Chikmagalur
ಜನಸಂಪರ್ಕ ಸಭೆ: ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಬಗ್ಗೆ ಸಚಿವರ ಭರವಸೆ
ಚಿಕ್ಕಮಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ರಾಜಧಾನಿಗೆ ಬರುವ ಬದಲು ಆಯಾ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಅವೆಲ್ಲಕ್ಕೂ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸಲಾಗುವುದು ಎಂದರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬಳಿಗೆ ಸರ್ಕಾರವೇ ತೆರಳಿ ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸಬೇಕು ಎಂಬ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಸಭೆ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ 4 ರಿಂದ 6 ಬಾರಿ ಜನಸಂಪರ್ಕ ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವ ಕೀರ್ತಿ ನಮ್ಮ ಉಸ್ತುವಾರಿ ಸಚಿವರಿಗೆ ಸಲ್ಲುತ್ತದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ರಾಜ್ಯದಲ್ಲೇ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸುಮಾರು 2,012 ಕೋಟಿ ರೂ. ಈ ಐದು ಗ್ಯಾರಂಟಿ ಯೋಜನೆಗಳಿಗೆ ಈ ಜಿಲ್ಲೆಯಲ್ಲಿ ವಿನಿಯೋಗವಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಅದರಲ್ಲಿ ಒಟ್ಟು ನಾವು ೮೨೯ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವುಗಳಲ್ಲಿ 496 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಆ ಪೈಕಿ ಶೇ.27 ರಷ್ಟು ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮದಲ್ಲೂ ಈ ಜಿಲ್ಲೆಯ 49 ಅರ್ಜಿಗಳು ಸ್ವೀಕೃತಿಯಾಗಿವೆ. ಉಳಿದಂತೆ ಶಾಸಕರುಗಳು ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನತಾ ದರ್ಶನ ಮತ್ತು ಸಮ್ಮೇಳನಗಳನ್ನು ನಡೆಸಿದ್ದಾರೆ. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದ ಒಂದು ವರ್ಷದಲ್ಲಿ ನಮ್ಮ ಜಿಲ್ಲೆಯಲ್ಲಿ 8,92,290 ಅರ್ಜಿಗಳು ಸ್ವೀಕೃತಿಯಾಗಿವೆ. ಸುಮಾರು ಶೇ.10 ರಿಂದ 12 ರಷ್ಟು ಅರ್ಜಿಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಇದಕ್ಕೆ ತಂತ್ರಾಂಶದಲ್ಲಿನ ಸಮಸ್ಯೆಗಳು ಕಾರಣವಾಗಿದೆ. ಅದನ್ನು ಸರಿಪಡಿಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮಲ್ಲಿ 94 ಸಾವಿರ ಪೌತಿ ಖಾತೆಗಳಿದ್ದವು. ಅವುಗಳಲ್ಲಿ ಇದುವರೆಗೆ 22 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಇತ್ಯರ್ಥಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಇದಲ್ಲದೆ ತಂತ್ರಾಂಶಗಳನ್ನು ಸದ್ಭಳಕೆ ಮಾಡಿಕೊಂಡು ಪ್ರತಿಯೊಂದು ಅರ್ಜಿಯನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಲ್ಲಿ ಶೇ.58 ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಅವುಗಳಲ್ಲಿ ಪೋಡಿ ಪ್ರಕರಣಗಳು, ದಾರಿಗೆ ಸಂಬಂಧಿಸಿದ ಅರ್ಜಿಗಳು, ಆರ್ಟಿಸಿ ಸರಿಪಡಿಸುವಿಕೆ ಪ್ರಕರಣಗಳು ಪ್ರಮುಖವಾದವು ಎಂದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ಶಾಸಕ ಜಿ.ಹೆಚ್.ಶ್ರೀನಿವಾಸ್, ಮೆಸ್ಕಾಂ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಹರೀಶ್ ಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
Chikmagalur
‘ಮಾದರಿ ಗ್ರಾಮ’ ಪಿ.ಹೊಸಹಳ್ಳಿಯಲ್ಲಿ 50 ಲಕ್ಷ ವೆಚ್ಚದ ವಿದ್ಯುತ್ ಉನ್ನತೀಕರಣಕ್ಕೆ ಚಾಲನೆ
ಶ್ರೀರಂಗಪಟ್ಟಣ : ತಾಲೂಕಿನ ವ್ಯಾಪ್ತಿಯಲ್ಲಿ ‘ಮಾದರಿ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಿ.ಹೊಸಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ವಿದ್ಯುತ್ ಮೂಲ ಉನ್ನತೀಕರಣಕ್ಕೆ ಚಾಲನೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭೂಮಿಪೂಜೆ ಮೂಲಕ ಚಾಲನೆ ನೀಡಿದರು.
