Hassan
ಜೆಡಿಎಸ್ ಎಂದ್ರೆ ಪ್ರೈವೆಟ್ ಲಿಮಿಟೆಡ್ ತನ್ನ ಆಸ್ತಿ-ಮಕ್ಕಳನ್ನು ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ: ಬನವಾಸೆ ರಂಗಸ್ವಾಮಿ ವಾಗ್ದಾಳಿ

ಹಾಸನ: ಪ್ರಸ್ತುತದಲ್ಲಿ ಜೆಡಿಎಸ್ ಎಂದರೇ ಪಕ್ಷವಾಗಿ ಉಳಿಯದೇ ಪ್ರೈವೆಟ್ ಲಿಮಿಟೆಡ್ ಆಗಿ ಬದಲಾಗಿದ್ದು, ತನ್ನ ಆಸ್ತಿ ಮತ್ತು ಮಕ್ಕಳನ್ನು ಕಾಪಾಡಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದಾಗಿ ಹಾಸನ ಕ್ಷೇತ್ರ ವಿಧಾನಸಭೆಯ ಪರಾಜಿತ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ನಗರದ ಬಿ.ಎಂ. ರಸ್ತೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಅಲ್ಪಸಂಖ್ಯಾತ ವಿಭಾಗದ ಸಮಾವೇಶದಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತದಲ್ಲಿ ಗಲ್ಲಿ ಗಲ್ಲಿಯಲ್ಲಿ ಕಾಂಗ್ರೆಸ್ ಅಲೆ ಶುರುವಾಗಿದ್ದು, ಎಲ್ಲಾರೂ ಕೂಡ ಶ್ರದ್ಧೆಯಿಂದ ಕೆಲಸ ಮಾಡಿದ್ದಲ್ಲಿ ಏಪ್ರಿಲ್ ೨೬ ರಂದು ನಡೆಯುವ ಚುನಾವಣೆಯಲ್ಲಿ ಜಯಭೇರಿಯನ್ನು ಭಾರಿಸಿ ಮೇ. ೪ ರಂದು ಪಲಿತಾಂಶ ಬಂದ ಮೇಲೆ ಇದೆ ರೀತಿ ಎಲ್ಲಾರೂ ಕೂಡ ಸಮಾರಂಭ ಏರ್ಪಡಿಸಿ ಸಂತೋಷ ಪಡೊಣ. ಪ್ರತಿಯೊಬ್ಬರೂ ಕೂಡ ಶ್ರೇಯಸ್ ಪಟೇಲ್ ಆಗಿ ಕಾರ್ಯನಿರ್ವಹಣೆ ಮಾಡಿದಾಗ ಮಾತ್ರ ಗೆಲುವು ಪಡೆಯಬಹುದು ಎಂದರು. ಜೆಡಿಎಸ್ ಪಕ್ಷ ಎಂದರೇ ಅದೊಂದು ಸಮಯ ಸಾದಕ ಪಕ್ಷ. ಇಂದು ಪಕ್ಷವಾಗಿ ಉಳಿದಿಲ್ಲ. ಈ ಪಕ್ಷದ ಕಾರ್ಯಕರ್ತರನ್ನು ನಾಯಕರನ್ನು ಬೀದಿಗೆ ತಳ್ಳಿ ಕೋಮುವಾದಿ ಬಿಜೆಪಿ ಪಕ್ಷವನ್ನು ಒಪ್ಪಿಕೊಂಡಿರುವುದರಿಂದ ಪಕ್ಷವಾಗಿ ಉಳಿಯದೇ ಪ್ರೈವೆಟ್ ಲಿಮಿಟೆಡ್ ಆಗಿ ಬದಲಾವಣೆ ಆಗಿದೆ. ತನ್ನ ಆಸ್ತಿಗಳನ್ನು, ಮಕ್ಕಳನ್ನು ಕಾಪಾಡಿಕೊಳ್ಳುವುದಕ್ಕಾಗಿ ಅವರು ಕಾರ್ಯಕರ್ತರನ್ನು ಮುಖಂಡರನ್ನು ಬೀದಿಯಲ್ಲಿ ಬಿಟ್ಟು ಬಿಜೆಪಿ ಜೊತೆ ಹೋಗಿರುವುದಾಗಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷವು ಜೆಡಿಎಸ್ ಕಾರ್ಯಕರ್ತರ ಎದುರು ನೋಡುತ್ತಿದೆ. ನಿಮ್ಮನ್ನು ಬದುಕಲು