Connect with us

Mysore

ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

Published

on

ಮೈಸೂರು: ಸದನದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತ್ತು ಮಾಡಿರುವ ಸ್ಪೀಕರ್ ನಿಲುವನ್ನು ಖಂಡಿಸಿ. ಸೋಮವಾರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ರಾಮಸ್ವಾಮಿ ವೃತ್ತದ ಬಳಿ ಬಿಜೆಪಿಯ ಜಿಲ್ಲಾ ಹಾಗೂ ಗ್ರಾಮಾಂತರ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ಸಂವಿಧಾನದ ನಡೆಗೆ ಧಿಕ್ಕಾರ ಕೂಗಿ ಕಿಡಿಕಾರಿದರು.

ಮಂತ್ರಿಗಳಿಗೆ ಶಾಸಕರಿಗೆ ಹನಿ ಟ್ರ್ಯಾಪ್ ಗ್ಯಾರೆಂಟಿ. ಹಿಂದುಗಳಿಗೆ ಆತ್ಮಹತ್ಯೆ ಭಾಗ್ಯ ಮುಸ್ಲಿಮರಿಗೆ ಶಾರಿಭಾಗ್ಯ.ಬಡವರಿಗೆ ಬೆಲೆ ಏರಿಕೆ ಶೋಷಣೆ ಮುಸ್ಲಿಮರಿಗೆ ಯೋಜನೆಗಳ ಘೋಷಣೆ, ಓಲೈಕೆ ಪಿತಾಮಹ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ. ಗುತ್ತಿಗೆಯಲ್ಲಿ ಶೇ4 ಮುಸ್ಲಿಮರಿಗೆ ಮೀಸಲಾತಿ ನೀಡಿಸ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ.ಹಲಾಲ್ ಸರ್ಕಾರ ತೊಲಗುವರೆಗೂ ಹೋರಾಟ ಎಂದು ಭಿತ್ತಿ ಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು

ಈ ಕುರಿತು ಮಾತನಾಡಿದ ಶಾಸಕ ಟಿ.ಎಸ್‌ ಶ್ರೀವತ್ಸ ಅವರು ಸಭಾಧ್ಯಕ್ಷರು ಬಿಜೆಪಿ 18 ಶಾಸಕರನ್ನು 6 ತಿಂಗಳಕಾಲ ಅಮಾನತ್ತು ಮಾಡಿರುವುದು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ ಏಕಪಕ್ಷೀಯ ಹಾಗೂ ಮನಸೋಇಚ್ಚೆಯಿಂದ ತೆಗೆದುಕೊಂಡ ತೀರ್ಮಾನ. ಶಾಸಕರಿಗೆ ಮಾತ್ರವಲ್ಲದೆ ಮತದಾರರಿಗೂ ಮಾಡಿದ ಅವಮಾನ ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಸಭಾಧ್ಯಕ್ಷರು 18 ಶಾಸಕರ ಅಮಾನತ್ತನು ಈ ಕೂಡಲೇ ಹಿಂಪಡೆಯದಿದ್ದರೆ ಸದನದಲ್ಲಿ ನಡೆಯುವ ಯಾವುದೇ ಕಲಾಪಗಳಿಗೂ ಭಾಗಿಯಾಗುವುದನ್ನು ಬಿಜೆಪಿ ಎಲ್ಲ ಶಾಸಕರು ನಿಲ್ಲಿಸಲಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್‌ನ ಶಾಸಕ ರಾಜಣ್ಣ ಅವರೆ ಸದನದಲ್ಲಿ ಕುದ್ದಾಗಿ ತಮ್ಮ ಮೇಲೆ ಹನಿ ಟ್ರ್ಯಾಪ್‌ ಮಾಡಲಾಗುತ್ತಿದೆ ಎಂದು ಹೇಳಿದರು.ಜತೆಗೆ ರಾಜ್ಯದಲ್ಲಿ ಸೀಡಿ ಫ್ಯಾಕ್ಟರಿನೆ ತಯಾರಾಗಿದೆ ಅದು ಆಡಳಿ ಪಕ್ಷ ಅಥವಾ ವಿರೋಧ ಪಕ್ಷವೇ ಆಗಿರಬಹುದು ಇದರ ಮೇಲೆ ಸೂಕ್ತ ತನಿಖೆ ಆಗಬೇಕು ಹಾಗಾಗಿ ಇದರ ವಿರುದ್ಧ ದೂರು ದಾಖಲು ಮಾಡುತ್ತೇನೆ ಎಂದು ಹೇಳಿದರು. ಆದರೆ ಇಲ್ಲಿಯವರೆಗೂ ಅವರು ಯಾರ ಮೇಲೆ ದೂರು ದಾಖಲು ಮಾಡಿಲ್ಲ ಏಕೆ? ಬಿಜೆಪಿ ಅಥವಾ ಕಾಂಗ್ರೆಸಿನ ವರಿಷ್ಠರು ನಿಮ್ಮ ಮೇಲೆ ಒತ್ತಡ ಏರುತ್ತಿದ್ದಾರ ಎಂದು ಪ್ರಶ್ನಿಸಿದರು.