ಗ್ರಾಮವನ್ನು ಉನ್ನತೀಕರಿಸಿ, ಉನ್ನತೀಕರಿಸಿದ ಗ್ರಾಮವನ್ನಾಗಿಸಲು ಈ ಗ್ರಾಮದ ಜೊತೆಗೆ ಐದು ಗ್ರಾಮಗಳ ಮೂಲಭೂತ ಸೌಲಭ್ಯಗಳನ್ನು ಉನ್ನತೀಕರಿಸುತ್ತಿರುವುದಾಗಿ ಅವರು ತಿಳಿಸಿದರು.

ಪ್ರತೀ ಗ್ರಾಮಗಳಿಗೆ ತಲಾ 50 ಲಕ್ಷ ರೂ.ಗಳಂತೆ ತುರ್ತಾಗಿ ಅವಶ್ಯಕತೆಯಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಈ ಯೋಜನೆಯಲ್ಲಿ ಶಿಥಿಲವಾಗಿರುವ ಶಿಥಿಲವಾಗಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವುದು, ಅಗತ್ಯವಿರುವ ಕಡೆಗೆ ಹೊಸ ಕಂಬಗಳನ್ನು ಹಾಗೂ ಪರಿವರ್ತಕಗಳನ್ನು ಅಳವಡಿಸಲು, ವೋಲ್ಟೇಜ್ ಗುಣಮಟ್ಟವನ್ನು ಹೆಚ್ಚಿಸುವುದು, ವಿದ್ಯುತ್ ಅಡಚಣೆಯನ್ನು ಆದಷ್ಟು ಕನಿಷ್ಠ ಮಟ್ಟಕ್ಕೆ ಇಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಜೊತೆಗೆ ಶ್ರೀರಂಗಪಟ್ಟಣ ವ್ಯಾಪ್ತಿಯ ರೈತರಿಗೆ ಉತ್ಕ್ರುಷ್ಟ ಗುಣಮಟ್ಟದ ಹಾಗೂ ಅಡಚಣೆ ರಹಿತ 3 – ಫೇಸ್ ವಿದ್ಯುತ್ ಸರಬರಾಜು ನೀಡಲು ಅನುಕೂಲವಾಗುವಂತೆ ಒಟ್ಟು 55 ಕೋಟಿ ವೆಚ್ಚದಲ್ಲಿ ತಲಾ 2 ಪಂಪ್ ಸೆಟ್ ಗಳಿಗೆ ಪ್ರತ್ಯೇಕ 25kva ಅಳವಡಿಸುವ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.
ಈ ವೇಳೆ ಚೆಸ್ಕಾಂ ಎಇಇ ಮಂಜುನಾಥ ಪ್ರಸಾದ್, ಗುತ್ತಿಗೆದಾರ ಐ ಕಾಂ ಇನ್ಫ್ರಾ ಪ್ರೈ ಲಿ. ನ ಅರುಣ್ ಕುಮಾರ್, ಗ್ರಾ.ಪಂ.ಅಧ್ಯಕ್ಷ ಚಲುಚರಾಜು, ಪಿಡಿಓ ಶಶಿಕಲಾ, ಸದಸ್ಯ ಸಾಗರ್, ಮುಖಂಡರಾದ ಪುಟ್ಟರಾಮಣ್ಣ, ಕೃಷ್ಣಮೂರ್ತಿ ಸೇರಿದಂತೆ ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
Chikmagalur
ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
ಚಿಕ್ಕಮಗಳೂರು : ಜಿಲ್ಲೆ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ಕಳೆದ ರಾತ್ರಿ ಹತ್ಯೆ ಮಾಡಲಾಗಿದೆ.
ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಂಜಯ್ ದಾಖಲಾಗಿದ್ದು, ಮಿಧುನ್ ವರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ನಲರಾಯಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ದತ್ತ ಜಯಂತಿ ಮುಗಿದ ಹಿನ್ನೆಲೆ ಸಖರಾಯಪಟ್ಟಣ ಬಸ್ ನಿಲ್ದಾಣ ಬಳಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮ್ಮೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ದುಷ್ಕರ್ಮಿಗಳು ಗಣೇಶ್ ಗೌಡ ಎಂಬುವವರನ್ನು ಹತ್ಯೆ ಮಾಡಿದ್ದಾರೆ.
ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಒಬ್ಬರು ಜಿಲ್ಲಾಪತ್ರೆಗೆ ದಾಖಲಾಗಿದ್ದಾರೆ.
Chikmagalur
ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ನೋಟ್ ಪುಸ್ತಕ ವಿತರಣೆ, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ: ಮಧು ಬಂಗಾರಪ್ಪ
ಚಿಕ್ಕಮಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಒಂದನೇ ತರಗತಿಯಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ನೋಟು ಪುಸ್ತಕ ಹಾಗೂ ಪಠ್ಯ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕೊಪ್ಪ ತಾಲೂಕು ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಈಗಾಗಲೇ ಶೂಗಳು, ಸಾಕ್ಸ್ಗಳು ಮತ್ತು ಸಮವಸ್ತ್ರ ನೀಡುವುದರ ಜೊತೆಗೆ ಪಠ್ಯಪುಸ್ತಕ ಹಾಗೂ ನೋಟ್ ಪುಸ್ತಕಗಳನ್ನು ಸಹ ನೀಡಲಾಗುತ್ತದೆ ಎಂದರು.
8ನೇ ತರಗತಿಯವರೆಗಿನ ಮಕ್ಕಳಿಗೆ ಒಂದು ಮೊಟ್ಟೆ ಮಾತ್ರ ವಿತರಿಸಲಾಗುತ್ತಿತ್ತು. ಅದನ್ನು ನಮ್ಮ ಸರ್ಕಾರ 10ನೇ ತರಗತಿಯವರೆಗೆ ವಿಸ್ತರಿಸಿದೆ. ಬಡ ಮಕ್ಕಳ ಅಪೌಷ್ಟಿಕತೆ ನೀಗಿಸುವ ಸಲುವಾಗಿ ಬೆಳಿಗ್ಗೆ ಹಾಲು ಹಾಗೂ ರಾಗಿ ಮಾಲ್ಟ್ ಜೊತೆಗೆ ವಾರವಿಡೀ ಮೊಟ್ಟೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಬಡತನಕ್ಕೆ ಸ್ಪಂದಿಸಿ ಕಾರ್ಯ ನಿರ್ವಹಿಸುವುದೇ ಸರ್ಕಾರದ ಕೆಲಸ. ಈ ನಿಟ್ಟಿನಲ್ಲಿ 57 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗುವಂತೆ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೆಯೇ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಆಡಿದ ಮಾತು ಉಳಿಸಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 11 ತಿಂಗಳಲ್ಲಿ 13 ಸಾವಿರ ಶಿಕ್ಷಕರ ನೇಮಕ ಮಾಡಲಾಗಿದೆ. ಇದೇ ಡಿಸೆಂಬರ್.7 ರಂದು ಟಿಇಟಿ ಪರೀಕ್ಷೆ ನಡೆಯಲಿದ್ದು, ಮತ್ತೆ 12 ಸಾವಿರ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಈ ಶೈಕ್ಷಣಿಕ ವರ್ಷ ಆರಂಭವಾದ ಸಂದರ್ಭದಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಕಾರ್ಯ ನಡೆದಿದೆ ಎಂದರು.
