Mandya
ಮರಿತಿಬ್ಬೇಗೌಡರನ್ನು ಬೆಂಬಲಿಸುವಂತೆ ಮೈಸೂರು ಲ್ಯಾಂಪ್ಸ್ ಮಾಜಿ ಅಧ್ಯಕ್ಷ ವೆಂಕಟೇಶ್ ಮನವಿ

ಮಂಡ್ಯ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮರಿತಿಬ್ಬೇ ಗೌಡ ಅವರನ್ನು ಬೆಂಬಲಿಸುವಂತೆ ಶಿಕ್ಷಕ ವರ್ಗದವರಲ್ಲಿ ಮೈಸೂರು ಲ್ಯಾಂಪ್ಸ್ ಮಾಜಿ ಅಧ್ಯಕ್ಷ ಹೆಚ್ ಎ ವೆಂಕಟೇಶ್ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ವಿಶೇಷವಾದ ಚುನಾವಣೆಯಾಗಿದೆ. ದಿನೇಶ್ ಗೂಳಿಗೌಡರು ಕಠಿಣ ಸನ್ನಿವೇಶದಲ್ಲಿ ಗೆದ್ದು ಶಾಸಕರಾಗಿದ್ದಾರೆ. ಅದೇ ರೀತಿ ಮಧು ಜಿ ಮಾದೇಗೌಡರು ಇತಿಹಾಸ ಸೃಷ್ಟಿಸಿದ್ದಾರೆ .2023ರ ವಿಧಾನಸಭಾ ಚುನಾವಣೆಯಲ್ಲಿಯೂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದರು.
ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟ ರಮಣೆಗೌಡರ ಗೆಲುವು ಖಚಿತ ಎಂದು ತಿಳಿಸಿದ ಅವರು, ಮರಿ ತಿಬ್ಬೇಗೌಡರು ಪಕ್ಷಾಂತರ ಮಾಡಿಲ್ಲ. ಬದಲಿಗೆ ಉಸಿರುಗಟ್ಟಿದ ವಾತಾವರಣದಿಂದ ಬಿಡುಗಡೆ ಆಗಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತತ್ವದಲ್ಲಿ ಬಡವರನ್ನು ಬಡತನದಿಂದ ಮೇಲೆತ್ತುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ .ಈ ಗ್ಯಾರಂಟಿ ಯೋಜನೆ ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಗೆ ಬಂದಿದೆ ಎಂದು ತಿಳಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಮತದಾರರು ಗ್ಯಾರಂಟಿ ಯೋಜನೆಗಳ ಬಗ್ಗೆ ಮೌಲ್ಯಮಾಪನ ಮಾಡುತ್ತಾರೆ. ಅದೇ ರೀತಿ ಮೋದಿ ಅವರ ಹತ್ತು ವರ್ಷದ ಆಡಳಿತದ ಬಗ್ಗೆ ಮೌಲ್ಯಮಾಪನ ಮಾಡಬೇಕು. ಮೋದಿ ಅವರ ವೈಫಲ್ಯವನ್ನು ಈ ಚುನಾವಣೆಯಲ್ಲಿ ಅಳತೆ ಮಾಡಬೇಕು ಎಂದು ನುಡಿದರು. ಇಡೀ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಮತ್ತು ಜೆಡಿಎಸ್ ಅಪವಿತ್ರ ಗೊಳಿಸಿದೆ .ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ಯಾವುದೇ ಅಳತೆಗಳು ಇಟ್ಟುಕೊಳ್ಳದೆ ಆಯ್ಕೆ ಮಾಡಲಾಗಿದೆ. ಮೈತ್ರಿ ಅಭ್ಯರ್ಥಿಯ ಅರ್ಹತೆ ಏನು ಎಂದು ಪ್ರಶ್ನಿಸಿದರು. ಸಾರಾ ಮಹೇಶ್ ಅವರು ನಮ್ಮ ಅಭ್ಯರ್ಥಿ ವಾಗ್ಮಿ ಅಲ್ಲ ಎಂದು ಹೇಳಿದ್ದಾರೆ. ಆದರೆ ವಿಧಾನ ಪರಿಷತ್ ಗೆ ಆಯ್ಕೆಯಾದವರು ವಾಗ್ಮಿಗಳಾಗಿರಬೇಕು. ಆಗ ಮಾತ್ರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದರು. ಶಿಕ್ಷಕರ ಕ್ಷೇತ್ರ ಸುಧಾರಣೆ ಆಗಿದ್ದೆ ಕಾಂಗ್ರೆಸ್ ಪಕ್ಷದಿಂದ .