Hassan
ಎಲ್ಲರ ಹಿತ ಕಾಯುವ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಜೆಡಿಎಸ್ ಮುಖಂಡರು-ಕಾರ್ಯಕರ್ತರಿಗೆ ಪುಷ್ಪಾ ಅಮರನಾಥ್ ಬಹಿರಂಗ ಆಹ್ವಾನ

ಹಾಸನ: ಹಾಸನ ಜಿಲ್ಲೆಯಲ್ಲಿ ಕುಟುಂಬದೊಳಗೆ ಅಧಿಕಾರಿ ಹಂಚಿಕೆಯಾಗುತ್ತಿದ್ದು, ಬೇರೆ ಯಾರಿಗೂ ಬೆಲೆಯೇ ಇಲ್ಲದಂತಾಗಿದೆ. ಎಲ್ಲರ ಹಿತ ಕಾಯುವ ನಮ್ಮ ಪಕ್ಷಕ್ಕೆ ಬನ್ನಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಬಹಿರಂಗ ಆಹ್ವಾನ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟ ದೇಶದಲ್ಲಿ ಬದಲಾವಣೆ ತರುವ ಗಾಳಿ ಬೀಸಿದ್ದು, ದೇಶದ ಜನರ ಭಾವನೆಗಳೊಂದಿಗೆ ಚೆಲ್ಲಾಟ ಆಡುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಇಂಡಿಯಾ ಒಕ್ಕೂಟ ಮೇಲುಗೈ ಸಾಧಿಸಲಿದೆ. ಹಾಸನದಲ್ಲೂ ಬದಲಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಾತ್ಯಾತೀತ ಜನತಾದಳ ಎಂದು ಹೆಸರಿಟ್ಟುಕೊಂಡು ಆ ಪದಕ್ಕೆ ವಿರುದ್ಧವಾಗಿ ಜೆಡಿಎಸ್ ಪಕ್ಷ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದ ಪುಷ್ಪಾ ಅವರು, ಜಾತ್ಯಾತೀತವಾದ ನಿಲುವು ಕಳೆದುಕೊಳ್ಳುತ್ತಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಅಳಿವಿನಂಚಿಗೆ ಹೋಗಲಿದೆ. ಈಗಾಗಲೇ ಹೋಗಿದೆ ಎಂದು ಲೇವಡಿ ಮಾಡಿದರು. ಹಾಸನದಲ್ಲಿ ಕುಟುಂಬದೊಳಗೇ ಅಧಿಕಾರ ಹಂಚಿಕೆಯಾಗಿದೆಯೇ ಹೊರತು ಮುಖಂಡರು ಹಾಗೂ ಕಾರ್ಯಕರ್ತರಿಗೆ ಇಲ್ಲಿ ಯಾವುದೇ ಬೆಲೆ ಇಲ್ಲದಂತಾಗಿದೆ. ಹಾಗಾಗಿ ಎಲ್ಲರ ಹಿತ ಕಾಯುವ ನಮ್ಮ ಪಕ್ಷಕ್ಕೆ ಬನ್ನಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬಹಿರಂಗ ಆಹ್ವಾನ ನೀಡಿದರು. ಹಾಲಿ ಸಂಸದ, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಅಭಿವೃದ್ಧಿ ಕೆಲಸ ಮನವಿ ಮಾಡಿದರು. ಮಾಡದೆ ಕ್ಷೇತ್ರದ ಜನರಿಗೆ ಅನ್ಯಾಯ ಮಾಡಿದ್ದಾರೆ. ಆರಂಭದಲ್ಲಿ ಅವರು ನುಡಿದಂತೆ ನಡೆದಿಲ್ಲ. ಅವರಿಗೆ ಪ್ರೀತಿ ಹಾಗೂ ಮತ ಕೊಟ್ಟ ಜನತೆಗೆ ಪ್ರಜ್ವಲ್ ಕೊಡುಗೆ ಏನು ಎಂದು ಪ್ರಶ್ನಿಸಿದರು. ಜಿಲ್ಲೆಯಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿಗೆ ಜನತೆ ನಲುಗುತ್ತಿದ್ದಾರೆ. ಹಾಸನ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕುಂಟುತ್ತಾ ಸಾಗುತ್ತಿದೆ. ಇದಕ್ಕೆಲ್ಲಾ ಹಾಲಿ ಸಂಸದರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಜಿಲ್ಲೆಯ ಅಭಿವೃದ್ಧಿ ಜೊತೆಗೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡು ಹಿಡಿಯುವ ಕೆಲಸ ಮಾಡಲಿದೆ. ಹಾಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಹೆಚ್ಚು ಬಹುಮತದಿಂದ ಗೆಲ್ಲಿಸಬೇಕು ಎಂದು ಕೋರಿದರು.
