Politics
ಸಿಎಂ ಸಿದ್ದರಾಮಯ್ಯರವರ ಮತಾಂತರ ಹೇಳಿಕೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸನಾತನ ಹಿಂದೂ ಧರ್ಮವನ್ನ, ಹಿಂದೂಗಳನ್ನು ಅವಹೇಳನ ಮಾಡುವ ನಿಮ್ಮ ಎಡಪಂಥೀಯ ಕನ್ನಡಕವನ್ನು ಒಮ್ಮೆ ಪಕ್ಕಕ್ಕಿಟ್ಟು ವಸ್ತುನಿಷ್ಠವಾಗಿ ಯೋಚನೆ ಮಾಡಿ. ನಿಮ್ಮ ಅಕ್ಕಪಕ್ಕದಲ್ಲಿರುವ ಎಡಪಂಥೀಯ ಬುದ್ಧಿಜೀವಿಗಳ ತಾಳಕ್ಕೆ ಕುಣಿಯದೆ, ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸಮಾನತೆಯ ವಿಚಾರದಲ್ಲಿ ಹಿಂದೂ ಧರ್ಮವನ್ನು ಗುರಿಯಾಗಿಸಿ ಮಾತನಾಡುತ್ತೀರಲ್ಲ ಸಿಎಂ ಸಿದ್ದರಾಮಯ್ಯ ಅವರೇ, ಸಮಾನತೆಯ ಬಗ್ಗೆ ಮುಸ್ಲಿಮರನ್ನು ಪ್ರಶ್ನಿಸುವ ಧೈರ್ಯ ಇದೆಯಾ? ಇಸ್ಲಾಂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ, ಇಸ್ಲಾಂ ಶಾಂತಿ ಪ್ರಿಯ ಮತವಾಗಿದ್ದರೆ, ಮುಸ್ಲಿಮರಲ್ಲಿ ಭ್ರಾತೃತ್ವದ ಭಾವನೆ ಇದ್ದಿದ್ದರೆ ಪಹಲ್ಗಾಮ್ ನಲ್ಲಿ ಉಗ್ರವಾದಿಗಳು ಪ್ರವಾಸಿಗರ ಹೆಸರು ಕೇಳಿ, ಹೆಣ್ಣು ಮಕ್ಕಳ ಹಣೆಯಲ್ಲಿ ಕುಂಕುಮ ನೋಡಿ, ಕಲ್ಮಾ ಪಠಣೆ ಮಾಡಲು ಹೇಳಿ, ಹಿಂದುಗಳನ್ನು ಮಾತ್ರ ಯಾಕೆ ಕೊಲ್ಲುತ್ತಿದ್ದರು, ಎಂದು ಕೇಳುವ ಧೈರ್ಯ ಇದೆಯಾ ? ಇಸ್ಲಾಂ ಮತದಲ್ಲಿ ಸಮಾನತೆ ಇದ್ದಿದ್ದರೆ ಮಹಿಳೆಯರಿಗೆ ಯಾಕೆ ಮಸೀದಿಗೆ ಪ್ರವೇಶವಿಲ್ಲ, ಎಂದು ಕೇಳುವ ಧೈರ್ಯ ಇದೆಯಾ? ಎಂದು ಪ್ರಶ್ನಿಸಿದರು.
ಇಸ್ಲಾಂ ಮತದಲ್ಲಿ ಸಮಾನತೆ ಇದ್ದಿದ್ದರೆ, ತ್ರಿವಳಿ ತಲಾಖ್ ನಿಷೇಧ ಮಾಡಲು ವಿರೋಧವೇಕೆ ಎಂದು ಮುಸ್ಲಿಂ ಮುಖಂಡರನ್ನು ಕೇಳುವ ಧೈರ್ಯ ಇದೆಯಾ? ಇಸ್ಲಾಂ ಮತದಲ್ಲಿ ಸಮಾನತೆ ಇದ್ದಿದ್ದರೆ, ಖುರಾನ್ ನಲ್ಲಿ ಹಿಂದೂಗಳು ಸೇರಿದಂತೆ ಮುಸ್ಲಿಮೇತರರನ್ನು ಕಾಫಿರರು ಅಂತ ಯಾಕೆ ಕರೆಯುತ್ತಾರೆ ಎಂದು ಕೇಳುವ ಧೈರ್ಯ ಇದೆಯಾ ? ಎಂದು ಕಿಡಿಕಾರಿದರು.
