Mandya
ಜಿಲ್ಲೆಯಲ್ಲಿ ರೈತ ಉತ್ಪಾದಕಾ ಸಂಘಗಳು ಹೆಚ್ಚಾಗಬೇಕು: ಡಾ.ಕುಮಾರ
ಮಂಡ್ಯ : ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲೆ ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ವ್ಯಾಪಾರ ಮತ್ತು ವ್ಯಾವಹಾರಿ ಅಭಿವೃದ್ಧಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ, ಕೃಷಿಯಲ್ಲಿ ತನ್ನದೇ ಆದ ವಿಶೇಷ ಮಹತ್ವವವನ್ನು ಹೊಂದಿದೆ. ರೈತರು ಆರ್ಥಿಕವಾಗಿ ಸದೃಢರಾಗಲು ರೈತರು ಬೆಳೆದ ಬೆಳೆಗಳ ಮೌಲ್ಯವರ್ಧನೆಯಾಗಬೇಕು ರೈತ ಉತ್ಪದಕಾ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದರು.
ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಬೇಕೆಂದರೆ, ದಲ್ಲಾಳಿ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬೇಕು., ರೈತರು ನಿಜವಾಗಿಯೂ ಸ್ವಾವಲಂಬಿಗಳಾಗಬೇಕೆಂದರೆ ರೈತ ಉತ್ಪಾದಕರ ಸಂಸ್ಥೆಗಳ ಅವಶ್ಯಕತೆ ಇದೆ, ಇದರಿಂದ ರೈತರು ಸಹ ಕಂಪನಿಗಳು ಮಾಲೀಕರಾಗಬಹುದು.
ಸರ್ಕಾರದ ಪಿ.ಎಂ.ಎಫ್. ಇ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು, ರೈತರು ಬೆಳೆದ ಬೆಳೆಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಗ್ರಾಹಕರ ಗಮನ ಸೆಳೆಯುವ ರೀತಿ ಬ್ರ್ಯಾಡಿಂಗ್ ಆಗಬೇಕು. ಇದರಿಂದ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯ ಮತ್ತು ರಾಷ್ಟ್ರದಲ್ಲಿ ಮಾರುಕೊಟ್ಟೆ ದೊರೆಯುತ್ತದೆ ಎಂದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಮಾತನಾಡಿ , ಇದು ಜಿಲ್ಲೆಯಲ್ಲಿ ಕೃಷಿಯ ಕುರಿತು ನಡೆಸುತ್ತಿರುವ ನನ್ನ ಮೊದಲ ಕಾರ್ಯಕ್ರಮ, ದೇಶದ ಜಿ.ಡಿ.ಪಿ.ಗೆ ಸೇವಾ ವಲಯದ ಕೊಡುಗೆ ಅತಿ ಹೆಚ್ಚು, ಅದರಲ್ಲಿ ಅತಿ ಹೆಚ್ಚು ಜನ ಕೃಷಿಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ, ಶ್ರಮ ಪಟ್ಟು ದುಡಿಯುತ್ತಿರುವ ರೈತರಿಗಿಂತ ಹೆಚ್ಚು ಕೃಷಿಗೆ ಸಂಬಂಧಿಸಿದ ಕಂಪನಿಗಳು ಆದಾಯವನ್ನು ಗಳಿಸುತ್ತಿವೆ, ರೈತರ ಆದಾಯ ಹೆಚ್ಚಬೇಕು ಎಂದರೆ ಇಂತಹಾ ಕಾರ್ಯಾಗಾರಗಳು ಮುಖ್ಯ ಮುಕ್ತ ಮನಸ್ಸಿನಿಂದ ವಿಚಾರಗಳು ವಿನಿಮಯ ಮಾಡಿಕೊಂಡು ಅದನ್ನು ಕಾರ್ಯ ಪ್ರವೃತ್ತಿಯಲ್ಲಿ ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ , ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ರೈತ ಉತ್ಪಾದಕ ಸಂಸ್ಥೆಗಳು ಮುಖ್ಯಸ್ಥರುಗಳಾದ ಕರಸವಾಡಿ ಮಹದೇವ್, ಹರೀಶ್, ಹನುಮಂತೇಗೌಡ, ಸುಬ್ರಹ್ಮಣ್ಯ, ಮಾಯಣ್ಣ, ಚಿಕ್ಕೇಗೌಡ, ಜಗದೀಶ್ ಬಾಬು ಮತ್ತು ಇನ್ನಿತರ ಉಪಸ್ಥಿತರಿದ್ದರು.