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪತ್ನಿ ಅಕ್ಷತಾ ಅವರು ಮಾತನಾಡಿ, ನಾನು ಶ್ರೇಯಸ್ ಪಟೇಲ್ ಅವರ ಮದುವೆ ಆದ ದಿನದಿಂದಲೂ ಅವರ ಸ್ವಭಾವ ನನಗೆ ಇಷ್ಟವಾಗಿದೆ. ಪತಿ ಒಳ್ಳೆಯ ವ್ಯಕ್ತಿ. ಮಹಿಳೆಯರಿಗೆ ಗೌರವ ಕೊಡುತ್ತಾರೆ, ಜನರ ಬವಣಿಕೆ ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಮತ್ತೊಬ್ಬರ ಕಷ್ಟ ಸುಖಕ್ಕೆ ಸ್ಪಂದಿಸುತ್ತಾರೆ. ಅವರಿಗೆ ಜನ ಸೇವೆ ಮಾಡುವ ಬಯಕೆ ಇದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಈ ಬಾರಿ ಬೆಂಬಲಿಸಿ, ಗೆಲ್ಲಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತಾರಾ ಚಂದನ್, ಹೊಳೆನರಸೀಪುರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶೃತಿ, ರತ್ನಮ್ಮ ಇತರರು ಉಪಸ್ಥಿತರಿದ್ದರು.
Hassan
ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ

ವರದಿ: ಸತೀಶ್ ಚಿಕ್ಕಕಣಗಾಲು
ಆಲೂರು: ತಾಲ್ಲೂಕಿನ ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಎಲ್ಲಾ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕುಮಾರ್ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಸಾಮಾನ್ಯ ಕ್ಷೇತ್ರದಿಂದ ಕೆ.ಕೆ. ಜಯರಾಮ, ಹೆಚ್.ಎಂ. ನಾರಾಯಣ, ಕೆ.ಟಿ. ಬೋರೇಗೌಡ, ಸುಬ್ಬೇಗೌಡ, ವೆಂಕಟೇಗೌಡ, ಮಹಿಳಾ ಕ್ಷೇತ್ರದಿಂದ ಶಕುಂತಲ, ಪ್ರತಿಮ, ನಂಜಶೆಟ್ಟಿ (ಹಿಂದುಳಿದ ವರ್ಗ ಎ), ಕೆ. ಜಗದೀಶ್ (ಹಿಂದುಳಿದ ವರ್ಗ ಬಿ), ರಂಗಸ್ವಾಮಿ (ಪ.ಜಾ.) ಹಾಗು ಪರಿಶಿಷ್ಟ ಪಂಗಡದ ಒಂದು ಸ್ಥಾನಕ್ಕೆ ಯಾರೂ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಸ್ಥಾನ ಖಾಲಿಯಿದೆ. ಸಾಲಗಾರರಲ್ಲದ ಕ್ಷೇತ್ರದಿಂದ ಕೆ.ಸಿ. ಸಂತೋಷ್ ಅವರು ಆಯ್ಕೆಯಾದರು. 2030ರ ಫೆ. 9ರ ವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ.
ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಕುಮಾರಸ್ವಾಮಿ, ನಂಜೇಶ್ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಹಾಜರಿದ್ದರು.
Hassan
ಫೆ.11 ರಿಂದ 13 ವರೆಗೆ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ

ಬೇಲೂರು: ಬೇಲೂರಿನ ಚನ್ನಾಪುರ ರಸ್ತೆಯಲ್ಲಿರುವ ಕೋವಿಪೇಟೆಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ ಫೆ. 11 ರಿಂದ ಫೆ.13ರ ವರೆಗೂ ನಡೆಯಲಿದೆ, ಪ್ರತಿಯೊಬ್ಬ ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇಗುಲದ ಪ್ರಧಾನ ಅರ್ಚಕ ರವಿಸ್ವಾಮಿ ತಿಳಿಸಿದ್ದಾರೆ.
ಜಾತ್ರಾ ಮಹೋತ್ಸವ ನಿಮಿತ್ತ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಫೆ.11 ಮಂಗಳವಾರ ಸಂಜೆ 6.00 ಗಂಟೆಗೆ ಗಂಗಪೂಜೆ ಮತ್ತು ಕಳಸ ಸ್ಥಾಪನೆ, ಪಂಚಾಮೃತ, ಅಭಿಷೇಕ, ಗಣ ಹೋಮ, ನವಗ್ರಹ ಹೋಮ ಚಂಡಿ ಹೋಮ, ದುರ್ಗಾ ಹೋಮ, ಜಯಾವಿ ಹೋಮಗಳು ನಡೆಯುತ್ತದೆ.
