Connect with us

Mysore

ಕ್ರಾಫರ್ಡ್‌ ಭವನದ ಶಿಕ್ಷಣ ಮಂಡಲಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ

Published

on

ಮೈಸೂರು: ಶತಮಾನ ಪೂರೈಸಿರುವ ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವ ಅ. 18ರಂದು ಬೆಳಗ್ಗೆ 10.30ಕ್ಕೆ ಕ್ರಾಫರ್ಡ್‌ ಭವನದಲ್ಲಿ ಹಮಿಕೊಳ್ಳಲಾಗಿದೆ. ಪತ್ರಿಕೋದ್ಯಮಿ ಕೆ.ಬಿ. ಗಣಪತಿ, ನಾಡೋಜ ಡಾ.ಪಿ.ಎಸ್‌‍.ಶಂಕರ್‌, ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎನ್‌.ಕೆ. ಲೋಕನಾಥ್‌ ತಿಳಿಸಿದರು.
ಕ್ರಾಫರ್ಡ್‌ ಭವನದ ಶಿಕ್ಷಣ ಮಂಡಲಿ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2022ನೇ ಶೈಕ್ಷಣಿಕ ಸಾಲಿನ 32240 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವುದಾಗಿ ವಿವರಿಸಿದರು.
ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧ್ಯಕ್ಷತೆ ವಹಿಸುವರು. ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಪದವಿಭೂಷಣ ಡಾ.ವಾಸುದೇವ್‌ ಕೆ.ಆತ್ರೆ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಉಪಸ್ಥಿತರಿರುವರು ಎಂದು ಹೇಳಿದರು.

ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ವೈದ್ಯಕೀಯ ಪ್ರಾಧ್ಯಾಪಕ ನಾಡೋಜ ಡಾ.ಪಿ.ಎಸ್‌‍. ಶಂಕರ್‌, ಮೈಸೂರು ಮಿತ್ರ ಮತ್ತು ಸ್ಟಾರ್‌ ಆಫ್‌ ಮೈಸೂರು ದಿನಪತ್ರಿಕೆ ಪ್ರಧಾನ ಸಂಪಾದಕ ಕೆ.ಬಿ. ಗಣಪತಿ, ಅಂತಾರಾಷ್ಟ್ರೀಯ ನಿವೃತ್ತ ಕ್ರಿಕೆಟಿಗ, ಐಸಿಸಿ ಪಂದ್ಯಗಳ ತೀರ್ಪುಗಾರ ಜಾವಗಲ್‌ ಶ್ರೀನಾಥ್‌ ಅವರಿಗೆ ಗೌರವ ಡಾಕ್ಟರೇಟ್‌ ನೀಡುವುದಾಗಿ ತಿಳಿಸಿದರು.
32240 ವಿದ್ಯಾರ್ಥಿಗಳಿಗೆ ಪದವಿ: 2022ನೇ ಶೈಕ್ಷಣಿಕ ಸಾಲಿನಲ್ಲಿ 32240 ಅಭ್ಯರ್ಥಿಗಳಿಗ ಪದವಿ ಪ್ರದಾನ ಮಾಡಲಾಗುತ್ತಿದೆ. ಮಹಿಳೆಯರು 20189 (ಶೇ. 62.62) ಮತ್ತು 12051 (ಶೇ. 37.37) ಪುರುಷ ವಿದ್ಯಾರ್ಥಿಗಳಿದ್ದಾರೆ.
539 ವಿದ್ಯಾರ್ಥಿಗಳಿಗೆ ಪಿಎಚ್‌.ಡಿ ಪ್ರದಾನ ಮಾಡುತ್ತಿದೆ. ಇವರಲ್ಲಿ 248 (ಶೇ. 40.01) ಮಹಿಳೆಯರು, 291 (53.98) ಪುರುಷರಿದ್ದಾರೆ. 420 ಪದಕ ಮತ್ತು 275 ಬಹುಮಾನಗಳನ್ನು 249 ವಿದ್ಯಾರ್ಥಿಗಳಿಗೆ ಪಡೆದುಕೊಂಡಿದ್ದಾರೆ. ಇವರಲ್ಲಿ 180 ಮಹಿಳೆಯರಿದ್ದಾರೆ. 5627 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು ಅವರಲ್ಲಿ 3799 (ಶೇ. 67.51) ಮಹಿಳೆಯರು.
26074 ಅಭ್ಯರ್ಥಿಗಳಿಗೆ ಸ್ನಾತಕ ಪದವಿಯನ್ನು ಪ್ರದಾನ ಮಾಡಲಾಗುವುದು. ಇವರಲ್ಲಿ 16142 (ಶೇ. 61.90) ಮಹಿಳೆಯರಿದ್ದಾರೆ. ಕಲಾ ನಿಕಾಯದಲ್ಲಿ 5505, ವಾಣಿಜ್ಯ ನಿಕಾಯದಲ್ಲಿ 14183, ಶಿಕ್ಷಣ ನಿಕಾಯದಲ್ಲಿ 2362, ಕಾನೂನು ನಿಕಾಯದಲ್ಲಿ 48, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದಲ್ಲಿ 8207 ಅಭ್ಯರ್ಥಿಗಳು. ಕುಲಸಚಿವೆ ವಿ.ಆರ್‌.ಶೈಲಜಾ, ಪರೀಕ್ಷಾಂಗ ಕುಲಸಚಿವ ಪ್ರೊ.ಮಹದೇವನ್‌ ಇದ್ದರು.

420 ಬೋಧಕ ಹುದ್ದೆ ಖಾಲಿ 
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 665 ನಿಯೋಜಿತ ಬೋಧಕ ಹುದ್ದೆಗಳಿವೆ. 245 ಕಾಯಂ ಬೋಧಕ ಸಿಬ್ಬಂದಿ ಇದ್ದು, 420 ಬೋಧಕ ಹುದ್ದೆಗಳು ಖಾಲಿ ಇರುವುದಾಗಿ ಮೈಸೂರು ವಿವಿ ಕುಲಸಚಿವ ವಿ.ಆರ್‌.ಶೈಲಜಾ ತಿಳಿಸಿದರು.
17 ವರ್ಷಗಳಿಂದ ನೇಮಕ ಮಾಡಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯದಲ್ಲೇ ನೇಮಕ ಮಾಡುವ ಭರವಸೆ ಇದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಎನ್‌.ಕೆ. ಲೋಕನಾಥ್‌ ಹೇಳಿದರು.
ನೂತನ ವಿಶ್ವವಿದ್ಯಾನಿಲಯಗಳ ಆರಂಭದಿಂದ 10 ಸಾವಿರ ವಿದ್ಯಾರ್ಥಿಗಳ ಪ್ರವೇಶಾತಿ ಕಡಿಮೆಯಾಗಿದೆ. ಇದರಿಂದ ವಿವಿಗೆ ಬರುವ ಆದಾಯದಲ್ಲೂ ಕುಂಠಿತವಾಗಲಿದೆ. 1800 ನಿವೃತ್ತ ಸಿಬ್ಬಂದಿಗೆ ಪಿಂಚಣಿ ಹಣ ಕೊಡುತ್ತಿದ್ದೇವೆ ಎಂದರು.
ಅಭಿವೃದ್ಧಿ ಕಾಮಗಾರಿಗಳು, ಮೈಸೂರು ವಿವಿ ಹಣಕಾಸು ಪರಿಸ್ಥಿತಿ ಕುರಿತು ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು, ಮತ್ತೊಮೆ ಸುದ್ದಿಗೋಷ್ಠಿ ಕರೆದು ಸವಿವರವಾಗಿ ವಿವರಿಸುವುದಾಗಿ ಹೇಳಿದರು.

 

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಜಿಯೋ ಪ್ಯಾಕ್ ಕಾಖಾ೯ನೆಯಲ್ಲಿ ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸಾವು

Published

on

ತಲೆಗೆ ಮೆಷಿನ್ ಹೊಡೆದು ಯುವ ಕಾರ್ಮಿಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ.
24 ವರ್ಷದ ಆಶೀಸ್ ಸುಖದಾಸ್ ಪಾಟ್ಲೆ ಮೃತ ಯುವ ಕಾರ್ಮಿಕನಾಗಿದ್ದಾನೆ.
ಮಹಾರಾಷ್ಟ್ರ ಮೂಲದ ಯುವಕನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.


ಇಂದು ಮೆಷಿನ್ ಗೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆ ಮೆಷಿನ್ ಗೆ ತಾಕಿದೆ. ತಲೆಗೆ ಮೆಷಿನ್ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ನಂಜನಗೂಡು ಹೆದ್ದಾರಿ ರಸ್ತೆ ಮಲ್ಲನ ಮೂಲೆ ಮಠ ಬಳಿ ಬೈಕ್ ಗೆ ಲಾರಿ ಡಿಕ್ಕಿ – ಬೈಕ್ ಸವಾರ ಸಾವು

Published

on

ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು-ಮೈಸೂರು ರಸ್ತೆಯ ತಾಲ್ಲೂಕಿನ ಮಲ್ಲನ ಮೂಲೆ ಮಠದ ಬಳಿ ನಡೆದಿದೆ.
ನಂಜನಗೂಡಿನ ಚಾಮಲಾಪುರದ ಹುಂಡಿ ಬಡಾವಣೆಯ ನಿವಾಸಿ 61 ವರ್ಷದ ಶಂಕರ್ ಮೃತ ದುರ್ಧೈವಿಯಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಇಂದಿನಿಂದ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗಡೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡ ವ್ಯಕ್ತಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Mysore

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

Published

on

ಸಾಲಿಗ್ರಾಮ  ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.

ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ  ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ  ಧರಣಪ್ಪಗೌಡ, ಕರ್ಪೂರವಳ್ಳಿ  ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ   

Continue Reading

Trending