Connect with us

Uncategorized

ಎಂಪಿ ಚುನಾವಣೆಯಲ್ಲಿ ಶ್ರೇಯಸ್ ಪಟೇಲ್ ಗೆಲುವು : ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಲಕ್ಷ್ಮಣ್

Published

on

ಹಾಸನ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರಿಗೆ ಅಭೂತಪೂರ್ವ ಜಯತಂದುಕೊಟ್ಟ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳುವುದಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಲಕ್ಷ್ಮಣ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಈ ಚನಾವಣೆಯಲ್ಲಿ ಸಣ್ಣ ಪುಟ್ಟ ಮನಸ್ಥಾಪ ಇದ್ದರೂ ಕೂಡ ನಮ್ಮ ನಾಯಕರು ಎಲ್ಲಾರು ಒಟ್ಟಾಗಿ ಕೆಲಸ ಮಾಡುವ ಮೂಲಕ ಪ್ರತಿಫಲ ಸಿಕ್ಕಿದೆ. ಜಿಲ್ಲೆಯ ಮತದಾರರು ಲೋಕಸಭಾ ಚುನಾವಣೆಯಲ್ಲಿ ಶ್ರೇಯಸ್ ಪಟೇಲ್ ಅವರಿಗೆ ಗೆಲುವು ಕೊಡುವುದರ ಮೂಲಕ ೨೫ ವರ್ಷಗಳ ಬದಲಾವಣೆ ತಂದುಕೊಟ್ಟಿರುವುದಕ್ಕೆ ಎಲ್ಲಾ ಮತದಾರರಿಗೆ ನಮಗೆ ಶಕ್ತಿ ಕೊಟ್ಟಂತಹ ಅಲ್ಪಸಂಖ್ಯಾತರು, ದಲಿತರು, ಹಿಂದೂಳಿದವರು ಸೇರಿದಂತೆ ಎಲ್ಲಾ ಸಮುದಾಯದವರಿಗೂ ಕೂಡ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದವನ್ನು ಅರ್ಪಿಸುತ್ತೇನೆ. ಎಂಪಿ ಚುನಾವಣೆಯಲ್ಲಿ ಗೆಲುವಿಗೆ ಮೂಲ ಕಾರಣಕರ್ತರೆಂದರೇ ಉಸ್ತವಾರಿ ಸಚಿವರು, ಚುನಾವಣಾ ಉಸ್ತುವಾರಿ ಆಗಿರುವ ಜಿ.ಸಿ. ಚಂದ್ರಶೇಖರ್ ಅವರ ಚುನಾವಣಾ ಚಾಣುಕ್ಯತನದಿಂzಗಿ ಇದ್ದಂತಹ ಅನೇಕ ವ್ಯತ್ಯಾಸಗಳನ್ನು ಸರಿಪಡಿಸಿ ಕೆಲಸ ಮಾಡಲು ಹುರಿದುಂಬಿಸುಇದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಜೋಡಿ ಎತ್ತುಗಳಾಗಿ ಐದು ಕ್ಷೇತ್ರಗಳಿಗೂ ಕೂಡ ಬಿಡುವಿಲ್ಲದಿದ್ದರೂ ಬಂದಿದ್ದರಿಂದ ಈ ಗೆಲುವು ಸಾಧಿಸಲು ಅವಕಾಶ ಸಿಕ್ಕಿದೆ ಎಂದರು. ಎಂಪಿ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ತುಮಕೂರಿಗೆ ಹೆಚ್ಚಿನ ಜವಬ್ದಾರಿ ತೆಗೆದುಕೊಂಡಿದ್ದರು. ಹಾಸನ ಜಿಲ್ಲೆಗೂ ಕೂಡ ಅನೇಕ ಬಾರಿ ಬಂದು ಹೋಗಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮತದಾರರು ಬದಲಾವಣೆ ಬಯಸಿ ಕಾಂಗ್ರೆಸ್ ಗೆ ಗೆಲುವು ತಂದುಕೊಟ್ಟಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಹೆಚ್.ಕೆ. ಜವರೇಗೌಡ ಅವರು ಮಾತನಾಡಿ, ಎಂಪಿ ಚುನಾವಣೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರನ್ನು ಕೂಡ ಭೇಟಿ ಮಾಡಿಅವರ ಮಾಡಿ ಧನ್ಯವಾದ ತಿಳಿಸಿದ್ದು, ಅನಿರೀಕ್ಷಿತ ಭೇಟಿ ಇದರಲ್ಲಿ ಯಾವ ಸಮುದಾಯವನ್ನು ಕಡೆಗಣಿಸಿಲ್ಲ. ನೆನ್ನೆ ಎಂಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಎಂಪಿ ಶ್ರೇಯಸ್ ಪಟೇಲ್ ಜೊತೆ ಕೆಲವು ಮುಖಂಡರು ನಾಯಕರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ್ದೇವೆರೀ ವೇಳೆ ಇದರಲ್ಲಿ ಯಾರೊಬ್ಬ ಜಾತಿ, ಹಾಗೂ ಸಮುದಾಯದ ಕಡೆಗಣನೆ ಬಗ್ಗೆ ಯೋಚಿಸುವುದು ಬೇಡ, ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ನಿಟ್ಟಿನಲ್ಲಿ ಕೆಲ್ಸ ಮಾಡಲಾವುದು ಎಂದರು. ಎಲ್ಲಾರೂ ಒಟ್ಟಾಗಿ ತೆಗೆದುಕೊಂಡು ಹೋಗಿ, ಅಭಿವೃದ್ಧಿ ಕೆಲಸ ಮಾಡಲು ನಾವು ಸಹಕಾರ ಕೊಡುತ್ತೇವೆ. ಪಕ್ಷ ಸಂಘಟನೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ಕೊಟ್ಟರು. ಈ ಜಿಲ್ಲೆಯಲ್ಲಿ ಪಕ್ಷದ ಜವಬ್ಧಾರಿ ಹೆಚ್ಚು ಇದ್ದು, ಮೊದಲು ನಾವು ಮನುಷ್ಯರಾಗಿ ನಡೆದುಕೊಳ್ಳಬೇಕು. ದುರಂಕಾರದ ಪರಮಾವಧಿ ಯಾರಿಗೂ ಇರಬಾರದು. ಉತ್ತಮ ನಡವಳಿಕೆ ಇದ್ದರೇ ಅವನು ಯೋಗ್ಯ ಎಂದು ಸಮಾಜದಲ್ಲಿ ಹೇಳುತ್ತಾರೆ. ಯಾವುದೇ ಪಕ್ಷದ ರಾಜಕಾರಣೀ ಇರಲಿ ದುರಂಕಾರ ಇದ್ದರೇ ಅದನ್ನ ಬಿಡಬೇಕು. ಮತದಾರ ಪ್ರಭುಗಳು ಕೊಟ್ಟಂತಹ ಭೀಕ್ಷೆ ಮೇಲೆ ನಾವು ಅಧಿಕಾರ ಮಾಡುವುದು. ಯಾವ ಸಂದರ್ಭದಲ್ಲೂ ಮತದಾರರು ಬಂದರೂ ನೋವು ಮಾಡಬಾರದು ಎಂದು ಲೋಕಸಭಾ ಚುನಾವಣೆಯಲ್ಲಿ ನಡೆದಂತಹ ಘಟನೆಯನ್ನು ಹೆಸರು ಹೇಳದೇ ಪರೋಕ್ಷವಾಗಿ ಜರಿದರು. ಸಮೀಕ್ಷೆಗಳು ೪೦೦ ಬರುವುದಾಗಿ ಹೇಳಿದ್ದರು. ದರೇ ೨೯೨ ಸೀಟುಗಳು ದೇಶದಲ್ಲಿ ಬಂದಿದೆ. ಜನರು ಕೊಟ್ಟಿರುವ ಭೀಕ್ಷೆ ಆಗಿದೆ. ಮತದಾರ ಪ್ರಭುಗಳು ಈ ದೇಶದಲ್ಲಿ ಏನು ಬೇಕಾದರೂ ಬದಲಾವಣೆ ಮಾಡಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹುಡಾ ಮಾಜಿ ಅಧ್ಯಕ್ಷ ಕೃಷ್ಣಕುಮಾರ್, ಕೆಪಿಸಿಸಿ ಸದಸ್ಯ ಆರೀಫ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಲ್ಲಿಗೆವಾಳ್ ದೇವಪ್ಪ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Uncategorized

ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ‌ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ

Published

on

ಅ.ಭಾ.ಕ.ಸಾ ಸಮ್ಮೇಳನದ ಯಶಸ್ಸಿಗೆ ಕಾರಣರಾದವರಿಗೆ‌ ನಾಳೆ ಅಭಿನಂಧನಾ ಸಮಾರಂಭ : ಸುರೇಶ್ ಕಂಠಿ

ಮಂಡ್ಯ: ಜಿಲ್ಲೆಯಲ್ಲಿ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ರೂವಾರಿಗಳಿಗೆ ಮಂಡ್ಯ ಜಿಲ್ಲಾ ನಾಗರೀಕ ಅಭಿನಂದನಾ ಸಮಿತಿ, ನೆಲಯೋಗಿ ಸಮಾಜಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಸುರೇಶ್‌ಕಂಠಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭವು ಜನವರಿ ೨೬ರ ಸಂಜೆ.೦೬ಕ್ಕೆ ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ, ಅಭಿನಂದಿತರನ್ನು ಅಭಿನಂದಿಸುವರು ಎಂದು ಹೇಳಿದರು.

ಅಭಿನಂದಿತರಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಎ.ಬಿ.ರಮೇಶ್‌ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ.ಮಂಜು, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ, ಸಮ್ಮೇಳನದ ಸಂಚಾಲಕರಾಗಿದ್ದ ಡಾ.ಮೀರಾ ಶಿವಲಿಂಗಯ್ಯ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ರಾಜ್ಯ ಸಂಚಾಲಕ ಕೆ.ಹೆಚ್.ಲವ, ಕಾಂಗ್ರೆಸ್ ಪರಿಶಿಷ್ಠ ಜಾತಿ ರಾಜ್ಯ ಉಪಾಧ್ಯಕ್ಷ ತಿಬ್ಬನಹಳ್ಳಿ ರಮೇಶ್, ಮುಖಂಡ ಮಹದೇವು, ವೀಣಾ ಶಂಕರ್, ಶ್ರೀಧರ್ ಉಪಸ್ಥಿತರಿದ್ದರು.

Continue Reading

Uncategorized

ಸಾಯಿ ಶಂಕರ್ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ದಿನಾಚರಣೆ

Published

on

ಪೊನ್ನಂಪೇಟೆ : ಪೊನ್ನಂಪೇಟೆ ಸಾಯಿ ಶಂಕರ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ದಿನಾಚರಣೆ ನಡೆಸಲಾಯಿತು. ಕ್ರೀಡಾ ದಿನಾಚರಣೆಯ ಅಧ್ಯಕ್ಷತೆಯನ್ನು ಸಾಯಿ ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೊಳೆರ ಝರು ಗಣಪತಿ ವಹಿಸಿದ್ದರು. ನಂತರ ಅಧ್ಯಕ್ಷೀಯ ನುಡಿಯಾಡಿದ ಅವರು, ಕ್ರೀಡೆಗಳು ಸಣ್ಣಪ್ರಾಯದಲ್ಲೇ ಶಾಲಾ ವಾತಾವರಣದಲ್ಲಿ ಮಕ್ಕಳಲ್ಲಿ ಅನ್ಯೂನತೆಯನ್ನು ಬೆಳೆಸಿ ಸಹಕಾರ ಮನೋಭಾವನೆಯನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಯಿ ಶಂಕರ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಆಕರ್ಷಕವಾದ ಕವಾಯತ್ತು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವೇದಿಕೆಯಲ್ಲಿ ಸಾಯಿ ಶಂಕರ್ ವಿದ್ಯಾ ಸಂಸ್ಥೆ ಆಡಳಿತ ಅಧಿಕಾರಿ ರಮ್ಯ, ಮುಖ್ಯೋಪಾಧ್ಯಾಯನಿ ನಿವ್ಯ, ರೀನಾ ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕಿ ಮಾಲಾ ಸ್ವಾಗತಿಸಿ ಬಿ .ಇಡಿ ಕಾಲೇಜಿನ ಪ್ರಾಂಶುಪಾಲ ಪಿ.ಎ ನಾರಾಯಣ ವಂದಿಸಿದರು. ಸಂಸ್ಥೆಯ ಶಿಕ್ಷಕಿ ಭವಾನಿ ಮತ್ತು ರೇಷ್ಮಾ ನಿರೂಪಿಸಿದರು.

Continue Reading

Uncategorized

ಅಕ್ರಮ ಬಾಂಗ್ಲಾ ವಲಸಿಗರು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಠವಾಗುವ ಸಾಧ್ಯತೆ: ಕವನ್ ಗೌಡ