ಫೆ.12 ರ ಬುಧವಾರ ಬೆಳಗ್ಗೆ 8.00 ಗಂಟೆಗೆ 12.30 ವರೆಗೂ ಬೇಲೂರಿನ ವಿಷ್ಣು ಸಮುದ್ರದಲ್ಲಿ (ಅಷ್ಟಮ್ಮನಕೆರೆ) “ಗಂಗಾ ಪೂಜೆ’ ನಂತರ ನಗರದ ಪ್ರಮುಖ ಬೀದಿಗಳಲ್ಲಿ ವೀರಗಾಸೆ ಕುಣಿತ, ಡೊಳ್ಳು ಕುಣಿತ, ನಂದಿ ಧ್ವಜ ಮತ್ತು ಚೌಡಿಕೆ ಪದಗಳೊಂದಿಗೆ ಹಲವು ವಾದ್ಯ ಗೋಷ್ಠಿಯೊಂದಿಗೆ 101 ಕುಂಭಾಷೇಕಗಳೊಂದಿಗೆ ಪ್ರಷಾಲಂಕಾರಗೊಂಡ ಶ್ರೀ ರೇಣುಕಾ ಅಮ್ಮನವರ ಪಲ್ಲಕ್ಕಿ ಮೆರವಣಿಗೆ ಮತ್ತು ಬೆಳಗ್ಗೆ 11.30 ಕ್ಕೆ “ಶ್ರೀ ರೇಣುಕಾ ಯಲ್ಲಮ್ಮನವರ ಕೆಂಡೋತ್ಸವ” ನಡೆಯುತ್ತದೆ. ನಂತರ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ಇರುತ್ತದೆ. “ಮದ್ಯಾಹ್ನ 1-00 ಗಂಟೆಗೆ ಅನ್ನ ಸಂತರ್ಪಣೆ” ನಡೆಯುತ್ತದೆ.
ಫೆ.13 ರ ಬೆಳಿಗ್ಗೆ 8.00 ರಿಂದ ಶ್ರೀ ಹುಚ್ಚಂಗಿ ಅಮ್ಮನವರ ಜಾತ್ರಾ ಮಹೋತ್ಸವ ಉತ್ಸವ” ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ದೇವಿಗೆ ಹರಕೆ ಸೇವೆ ಇರುತ್ತದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ ತನು, ಮನ, ಧನ ಸಹಾಯದೊಂದಿಗೆ ಸಹಕರಿಸಿ ಶ್ರೀ ದೇವಿಯವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Hassan
ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ ಕಂಪನಿಗೆ ಒಂದು ಲಕ್ಷ ರೂ. ದಂಡ

ಚಾಮರಾಜನಗರ, ಫೆ.06:- ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ್ದ ತಮಿಳುನಾಡಿನ ಕಂಪನಿಯೊಂದಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ನ್ಯಾಯನಿರ್ಣಾಯಕ ಅಧಿಕಾರಿ ಗೀತ ಹುಡೇದ ಅವರು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಹನೂರು ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿರುವ ಶ್ರೀ ಮಹದೇಶ್ವರ ಸ್ಟೋರ್ ಗೆ ಕಳೆದ 2024ರ ಜುಲೈ 29ರಂದು ಕೊಳ್ಳೇಗಾಲ ತಾಲ್ಲೂಕಿನ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಂಗಡಿಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವಿ.ಕೆ.ಎಸ್.ಟ್ರೂ ಸಾಲ್ಟ್ (VKS TRUE SALT) ಎಂಬ ಹೆಸರಿನ ಉಪ್ಪಿನ ಆಹಾರ ಮಾದರಿಯನ್ನು ಸಂಗ್ರಹಿಸಿ ಮೈಸೂರಿನ ವಿಭಾಗೀಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.
ಸದರಿ ಉಪ್ಪಿನ ಮಾದರಿಯು ವಿಶ್ಲೇಷಣಾ ವರದಿಯಿಂದ ಕಳಪೆ ಗುಣಮಟ್ಟ (ಸಬ್ ಸ್ಟ್ಯಾಂಡರ್ಡ್) ಎಂದು ದೃಡಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಮೊಕದ್ದಮೆ ಹೂಡಲಾಗಿತ್ತು.
ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಾಯಕ ಅಧಿಕಾರಿಗಳಾದ ಗೀತಾ ಹುಡೇದ ಅವರು ಪ್ರಕರಣದ ವಿಚಾರಣೆ ನಡೆಸಿ ತಯಾರಕರಾದ ತಮಿಳುನಾಡಿನ ತೂತುಕುಡಿಯ ವಿ.ಕೆ.ಎಸ್. ಪುಡ್ ಪ್ರಾಡಕ್ಟ್ಸ್ ಕಂಪನಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮ ನಿಬಂಧನೆ 2011ರ ರಿತ್ಯಾ ಸೆಕ್ಷನ್ 51 ರಡಿಯಲ್ಲಿ ಒಂದು ಲಕ್ಷ ರೂ. ದಂಡ ವಿಧಿಸಿ ಫೆಬ್ರವರಿ 3 ರಂದು ಆದೇಶಿಸಿದ್ದಾರೆ.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