Kodagu
‘ಕರುನಾಡ ಕವಿರತ್ನ’ ಪ್ರಶಸ್ತಿ ಪಡೆದ ಪ್ರಿತುನ್ ಪೂವಣ್ಣ
ಮಡಿಕೇರಿ : ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕ್ರತಿಕ ಟ್ರಸ್ಟ್ (ರಿ) ಸಂಸ್ಥೆಯು ರಾಯಚೂರಿನಲ್ಲಿ ಏರ್ಪಡಿಸಿದ್ದ ರಾಷ್ಟಮಟ್ಟದ ಕನ್ನಡ ಕಲರವ ಸಮ್ಮೇಳನದಲ್ಲಿ ರಾಜ್ಯಮಟ್ಟದ ಕವನ ವಾಚನ ಸ್ಪರ್ಧೆಯಲ್ಲಿ ಕೊಡಗಿನಿಂದ ಆಯ್ಕೆಯಾಗಿ ಅಯ್ಯನೆರವಂಡ ಪ್ರಿತುನ್ ಪೂವಣ್ಣ ಕವನ ವಾಚಿಸಿ ‘ಕರುನಾಡ ಕವಿರತ್ನ’ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.
ಅಯ್ಯನೆರವಂಡ ಪ್ರಿತುನ್ ಪೂವಣ್ಣ ಇವರು ಕಕ್ಕಬ್ಬೆ ನಾಲಡಿ ಗ್ರಾಮದ ಅಯ್ಯನೆರವಂಡ ಪ್ರಭಾ ಪೂವಯ್ಯ ದಂಪತಿಯ ಪುತ್ರ
Kodagu
ಕೊಡಗು ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಂಭ್ರಮದೊಂದಿಗೆ ಜರುಗಿದ ವಾರ್ಷಿಕ ಕ್ರೀಡಾಕೂಟ
ಮಡಿಕೇರಿ : ನಗರದ ಕೊಡಗು ವಿದ್ಯಾಲಯದಲ್ಲಿ ವಾಷಿ೯ಕ ಕ್ರೀಡಾಕೂಟ ವಿದ್ಯಾಥಿ೯, ಶಿಕ್ಷಕರ ಸಂಭ್ರಮದೊಂದಿಗೆ ಜರುಗಿತು
ಕ್ರೀಡೋತ್ಸವದ ಒಲಂಪಿಕ್ ಟಾರ್ಚ್ ನ್ನು ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಬೆಳಗಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜು ಮಾತನಾಡಿ, ಕ್ರೀಡೆಗಳು ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ಥೈರ್ಯ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಪರಿಶ್ರಮ ಹಾಗೂ ಆತ್ಮವಿಶ್ವಾಸದೊಂದಿಗೆ ಮುಂದುವರಿಯಬೇಕು. ವ್ಯಕ್ತಿತ್ವ ನಿರ್ಮಾಣದಲ್ಲಿ ಗೆಳೆಯರ ಪಾತ್ರ ಮಹತ್ವದ್ದಾಗಿದ್ದು, ವಿಫಲತೆಯನ್ನು ಧೈರ್ಯದಿಂದ ಎದುರಿಸುವುದು ನಾಯಕತ್ವದ ಪ್ರಮುಖ ಗುಣವೆಂದು ಅಭಿಪ್ರಾಯಪಟ್ಟರು.
ಕುಂಡ್ಲೋಳಂಡ ದಿನೇಶ್ ಕಾರ್ಯಪ್ಪ ಮಾತನಾಡಿ ಸಾಮಾಜಿಕ ಮಾಧ್ಯಮಗಳ ಪರಿಣಾಮದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳು ಹಾಗೂ ವಿದ್ಯಾರ್ಥಿ–ಗುರುಗಳ ನಡುವಿನ ಪರಸ್ಪರ ಗೌರವದಲ್ಲಿ ಉಂಟಾಗುತ್ತಿರುವ ಕುಸಿತದ ಬಗ್ಗೆ ಗಮನ ಸೆಳೆದರು. ಶೈಕ್ಷಣಿಕ ಸಾಧನೆಯಷ್ಟೇ ಜೀವನದಲ್ಲಿ ಯಶಸ್ಸಿಗೆ ಸಾಕಾಗುವುದಿಲ್ಲ ಎಂದು ನೈಜ ಉದಾಹರಣೆಗಳ ಮೂಲಕ ವಿವರಿಸಿದ ದಿನೇಶ್ ಕಾಯ೯ಪ್ಪ , ಜೀವನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿವೆ ಎಂದು ತಿಳಿಸಿದರು. ಉತ್ತಮ ಸ್ನೇಹಿತರ ಆಯ್ಕೆ ಹಾಗೂ ಧನಾತ್ಮಕ ಮನೋಭಾವ ಬೆಳೆಸಿಕೊಳ್ಳುವ ಅಗತ್ಯವನ್ನು ಅವರು ಪ್ರತಿಪಾದಿಸಿದರು.

ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ ಮಾತನಾಡಿ, ಶಿಕ್ಷಕರ ನಿಷ್ಠಾವಂತ ಸೇವೆ, ಪೋಷಕರು, ಆಡಳಿತ ಮಂಡಳಿಯ ಸಹಕಾರದಿಂದಾಗಿ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಪ್ರಶಂಸಿಸಿದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಗುಣಮಟ್ಟದ ಶಿಕ್ಷಣ, ಶಿಸ್ತು, ಮೌಲ್ಯಾಧಾರಿತ ಬೋಧನೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದೆಂದು ಅವರು ಭರವಸೆ ನೀಡಿದರು.
2025 ರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜ , ದಿನೇಶ್ ಕಾರ್ಯಪ್ಪ ನೇತ್ರಾ ಗಣಪತಿ ಬಹುಮಾನ ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಜಿಲ್ಲಾಧಿಕಾರಿಗಳು ಕ್ರೀಡಾಕೂಟ, ಫುಡ್ ಸ್ಟಾಲ್ಗಳ ಉದ್ಘಾಟನೆಯನ್ನು ನೆರವೇರಿಸಿದರು. ಪೋಷಕರಿಗಾಗಿ ವಿಶೇಷ ಫನ್ ಸ್ಪೋರ್ಟ್ಸ್ಗಳನ್ನು ಏರ್ಪಡಿಸಿದ್ದರು.
ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ , ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಓವರ್ಆಲ್ ಚಾಂಪಿಯನ್ ಪ್ರಶಸ್ತಿಯನ್ನು ಬಾಪು ಗ್ರೂಪ್ ಪಡೆದುಕೊಂಡಿತು.

ಶಿಕ್ಷಕಿಯರಾದ ಅಂಜನ್ ಪಿ.ಎನ್. ಸೋನಾಮುತ್ತಮ್ಮ ವಿದ್ಯಾರ್ಥಿಗಳಾದ ಯಶೀಕ ಶೆಟ್ಟಿ ಪ್ರಣವ್ ಪಿ. ನಿರೂಪಿಸಿದರು. ಅತಿಥಿಗಳ ಪರಿಚಯವನ್ನು ವಿದ್ಯಾರ್ಥಿ ತ್ರಿನಾದ್ ,ಶಿಕ್ಷಕಿ ಸೋನಾಮುತ್ತಮ್ಮ ನೆರವೇರಿಸಿದರು. ವಿದ್ಯಾಥಿ೯ಗಳಾದ ಜನ್ಯ ಸಿ.ಟಿ. ಸ್ವಾಗತಿಸಿ, ಕೌಶಲ್ ಸಿ.ಪಿ. ವಂದಿಸಿದರು.
ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ಉಪಾಧ್ಯಕ್ಷೆ ಅಕಾಡೆಮಿಕ್ ಅಧ್ಯಕ್ಷೆ ಊರ್ವಶಿ ಮುದ್ದಯ್ಯ, ಕ್ರೀಡಾ ಚೇರ್ ಪರ್ಸನ್ ರಘು ಮಾದಪ್ಪ, ಸಲಹಾ ಮಂಡಳಿ ಸದಸ್ಯ ಕುಮಾರ್ ಸುಬ್ಬಯ್ಯ, ಕಾರ್ಯದರ್ಶಿ ಬಿ.ಎಸ್. ಪೂಣಚ್ಚ, ಸಮಿತಿ ಸದಸ್ಯರಾದ ಗುರುದತ್ತ್ ನಿಯತ ದೇವಯ್ಯ ಸೋಮಣ್ಣ,ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್ ಆಡಳಿತ ನಿರ್ವಹಣಾಧಿಕಾರಿ ರವಿ ಪಿ. ಮೇಜರ್ ದಾಮೋದರ್ , ಆಪರ್ಚುನಿಟಿ ಶಾಲೆಯ ಸಲಹೆಗಾರ್ತಿ ಮೀನಾ ಕಾರ್ಯಪ್ಪ, ಕಾರ್ಯದರ್ಶಿ ವೀಣಾ ಚಂಗಪ್ಪ ಸಲಹಾ ಮಂಡಳಿಯ ಸದಸ್ಯೆ ಪುಷ್ಪಾ ಕುಟ್ಟಣ್ಣ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪಥಸಂಚಲನ ಬ್ಯಾಂಡ್ ಪ್ರದಶ೯ನ, ಸ್ವಾಗತ ನೃತ್ಯ ಕಾರ್ಯಕ್ರಮಕ್ಕೆ ಮೆರಗು ನೀಡಿತು. ಕೊಡಗು ವಿದ್ಯಾಲಯದ ಆಪರ್ಚುನಿಟಿ ಶಾಲೆಯ ಮಕ್ಕಳ ನೃತ್ಯ ಪ್ರದರ್ಶನವು ಎಲ್ಲರ ಮನಸೆಳೆಯಿತು.
Kodagu
ನೆಮ್ಮಲೆ ಬಳಿ ಕಾರು ಅಪಘಾತದಿಂದ ಪಾದಾಚಾರಿಗೆ ಡಿಕ್ಕಿ: ಓರ್ವ ಕಾರ್ಮಿಕ ಸಾ*ವು
ಮಡಿಕೇರಿ: ಜಿಲ್ಲೆಯ ಟಿ. ಶೆಟ್ಟಿಗೇರಿ, ಬಿರುನಾಣಿ ಮುಖ್ಯ ರಸ್ತೆಯ ನೆಮ್ಮಲೆ ಬಳಿ ಕಾರು ಅಪಘಾತದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾರಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಮಾರುತಿ ಬ್ರಿಜಾ ವಾಹನ ಡಿಕ್ಕಿ ಹೊಡೆದಿದ್ದು, ಟ್ರಾನ್ಸ್ಫರ್ಗೆ ಗುದ್ದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನಿಗೂ ಗಂಭೀರ ಗಾಯವಾಗಿದೆ.

ಇನ್ನೂ ವೆಸ್ಟ್ ನೆಮ್ಮಲೆ ನಿವಾಸಿ ಕಾರ್ಮಿಕ ಗಪ್ಪು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೇ ವಾಹನ ಚಾಲಕನಿಗೂ ಗಂಭೀರ ಗಾಯವಾಗಿರುವುದರಿಂದ ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
Kodagu
ಅಪಹರಿಸಲಾಗದ ಸಂಪತ್ತು ವಿದ್ಯೆ – ಹರಪಳ್ಳಿ ಎನ್.ರವೀಂದ್ರ
ಸುಂಟಿಕೊಪ್ಪ : ಪ್ರಪಂಚದಲ್ಲಿ ಒಬ್ಬರಿಂದ ಕಿತ್ತುಕೊಳ್ಳಲಾಗದ ಮತ್ತು ಅಪಹರಿಸಲಾಗದ ಸಂಪತ್ತು ಎಂದರೆ ಅದು ವಿದ್ಯೆ ಎಂದು ಸಮಾಜ ಸೇವಕ ಹರಪಳ್ಳಿ ಎನ್.ರವೀಂದ್ರ ಹೇಳಿದರು.
ಶನಿವಾರದಂದು ಇಲ್ಲಿಗೆ ಸಮೀಪದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 61ನೇ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಳ್ಳಿಯಲ್ಲಿರುವ ಈ ಶಾಲೆ ಕನ್ನಡ ಮಾದ್ಯಮದಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆ ಮಾಡಿದೆ ಎಂದು ಪ್ರಶಂಸಿದರು.
ಬದುಕಿನಲ್ಲಿ ನಾವು ಕೊಟ್ಟು ಹೋಗಬೇಕು ಇಲ್ಲವೇ ಬಿಟ್ಟು ಹೋಗಬೇಕು. ತತ್ವಕ್ಕೆ ಅನುಸಾರವಾಗಿ ಬದುಕಬೇಕೆಂದು ಹೇಳಿದ ಅವರು ಸ್ವಾಮಿ ವಿವೇಕಾನಂದರು ಹೇಳಿದ ಮನುಷ್ಯನಲ್ಲಿರುವ ಪರಿಪೂರ್ಣತೆಯನ್ನು ಪ್ರಕಾಶಗೊಳಿಸುವುದೇ ವಿದ್ಯೆ ಎಂದರು.

ವಿದ್ಯೆಯಿಂದ ನಮ್ಮ ಬಾಳು ಮಾತ್ರವಲ್ಲ ಸಮಾಜವನ್ನು ಬೆಳಗುವಂತಾಗಬೇಕೆಂದು ಕಿವಿಮಾತು ಹೇಳಿದರು. ನಾವು ಏನೇ ಕಲಿತರು ಎಷ್ಟೇ ದೊಡ್ಡವರಾದರೂ ಸಮಾಜಕ್ಕಾಗಿ ಮತ್ತು ಪರಹಿತಕ್ಕಾಗಿ ನಾವು ನಮ್ಮನ್ನು ಸಮರ್ಪಿಸಿಕೊಳ್ಳುವುದು ನಮ್ಮ ವ್ಯಕ್ತಿತ್ವದ ಭಾಗವಾಗಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿ ಪಾಲ್ಗೊಂಡು ಶಾಲೆಯ 138 ಮಕ್ಕಳಿಗೆ ಟ್ರ್ಯಾಕ್ಶೂಟ್ ಕೊಡುಗೆಯಾಗಿ ನೀಡಿ ಮಾತನಾಡಿದ ಅವರು,ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್, ಸರಕಾರಿ ಶಾಲೆ ಮತ್ತು ಕನ್ನಡ ಮಾದ್ಯಮ ಶಾಲೆ ಎಂಬ ಕೀಳರಿಮೆ ಬೇಕಾಗಿಲ್ಲ. ಸುಂಟಿಕೊಪ್ಪ ನಾಡು ಪ್ರೌಢಶಾಲೆಯು ಈ ಸಮಾಜಕ್ಕೆ ಅತ್ಯುತ್ತಮ ನಾಗರೀಕರನ್ನು ಕೊಡುಗೆಯಾಗಿ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಮುಖ್ಯೋಪಾದ್ಯಾಯನಿ ಜೋವಿಟಾ ವಾಸ್ ಅವರನ್ನು ಸನ್ಮಾನಿಸಲಾಯಿತು.
ಶಾಲಾಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ ಸರಕಾರಿ ಅನುದಾನಿತ ಶಾಲೆಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಶಾಲೆಗಳಲ್ಲಿ ವರ್ಗಾವಣೆಯಾದರೆ ಅಥವಾ ವಯೋಸಹಜ ನಿವೃತ್ತಿ ಹೊಂದಿದ್ದರೆ ಆ ಹುದ್ದೆಗಳಿಗೆ ಮರು ನೇಮಕಾತಿಗೊಳಿಸುವ ಪ್ರಕ್ರಿಯೆಯನ್ನು ಕೈ ಬಿಟ್ಟಿದೆ. ಶಿಕ್ಷಕರ ವೇತನ ಹೊರತು ಪಡಿಸಿ ಬೇರೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ.

ಶಾಲಾ ಆಡಳಿತ ಮಂಡಳಿಯು8 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳ ವಾರ್ಷಿಕ ಶಾಲಾ ಶುಲ್ಕವನ್ನು ಪಾವತಿಸಿದ್ದು, ಶಿಕ್ಷಕ ವೃಂದದವರು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ಪ್ರಾಯೋಜಿಸಿದ್ದಾರೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಬಿ.ಶಂಕರ್, ಉಪಾಧ್ಯಕ್ಷ ಎಂ.ಎ.ಕುಟ್ಟಪ್ಪ, ಆಡಳಿತ ಮಂಡಳಿ ನಿರ್ದೇಶ ಎಂ.ಎಸ್.ಸುರೇಶ್ ಚಂಗಪ್ಪ, ಭಾರತೀಯ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಪಿ.ಎಂ.ರಂಜಿತ್ ಕಾರ್ಯಪ್ಪ, ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ನಯನ, ಗಿರಿಧರ್ ಮತ್ತು ಧರ್ಮಪ್ಪ ಉಪಸ್ಥಿತರಿದ್ದರು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರ ಮನಸೂರೆಗೊಳಿಸಿತು.
-
Hassan12 hours agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Hassan4 hours agoKSRTC ಚೆಕ್ಕಿಂಗ್ ಅಧಿಕಾರಿ ಸಾವಿಗೆ ಸ್ಫೋಟಕ ತಿರುವು: ಅಕ್ರಮ ಅಕ್ಕಿ ಸಾಗಾಟಕ್ಕೆ ಕೊ*ಲೆ ಶಂಕೆ
-
National6 hours agoಸತ್ಯದ ಬೆನ್ನಿಗೆ ನಿಂತು RSS, ಮೋದಿ, ಶಾ ಸರ್ಕಾರವನ್ನು ದೇಶದಿಂದ ಖಾಲಿ ಮಾಡಿಸುತ್ತೇವೆ: ರಾಹುಲ್ ಗಾಂಧಿ
-
Special14 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Uncategorized7 hours agoಬಿಜೆಪಿಗೆ ಚುನಾವಣಾ ಆಯೋಗದ ಸಹಾಯವಿಲ್ಲದೇ ಗೆಲುವು ಸಾಧ್ಯವಿಲ್ಲ: ಪ್ರಿಯಾಂಕಾ ಗಾಂಧಿ
-
Hassan7 hours agoಮತ್ತೆ ಫುಲ್ ಆ್ಯಕ್ಟಿವ್ ಆದ ಭೀಮ
-
State5 hours agoಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ
-
Hassan6 hours agoಜಾನಪದ ಗೀತೆಗಳನ್ನು ಉಸಿರಾಗಿಸಿಕೊಂಡವರಿಗೆ ಸತ್ಕಾರ ಸಿಗುವುದು ಸಂತಸ: ಗ್ಯಾರಂಟಿ ರಾಮಣ್ಣ