ಈ ಹಿಂದಿನ ಸರ್ಕಾರ ವಿವಿಗಳನ್ನು ಸ್ಥಾಪಿಸಿದ್ದಾರೆಯೇ ಹೊರತು ಶಿಕ್ಷಕರನ್ನು ನೇಮಕ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ 1242 ಸಹ ಪ್ರಾಧ್ಯಾಪಕರು ಹಾಗೂ 333 ಮಂದಿ ಪ್ರಾಂಶುಪಾಲರ ನೇಮಕಾತಿಗೆ ಪಟ್ಟಿ ಸಿದ್ಧವಾಗಿದೆ. ಅಲ್ಲದೆ ಕೌಶಲ್ಯ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿದ್ದು ಇದರ ಮೂಲಕ ಉದ್ಯೋಗ ನೀಡಲು ಒಡಂಬಡಿಕೆ ಸಿದ್ಧವಾಗಿದೆ ಎಂದರು. ಶಿಕ್ಷಣ ಕ್ಷೇತ್ರವನ್ನು ಜನತಾ ಪಕ್ಷ ಶೋಷಣೆ ಮಾಡಿದೆ. ಅನುದಾನಿತ ಶಾಲೆಗಳನ್ನು ಸ್ಥಾಪಿಸಿ ಶಿಕ್ಷಕರಿಗೆ ಸಂಬಳ ನೀಡದೆ ಶೋಷಣೆ ಮಾಡಲಾಗಿದೆ. ಅವರ ಅವಧಿಯಲ್ಲಿ ಎಷ್ಟು ಉದ್ಯೋಗ ನೀಡಿದ್ದಾರೆ .ಇದನ್ನು ಬಹಿರಂಗಪಡಿಸಲಿ ಎಂದು ತಿಳಿಸಿದ ಅವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಮರಿ ತಿಬ್ಬೇಗೌಡರ ಸಾಧನೆಗಳನ್ನು ಗಮನಿಸಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿದ್ದಾರೆ. ಆದ್ದರಿಂದ ಈ ಬಗ್ಗೆ ಮತದಾರರು ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಆಡಳಿತವನ್ನು ಮೌಲ್ಯಮಾಪನ ಮಾಡಿ ಮರಿ ತಿಬ್ಬೇಗೌಡರಿಗೆ ಮೊದಲ ಪ್ರಾಶಸ್ಯದ ಮತ ನೀಡಬೇಕೆಂದು ಮನವಿ ಮಾಡಿದರು .
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ,ಲೋಕಸಭೆ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್, ಯುವ ಕಾಂಗ್ರೆಸ್ ಮುಖಂಡ ಎಂಎಸ್ ಚಿದಂಬರ್, ನಗರಸಭೆ ಮಾಜಿ ಅಧ್ಯಕ್ಷೇ ವಿಜಯಲಕ್ಷ್ಮಿ ರಘುನಂದನ್ ಉಪಸ್ಥಿತರಿದ್ದರು.
Mandya
ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ, ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ಎಂ.ಉದಯ್

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ ಹಾಗೂ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮ ನಿಯಮಿತದ ಕೆರಗೋಡು ಶಾಖಾ ನಾಲೆಯಡಿಯಲ್ಲಿ ಬರುವ ಬೆಸಗರಹಳ್ಳಿ ಕೆರೆಯ ಹೆಚ್ಎಲ್ಸಿ ಕಾಲುವೆ ಅಭಿವೃದ್ಧಿ ಮತ್ತು 21ನೇ ನಾಲೆಗೆ ಹೋಗುವ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 499.50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಸದರಿ ನಾಳೆ ಮತ್ತು ರಸ್ತೆ ಅಭಿವೃದ್ಧಿಯಿಂದ ಈ ಭಾಗದ ರೈತರಿಗೆ ನೀರಿನ ಸುಗಮ ಲಭ್ಯತೆ, ಜಲಾನಯನ ವ್ಯವಸ್ಥೆಯ ಸುಧಾರಣೆ, ರೈತೋದ್ಯಮಕ್ಕೆ ನೆರವು, ಸ್ಥಳೀಯರ ಸಂಚಾರಕ್ಕೆ ಉತ್ತಮ ರಸ್ತೆ ವ್ಯವಸ್ಥೆ ದೊರಕುವುದಾಗಿ ಎಂದರು.