ಅವಕಾಶ ಕೊಡುತ್ತೇವೆ ಎಂದು ಭರವಸೆ ನೀಡಿದರು. ಪಕ್ಷದಲ್ಲಿ ಯಾರಿಗಾದರೂ ನೋವಾಗಿದ್ದರೇ ನಮ್ಮ ಪಕ್ಷಕ್ಕೆ ಬರಬಹುದು. ನಮ್ಮ ಕಾಂಗ್ರೆಸ್ ಪಕ್ಷ ನಿಮಗೆ ಯಾವಾಗಲು ಆಸರೆ ಆಗಿರುತ್ತದೆ. ಎಲ್ಲಾರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸೋಣ. ಅವರ ಗೆಲುವಿನಲ್ಲಿ ನಮ್ಮೆಲ್ಲರ ಭವಿಷ್ಯ ಅಡಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮೆ ಮನಸ್ಸನ್ನು ಗೆಲ್ಲಲು ಆಗಿಲ್ಲವೇನೊ? ಇಲ್ಲವೇ ಒಂದು ದುಷ್ಟ ಶಕ್ತಿಯನ್ನು ಸೋಲಿಸುವ ನಿಟ್ಟಿನಲ್ಲಿ ಜನರು ನಿರ್ಧಾರ ಮಾಡಿರಬಹುದು, ಆ ನಿರ್ಧಾರಕ್ಕೆ ನಾ ತಲೆ ಬಾಗುತ್ತೇನೆ. ನನಗೆ ಇನ್ನು ವಯಸ್ಸಿದ್ದು, ಮುಂದಿನ ದಿನಗಳಲ್ಲಿ ಒಳ್ಳೆ ಕೆಲಸ ಮಾಡಿ ನಿಮ್ಮ ಹೃದಯವನ್ನು ಗೆದ್ದು ಮುಂದೆ ಆ ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಮಾತನಾಡಿ, ನಮಗೆ ಮುಸಲ್ಮಾನರ ಮತ ಅವಶ್ಯಕತೆ ಇಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೇ ಕಾಂಗ್ರೆಸ್ ನಮಗೆ ಎಲ್ಲಾ ಧರ್ಮದ ಮತ ಬೇಕು. ಚುನಾವಣೆಯಲ್ಲಿ ದೇವೆಗೌಡರು ಮೋದಿಗೋಸ್ಕರ ಓಟ್ ಕೇಳ ಬಾರದು, ನಮ್ಮ ಪಕ್ಷ ಉಳಿವಿಗಾಗಿ ಓಟ್ ಕೇಳಿ ಜನರು ಒಪ್ಪುತ್ತಾರೆ. ಜೆಡಿಎಸ್ ಅಭ್ಯರ್ಥಿ ಈಗ ಜನರ ಮನಸ್ಸಿನಲ್ಲಿ ತಿರಸ್ಕೃತಗೊಂಡಿದ್ದು, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಮನೆ ಮನೆಮಾತಾಗಿದ್ದು, ಅತಿ ಹೆಚ್ಚು ಅಂತರದಿಂದ ಗೆದ್ದೆ ಗೆಲ್ಲುತ್ತಾರೆ ಎಂದು ಭರವಸೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಐದು ಗ್ಯಾರಂಟಿಯನ್ನು ಪೂರ್ಣವಾಗಿ ಕೊಟ್ಟಿದ್ದು, ವರ್ಷಕ್ಕೆ ಎಪ್ಪತ್ತು ಸಾವಿರ ಕೋಟಿ ಖರ್ಚು ಆಗುತ್ತಿದೆ. ಆದರೇ ಯಾವುದನ್ನು ಲೆಕ್ಕಿಸದೇ ನೀಡಿದ ಭರವಸೆ ಈಡೇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರದ ನಾಯಕರ ಕೈ ಬಲಪಡಿಸಿ ಎಂದು ಕರೆ ನೀಡಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಐದು ಗ್ಯಾರಂಟಿಗಳನ್ನು ನೀಡುವ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಮೇಲೆ ಕೂಡ ಸರ್ವ ಧರ್ಮಕ್ಕೂ ೫ ಭರವಸೆ ಕೂಡ ನೀಡಿ ಈಡೇರಿಸಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಜೋಡಿ ಎತ್ತುಗಳಾಗಿ ಜನಪರ ಯೋಜನೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಗೆಲ್ಲಿಸುವಂತೆ ಇದೆ ವೇಳೆ ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ಹಾಗೂ ಹುಡಾ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಮಾತನಾಡಿ, ೨೦೧೪ ರಲ್ಲಿ ನರೇಂದ್ರ ಮೋದಿಯವರು ಸುಳ್ಳು ಅಬ್ಬರದ ಭಾಷಣ ಮಾಡಿದ್ದು, ಇಡೀ ದೇಶವೇ ಅವರ ಕಡೆ ಸೆಳೆದಿತ್ತು. ಪ್ರಧಾನಿ ಆಗುವ ಮೊದಲು ನನಗೆ ಒಂದು ಅವಕಾಶ ಕೊಡಿ ದೇಶದಲ್ಲಿ. ಸ್ವಿಸ್ ಬ್ಯಾಂಕಿನಲ್ಲಿರುವ ಭಾರತೀಯರ ಹಣ ತಂದು ಪ್ರತಿ ವ್ಯಕ್ತಿಗೆ ೩ ಲಕ್ಷ, ಒಂದು ಕುಟುಂಬಕ್ಕೆ ೧೫ ಲಕ್ಷ ಕೊಡುವುದಾಗಿ ನಂಬಿಸಿ ಎಂಪಿ ಚುನಾವಣೆಯಲ್ಲಿ ಗೆಲುವು ಪಡೆದುಕೊಂಡರು. ಇಡಿ ಜನರು ಸುಳ್ಳು ಭರವಸೆ ನಂಬಿ ಮತ ಹಾಕಿದ ಪರಿಣಾಮ ಪ್ರಧಾನಿಯಾದರು. ಮಣ್ಣಿನ ಮಗ ದೇವೇಗೌಡ ಎಂದು ಹೇಳುತ್ತಿದ್ದವರ ಹೆಸರನ್ನು ಕೂಡ ಸ್ವಿಸ್ ಬ್ಯಾಂಕಿನಲ್ಲಿ ದುಡ್ಡು ಇದೆ ಎಂದು ಹೇಳಿದವರು ಇದೆ ಮೋದಿಯವರು. ಹೆಚ್.ಡಿ. ಕುಮಾರಸ್ವಾಮಿ ಅವರು ಕೂಡ ಹಣ ಇಟ್ಟಿದ್ದಾರೆ ಎಂದು ಹೇಳಿದ್ದರು. ಈಗ ಯಾವ ಹಣ ಯಾರ ಖಾತೆಗೆ ಒಂದು ಬಿಡಿಗಾಸು ಬರಲಿಲ್ಲ ಎಂದು ಕಿಡಿಕಾರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮೊಹಮ್ಮದ್ ದಾವುದ್, ಉಪಾಧ್ಯಕ್ ಎಂ. ಅಮ್ಜಾದ್ ಖಾನ್, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಶರ್ಮ, ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಧ್ಯಕ್ಷ ಜಾಕೀರ್ ಹುಸೇನ್, ಕಾಂಗ್ರೆಸ್ ಮುಖಂಡರಾದ ಖಡಾಖಡಿ ಫೀರ್ ಸಾಹೇಬ್, ಮುಭಾಶೀರ್ ಅಹಮದ್, ಫಾಸ್ಟರ್ ಮಣಿ, ಶೀರಾಜ್, ಜಿಶಾನ್, ಖಲಂದರ್ ಪಾಷಾ, ಶಿವಕುಮಾರ್ ಇತರರು ಉಪಸ್ಥಿತರಿದ್ದರು.
Hassan
ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದಂದು ಮುಸ್ಲಿಂ ಕಾಜಿಯವರಿಂದ ಕುರಾನ್ ಪಟಿಸದಂತೆ ಮನವಿ

ಬೇಲೂರು : ಶ್ರೀ ಚನ್ನಕೇಶವ ಸ್ವಾಮಿ ರಥೋತ್ಸವದ ಅಂಗವಾಗಿ ಯಾವುದೇ ರೀತಿಯ ಹಿಂದು ಧರ್ಮಿಯರಿಗೆ ಅವರ ಭಾವನೆಗೆ ದಕ್ಕೆ ಬಾರದಂತೆ ಮುಸ್ಲಿಂ ಕಾಜಿಯವರಿಂದ ಕುರಾನ್ ಪಟ್ಟಣವನ್ನು ನಡೆಸದಂತೆ ಹಿಂದೂ ಸಮಾಜದ ಮುಖಂಡರು ತಾಲೂಕು ದಂಡಾಧಿಕಾರಿಗಳಿಗೆ ಪೊಲೀಸ್ ಇಲಾಖೆಗೆ ಮತ್ತು ದೇಗುಲದ ಕಾರ್ಯನಿರ್ವಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಮುಸ್ಲಿಂ ಕಾಜಿಯವರಿಗೆ ದೇವಾಲಯದ ವತಿಯಿಂದ ಸಂಪ್ರದಾಯದಂತೆ ನೀಡುವ ಕಾಣಿಕೆಯನ್ನು ನೀಡಲಿ ಮತ್ತು ಅವರು ಹಿಂದೆ ನಡೆಯುತ್ತಿದ್ದ ಸಂಪ್ರದಾಯದಂತೆ ದೇವರಿಗೆ ಒಂದನೇ ತಿಳಿಸಿ ಹೋಗಲಿ ಅದನ್ನು ಬಿಟ್ಟು ಕುರಾನ್ ಪಟ್ಟಣವನ್ನು ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಹಿಂದೂ ಮುಖಂಡರಾದ ರಘು ಸಕಲೇಶಪುರ ಒತ್ತಾಯಿಸಿದ್ದಾರೆ ಕುರಾನ್ ಪಟ್ಟಣಕ್ಕೆ ಅವಕಾಶ ನೀಡಿದ್ದಾರೆ ಇದಕ್ಕೆ ಸಂಪೂರ್ಣ ಹೊಣೆಯನ್ನ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ
Hassan
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು 12ಜನ ನೂತನ ನಿರ್ದೇಶಕರುಗಳು ಆಯ್ಕೆಯಾದರು.
ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 12ಜನ ನಿರ್ದೇಶಕ ಸದಸ್ಯ ಬಲ ಹೊಂದಿದ್ದು ನೂತನ ನಿರ್ದೇಶಕ 23 ಜನ ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಚುನಾವಣೆ ಮೂಲಕ ನೂತನ ನಿರ್ದೇಶಕರನ್ನ ಆಯ್ಕೆ ಮಾಡಲಾಯಿತು.
ಸಾಮಾನ್ಯ ಕ್ಷೇತ್ರದಿಂದ ಅವಿನಾಶ್, ವಿ.ಎಸ್ ಆನಂದ್, ಚಂದ್ರು, ಕುಬೇರಪ್ಪ, ಯೋಗೇಶ್, ಮಹಿಳಾ ಕ್ಷೇತ್ರದಿಂದ ಮಂಜುಳಾ, ಗಿರಿಜಾ, ಹಿಂದುಳಿದ ವರ್ಗ ‘ಎ’ ನಿಂದ ರವಿ ಕುಮಾರ್, ಹಿಂದುಳಿದ ವರ್ಗ ‘ಬಿ’ ನಿಂದ ಮೋಹನ್ ಕುಮಾರ್, ಪರಿಶಿಷ್ಟ ಜಾತಿಯಿಂದ ಪುಟ್ಟಸ್ವಾಮಿ ಆಯ್ಕೆಯಾದರೆ ಪರಿಶಿಷ್ಟ ಪಂಗಡದಿಂದ ಶಾಂತಪ್ಪ ನಾಯಕ ಅವಿರೋಧವಾಗಿ ಆಯ್ಕೆಯಾದರು, ಇನ್ನೂ ಸಾಲಗಾರರಲ್ಲದ ಕ್ಷೇತ್ರದಿಂದ ಕಿಶೋರ್ ಕುಮಾರ್ ಆಯ್ಕೆಯಾದರು 2030ರವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ ಎಂದು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್ ತಿಳಿಸಿದರು.
ಚುನಾವಣೆ ಮೂಲಕ ನೂತನ ನಿರ್ದೇಶಕರುಗಳ ಆಯ್ಕೆ ಘೋಷಣೆ ಹೊರಬಿದ್ದ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಬೆಳಮೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್. ಎಸ್ ನಟರಾಜ್, ಪಾಳ್ಯ ಸೊಸೈಟಿ ನಿರ್ದೇಶಕ ಕಟ್ಟೆಗದ್ದೆ ನಾಗರಾಜ್, ಬಿಜೆಪಿ ಮುಖಂಡ ಕೆ.ಕೆ ಪ್ರಸಾದ್, ರುದ್ರೇಶ್ ಕಾಡ್ಲೂರು, ನಂದನ್, ಚಂದ್ರಶೇಖರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿವೇಕ್ ವೈದ್ಯನಾಥ್ ಸೇರಿದಂತೆ ಮುಂತಾದವರು ನೂತನ ನಿರ್ದೇಶಕರುಗಳನ್ನು ಅಭಿನಂದಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಪೋಟೋ ಕ್ಯಾಪ್ಶನ್: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚುನಾಯಿತನಾದ ನೂತನ ನಿರ್ದೇಶಕರನ್ನ ಹಾಸನ ಜಿಲ್ಲಾ ಹೆಚ್ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಲ್ಲಿ ಜಗದೀಶ್, ಆರ್.ಎಸ್ ನಟರಾಜ್ ಕೆ.ಕೆ ಪ್ರಸಾದ್ ಸೇರಿದಂತೆ ಇತರರು ಅಭಿನಂದಿಸಿದರು.
Hassan
ಅಟಲ್ ವಿರಸತ್ ಕಾರ್ಯಕ್ರಮ: ಒಡನಾಟ ಉಳ್ಳ ಹಿರಿಯರಿಗೆ ಬಿಜೆಪಿಯಿಂದ ಸನ್ಮಾನ

ಹಾಸನ: ನಗರದ ಆರ್.ಸಿ.ರಸ್ತೆ, ಶ್ರೀಗಂಧದ ಕೋಠಿ ಆವರಣದಲ್ಲಿರುವ ಖಾಸಗೀ ಹೋಟೆಲೊಂದರಲ್ಲಿ ಗುರುವಾರ ನಡೆದ ಅಟಲ್ ವಿರಸತ್ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಅಟಾಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ಧಿ ವರ್ಷದ ಅಂಗವಾಗಿ ಹಿರಿಯರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.
ಇದೆ ವೇಳೆ ಅಟಾಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ಧಿ ಸಹ ಸಂಚಾಲಕ ಪಣೀಶ್ ಮಾತನಾಡಿ, ಅಟಾಲ್ ಜೀ ಅವರು ಎಲ್ಲೆಲ್ಲಿ ಬಂದಿದ್ದರೂ, ಅವರ ಒಡಾಟ, ಹೋರಾಟಗಳು, ಸಂಘಟನೆಗಳು, ಅವರ ವ್ಯಕ್ತಿತ್ವ, ಒಡನಾಟ, ಅವರ ಸಂಪರ್ಕಕ್ಕೆ ಬಂದಂತಹ ವ್ಯಕ್ತಿಗಳು, ಅವರ ನೆನಪಿನ ಸ್ಪೂರ್ತಿಯನ್ನು ಸಂಗ್ರಹ ಮಾಡುವಂತಹ ಪೋಟೊ ಸಂಗ್ರಹಿಸುವ ಜೊತೆಗೆ ಯಾರು ಅಟಾಲ್ ಬಿಹಾರಿ ಜೊತೆ ಒಡನಾಟವಿತ್ತು ಅವರನ್ನು ಗುರುತಿಸಿ ಗೌರವಿಸುವ ಕೆಲಸ ನಾವು ಕಳೆದ ಒಂದು ತಿಂಗಳಿನಿಂದ ಮಾಡಿಕೊಂಡು ಈ ಹಿಂದೆಯೇ ಬಂದಿದ್ದೇವೆ ಎಂದರು.
ಅಟಲ್ ಜೀ ಪ್ರೇರಣೆಯನ್ನು ಕಾರ್ಯಕರ್ತರು ಪಡೆದಿದ್ದಾರೆ. ನಾವು ಯಾವ ದಿಕ್ಕಿನಲ್ಲಿ ರಾಜಕಾರಣ ಮಾಡಬೇಕು ಎನ್ನುವ ದಿಕ್ಸೂಜಿ ನಮಗೆ ತೊರಿಸುತ್ತದೆ ಎಂದು ಕಿವಿಮಾತು ಹೇಳಿದರು. ರಾಜಕಾರಣದಲ್ಲಿ ಕೆಲಸ ಮಾಡುವ ನಾವು ಯಾವುದು ಆದರ್ಶ ಎಂಬುದನ್ನು ತಿಳಿದಿರಬೇಕು. ಯಾವ ಮಾರ್ಗದರ್ಶನ ತಿಳಿದಿರಬೇಕು ಬಗ್ಗೆ ಜಾಗೃತಿ ಅಗತ್ಯ ಎಂದು ಸಲಹೆ ನೀಡಿದರು.
ಆಲೂರು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮಾತನಾಡಿ, ವಾಜಪೇಯಿ ಕಾಲದಿಂದಲೂ ಹೋರಾಟ ಮಾಡಿದವರು ನಮ್ಮ ಸಕಲೇಶಪುರದಲ್ಲಿ ಮತ್ತು ಈ ಜಿಲ್ಲೆಯಲ್ಲಿ ಹಲವಾರು ಜನರು ಇದ್ದಾರೆ. ಬಿಜೆಪಿಯಲ್ಲಿ ಹಾಸನಕ್ಕೆ ಉತ್ತಮವಾದ ಸ್ಥಾನಮಾನವಿದೆ. ಹಿಂದಿನ ದಿನಗಳಲ್ಲಿ ಎಮರ್ಜನ್ಸಿ ಕಾಲದಲ್ಲಿ ಜೈಲಿಗೆ ಹೋಗಿದಾಗಿನಿಂದ ಹಿಡಿದು ವಾಜಪೇಯಿ ಜೊತೆ ಪಾರ್ಟಿ ಕಟ್ಟಿರುವ ಹಲವಾರು ಜನರು ನಮ್ಮ ಜಿಲ್ಲೆಯಲ್ಲಿರುವುದು ನಮ್ಮ ಹೆಮ್ಮೆ ಎಂದರು.
ಇದೆ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಹುಡಾ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ಬಿಜೆಪಿ ಸಂಘಟನಾ ಪರ್ವ ಜಿಲ್ಲಾ ಸಂಚಾಲಕ ರಾಜಕುಮಾರ್ ಇತರರು ಉಪಸ್ಥಿತರಿದ್ದರು.
-
State23 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan21 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು
-
Chamarajanagar20 hours ago
ಗುಂಡ್ಲುಪೇಟೆ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಜಯಕುಮಾರ್ ಅಧಿಕಾರ ಸ್ವೀಕಾರ
-
Kodagu21 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan20 hours ago
ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ
-
Hassan24 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
Mysore20 hours ago
ಜಿಡಿ ಹರೀಶ್ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್
-
State16 hours ago
ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಜಸ್ಟ್ 4ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ಹೇಗೆ ಅರ್ಜಿ ಸಲ್ಲಿಸುವುದು?