Published

on

ಹಾಸನ: ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಇದು ಪ್ರತಿಕೂಲ ಪರಿಣಾಮ ಬೀರಲಿದೆ. ಕೂಡಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ವಕೀಲ ಕವನ್ ಗೌಡ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತಾಡಿದ ಅವರು, ಆಲೂರು, ಸಕಲೇಶಪುರ, ಬೇಲೂರು ಸೇರಿದಂತೆ ಮಲೆನಾಡಿನ ವಿವಿದೆಡೆ ಕೂಲಿ ಕಾರ್ಮಿಕರ ಹೆಸರಿನಲ್ಲಿ ಬಂದು ಇಲ್ಲೇ ಬಾಡಿಗೆ ಮನೆ ಪಡೆದು ವ್ಯಾಪಾರ ವಹಿವಾಟುಗಳನ್ನು ಪಡೆದುಕೊಂಡು ಹಂತಃ ಹಂತವಾಗಿ ಆಧಾರ್ ಕಾರ್ಡ್, ಓಟರ್ ಐಡಿ ಪಡೆದು ಭಾರತ ದೇಶದ ಪ್ರಜೆಯಾಗಿ ಇಲ್ಲೇ ನೆಲೆಸುವ ತಂತ್ರಗಾರಿಕೆ ನಡೆಯುತ್ತಿದೆ. ಕಾನೂನು ಪ್ರಕಾರ ವಿದೇಶಿಗರಿಗೆ ಭಾರತ ದೇಶದಲ್ಲಿ ನೆಲೆಸಲು ಅವಕಾಶ ಇಲ್ಲ, ಆದರೂ ನುಸುಳು ಕೋರರು ಈಗಾಗಲೇ ಒಳ ನುಸುಳಿದ್ದಾರೆ, ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಿ ಅವರ ಬಗ್ಗೆ ತನಿಖೆ ನಡೆಸಿ ಅಗತ್ಯ ದಾಖಲೆಗಳು ಇಲ್ಲದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲವಾದರೆ ದೇಶಿಯರಿಗೆ ಮುಂದಿನ ದಿನಗಳಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದರು.

ವಲಸಿಗರು ಈಗಾಗಲೇ ಬಾಡಿಗೆ ಮನೆ ಪಡೆದುಕೊಂಡು ಕರಾರು ಪತ್ರ ಪಡೆದುಕೊಂಡು ಹಂತ ಹಂತವಾಗಿ ಭಾರತೀಯ ಪ್ರಜೆಯಾಗಿ ಉಳಿಯುವ ಒಳಸಂಚು ನಡೆದಿದೆ, ಇದನ್ನು ನಿರ್ಲಕ್ಷ್ಯ ಮಾಡುವುದು ಬೇಡ ಮುಂದಿನ ದಿನಗಳಲ್ಲಿ ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಅಕ್ರಮ ಬಾಂಗ್ಲಾ ವಲಸಿಗರು ಕಂಟಕ ವಾಗಲಿದ್ದಾರೆ ಈ ಬಗ್ಗೆ ಎಚ್ಚರ ಅಗತ್ಯವಾಗಿದೆ ಎಂದು ಹೇಳಿದರು.

ಈ ವಿಚಾರವಾಗಿ ಕಾಫಿ ಬೆಳೆಗಾರರು ಹಾಗೂ ಪೊಲೀಸ್ ಇಲಾಖೆಯ ಬಹುದೊಡ್ಡ ಜವಾಬ್ದಾರಿ ಇದೆ, ಆರಂಭದಲ್ಲಿಯೆ ಮುಂದಾಗಬಹುದಾದ ಅನಾಹುತಗಳಿಗೆ ಕಡಿವಾಣ ಹಾಕದಿದ್ದರೆ. ಭಾರತೀಯ ಪ್ರಜೆಗಳಿಗೆ ಸಮಸ್ಯೆ ಅಗಳಿವೆ ಜೊತೆಗೆ ದೇಶೀಯ ಪ್ರಜೆಗಳ ಹಕ್ಕು ಬಾಧ್ಯತೆಗಳನ್ನು ಕಿತ್ತುಕೊಳ್ಳುವ ಸ್ಥಿತಿ ನಿರ್ಮಾಣವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಇದೆ ರೀತಿಯ ಸಮಸ್ಯೆ ಉಂಟಾದಾಗ ಅಲ್ಲಿನ ಎಸ್ಪಿ ಎಚ್ಚೆತ್ತುಕೊಂಡು ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಅದೇ ರೀತಿ ಹಾಸನಲ್ಲಿ ಕೂಡ ಸ್ಥಳೀಯ ಪೊಲೀಸ್ ಠಾಣೆ ಹಂತದಲ್ಲಿ ಅವರ ದಾಖಲೆ ಪರಿಶೀಲನೆ ಮಾಡುವ ಕೆಲಸಗಳು ಆಗಬೇಕಿದೆ ಎಂದು ಸಲಹೆ ನೀಡಿದರು.

Continue Reading

Trending

error: Content is protected !!