ನಮ್ಮ ಗ್ರಾಮ ನಮ್ಮ ಅಭಿವೃದ್ಧಿ ಎಂಬ ಧ್ಯೇಯದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು ಗ್ರಾಮದ ಎಲ್ಲಾ ಮುಖ್ಯಸ್ಥರು ಹಾಗೂ ರೈತರುಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಕಿವಿಮಾತು ಹೇಳಿದರು.
ಈ ವೇಳೆ ಮನಮುಲ್ ನಿರ್ದೇಶಕ ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ. ಗ್ರಾ.ಪಂ.ಸದಸ್ಯ ಬಾಬು ಸೇರಿದಂತೆ ಮುಖಂಡರುಗಳು ಹಾಜರಿದ್ದರು.
Mandya
ಅಕ್ರಮವಾಗಿ ಮಧ್ಯ ಮಾರಾಟ, ಗ್ರಾಮಸ್ಥರಿಂದ ಪ್ರತಿಭಟನೆ.

ಕೆ.ಆರ್.ಪೇಟೆ : ತಾಲ್ಲೂಕಿನ ಚೌಡಸಮುದ್ರ ಗ್ರಾಮದಲ್ಲಿ ಎಗ್ಗಿಲ್ಲದೆ, ಅಕ್ರಮವಾಗಿ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ನಡೆಯುತ್ತಿದ್ದು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟಿಸಿದರು.
ಗ್ರಾಮದಲ್ಲಿ ಅಕ್ತಮವಾಗಿ ಮದ್ಯ ಮಾರಾಟವಾಗುತ್ತಿರುವುದರಿಂದ ಕುಡಿತದ ಚಟಕ್ಕೆ ಬಿದ್ದು ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ. ಗ್ರಾಮದಲ್ಲಿ ಜನರ ಅಶಾಂತಿಗೆ ಕಾರಣವಾಗಿರುವ ಅಕ್ರಮ ಮದ್ಯದಂಗಡಿಯನ್ನು ಮುಚ್ಚಿಸಿ, ಗ್ರಾಮಸ್ಥರ ವಿರೋಧದ ನಡುವೆಯೂ ರಾಜಾ ರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವ ಕಿಡಿಗೇಡಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲೂಕು ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಪ್ರಭಾವಿ ವ್ಯಕ್ತಿಯೊಬ್ಬರು ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದು, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಗ್ರಾಮದಲ್ಲಿ ಹಲವು ಬಾರಿ ನ್ಯಾಯ ಮಾಡಿ, ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರೂ ಅಕ್ರಮ ಮಧ್ಯ ಮಾರಾಟ ನಿಂತಿಲ್ಲ. ಅಬಕಾರಿ ಅಧಿಕಾರಿಗಳು ಹಾಗೂ ಪೋಲೀಸರ ಕುಮ್ಮಕ್ಕಿನಿಂದಲೇ ಅಕ್ರಮವಾಗಿ ಮಧ್ಯ ಮಾರಾಟ ನಡೆಯುತ್ತಿದೆ ಎಂದು ಗ್ರಾಮಸ್ಥರು ಕಿಡಿ ಕಾರಿದರು.
ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದಿಂದ ಕುಡಿತದ ಚಟಕ್ಕೆ ಗ್ರಾಮದ ಕೆಲ ಜನರು ಹಾಗೂ ಯುವಕರು ದಾಸರಾಗಿ, ಪ್ರತಿನಿತ್ಯವೂ ಗ್ರಾಮದಲ್ಲಿ ಗಲಾಟೆ ಗದ್ದಲಗಳು ನಡೆಯುತ್ತಿವೆ. ಗ್ರಾಮದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಅಬಕಾರಿ ಅಧಿಕಾರಿಗಳು ಹಾಗೂ ಪೊಲೀಸರು ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಅಕ್ರಮ ಮದ್ಯ ಮಾರಾಟದ ಅಡ್ಡೆಯ ಮೇಲೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ಮಧ್ಯದ ಮಾರಾಟವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಕಂಡಕ್ಟರ್ ಶಿವಮೂರ್ತಿ, ರೇವಣ್ಣ, ಚಂದ್ರು, ಗೀತಾ, ಶಿವಪ್ಪ, ಗ್ರಾ.ಪಂ ಸದಸ್ಯ ಶಿವಕುಮಾರ್, ಬಿ.ಎಸ್. ಕುಮಾರಿ, BSNL ಶಿವಣ್ಣ, ಟೈಲರ್ ಲೋಕೇಶ್, ರಾಜಣ್ಣ, ಪುಟ್ಟರಾಜು, ರವಿ, ಅಣ್ಣಯ್ಯಣ್ಣ, ಮಹೇಶ್, ಮಂಜುನಾಥ್,ರತ್ನಮ್ಮ, ಅಕ್ಕಯಮ್ಮ, ಮಧು, ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
Mandya
ಬಾಲಕಿ ಮೇಲೆ ̇ಲೈಂ*ಗಿಕ ದೌರ್ಜನ್ಯ : ಅಪರಾಧಿಗೆ ಜೀವಾವಧಿ ಶಿಕ್ಷೆ

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಗ್ರಾಮವೊಂದರಲ್ಲಿ ಮೂರುವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಮಂಡ್ಯ 2ನೇ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಣ್ಣ ಬಿನ್ ಲೇಟ್ ಚಿಕ್ಕಣ್ಣ (59 ವರ್ಷ) ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದು, ಆತ ಡಿ.11, 2023 ರಂದು ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ತನ್ನ ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿಕೊಂಡು ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಅಮ್ಮನಿಗೆ ಹೇಳಬಾರದು ಎಂದು ಬೆದರಿಕೆ ಹಾಕಿದ್ದ ಎನ್ನುವುದು ಸಾಬೀತಾಗಿದೆ.
ನಂತರ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯಿದೆ ಅಡಿ ಅಂದಿನ ಪಿ.ಎಸ್.ಐ ಬಸವರಾಜು ಅವರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಕೈಗೊಂಡಿದ್ದರು.
ಈ ಹಿಂದೆ ಕೆ.ಆರ್.ಸಾಗರ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕೆ.ಆರ್.ಸಾಗರ ಠಾಣೆಯ ಪಿ.ಎಸ್.ಐ ರಮೇಶ್ ಕರಕೀಕಟ್ಟಿ ಹಾಗೂ ಸಿಬ್ಬಂದಿಯವರಾದ ಎ.ಎಸ್.ಐ ಸತೀಶ್, ಹೆಚ್.ಸಿ. ಯವರಾದ ಯಧುರಾಜ್, ಸಿ.ಪಿ.ಸಿಯವರಾದ ರೇಣುಕುಮಾರ್, ಅಶ್ವಿನಿ, ಪುಟ್ಟಲಕ್ಷ್ಮಿ ಅವರು ಈ ತನಿಖಾ ತಂಡದಲ್ಲಿದ್ದರು.
ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದಿಲೀಪ್ ಕುಮಾರ್ ಅವರು ಇಂದು (ಜೂ11) ಆರೋಪಿಗೆ ಜೀವಿತಾವಧಿ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಅವರು ಸಂತ್ರಸ್ಥರ ಪರ ವಾದ ಮಂಡಿಸಿದ್ದು, ಕೆ.ಆರ್.ಸಾಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರ ಕಾರ್ಯಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
State23 hours ago
ಹಾರ್ಟ್ ಅಟ್ಯಾಕ್ ನ ಈ ಕೆಲವು ಲಕ್ಷಣಗಳನ್ನು ನಿರ್ಲಕ್ಷ ಮಾಡಬೇಡಿ : ಈ 3C ಗಳನ್ನು ನೆನಪಿಟ್ಟರೆ ಜೀವ ಉಳಿಸಿಕೊಳ್ಳಬಹುದು
-
Special9 hours ago
ಸೃಷ್ಟಿಯ ನಿಯಮವನ್ನು ಮೀರುವುದೆಂದರೆ ಇದೇ….?
-
Chamarajanagar9 hours ago
ಮಹಿಳಾ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
-
Mysore6 hours ago
ಮುಖ್ಯಮಂತ್ರಿ ಬದಲಾವಣೆ ವಿಚಾರ| ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ: ಎಚ್.ಸಿ.ಮಹದೇವಪ್ಪ
-
Hassan4 hours ago
ಮುಸುಕಿನ ಜೋಳಕ್ಕೆ ಬಿಳಿ ಸುಳಿ ರೋಗ: ರೈತರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ ಎ.ಎಸ್.ಪಾಟೀಲ್ ನಡಹಳ್ಳಿ
-
Mysore6 hours ago
ಸರ್ಕಾರದ ಸಾಧನೆಗಳ ಸಮಾವೇಶ, ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಎಚ್.ಸಿ.ಮಹದೇವಪ್ಪ
-
Chamarajanagar4 hours ago
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ
-
Kodagu24 hours ago
4 ಕಾಡಾನೆಗಳ ಗುಂಪನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