ಹೌದು ಹಿಂದೂ ಸಮಾಜದಲ್ಲಿ ಜಾತಿ ಪದ್ಧತಿ ಎಂಬ ಪಿಡುಗು ಇರುವುದು ವಾಸ್ತವ. ಹಿಂದೂ ಸಮಾಜದಲ್ಲಿ ಇರುವ ಲೋಪದೋಷಗಳನ್ನು ತಿದ್ದಲು, ಕಾಲಕ್ಕೆ ತಕ್ಕಂತೆ ಬದಲಾಗಲು ಅನೇಕ ಯುಗ ಪುರುಷರು ಜನ್ಮ ತಾಳಿದ್ದಾರೆ. ತನ್ನನ್ನು ತಾನು ತಿದ್ದುಕೊಳ್ಳುವ, ಪರಿವರ್ತನೆ ಆಗುವ ಶಕ್ತಿ ಹಿಂದೂ ಸಮಾಜಕ್ಕೆ ಇದೆ. ಬಸವಣ್ಣನವರಿಂದ ಹಿಡಿದು ಸ್ವಾಮಿ ವಿವೇಕಾನಂದರವರೆಗೆ, ಡಾ.ಬಿ.ಆರ್.ಅಂಬೇಡ್ಕರ್ ಅವರಿಂದ ಹಿಡಿದು ಇಲ್ಲಿಯವರೆಗೆ ಅನೇಕರು ಹಿಂದೂ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ, ಮಾಡುತ್ತಲೂ ಇದ್ದಾರೆ ಎಂದು ಹೇಳಿದ್ದಾರೆ.
ಆದರೆ ಇಸ್ಲಾಂ ಮತದಲ್ಲಿ ಬೇರೂರಿರುವ ಮೂಲಭೂತವಾದವನ್ನು, ಜಿಹಾದಿ ಮಾನಸಿಕತೆಯನ್ನು ಪ್ರಶ್ನಿಸುವ, ತಿದ್ದುವ ಯಾವ ಪರಿವರ್ತಕನೂ ಹುಟ್ಟಿಲ್ಲ, ಹುಟ್ಟಿದರೂ ಅಂತಹ ಪರಿವರ್ತನೆಯನ್ನು ಮುಸ್ಲಿಮರು ಒಪ್ಪುವುದೂ ಇಲ್ಲ. ಅದಕ್ಕೆ ಮುಸ್ಲಿಮರಿಗೆ ಔರಂಗಜೇಬ್, ಟಿಪ್ಪು ಸುಲ್ತಾನನಂತಹ ಮತಾಂಧರೇ ಸದಾ ಮಾದರಿಯಾಗುತ್ತಾರೆಯೇ ಹೊರತು ಸಂತ ಶಿಶುನಾಳ ಶರೀಫರು, ಡಾ.ಅಬ್ದುಲ್ ಕಲಾಂ ಅಂತಹವರು ಮಾದರಿ ಆಗುವುದೇ ಇಲ್ಲ. ಸನಾತನ ಹಿಂದೂ ಧರ್ಮವನ್ನ, ಹಿಂದೂಗಳನ್ನು ಅವಹೇಳನ ಮಾಡುವ ನಿಮ್ಮ ಎಡಪಂಥೀಯ ಕನ್ನಡಕವನ್ನು ಒಮ್ಮೆ ಪಕ್ಕಕ್ಕಿಟ್ಟು ವಸ್ತುನಿಷ್ಠವಾಗಿ ಯೋಚನೆ ಮಾಡಿ. ನಿಮ್ಮ ಅಕ್ಕಪಕ್ಕದಲ್ಲಿರುವ ಎಡಪಂಥೀಯ ಬುದ್ಧಿಜೀವಿಗಳ ತಾಳಕ್ಕೆ ಕುಣಿಯದೆ, ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ತಿಳಿಸಿದ್ದಾರೆ.
Politics
ಮದ್ದೂರು ಕಲ್ಲು ತೂರಾಟ ಪ್ರಕರಣ|ಬಿಜೆಪಿ ಸತ್ಯಶೋಧನಾ ತಂಡ ರಚನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮದ್ದೂರು ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ರಾವ್ ನೇತೃತ್ವದಲ್ಲಿ ಸತ್ಯಶೋಧನಾ ತಂಡ ರಚನೆ ಮಾಡಿದ್ದು, ಘಟನೆ ನಡೆದ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಬಳಿಕ ವರದಿ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆದಿದೆ. ನಿಜಾಮರ ಆಡಳಿತವನ್ನು ನಿನ್ನೆ ಪ್ರಕರಣ ನೆನೆಪು ಮಾಡಿದೆ ಎಂದು ವ್ಯಂಗ್ಯ ಮಾಡಿದರು.
ಸಿಎಂ ಮತ್ತು ಗೃಹ ಸಚಿವರು ತಮ್ಮ ಧೋರಣೆಯನ್ನು ಸರಿಪಡಿಸಿಕೊಳ್ಳದಿದ್ದರೆ ರಾಕ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹಾಳಾಗುತ್ತದೆ. ಅದಕ್ಕ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ಗಣೇಶ ಮೆರವಣಿಗೆಯಲ್ಲಿ ಕೇಸರಿ ಶಾಲು ಹಾಕಿ ವರ್ತಿಸಿದ ಪಿಎಸ್ಐ ಒಬ್ಬರನ್ನು ಅಮಾನತು ಮಾಡಿರುವ ಮಾಹಿತಿ ಇದೆ. ನಾನೇನು ಪಾಕಿಸ್ತಾನದಲ್ಲಿ ಇದ್ದೇವಾ? ಎಂದು ಪ್ರಶ್ನಿಸಿದರು.
ನಮ್ಮ ರಾಜ್ಯದಲ್ಲಿ ಇವತ್ತು ಏನಾಗುತ್ತಿದೆ? ದಿನನಿತ್ಯ ಯಾವ ರೀತಿ ಪರಿಸ್ಥಿತಿ ಹದಗೆಡುತ್ತಿದೆ? ಕಾನೂನು ಸುವ್ಯವಸ್ಥೆ ಮುರಿದುಬಿದ್ದಿದೆ. ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ಇಂಥ ದುರ್ಬುದ್ಧಿ ಬಂದಿದೆ? ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಏನು ಅನ್ಯಾಯ ಮಾಡಿದ್ದಾರೆ ಎಂದು ರಾಜ್ಯದ ಅಸಂಖ್ಯಾತ ಹಿಂದೂ ಕಾರ್ಯಕರ್ತರು ಸಿಎಂ ಅವರನ್ನು ಪ್ರಶ್ನಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಸುತ್ತ ಅಯೋಗ್ಯರನ್ನೇ ಇಟ್ಟುಕೊಂಡಂತಿದೆ ಎಂದು ವಾಗ್ದಾಳಿ ನಡೆಸಿದರು.
ಹಿಂದೂಗಳ ಮೇಲೆ ಕಲ್ಲೆಸೆತ, ಹಲ್ಲೆ ನಡೆಯುತ್ತಿದೆ. ಗಣಪತಿ ಮಹೋತ್ಸವವನ್ನೂ ಹಿಂದೂಗಳು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವು ಕಳೆದ ಎರಡೂವರೆ ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದೆ ಎಂದು ಟೀಕಿಸಿದರು.
Politics
ಭಾರತವನ್ನು ಮುನ್ನಡೆಸುವುದಕ್ಕೆ ಪ್ರಧಾನಿ ಮೋದಿ ಅವರಿಂದ ಸಾಧ್ಯ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಪ್ರಧಾನಿ ಮೋದಿ ಅವರಿಂದ ಮಾತ್ರ ಭಾರತವನ್ನು ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಸಾರ್ವಜನಿಕರು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ ಜನತೆ ಕಾಂಗ್ರೆಸ್ ಪಕ್ಷದ ಬಗ್ಗೆ ಏಕೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕು ಅಥವಾ ಚಿಂತನೇ ಮಾಡಬೇಕೆ ವಿನಾಃ ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಜೀ ಅವರಿಂದ ಮಾತ್ರ ಭಾರತವನ್ನ ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಜನ ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದೆ ಪ್ರಸ್ತುತ ಇವಿಎಂ ಮೇಲೆ ದೂರುವುದು ಮತ್ತು ದೋಷಪೂರಿತ ಎಂದು ಕಾಂಗ್ರೆಸ್ ಹೇಳುತ್ತಿರುವುದು ಹುಚ್ಚುತನದ ಪರಮಾವಧಿ ಎಂದು ಲೇವಡಿ ಮಾಡಿದರು.
ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರಿಗೆ ಇವಿಎಂ ಮೇಲೆ ಏಕೆ ವಿಶ್ವಾಸ ಕಡಿಮೆ ಆಗಿದೆ? ರಾಹುಲ್ ಗಾಂಧಿಯವರು ಸತತವಾಗಿ 3 ಬಾರಿ ಕೇಂದ್ರ ಲೋಕಸಭಾ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದರು.
ಬ್ಯಾಲೆಟ್ ಪೇಪರ್ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯು ಬ್ಯಾಲೆಟ್ ಪೇಪರ್ಗೆ ಹೆದರುವುದಿಲ್ಲ, ನಾವು ಏಕೆ ಹೆದರಬೇಕು? ಎಂದು ಕೇಳಿದರಲ್ಲದೇ ಕೇಂದ್ರದಲ್ಲಿ ಸತತವಾಗಿ 3 ಬಾರಿ ನರೇಂದ್ರ ಮೋದಿ ಜೀ ಅವರ ಸರ್ಕಾರ ಇದೆ. ಬಿಜೆಪಿ ಬ್ಯಾಲೆಟ್ ಪೇಪರ್ಗೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಇವಿಎಂ ಬಗ್ಗೆಯೂ ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
Hassan
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಗಳಂತೆ ತಮ್ಮ ತಪ್ಪಿಗೆ ಶಿಕ್ಷೆಯನ್ನ ಅನುಭವಿಸುತ್ತಿದ್ದಾರೆ.
ಜೈಲಾಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ನೀಡುವುದು ಹಾಗೂ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.
ಪ್ರಜ್ವಲ್ ಸದ್ಯ ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ ದಿನಕ್ಕೆ 522 ರೂ. ಗಳನ್ನು ನೀಡಲಾಗುತ್ತದೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ.
ಇನ್ನೂ ಟ್ರಯಲ್ ಕೋರ್ಟ್ಗೆ ಆಗಾಗ ಬರಬೇಕಾಗಿರುವುದರಿಂದ ಹಾಗೂ ವಕೀಲರ ಜೊತೆ ಇತರೆ ಪ್ರಕರಣಗಳ ಸಂಬಂಧ ಚರ್ಚೆ ಮಾಡಬೇಕಾಗಿರುವ ಕಾರಣ ಪ್ರಜ್ವಲ್ ಅವರನ್ನು ಪೂರ್ತಿ ಕೆಲಸಕ್ಕೆ ನಿಯೋಜಿಸಿಲ್ಲ.
-
Hassan9 hours ago
ಪ್ರೀತಿಯಿಂದ ಸಾಕಿದ್ದ ಮಾಲೀಕನನ್ನು ಕಳೆದುಕೊಂಡು ಮೂಕರೋದನೆಯನ್ನು ಅನುಭವಿಸುತ್ತಿರುವ ಪ್ರವೀಣ್ ಸಾಕಿದ್ದ ನಾಯಿ
-
Hassan8 hours ago
ನಾನು ರಾಜಕೀಯದಿಂದ ನಿವೃತ್ತಿ ಆಗಲ್ಲ : ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು
-
Mysore9 hours ago
ತಾಯಿಂದ ಬೇರ್ಪಟ್ಟ ಆನೆಮರಿ ಸಾ*ವು
-
Hassan3 hours ago
ಅ*ತ್ಯಾಚಾರವೆಸಗಿ ಗರ್ಭಪಾತ ಮಾಡಿಸಿ ತಲೆಮರಿಸಿಕೊಂಡ ಪ್ರೇಮಿ
-
Mysore10 hours ago
ರಾಜವಂಶಸ್ಥರಿಗೆ ದಸರಾ ಅಧಿಕೃತ ಆಹ್ವಾನ
-
Mandya51 minutes ago
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ 2,000 ಕೋಟಿ ರೂ. ಅನುದಾನ ನೀಡಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
-
Hassan9 hours ago
ಟ್ರಕ್ ಹರಿದು ಹತ್ತು ಮಂದಿ ಧಾರುಣ ಸಾವು ಪ್ರಕರಣ : ರಸ್ತೆಗೆ ಹಂಪ್ ಹಾಕದಿರುವುದೇ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದ ಸ್ಥಳೀಯರು
-
Mandya24 hours ago
ಮೈ ಶುಗರ್ ಸಕ್ಕರೆ ಕಾರ್ಖಾನೆಗೆ ಬಾಯ್ಲರ್ ಹೌಸ್: ಸಿಎಂ ಸಿದ್ದರಾಮಯ್ಯ