Connect with us

State

ಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್‌.ಅಶೋಕ್‌

Published

on

ಬೆಂಗಳೂರು: ಸಿಎಂ ಸಿದ್ದರಾಮಯ್ಯ  ಹೌದು ಹುಲಿಯಾ ಆಗಿ ಉಳಿದಿಲ್ಲ. ಅವರೀಗ ಹೌದು ಇಲಿಯಾ ಆಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್  ಸಿಎಂಗೆ ವಿಧಾನಸಭೆಯಲ್ಲಿ ಟೀಕಿಸಿದ್ದಾರೆ.

ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಸಿದ ಆರ್. ಅಶೋಕ್, ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ ಆರೋಪ ಪ್ರಕರಣಗಳನ್ನು ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಡಲ್ ಆಗಿದ್ದಾರೆ, ಮೊದಲಿನ ಹಾಗಿಲ್ಲ. ಆಡಳಿತದಲ್ಲಿ ಬಿಗಿ ಇಲ್ಲ. ಹೌದು ಹುಲಿಯಾ ಆಗಿ ಅವರೂ ಉಳಿದಿಲ್ಲ, ಹೌದು ಇಲಿಯಾ ಆಗಿದ್ದಾರೆ. ಲೂಟಿಕೋರ ಅಧಿಕಾರಿಗಳ ವಿರುದ್ಧ ಕ್ರಮ ಇಲ್ಲ. ಇಲಾಖೆಗಳಲ್ಲಿ ಲೂಟಿ ನಿಲುತ್ತಿಲ್ಲ. ಈ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಲಂಚಾವತಾರ ತಾಂಡವ ಆಡುತ್ತಿದ್ದು, ಸರ್ಕಾರಕ್ಕೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ 17ನೇ ಬಜೆಟ್ ಮಂಡಿಸುತ್ತಿದ್ದಾರೆ. 18, 19ನೇ ಬಜೆಟ್ ಮಂಡಿಸೋದಾಗಿಯೂ ಹೇಳಿದ್ದಾರೆ. ಸಿಎಂಗೆ ಕಂಗ್ರಾಜುಲೇಷನ್ಸ್ ಎಂದು ತಿರುಗೇಟು ನೀಡಿದ್ದಾರೆ.

ಕೋಗಿಲು ಲೇಔಟ್‌ನಲ್ಲಿದ್ದ ನುಸುಳುಕೋರರ ಪರ ಅನುಕಂಪ. ಕನ್ನಡಿಗರತ್ತ ನಿರ್ಲಕ್ಷ್ಯ. ಅಧಿಕಾರಿಗಳಿಗೆ ಸರ್ಕಾರದಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಆತ್ಮಹತ್ಯೆ ಭಾಗ್ಯ ಸಿಕ್ಕಿತ್ತಿದೆ. ಎರಡು ತಿಂಗಳ ಗೃಹಲಕ್ಷ್ಮಿ, ಒಂದು ತಿಂಗಳ ಅಕ್ಕಿ ಹಣ ನೀಡಿಲ್ಲ. ಇವೆರಡರ 5,675 ಕೋಟಿ ರೂ. ಎಲ್ಲಿಗೆ ಹೋಯಿತು ಎಂದು   ಪ್ರಶ್ನಿಸಿದ್ದಾರೆ.

ಇನ್ನೂ ಮನರೇಗಾ ಯೋಜನೆಗೆ ಗಾಂಧೀಜಿ ಹೆಸರು ತೆಗೆದ ಬಗ್ಗೆ ಆಕ್ಷೇಪಿಸಿದ ಕಾಂಗ್ರೆಸ್‌ಗೆ ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹೆಸರಿನ ಅನೇಕ ಯೋಜನೆಗಳ ಹೆಸರುಗಳಿರುವ ಪಟ್ಟಿಯನ್ನು ಓದಿ  ತಿರುಗೇಟು ನೀಡಿದ್ದಾರೆ.

ಸದನದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ನೆಹರೂ, ಇಂದಿರಾ, ರಾಜೀವ್ ಗಾಂಧಿ ಹೆಸರಿನ ಯೋಜನೆಗಳ ಲಿಸ್ಟ್ ಇರುವ ಬಿಲ್ ಮಾದರಿಯಲ್ಲಿರುವ ಅಂದಾಜು ಎರಡು ಮೀಟರ್ ಉದ್ದದ ಪಟ್ಟಿ ಓದುವ ಮೂಲಕ ಗಮನ ಸೆಳೆದಿದ್ದಾರೆ.