ರೈತರು ತಮ್ಮ ಜಮೀನಿಗೆ ಟ್ರಾನ್ಸ್ ಫಾರ್ಮರ್‌ ಅಳವಡಿಸೊಕೊಳ್ಳುವ ವೆಚ್ಚವನ್ನು ಎರಡು ಲಕ್ಷ ರೂ ಏರಿಸಿದ್ದಾರೆ. ಹಾಲಿನ ದರ, ವಿದ್ಯುತ್ತ್‌ ದರ, ಬಸ್‌ ಪ್ರಯಾಣ ದರ, ಸ್ಟಾಂಪ್‌ ಶುಲ್ಕ, ಮದ್ಯದ ದರ, ಏರಿಕೆ ಮಾಡಿರುವುದು ಜನಸಮಾನ್ಯರಿಗೆ ನಿತ್ಯದ ಜೀವನ ನಡೆಸಲು ಕಷ್ಟವಾಗುತ್ತಿದೆ. ಈ ಕೂಡಲೆ ರಾಜ್ಯ ಕಾಂಗ್ರೆಸ್‌ ಸರಕಾರವು ಬೆಲೆ ಏರಿಕೆಯನ್ನು ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಮತ್ತೊಮ್ಮೆ ತನ್ನ ಹಳೆಯ ಚಾಳಿಯನ್ನು ಮುಂದುವರೆಸಿದ್ದಾರೆ. ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ಮುಸ್ಲಿಮರಿಗೆ ನೀಡಿರುವುದು ಹೊರದೇಶಕ್ಕೆ ವಿದ್ಯಾಭ್ಯಾಸಕ್ಕಾಗಿ ಹೋಗುವ ಮುಸ್ಲಿಂ ವಿದ್ಯಾರ್ಥಿಗಳ ಸಹಾಯಧನವನ್ನು ಹೆಚ್ಚಳ ಮಾಡಿರುವುದು. ಶಾದಿ ಭಾಗ್ಯಕ್ಕೆ ಹಣ ನೀಡುವ ನಿರ್ಧಾರ ತೆಗೆದು ಕೊಂಡಿರುವುದು. ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರ ಆತ್ಮರಕ್ಷಣೆಗಾಗಿ ವಿಶೇಷ ಅನುದಾನವನ್ನು ನೀಡುತ್ತಿರುವುದು. ಕಾಂಗ್ರೆಸ್‌ ತುಷ್ಟಿಕರಣದ ರಾಜಕಾರಣ ಮುಂದುವರೆದ ಭಾಗವಾಗಿದೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್‌ ನಾಗೇಂದ್ರ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕ ಅವರು ರಚಿಸಿದ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿ ಕೊಡಲು ಅವಕಾಶವಿಲ್ಲ. ಇದಕ್ಕೆ ಸಂಬಂಧ ಪಟ್ಟಂತೆ ಸುಪ್ರೀಂ ಕೋರ್ಟ್ ಸೇರಿ ವಿವಿಧ ಕೋರ್ಟ್‌ಗಳೂ ತೀರ್ಪು ಕೊಟ್ಟಿವೆ. ಆದರೂ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಕಾಂಗ್ರೆಸ್‌ನ ನಡೆ ಡಾ.ಅಂಬೇಡ್ಕರ್ ಅವರ ಸಂವಿಧಾನಕ್ಕೆ ಕಾಂಗ್ರೆಸ್ ಮಾಡಿದ ಅವಮಾನ. ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡು ಕಾಂಗ್ರೆಸ್ ಹಿಂದೂಗಳ ಹಿತಕ್ಕೆ ವಿರುದ್ಧವಾಗಿ ಕಾರ್ಯವೈಕರಿ ನಡೆಸುತ್ತಿದೆ. ಕೂಡಲೇ ಕಾಂಗ್ರೆಸ್ ಈ ನಿರ್ಧಾರಗಳಿಂದ ಹಿಂದಕ್ಕೆ ಸಿರಿಯಬೇಕು. ಇಲ್ಲದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಗ್ರಾಮಾಂತರಾಧ್ಯಕ್ಷ ಎಲ್. ಆರ್‌, ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ. ಎಂ ರಘು, ರಾಜ್ಯವಕ್ತಾರ ಮೋಹನ್‌, ಮುಖಂಡರಾದ ಕೇಬಲ್‌ ಮಹೇಶ್‌, ಸಂದೇಶ್‌ ಸ್ವಾಮಿ, ಶೈಲೇಂದ್ರಘಿ, ಹೇಮ ನಂದೀಶ್‌ ಹಾಜರಿದ್ದರು.

Continue Reading

Mysore

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

Published

on

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.

ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

Mysore

ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

Published

on

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ  ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.

 

ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.

 

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು  ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ.  ಸಣ್ಣ ಸಮುದಾಯದ ಬಗ್ಗೆ  ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.

ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ‌ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

.

ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.

 

ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ,  ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.

Continue Reading

Mysore

ಸಾವಿರಾರೂ ಪರಿಸರ ಪ್ರೇಮಿಗಳಿಂದ ಮೌನ ಪ್ರತಿಭಟನೆ

Published

on

ಮೈಸೂರು: ಇಲ್ಲಿನ ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚಿನ ಮರಗಳ ಹನನ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ಮೌನ ಪ್ರತಿಭಟಿಸಲಾಯಿತು.

ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ ವತಿಯಿಂದ ಕರ್ನಾಟಕ ಪೊಲೀಸ್‌ ಅಕಾಡೆಮಿ ಬಳಿ ಮರಗಳು ಹನನ ಗೊಂದ ಸ್ಥಳದಲ್ಲಿ. ಸಾವಿರಾರೂ ಪರಿಸರ ಪ್ರೇಮಿಗಳು ಸೇರಿ ಕಪ್ಪು ಪಟ್ಟಿ ಧರಿಸಿ, ಮೊಂಬತ್ತಿ ಬೆಳಗುವ ಮೂಲಕ ಅಮಾನುಷವಾಗಿ ಕಡಿಯಲ್ಪಟ್ಟ 40 ಮರಗಳಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಗಿಡಗಳನ್ನು ನೆಟ್ಟು ಬೆಳೆಸಬೇಕಾದ ಅರಣ್ಯ ಇಲಾಖೆ 40 ಮರಗಳನ್ನು ಕಡಿಯಲು ಅನುಮತಿ ನೀಡಿದೆ. ಈ ರಸ್ತೆಯ ಅಗಲೀಕರಣವೇ ಅಗತ್ಯವಿಲ್ಲ. ಅನಿವಾರ್ಯವಾಗಿದ್ದರೆ ಲಲಿತ್‌ ಮಹಲ್‌ ಹತ್ತಿರದ ಎಟಿಐ ಮುಂಭಾಗದಲ್ಲಿ ಮಾಡಿರುವಂತೆ ಮರಗಳನ್ನು ಉಳಿಸಿಕೊಂಡು ರಸ್ತೆ ಅಗಲೀಕರಣ ಮಾಡಬಹುದಿತ್ತು ಎಂಬುವುದು ಪರಿಸರ ಪ್ರೇಮಿಗಳ ಒತ್ತಾಯದ ಮಾತಾಗಿದೆ.

Continue Reading

Trending

error: Content is protected !!