Mandya
ಬೃಹತ್ ಹಳ್ಳವಿದ್ದ ಕ್ವಾರಿ ಜಾಗದಲ್ಲಿ ನಿವೇಶನ ಮಂಜೂರಾತಿಗೆ ಸಿದ್ದತೆ : ಕ್ರೀಡಾ ತರಬೇತಿಗೆ ಮೀಸಲಿಡುವಂತೆ ಕ್ರೀಡಾಪಟುಗಳ ಒತ್ತಾಯ
ಶ್ರೀರಂಗಪಟ್ಟಣ : ಬೃಹತ್ ಹಳ್ಳವಿದ್ದ ಕ್ವಾರಿ ಜಾಗದಲ್ಲಿ ನಿವೇಶನ ಮಂಜೂರಾತಿಗೆ ಸಿದ್ದತೆ ನಡೆಸಲಾಗುತ್ತಿದ್ದು, ಮನೆ ನಿರ್ಮಿಸಲು ಯೋಗ್ಯವಲ್ಲದ ಈ ಜಾಗವನ್ನು ಕ್ರೀಡಾ ತರಭೇತಿಗೆ ಮೀಸಲಿಡುವಂತೆ ಗ್ರಾಮದ ಕ್ರೀಡಾಪಟುಗಳ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ತಾಲೂಕಿನ ಕಡತನಾಳು ಗ್ರಾಮದ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾ ತಂಡದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದು, ಗ್ರಾಮದ ಸರ್ವೆ ನಂಬರ್ 91 ರಲ್ಲಿ 8 ಎಕ್ಕರೆ 30 ಕುಂಟೆ ಸರ್ಕಾರಿ ಜಾಗವು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದೆ. ಇದರಲ್ಲಿ 30 ಕುಂಟೆ ವ್ಯಾಪ್ತಿಯ ಕ್ವಾರಿಯಿದ್ದ ಜಾಗವನ್ನು ಯುವಕರು ಸ್ವಚ್ಛಗೊಳಿಸಿ ಸುಮಾರು 90ಕ್ಕೂ ಹೆಚ್ಚು ಯುವಕರು ಕ್ರೀಡಾಭ್ಯಾಸದಲ್ಲಿ ತೊಡಗಿಸಿಕೊಂಡಿರುತ್ತಾರೆ. ಇಂತಹ ಸ್ಥಳವನ್ನು ಪ್ರಭಾವಿ ವ್ಯಕ್ತಿಗಳು ಮುಖಾಂತರ ನಿವೇಶನ ಹಂಚಿಕೆ ಮಾಡಲಾಗುತ್ತಿದ್ದು, ಈ ಹಂಚಿಕೆಯಲ್ಲಿ ಭ್ರಷ್ಟಾಚಾರ ಎದ್ದು ತೋರುತ್ತಿದೆ ಎಂದು ಯುವಕರು ಪ್ರತಿಭಟಿಸಿ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ಕ್ರೀಡಾಪಟುಗಳಿಗೆ ಬೆಂಬಲ ವ್ಯಕ್ತಪಡಿಸಿ ಪಿಡಿಓ ಅಧಿಕಾರಿಯೊಂದಿಗೆ ವಾಕ್ಸಮರ ನಡೆಸಿರುವ
ಪ್ರಜ್ಞಾವಂತ ವೇದಿಕೆ ಅಧ್ಯಕ್ಷ ಸಿ ಎಸ್ ವೆಂಕಟೇಶ್, ಬೃಹತ್ ಹಳ್ಳವಿದ್ದ ಕ್ವಾರಿ ಜಾಗದಲ್ಲಿ ನಿವೇಶನ ಹಂಚಿಕೆಗೆ ಅನುಮತಿ ನೀಡಿದವರು ಯಾರು. ಹಳ್ಳವಿದ್ದ ಈ ಕ್ವಾರಿ ಜಾಗ ಮನೆ ನಿರ್ಮಿಸಲು ಯೋಗ್ಯವಾದ ಸ್ಥಳವೇ ಎಂದು ಪ್ರಶ್ನಿಸಿದ್ದಲ್ಲದೆ, ಗ್ರಾಮದ ಯುವಕರ ಕ್ರೀಡಾ ತರಬೇತಿಗೆ ಈ ಜಾಗವನ್ನು ಮೀಸಲಿಡುವಂತೆ ಒತ್ತಾಯಿಸಿದ್ದಾರೆ.