ಹಿಂದೆ ಎಸ್ಎಸ್ಎಲ್ಸಿಯ ಪರೀಕ್ಷಾ ಕ್ರಮದಲ್ಲಿ ಬದಲಾವಣೆ ತರಲಾಗಿದ್ದು, ಕಳೆದ ವರ್ಷ ಎರಡು ಮತ್ತು ಮೂರನೇ ಪರೀಕ್ಷೆ ನಡೆಸಿ ಅದರಲ್ಲಿ ಸುಮಾರು 1,16,000 ಮಕ್ಕಳು ಉತ್ತೀರ್ಣರಾಗಿ ಇವತ್ತು ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದಾರೆ. 2024 ರಲ್ಲಿ ಇಬ್ಬರು ಮಾತ್ರ 625ಕ್ಕೆ 625ಅಂಕ ಪಡೆದಿದ್ದರು. ಆದರೆ ಈ ಬಾರಿ ಈ ಸಂಖ್ಯೆ ೫೧ಕ್ಕೆ ಏರಿದೆ. ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದರಿಂದ ಇದು ಸಾಧ್ಯವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಒಂದು ಗ್ರಾ.ಪಂ. ವ್ಯಾಪ್ತಿಗೆ ಒಂದರಂತೆ ಇಡೀ ರಾಜ್ಯಕ್ಕೆ 6 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಸ್ಥಾಪಿಸಬೇಕೆಂಬ ಉದ್ದೇಶ ಸರ್ಕಾರದ್ದು. ಜೊತೆಗೆ ಆ ಶಾಲೆಗಳ ವಿದ್ಯಾರ್ಥಿಗಳಿಗೆ ಎಲ್ಕೆಜಿಯಿಂದ 12ನೇ ತರಗತಿಯವರೆಗೆ ಉಚಿತ ಬಸ್ ವ್ಯವಸ್ಥೆಯೂ ಲಭ್ಯವಿರುತ್ತದೆ ಎಂದು ತಿಳಿಸಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಾತನಾಡಿ, ಸುಮಾರು 45 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಗ್ರಾ.ಪಂ.ಯ ಕಟ್ಟಡ, ಸುಮಾರು 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿದ ಅಂಗನವಾಡಿ ಕಟ್ಟಡ, 82 ಲಕ್ಷ ರೂ.ಗಳ ವೆಚ್ಚದಲ್ಲಿ ಐದು ಶಾಲಾ ಕೊಠಡಿಗಳನ್ನು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದ್ದಾರೆ. ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆಮೂಲಾಗ್ರ ಬದಲಾವಣೆ ತಂದಿದ್ದಾರೆ. ಇಂದು ಖಾಸಗಿ ಉದ್ಯಮಿಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಲು ಮಂದೆ ಬರಲು ಸಿದ್ಧರಿದ್ದಾರೆ. ಅದರಲ್ಲೂ ಅಜೀಂ ಪ್ರೇಮ್ಜಿ ಫೌಂಡೇಶನ್ನ ಸಹಯೋಗದಲ್ಲಿ ಸುಮಾರು 1560 ಕೋಟಿ ರೂ.ಗಳ ಆರ್ಥಿಕ ನೆರವು ತಂದಿದ್ದು, ವಾರದಲ್ಲಿ ಆರು ದಿನಗಳ ಕಾಲ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ರಾಗಿ ಮಾಲ್ಟ್ ನೀಡುವ ಯೋಜನೆ ರೂಪಿಸಲಾಗಿದೆ. ಇದು ಸಚಿವರಾದ ಮಧು ಬಂಗಾರಪ್ಪ ಅವರ ಪ್ರಯತ್ನದಿಂದ ಆಗಿದೆ ಎಂದರು.
ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ, ಕರ್ಕೇಶ್ವರ ಗ್ರಾ,ಪಂ. ಅಧ್ಯಕ್ಷ ರಾಜೇಶ್ ಕೇಶವತ್ತಿ, ಉಪಾಧ್ಯಕ್ಷೆ ಆಶಾಲತ, ಎಸ್ಡಿಎಂಸಿ ಅಧ್ಯಕ್ಷೆ ಮಮತ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮರಾಜು, ಗ್ರಾ.ಪಂ.ಸದಸ್ಯರುಗಳು ಮತ್ತಿತರರು ಕಾರ್ಯಕ್ರಮದಲ್ಲಿದ್ದರು.
-
State9 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan6 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
State22 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Mysore23 hours agoನಾಳೆಯಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಉಚಿತ ಥೈರಾಯ್ಡ್ ತಪಾಸಣೆ
-
National22 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Chikmagalur12 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan9 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Politics22 hours agoಡಿಕೆ ಬ್ರದರ್ಸ್ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು
