State
ಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ. ಅವರೀಗ ಹೌದು ಇಲಿಯಾ ಆಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಿಎಂಗೆ ವಿಧಾನಸಭೆಯಲ್ಲಿ ಟೀಕಿಸಿದ್ದಾರೆ.
ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಸಿದ ಆರ್. ಅಶೋಕ್, ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ ಆರೋಪ ಪ್ರಕರಣಗಳನ್ನು ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಡಲ್ ಆಗಿದ್ದಾರೆ, ಮೊದಲಿನ ಹಾಗಿಲ್ಲ. ಆಡಳಿತದಲ್ಲಿ ಬಿಗಿ ಇಲ್ಲ. ಹೌದು ಹುಲಿಯಾ ಆಗಿ ಅವರೂ ಉಳಿದಿಲ್ಲ, ಹೌದು ಇಲಿಯಾ ಆಗಿದ್ದಾರೆ. ಲೂಟಿಕೋರ ಅಧಿಕಾರಿಗಳ ವಿರುದ್ಧ ಕ್ರಮ ಇಲ್ಲ. ಇಲಾಖೆಗಳಲ್ಲಿ ಲೂಟಿ ನಿಲುತ್ತಿಲ್ಲ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಲಂಚಾವತಾರ ತಾಂಡವ ಆಡುತ್ತಿದ್ದು, ಸರ್ಕಾರಕ್ಕೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ 17ನೇ ಬಜೆಟ್ ಮಂಡಿಸುತ್ತಿದ್ದಾರೆ. 18, 19ನೇ ಬಜೆಟ್ ಮಂಡಿಸೋದಾಗಿಯೂ ಹೇಳಿದ್ದಾರೆ. ಸಿಎಂಗೆ ಕಂಗ್ರಾಜುಲೇಷನ್ಸ್ ಎಂದು ತಿರುಗೇಟು ನೀಡಿದ್ದಾರೆ.
ಕೋಗಿಲು ಲೇಔಟ್ನಲ್ಲಿದ್ದ ನುಸುಳುಕೋರರ ಪರ ಅನುಕಂಪ. ಕನ್ನಡಿಗರತ್ತ ನಿರ್ಲಕ್ಷ್ಯ. ಅಧಿಕಾರಿಗಳಿಗೆ ಸರ್ಕಾರದಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಆತ್ಮಹತ್ಯೆ ಭಾಗ್ಯ ಸಿಕ್ಕಿತ್ತಿದೆ. ಎರಡು ತಿಂಗಳ ಗೃಹಲಕ್ಷ್ಮಿ, ಒಂದು ತಿಂಗಳ ಅಕ್ಕಿ ಹಣ ನೀಡಿಲ್ಲ. ಇವೆರಡರ 5,675 ಕೋಟಿ ರೂ. ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಮನರೇಗಾ ಯೋಜನೆಗೆ ಗಾಂಧೀಜಿ ಹೆಸರು ತೆಗೆದ ಬಗ್ಗೆ ಆಕ್ಷೇಪಿಸಿದ ಕಾಂಗ್ರೆಸ್ಗೆ ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹೆಸರಿನ ಅನೇಕ ಯೋಜನೆಗಳ ಹೆಸರುಗಳಿರುವ ಪಟ್ಟಿಯನ್ನು ಓದಿ ತಿರುಗೇಟು ನೀಡಿದ್ದಾರೆ.
ಸದನದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ನೆಹರೂ, ಇಂದಿರಾ, ರಾಜೀವ್ ಗಾಂಧಿ ಹೆಸರಿನ ಯೋಜನೆಗಳ ಲಿಸ್ಟ್ ಇರುವ ಬಿಲ್ ಮಾದರಿಯಲ್ಲಿರುವ ಅಂದಾಜು ಎರಡು ಮೀಟರ್ ಉದ್ದದ ಪಟ್ಟಿ ಓದುವ ಮೂಲಕ ಗಮನ ಸೆಳೆದಿದ್ದಾರೆ.
ಈ ವೇಳೆ ಗಾಂಧಿ ಹೆಸರಿನಲ್ಲೂ ಯೋಜನೆಗಳಿವೆ, ಅದನ್ಯಾಕೆ ಬಿಟ್ಟರೆಂದು ಬೈರತಿ ಸುರೇಶ್ ಆಕ್ಷೇಪಿಸಿದ್ರು. ಮೊಬೈಲ್ನಲ್ಲಿ ಗಾಂಧಿ ಹೆಸರಿನ ಯೋಜನೆಗಳನ್ನ ಓದುವ ಮೂಲಕ ಬೈರತಿ ಸುರೇಶ್ ಅಶೋಕ್ಗೆ ಟಕ್ಕರ್ ಕೊಟ್ಟರೆ, ಇನ್ನುಶೇ. 80% ಕಮೀಷನ್ ಕುರಿತ ಗುತ್ತಿಗೆದಾರರ ಆರೋಪ ಪ್ರಸ್ತಾಪಿಸಿ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಮೇಲೆ ಶೇ.80% ಕಮೀಷನ್ ಆರೋಪ ಮಾಡಿರುವ ಗುತ್ತಿಗೆದಾರರ ಮೇಲೆ ಕ್ರಮ ಯಾಕೆ ಕೈಗೊಂಡಿಲ್ಲ, ಸರ್ಕಾರ ಕಮೀಷನ್ ಆರೋಪ ನಿಜವೆಂದು ಸುಮ್ನಿದೆಯಾ ಎಂದು ಕಿಡಿಕಾರಿದ್ದಾರೆ.
ಕಲಾವಿದೆ ಬಿ. ಜಯಶ್ರೀ ಅವರಿಗೆ ಸರ್ವೆ ಅಧಿಕಾರಿಗಳು ಕಚೇರಿಗೆ ಅಲೆದಾಡಿಸುತ್ತಿರುವುದು. ಲೋಕಾ ಬಲೆಗೆ ಬಿದ್ದ ಇನ್ಸ್ಪೆಕ್ಟರ್ ಕೂಗಿಕೊಂಡ ಪ್ರಕರಣ, ಡಿಕೆಶಿಯಿಂದ ಬ್ರ್ಯಾಂಡ್ ಬೆಂಗಳೂರು ಜಪ ಮರೆಯಾಗಿರುವುದು. ಜಾರ್ಜ್ ರಾಜೀನಾಮೆ ವದಂತಿ, ಡ್ರಗ್ಸ್ ಫ್ಯಾಕ್ಟರಿ ಪತ್ತೆ, ರಾಜೀವ್ ಗೌಡ ಧಮ್ಕಿ ಪ್ರಕರಣ, ಕಾನೂನು ಸುವ್ಯವಸ್ಥೆ, ಕೇಂದ್ರ-ರಾಜ್ಯ ಸಂಘರ್ಷ ಇತ್ಯಾದಿ ವಿಚಾರ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
Special
ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಅನುದಾನ – ನಿಮ್ಮ ಹಳ್ಳಿಗೂ ಅವಕಾಶ!
ಕರ್ನಾಟಕ ಸರ್ಕಾರದ Samudaya Bhavana Grant Scheme ಅಡಿಯಲ್ಲಿ ನಿಮ್ಮ ಹಳ್ಳಿಯಲ್ಲಿ ಸಾರ್ವಜನಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಕರ್ತವ್ಯಗಳು, ಸಾರ್ವಜನಿಕ ಸಭೆಗಳು ಮುಂತಾದ ಕಾರ್ಯಕ್ರಮಗಳಲ್ಲಿ ಬಳಸಲು ಸುಸಜ್ಜಿತ ಸಮುದಾಯ ಭವನ ಕಟ್ಟಲು ₹20,00,000/- ಅನುದಾನ ದೊರೆಯಲಿದೆ.
ಯಾವುದಕ್ಕೆ ಎಷ್ಟು ಅನುದಾನ?
1. ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ ರೂ. ಅನುದಾನವಿದೆ.
2. ಹೆಚ್ಚಿನ ಮಟ್ಟದಲ್ಲಿ (ಹೋಬಳಿ / ತಾಲ್ಲೂಕು / ಜಿಲ್ಲಾ) ವಿಭಿನ್ನವಾಗಿ ₹75 ಲಕ್ಷ – ₹4 ಕೋಟಿ ತನಕ ದೊರೆಯಬಹುದು.
ಯಾರಿಗೆ ಅನುದಾನ?
1. ಅರ್ಜಿ ಸಲ್ಲಿಸುವವರು ಪರಿಶಿಷ್ಠ ಜಾತಿ (SC) / ಪರಿಶಿಷ್ಠ ಪಂಗಡ (ST) ಕುಟುಂಬ ಅಥವಾ ಸಮುದಾಯದ ಸದಸ್ಯರಾಗಿರಬೇಕು.
2. ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ, ಭೂಮಿಯ ದಾಖಲೆಗಳು, ಭವನದ ವಿನ್ಯಾಸ (Blueprint) ಮತ್ತು estimate ಸೇರಿದಂತೆ ಎಲ್ಲಾ ಮೂಲ ದಾಖಲೆಗಳು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು:
1. ಸಮುದಾಯ ಸದಸ್ಯತೆಯ ಪುರಾವೆ (SC/ST ದಾಖಲೆ)
2. ನೆಲದ ದಾಖಲೆ (Khata / Land Ownership)
3. ಭವನ ಕಟ್ಟಡದ ವಿನ್ಯಾಸ ಮತ್ತು ವೆಚ್ಚದ ಅಂದಾಜು
4. ಸಮುದಾಯ ಸಂಘದ ನಿರ್ಧಾರ ಪತ್ರ.
ಅರ್ಜಿಸಲ್ಲಿಕೆ ಹೇಗೆ?
ಮೊದಲಿಗೆ ಸಂಬಂಧಿತ ತಾಲೂಕು / ಗ್ರಾಮ ಪಂಚಾಯತ್ ಖಚೇರಿಗೆ ಭೇಟಿ ನೀಡಿ, Samudaya Bhavana Grant Scheme ಸಂಬಂಧಿತ ಅರ್ಜಿ ಫಾರ್ಮ್ ಪಡೆದುಕೊಳ್ಳಬೇಕು.ಮೇಲ್ಕಂಡ ಎಲ್ಲಾ ದಾಖಲೆಗಳನ್ನು ಒಟ್ಟಾಗಿ ಸಂಗ್ರಹಿಸಿ,ಅರ್ಜಿ ಸಲ್ಲಿಸಬೇಕು.
ಪ್ರಮಾಣಿತ ಕಚೇರಿ ಮೂಲಕ ಪರಿಶೀಲನೆ ನಂತರ ಅನುದಾನ ಮಂಜೂರು ಆಗುತ್ತದೆ.
ಗ್ರಾಮದ ಅಭಿವೃದ್ಧಿಗೆ, ಸಮುದಾಯ ಚಟುವಟಿಕೆಗಳಿಗೆ ಹಾಗೂ ಭವನ ನಿರ್ಮಾಣಕ್ಕೆ ಇದೊಂದು ದೊಡ್ಡ ಅವಕಾಶವಾಗಿದ್ದು, ಜವಾಬ್ದಾರಿಯುತ ಗ್ರಾಮಸ್ಥರು ಈ ಅವಕಾಶ ತಪ್ಪಿಸಿಕೊಳ್ಳಬೇಡಿ.
Politics
ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಚೊಂಬು ನೀಡಲಾಗಿದೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ನಲ್ಲಿ ಏನೂ ನೀಡಿಲ್ಲ. ಕರ್ನಾಟಕಕ್ಕೆ ಒಂದು ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡೆರಡು ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪಿಡ್ ರೈಲು ನೀಡಿದ್ದಾರೆ. ಅದು ಕೂಡ 5 ವರ್ಷ ಸಮಯ ತೆಗೆದುಕೊಂಡಿದ್ದಾರೆ. ನಮಗೆ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರೈಲು ಬೇಕಾಗಿತ್ತು. ನೀರಾವರಿ ಯೋಜನೆಗೆ ಹಣ ಕೇಳಿದ್ದೇವೆ. ಆದರೆ, ನೀರಾವರಿ ಯೋಜನೆಗೆ ಒಂದೇ ಒಂದು ಶಬ್ದ ಇಲ್ಲ. ಅಪರ್ ಕೃಷ್ಣಾ ಹಾಗೂ ಅಪರ್ ಭದ್ರಾ ಯೋಜನೆಗೆ ಸಹಾಯ ಕೇಳಿದ್ರೂ ಏನು ನೀಡಿಲ್ಲ. ಈ ಹಿಂದೆ ಬಜೆಟ್ನಲ್ಲಿ ಯೋಜನೆಗೆ 5,200 ಕೋಟಿ ಹಣ ನೀಡುತ್ತೇವೆ ಎಂದಿದ್ದರು. ಆದರೆ, ಒಂದು ರೂಪಾಯಿ ಸಹ ಕೊಟ್ಟಿಲ್ಲ. ಮೇಕೆದಾಟು ಯೋಜನೆ ಪ್ರಕರಣ ಸಂಬಂಧ ತಮಿಳನಾಡು ಅರ್ಜಿ ವಜಾ ಆಗಿದೆ. ಆದರೂ ಸಹ ಆ ಯೋಜನೆಗೆ ಬಜೆಟ್ನಲ್ಲಿ ಹಣ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಪರಿಸರ ಇಲಾಖೆ ಅನುಮತಿ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾವು ಕ್ಲಿಯರ್ ಮಾಡುವುದಾಗಿ ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಪರಿಸರ ಇಲಾಖೆ ಬಜೆಟ್ನಲ್ಲಿ ಈ ಬಾರಿ ಸಹ ಅನುಮತಿ ಕೊಟ್ಟಿಲ್ಲ. ಈ ಮೂಲಕ ಕರ್ನಾಟಕದ ಜನತೆಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
National
ಕೇಂದ್ರ ಬಜೆಟ್-2026: ಕರ್ನಾಟಕಕ್ಕೆ ಸಿಕ್ಕಿದೇನು? ಈಡೇರದ ರಾಜ್ಯ ನಿರೀಕ್ಷೆಗಳು
ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರ 2026-27ರ ಬಜೆಟ್ ಪ್ರಸ್ತುತ ಪಡಿಸಿದೆ. ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಜೆಟ್ ಮಂಡಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ ಹಣಕಾಸು ಸಚಿವೆಯಾಗಿ ದಾಖಲೆ ಬರೆದಿದ್ದಾರೆ. ಈ ಬಜೆಟ್ನಲ್ಲಿ ಕರ್ನಾಟಕಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅನೇಕ ಕೊಡುಗೆಗಳನ್ನೂ ಘೋಷಿಸಿದ್ದಾರೆ. ಬೆಟ್ಟದಷ್ಟು ನಿರೀಕ್ಷೆಗಳೂ ಈಡೇರಿದೇ ಉಳಿದಿವೆ.
ಕರ್ನಾಟಕ ರಾಜ್ಯಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಿಕ್ಕಿದ್ದೇನು?
ಹೈ-ಸ್ಪೀಡ್ ರೈಲ್ ಕಾರಿಡಾರ್ಗಳು
ಹೈದರಾಬಾದ್- ಬೆಂಗಳೂರು ಮತ್ತು ಚೆನ್ನೈ-ಬೆಂಗಳೂರು ಮಾರ್ಗಗಳಲ್ಲಿ ಹೈ-ಸ್ಪೀಡ್ ರೈಲುಗಳ ಅಭಿವೃದ್ಧಿ.
ಒಡಿಶಾ, ಕರ್ನಾಟಕ ಮತ್ತು ಕೇರಳದ ಕರಾವಳಿ ಪ್ರದೇಶಗಳಲ್ಲಿ ಕಡಲಾಮೆಗಳ ಮೊಟ್ಟೆಯಿಡುವ ಸ್ಥಳಗಳಲ್ಲಿ ಪ್ರಕೃತಿ-ಆಧಾರಿತ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಯೋಜನೆ. ಇದು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಮತ್ತು ಸಂರಕ್ಷಣೆಯನ್ನು ಉತ್ತೇಜಿಸುತ್ತದೆ.

ಶ್ರೀಗಂಧದ ಉದ್ಯಮ ಪುನರುಜ್ಜೀವನಗೊಳಿಸುವ ವಿಶೇಷ ಯೋಜನೆ, ರಾಜ್ಯದಲ್ಲಿ ಶ್ರೀಗಂಧ ಬೆಳೆಯುವ ರೈತರಿಗೆ ಅನುಕೂಲ
ಕೋಕೋ ಮತ್ತು ತೆಂಗು ಬೆಳಗಾರರಿಗೆ ವಿಶೇಷ ಯೋಜನೆ
ಕೋಕೋ ಮತ್ತು ತೆಂಗು ಉತ್ಪನ್ನಗಳಿಗೆ ವಿಶೇಷ ಯೋಜನೆಗಳು. ತೆಂಗು ಉತ್ಪಾದನೆಯನ್ನು ಹೆಚ್ಚಿಸಲು ಮೂರು ಕೋಟಿ ಫಲಾನುಭವಿಗಳಿಗೆ ನಿಧಿ ನೀಡಲಾಗುತ್ತದೆ. ಇದು ತುಮಕೂರು, ಮಂಗಳೂರು, ಉಡುಪಿ ಮತ್ತು ಕಾರವಾರ ಪ್ರದೇಶಗಳ ರೈತರಿಗೆ ಪ್ರಯೋಜನಕಾರಿ.
ಕರಾವಳಿ ಪ್ರದೇಶಗಳಲ್ಲಿ ಪರ್ವತಾರೋಹಣ
ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮೌಂಟೇನ್ ಟ್ರೆಕ್ಕಿಂಗ್ಗೆ ಅನುಮತಿ, ಇದು ಪ್ರವಾಸೋದ್ಯಮ ಉತ್ತೇಜಿಸುತ್ತದೆ
ರಾಜ್ಯಗಳಿಗೆ ಹಣಕಾಸು ಆಯೋಗದ ಅನುದಾನ
ಎಲ್ಲಾ ರಾಜ್ಯಗಳಿಗೆ (ಕರ್ನಾಟಕ ಸೇರಿದಂತೆ) 1.4 ಲಕ್ಷ ಕೋಟಿ ರೂ. ಅನುದಾನ. ಇದರಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಪತ್ತು ನಿರ್ವಹಣೆಗೆ ನಿಧಿ ಸೇರಿದೆ.
ಸಿಟಿ ಇಕನಾಮಿಕ್ ರೀಜನ್ಗಳು (CER)
ಪ್ರತಿ CERಗೆ 5 ವರ್ಷಗಳಲ್ಲಿ 5,000 ಕೋಟಿ ರೂ. ಹಂಚಿಕೆ. ಟೈರ್-2 ಮತ್ತು ಟೈರ್-3 ನಗರಗಳ ಅಭಿವೃದ್ಧಿಗೆ ಗಮನ, ಇದರಡಿ ಕರ್ನಾಟಕದಲ್ಲಿನ ಎರಡು ಮತ್ತು ಮೂರನೇ ಹಂತದ ನಗರಗಳು ಪ್ರಯೋಜನ ಪಡೆಯಬಹುದು.
MSME ಗ್ರೋತ್ ಫಂಡ್
10,000 ಕೋಟಿ ರೂ. ನಿಧಿ ಮೀಸಲಿಟ್ಟಿದ್ದು ಇದು ಕರ್ನಾಟಕದ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬೆಂಬಲಿಸುತ್ತದೆ.

ರಾಷ್ಟ್ರೀಯ ಟೆಕ್ಸ್ಟೈಲ್ ಪಾಲಿಸಿ ಮತ್ತು ಮೆಗಾ ಟೆಕ್ಸ್ಟೈಲ್ ಪಾರ್ಕ್ಗಳು
ಟೆಕ್ಸ್ಟೈಲ್ ಉದ್ಯಮವನ್ನು ಉತ್ತೇಜಿಸುವ ಯೋಜನೆಗಳು, ಕರ್ನಾಟಕದ ಟೆಕ್ಸ್ಟೈಲ್ ಹಬ್ಗಳಿಗೆ ಪ್ರಯೋಜನ
ಮಹಿಳಾ ಸಬಲೀಕರಣ ಯೋಜನೆಗಳು
‘ಸ್ಟ್ರೀ ಮಾರ್ಟ್’ ಯೋಜನೆ ಮತ್ತು ಪ್ರತಿ ಜಿಲ್ಲೆಯಲ್ಲಿ ಮಹಿಳಾ ವಸತಿ ಸೌಲಭ್ಯಗಳ ರಾಜ್ಯಕ್ಕೂ ದೊರೆಯಲಿದೆ
ಇತರ ರಾಷ್ಟ್ರೀಯ ಯೋಜನೆಗಳು
ಸೆಮಿಕಂಡಕ್ಟರ್ ಮಿಷನ್ 2.0, ಎಲೆಕ್ಟ್ರಾನಿಕ್ಸ್ ಕಾಂಪೋನೆಂಟ್ ಉತ್ಪಾದನೆಗೆ 40,000 ಕೋಟಿ ರೂ., ಬಯೋಫಾರ್ಮಾ ಶಕ್ತಿ ಯೋಜನೆಗೆ 10,000 ಕೋಟಿ ರೂ., ಕರ್ನಾಟಕದ ಟೆಕ್ ಮತ್ತು ಫಾರ್ಮಾ ಹಬ್ಗಳಿಗೆ ಪರೋಕ್ಷ ಪ್ರಯೋಜನ.
ಈಡೇರದ ಕರ್ನಾಟಕದ ನಿರೀಕ್ಷೆಗಳು
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಪ್ರಸ್ತಾಪ ಇಲ್ಲ.
ಕರ್ನಾಟಕಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಬೇಡಿಕೆ ಇತ್ತು, ಈಗ 16ನೇ ಹಣಕಾಸು ಆಯೋಗದ ಶಿಫಾರಸ್ಸು ಶುರುವಾಗಿದ್ದು ಬಹುತೇಕ ಈ ಹಣ ಬರುವುದು ಅನುಮಾನವಾಗಿದೆ.
ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಕೇಳಲಾಗಿತ್ತು, ಅದು ಸಾಧ್ಯವಾಗಿಲ್ಲ.
ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕೋರಲಾಗಿತ್ತು. ಈ ಬಗ್ಗೆ ನೇರ ಉಲ್ಲೇಖಗಳಿಲ್ಲ.
ಬಹುಬೇಡಿಕೆಯ ರಾಯಚೂರಿಗೆ ಎಐಐಎಂಎಸ್ ಘೋಷಣೆಯಾಗಿಲ್ಲ.
-
Cinema20 hours ago17 ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಕನ್ನಡ ಚಿತ್ರ ಸ್ಪರ್ಧಾ ವಿಭಾಗದಲ್ಲಿ ಬಡಿಗೇರ್ ದೇವೇಂದ್ರ ನಿರ್ದೇಶನದ “ವನ್ಯಾ” ಚಿತ್ರ ಪ್ರದರ್ಶನ
-
Hassan57 minutes agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan1 hour agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Mandya5 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
National3 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
Hassan23 hours agoವಿಜೃಂಭಣೆಯಿಂದ ಜರುಗಿದ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ 7ನೇ ವರ್ಷದ ವಾರ್ಷಿಕೋತ್ಸವ
-
Kodagu4 hours agoನೂತನ ಪ್ರಾಂಶುಪಾಲರಾಗಿ ಎ. ಕೆ. ಪದ್ಮ ಅಧಿಕಾರ ಸ್ವೀಕಾರ
-
Special22 hours agoಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ಅನುದಾನ – ನಿಮ್ಮ ಹಳ್ಳಿಗೂ ಅವಕಾಶ!