ಈ ಸ್ಥಳವು ಮೊದಲು ನೀರು ತುಂಬಿದ್ದ ತಗ್ಗು ಪ್ರದೇಶವಾಗಿದ್ದು, ಅಂತ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲು ಯೋಗ್ಯವಲ್ಲದ ಸ್ಥಳವನ್ನು ಕ್ರೀಡಾಂಗಣವಾಗಿ ಮಾರ್ಪಡಿಸಿ ಕ್ರೀಡಾ ತಾಲೀಮು ನಡೆಸುತ್ತಿರುವ ಯುವಕರನ್ನು ಬೆದರಿಸುತ್ತಿರುವ ಪಂಚಾಯಿತಿ ಅಧಿಕಾರಿಗಳ ವಿರುದ್ಧ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾ ತಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯತೆ ತೋರುತ್ತಿದ್ದಾರೆ ಎಂದು ಯುವಕರು ಕಿಡಿಕಾರಿದ್ದಾರೆ.
ಈ ಸಂದರ್ಭದಲ್ಲಿ ಪ್ರಜ್ಞಾವಂತ ವೇದಿಕೆಯ ಚಿಕ್ಕ ತಮ್ಮೇಗೌಡ, ಕೆ ಎಸ್ ಜಯಶಂಕರ್, ನಾಲ್ವಡಿ ಕೃಷ್ಣರಾಜ ಒಡೆಯರ್ ತಂಡದ ಅಧ್ಯಕ್ಷ ಕೆ ಆರ್ ಧ್ರುವಕುಮಾರ್, ಕಾರ್ಯದರ್ಶಿ ಹೇಮತಕುಮಾರ್,ಸದಸ್ಯರುಗಳಾದ ವರುಣ, ಹರ್ಷಿತ್, ದರ್ಶನ, ಲಿಖಿತ್, ಅಂಕಿತ್, ಯಶವಂತ್, ಮದನ್, ಕಾರ್ತಿಕ್, ಚೇತನ್, ಆಕಾಶ್ ಮತ್ತು ಗ್ರಾಮಸ್ಥರು ಬಾಗಿಯಾಗಿದ್ದರು.
Mandya
ದಿ.ಮಾಜಿ ಸಚಿವರಾದ ಬಂಡಿಸಿದ್ದೇಗೌಡರು ಸರಳ, ಸಜ್ಜನಿಕೆಯ ರಾಜಕಾರಿಣಿ : ಎಂ.ಎಲ್.ದಿನೇಶ್
ಶ್ರೀರಂಗಪಟ್ಟಣ: ದಿವಂಗತ ಮಾಜಿ ಸಚಿವ ಎ.ಎಸ್. ಬಂಡಿಸಿದ್ದೇಗೌಡರು ರೈತರು ಬಡವರೊಂದಿಗೆ ಬೆರೆತು ಸರಳ ಸಜ್ಜನಿಕೆಯ ರಾಜಕಾರಿಯಾಗಿದ್ದರು ಎಂದು ಗ್ಯಾರಂಟಿ ಯೋಜೆನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಮಾಜಿ ಪ್ರಭಾರ ಅಧ್ಯಕ್ಷ ಎಂ.ಎಲ್. ದಿನೇಶ್ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ವೃತ್ತದಲ್ಲಿರುವ ಮಾಜಿ ಸಚಿವ ದಿವಂಗತ ಬಂಡಿಸಿದ್ದೇಗೌಡರ ವೃತ್ತದಲ್ಲಿ ಅವರ ನಾಮಫಲಕಕ್ಕೆ 40ನೇ ಪುಣ್ಯ ಸ್ಮರಣೆಯ ಅಂಗವಾಗಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಎ.ಎಸ್.ಬಂಡಿಸಿದ್ದೇಗೌಡ ಅವರು, ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರು ಒಂದು ಬಾರಿ ಸಚಿವರಾಗಿ ಕ್ಷೇತ್ರದಲ್ಲಿ ಜನಪರ ಕಾರ್ಯಗಳ ಜೊತೆಗೆ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ.
