ ಎಕರೆ ಜಮೀನನ್ನ ಅಕ್ರಮವಾಗಿ ಬರೆಸಿಕೊಂಡಿದಾರೆ ಎಂದು ಮಾಧ್ಯಮಗಳ ಮುಂದೆ ಹೇಳುವಾಗ ಅನೇಕ ಕರ್ಮಕಾಂಡಗಳನ್ನು ಮಾಡಿದ್ದಾರೆ ಎಂದು ಹೇಳಿರುತ್ತಾರೆ. ಆದರಿಂದ ಅವರ ಕಾರಿನ ಚಾಲಕ ಕಾರ್ತಿಕ್ ನವರನ್ನು ವಿಚಾರಣೆಗೊಳಪಡಿಸಿ ಸಂತ್ರಸ್ತ ಮಹಿಳೆಯರ ವಸ್ತು ಸ್ಥಿತಿ ಬಗ್ಗೆ ತಿಳಿದುಕೊಳ್ಳಬೇಕು ಎಂದು ಆಗ್ರಹಿಸಿದರು.
Hassan
ಅಕ್ರಮ ಮರಳು ಗಣಿಗಾರಿಕೆ
ಆಲೂರು: ಅಕ್ರಮ ಮರಳು ಗಣಿಗಾರಿಕೆ, ಮರಳು ಸಾಗಾಟ ನಡೆಯುತ್ತಿದ್ದರೂ, ಗಣಿ ಇಲಾಖೆ ಅಧಿಕಾರಿಗಳು, ಪೊಲೀಸರು, ಕಂದಾಯ ಇಲಾಖೆ, ಗ್ರಾಪಂ ಅಧಿಕಾರಿಗಳು ಮೌನವಾಗಿದ್ದಾರೆ. ಇವರ ಈ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಇವರ ಈ ಮೌನ ಕಂಡಾಗ ಪರೋಕ್ಷವಾಗಿ ಇವರು ಇದನ್ನು ಬೆಂಬಲಿಸುವಂತೆ ಕಾಣುತ್ತಿದೆ. ಆದ್ದರಿಂದ ಮರಳು ಮಾಫಿಯಾದವರು ನೀಡುವ ‘ಮಾಮೂಲಿ’ ಇವರನ್ನೆಲ್ಲ ಮೌನವಾಗಿರುವಂತೆ ಮಾಡಿತ್ತಾ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ
ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿಯ ವ್ಯಾಪ್ತಿಯ ಎಂಬಲ್ಲಿ ಬರುವ ಹೇಮಾವತಿ ನದಿಯಲ್ಲಿ ಜೆಸಿಬಿ ಯಂತ್ರ ಬಳಸಿ ರಾಜಾರೋಷವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಅಮೂಲ್ಯ ಪ್ರಾಕೃತಿಕ ಸಂಪತ್ತನ್ನು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರೂ, ಅಧಿಕಾರಿಗಳು ಮೌನ ವಹಿಸುತ್ತಿರುವುದು ಸಾರ್ವಜನಿಕರ ಸಂಶಯಕ್ಕೆ ಕಾರಣವಾಗಿದೆ.
ಹೇಮಾವತಿ ನದಿ ದಡದಲ್ಲಿ ಹೇರಳವಾಗಿ ಮರಳು ಸಂಪತ್ತಿದ್ದು, ಜೆಸಿಬಿ ಯಂತ್ರ ಹಾಗೂ ದೋಣಿಯ ಮೂಲಕ ಕಾರ್ಮಿಕರನ್ನು ಬಳಸಿಕೊಂಡು ಮರಳು ಲೂಟಿ ಮಾಡಲಾಗುತ್ತಿದೆ. ಇಲ್ಲಿ ಹಗಲು ಮತ್ತು ರಾತ್ರಿ ಅಕ್ರಮವಾಗಿ ನದಿಯ ಗರ್ಭ ಸೀಳಿ ಅವೈಜ್ಞಾನಿಕವಾಗಿ ಮರಳು ತೆಗೆಯಲಾಗುತ್ತಿದೆ. ಈ ಮರಳಿಗೆ ಉತ್ತಮ ಬೆಲೆಯಿದ್ದು, ದಿನನಿತ್ಯ 25ರಿಂದ 30 ಲಾರಿ ಮರಳನ್ನು ಯಾವುದೇ ದಾಖಲೆ ಪತ್ರಗಳಿಲ್ಲದೆ, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ತಾಲೂಕುಗಳಿಗೆ ಸಾಗಿಸಲಾಗುತ್ತದೆ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಇಲ್ಲಿ ನದಿಯಲ್ಲಿ ಸುಮಾರು ಅರ್ಧ ಕಿಮೀ. ತನಕ ಮರಳು ತೆಗೆಯಲಾಗಿದ್ದು, ಇದಕ್ಕಾಗಿ ನದಿಯ ಬದಿಯಲ್ಲಿ ಅಕ್ರಮವಾಗಿ ರಸ್ತೆ ನಿರ್ಮಿಸಲಾಗಿದೆ. ರಸ್ತೆಗಾಗಿ ಪ್ರಕೃತಿದತ್ತವಾಗಿ ಹರಿಯುವ ನದಿ ನೀರನ್ನು ತಡೆ ಹಿಡಿಯಲಾಗಿದೆ.
ಮರಳು ಮಾಫಿಯಾಕ್ಕೆ ಮೌನವಾದರಾ ಅಧಿಕಾರಿಗಳು?: ಪ್ರತಿ ವರ್ಷ ಮಳೆ ಕಡಿಮೆಯಾದ ಬಳಿಕ ಮರಳು ಮಾಫಿಯ ತನ್ನ ಕಾರ್ಯ ಚಟುವಟಿಕೆ ಆರಂಭಿಸುತ್ತಿದ್ದು, ಇಲ್ಲಿ ಕಳೆದೆರಡು ತಿಂಗಳಿನಿಂದ ಮರಳು ಅಕ್ರಮವಾಗಿ ಸಾಗಾಣಿಕೆ ನಡೆಸಲಾಗುತ್ತಿದೆ. ಪ್ರಾಕೃತಿಕ ಸಂಪತ್ತನ್ನು ಅಪೋಶನ ತೆಗೆದುಕೊಳ್ಳುವಂತೆ ಲೂಟಿ ಮುಂದುವರೆಸಿರುವ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಇನ್ನಾದರೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರ ಎಂಬುದನ್ನು ಕಾದು ನೋಡಬೇಕಿದೆ.
Hassan
ಇಂದು ದೇವರಾಜೇಗೌಡರನ್ನು ಕೋರ್ಟ್ಗೆ ಕರೆತಂದಿದ್ದ ಎಸ್ಐಟಿ ತಂಡ
ಹಾಸನ : ಪೆನ್ಡ್ರೈವ್ ವೈರಲ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ ಅಂತ್ಯ ಹಿನ್ನೆಲೆ
ಇಂದು ದೇವರಾಜೇಗೌಡರನ್ನು ಕೋರ್ಟ್ಗೆ ಕರೆತಂದಿದ್ದ ಎಸ್ಐಟಿ ತಂಡ
ಇನ್ನೂ ಎರಡು ದಿನ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಎದುರು ಮನವಿ ಮಾಡಿದ್ದ ಎಸ್ಐಟಿ ಟೀಂ
ಎರಡು ದಿನ ಎಸ್ಐಟಿ ವಶಕ್ಕೆ ನೀಡಿ ಹಾಸನದ ಐದನೇ ಅಧಿಕ ಸಿವಿಲ್ ನ್ಯಾಯಾಲಯ
ಮೇ.20 ಸಂಜೆ 5 ಗಂಟೆಯವರೆಗೆ ಎಸ್ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ
ನಿನ್ನೆ ಕೋರ್ಟ್ನಿಂದ ಹೊರ ಬರುವ ವೇಳೆ ಹೇಳಿಕೆ ನೀಡಿದ್ದ ದೇವರಾಜೇಗೌಡ
ಇಂದು ಕೋರ್ಟ್ ಬಳಿ ಬಿಗಿ ಪೊಲೀಸ್ ಭದ್ರತೆ
Hassan
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ
ಹಾಸನ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ
ಇಬ್ಬರು ಲಾರಿ ಚಾಲಕರಿಗೆ ಗಂಭೀರ ಗಾಯ
ಲಾರಿನಲ್ಲಿ ಸಿಲುಕಿಕೊಂಡು ನರಳಾಡುತ್ತಿರುವ ಓರ್ವ ಚಾಲಕ
ಹಾಸನ ತಾಲ್ಲೂಕಿನ, ಹೆಗ್ಡಿಹಳ್ಳಿ ಗ್ರಾಮದ ಬಳಿ ಘಟನೆ
ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್
ಡ್ರೈವರ್ ಸೀಟ್ನಲ್ಲಿ ಸಿಲುಕಿಕೊಂಡಿರುವ ಲಾರಿ ಚಾಲಕ
ಚಾಲಕನನ್ನು ಲಾರಿಯಿಂದ ಹೊರಗೆ ತರಲು ಹರಸಾಹಸಪಡುತ್ತಿರುವ ಪೊಲೀಸರು
ಲಾರಿಯಲ್ಲಿ ಸಿಲುಕಿಕೊಂಡಿರುವ ಚಾಲಕನ ದೇಹದ ಅರ್ಧಭಾಗ
ಲಾರಿಯಿಂದ ಹೊರಬರಲಾರದೆ ನರಳಾಡುತ್ತಿರುವ ಚಾಲಕ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
-
Mysore3 weeks ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State3 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
Hassan3 weeks ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
State4 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health4 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Uncategorized5 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State3 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.
-
Education3 months ago
ಎಸ್ಎಸ್ಎಲ್ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