ಅವರು ಇರುವ ತನಕ ಕ್ಷೇತ್ರದಲ್ಲಿರುವ ಜನರೊಂದಿಗೆ ಬೆರೆತು, ಜನರ ಕಷ್ಟಗಳಿಗೆ ಸ್ಪಂಧಿಸಿದ್ದರು. ಅವರು ಇಂದಿಗೆ ನಮ್ಮನ್ನಗಲಿ 40 ವರ್ಷಗಳೇ ಕಳೆದಿವೆ. ಆದರೂ ಅವರ ಕುಟುಂಬದ ಮೇಲೆ ಕ್ಷೇತ್ರದಲ್ಲಿ ಜನರು ಇಟ್ಟಿರುವ ಅಭಿಮಾನ ಹೆಮ್ಮರವಾಗಿ ಬೆಳೆದು ಕ್ಷೇತ್ರದಲ್ಲಿ ಅವರ ಕುಟುಂಬದ ಪರವಾಗಿ ಜನರು ನಿಂತು ಬಂಡಿಸಿದ್ದೇಗೌಡರ ಪತ್ನಿ ವಿಜಯಲಕ್ಷಮ್ಮ ಹಾಗೂ ಅವರ ಪುತ್ರ ರಮೇಶ ಬಂಡಿಸಿದ್ದೇಗೌಡರನ್ನು ಶಾಸಕರನ್ನಾಗಿ ಮಾಡಿದ್ದು, ಕ್ಷೇತ್ರದ ಜನರ ಅಶೀರ್ವಾದ ಇನ್ನು ಇದೇ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.

ಈ ವೇಳೆ ಶ್ರೀನಿಮಿಷಾಂಬ ದೇವಾಲಯದ ಸಮಿತಿ ಅಧ್ಯಕ್ಷ ಎಸ್.ಎನ್.ದಯಾನಂದ್, ಪುರಸಭೆ ಮಾಜಿ ಅಧ್ಯಕ್ಷ ಎಲ್. ನಾಗರಾಜು, ಕಾಂಗ್ರೇಸ್ ಯುವ ಘಟಕದ ಅಧ್ಯಕ್ಷ ರಜಿನಿಕಾಂತ್, ಪುರಸಭಾ ಮಾಜಿ ಸದಸ್ಯ ಟಿ.ಕೃಷ್ಣ,ಬಾಲು , ವೆಂಕಟರಾಮು, ಪ್ರದೀಪ್, ನಾಗರಾಜು, ವ್ಯಾನ್ ಕುಮಾರ್, ಪರಮೇಶ್, ಕುಮಾರ್, ಪ್ರಸನ್ನ ಬಂಕ್, ನಾರಾಯಣ್ ಸೇರಿದಂತೆ ಇತರ ಅಭಿಮಾನಿಗಳು ಹಾಜರಿದ್ದು, ಬಂಡಿಸಿದ್ದೇಗೌಡರ ವೃತ್ತಕ್ಕೆ ಪೂಜೆ ಸಲ್ಲಿಸಿದರು.
Mandya
ಮದ್ದೂರು ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಚರ್ಚಿಸಿ ಅಗತ್ಯ ಕ್ರಮ : ಎನ್. ಚಲುವರಾಯಸ್ವಾಮಿ
ಮಂಡ್ಯ : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂಗಳ ಸೇರ್ಪಡೆಗೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಅಗತ್ಯ ಕ್ರಮ ವಹಿಸುತ್ತೇವೆ ಹಾಗೂ ಮುಖ್ಯಮಂತ್ರಿಗಳು ಹಾಗೂ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎನ್. ಚಲುವರಾಯಸ್ವಾಮಿ ಹೇಳಿದರು.

ಅವರು ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ನಗರಸಭೆಯ ಮೇಲ್ದರ್ಜೆಗೇರಿಸುವ ಸಂಬಂಧ ಕುರಿತು ಗೆಜ್ಜಲಗೆರೆ ಗ್ರಾಮಸ್ಥರೊಂದಿಗೆ ಮದ್ದೂರು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುರಸಭೆಯನ್ನು ನಗರಸಭೆ ಮಾಡಲು ಮದ್ದೂರು ತಾಲೂಕಿನ ನಾಲ್ಕು ಗ್ರಾ.ಪಂ.ಗಳಾದ ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಹಾಗೂ ಗೆಜ್ಜಲಗೆರೆ ಗ್ರಾ.ಪಂ ವ್ಯಾಪ್ತಿಯನ್ನು ನಗರಸಭೆಗೆ ಸೇರಿಕೊಳ್ಳುವ ಪ್ರಕ್ರಿಯೆ ಬಗ್ಗೆ ಕಾನೂನಿನ ಅನ್ವಯ ಕ್ರಮ ಕೈಕೊಳ್ಳುತ್ತೇವೆ. ಗ್ರಾಮಸ್ಥರ ಬೇಡಿಕೆಗಳನ್ನು ಅಧಿಕಾರಿಗಳ ಜೊತೆ ಸಭೆ ನೆಡಸಿ ಶೀಘ್ರದಲ್ಲೇ ಪರಿಶೀಲಿಸುತ್ತೇವೆ ಎಂದು ತಿಳಿಸಿದರು.

4 ಗ್ರಾಮ ಪಂಚಾಯತಿಗಳ ಗ್ರಾಮಸ್ಥರ ಜೊತೆ ಸಭೆ ನಡೆಸಿದ್ದೇವೆ. ಸಭೆಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ್ದೇವೆ. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ನಿಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಮದ್ದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ. ಎಂ. ಉದಯ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾ ರಾಣಿ, ಮದ್ದೂರು ತಹಸೀಲ್ದಾರ್ ಪರುಶರಾಮ್ ಸತ್ತಿಗೇರಿ ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.
-
Mysore10 hours agoಮಲೆ ಮಹದೇಶ್ವರ ಶತನಾಮಾವಳಿ ಲೋಕಾರ್ಪಣೆ: ಶ್ರೀಮಾಯಕಾರ ಗುರುಕುಲದಿಂದ ನಿರ್ಮಾಣ
-
National - International2 hours agoIND v/s PAK T-20 WC| 114ಕ್ಕೆ ಪಾಕ್ ಆಲೌಟ್: ಟೀಂ ಇಂಡಿಯಾಗೆ ಭರ್ಜರಿ ಜಯ
-
Hassan10 hours agoಸಂತ ಸೇವಾಲಾಲ್ ಜಯಂತಿ ಆಚರಣೆ : ಕೆ.ಎಂ.ಶಿವಲಿಂಗೇಗೌಡರವರಿಂದ ಪುಷ್ಪನಮನ
-
Hassan15 hours agoನಿಗೂಢ ನಾಪತ್ತೆಯ ಪ್ರಕರಣಕ್ಕೆ ಬಹುದೊಡ್ಡ ಮೇಜರ್ ಟ್ವಿಸ್ಟ್ : ಮಹಿಳೆ ಪೊಲೀಸರ ವಶಕ್ಕೆ,
-
Chikmagalur2 hours agoತಾಯಿ ಬುದ್ಧಿವಾದ ಹೇಳಿದ್ದಕ್ಕೆ ಬೇಸತ್ತು ಬಾಲಕಿ ಆತ್ಮಹ*ತ್ಯೆಗೆ ಶರಣು
-
Kodagu9 hours agoರೋಮನ್ ಕ್ಯಾಥೋಲಿಕ್ ಕ್ರಿಕೆಟ್ ಟೂರ್ನಿಯಾ ಉದ್ಘಾಟನಾ ಕಾರ್ಯಕ್ರಮ
-
Hassan6 hours agoತಾಲೂಕಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ
-
Chikmagalur7 hours agoಭದ್ರಾ ನದಿಯಲ್ಲಿ ಸೆಳೆತ ಮತ್ತು ಅಪಾಯಕಾರಿ ಗುಂಡಿಗಳ ಬಗ್ಗೆ ಅರಿವು ಇಲ್ಲ : ಬಲಿಯಾಗುತ್ತಿರುವ ವಲಸೆ ಕಾರ್ಮಿಕರು ಮತ್ತು ಪ್ರವಾಸಿಗರು