ಈ ವೇಳೆ ಗಾಂಧಿ ಹೆಸರಿನಲ್ಲೂ ಯೋಜನೆಗಳಿವೆ, ಅದನ್ಯಾಕೆ ಬಿಟ್ಟರೆಂದು  ಬೈರತಿ ಸುರೇಶ್ ಆಕ್ಷೇಪಿಸಿದ್ರು. ಮೊಬೈಲ್‌ನಲ್ಲಿ ಗಾಂಧಿ ಹೆಸರಿನ ಯೋಜನೆಗಳನ್ನ ಓದುವ ಮೂಲಕ ಬೈರತಿ ಸುರೇಶ್ ಅಶೋಕ್‌ಗೆ ಟಕ್ಕರ್ ಕೊಟ್ಟರೆ, ಇನ್ನುಶೇ. 80% ಕಮೀಷನ್ ಕುರಿತ ಗುತ್ತಿಗೆದಾರರ ಆರೋಪ ಪ್ರಸ್ತಾಪಿಸಿ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದ ಮೇಲೆ ಶೇ.80% ಕಮೀಷನ್ ಆರೋಪ ಮಾಡಿರುವ ಗುತ್ತಿಗೆದಾರರ ಮೇಲೆ ಕ್ರಮ ಯಾಕೆ ಕೈಗೊಂಡಿಲ್ಲ, ಸರ್ಕಾರ ಕಮೀಷನ್ ಆರೋಪ ನಿಜವೆಂದು ಸುಮ್ನಿದೆಯಾ ಎಂದು ಕಿಡಿಕಾರಿದ್ದಾರೆ.

ಕಲಾವಿದೆ ಬಿ. ಜಯಶ್ರೀ ಅವರಿಗೆ ಸರ್ವೆ ಅಧಿಕಾರಿಗಳು ಕಚೇರಿಗೆ ಅಲೆದಾಡಿಸುತ್ತಿರುವುದು. ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ ಕೂಗಿಕೊಂಡ ಪ್ರಕರಣ, ಡಿಕೆಶಿಯಿಂದ ಬ್ರ‍್ಯಾಂಡ್ ಬೆಂಗಳೂರು ಜಪ ಮರೆಯಾಗಿರುವುದು. ಜಾರ್ಜ್ ರಾಜೀನಾಮೆ ವದಂತಿ, ಡ್ರಗ್ಸ್ ಫ್ಯಾಕ್ಟರಿ ಪತ್ತೆ, ರಾಜೀವ್ ಗೌಡ ಧಮ್ಕಿ ಪ್ರಕರಣ, ಕಾನೂನು ಸುವ್ಯವಸ್ಥೆ, ಕೇಂದ್ರ-ರಾಜ್ಯ ಸಂಘರ್ಷ ಇತ್ಯಾದಿ ವಿಚಾರ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Continue Reading

State

ಸಚಿವ ಸಂಪುಟ ಪುನಾರಚನೆ: ಹೆಚ್ಚುವರಿ ಜವಾಬ್ದಾರಿ ನೀಡುವಂತೆ ಈಶ್ವರ್‌ ಖಂಡ್ರೆ ಮನವಿ

Published

on

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಾಳೆ ಸಂಜೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಆಯ್ಕೆ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ.

ಈ ಹಿನ್ನೆಲೆಯಲ್ಲಿ ಹೊಸ ಸಂಪುಟದಲ್ಲಿ ಸ್ಥಾನ ಪಡೆಯಲು ಶಾಸಕರ ನಡುವೆ ಲಾಬಿ ಚುರುಕುಗೊಂಡಿದೆ. ಸಚಿವ ಸಂಪುಟ ಪುನಾರಚನೆ ಕುರಿತು ಹಲವು ಹೆಸರುಗಳು ಚರ್ಚೆಯಲ್ಲಿವೆ.

ಈ ಮಧ್ಯೆ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಹೆಚ್ಚುವರಿ ಜವಾಬ್ದಾರಿ ನೀಡುವಂತೆ ಮನವಿ ಮಾಡಿದ್ದಾರೆ. ಅವರು ತಮ್ಮ ಇಲಾಖೆಯಲ್ಲಿ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದಾಗಿ ಹೇಳಿದ್ದು, ತಮ್ಮ ಕಾರ್ಯದಿಂದ ತೃಪ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ತಮ್ಮ ಕೆಲಸದ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ಇದೆ ಎಂದು ಅವರು ಹೇಳಿದ್ದಾರೆ.

ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Continue Reading

State

ಸಿಎಂ ಬದಲಾವಣೆ ಚರ್ಚೆ ನಡುವೆ ಆರ್. ಅಶೋಕ್ ತೀವ್ರ ಟೀಕೆ

Published

on

ಉತ್ತರಕನ್ನಡ:  ರಾಜ್ಯದಲ್ಲಿ ಸಂಭವಿಸಿರುವ ದಿಢೀರ್ ರಾಜಕೀಯ ಬೆಳವಣಿಗೆಗಳು ಮತ್ತು ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳ ನಡುವೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಉತ್ತರಕನ್ನಡದಲ್ಲಿ ಇಂದು ಈ ಕುರಿತು  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೂ ರಾಜ್ಯದ ಆಡಳಿತ ಅಥವಾ ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು. “ಹೋದ್ಯಾ ಪಿಶಾಚಿ ಅಂದರೆ ಬಂದ್ಯಾ ಗವಾಕ್ಷಿ” ಎಂಬ ವ್ಯಂಗ್ಯವನ್ನು ಬಳಸುತ್ತಾ ಅವರು ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದರು.

ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ಬರುತ್ತಾರೆ ಎಂಬ ರಾಜಕೀಯ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಮತ್ತು ಮುಂದೆಯೂ ಆಗುವ ಸಾಧ್ಯತೆ ಕಡಿಮೆ ಎಂದು ಹೇಳಿದರು.

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಪಕ್ಷಗಳ ಟೀಕೆಗಳು ಹೆಚ್ಚಾಗುತ್ತಿವೆ.

Continue Reading

State

ಡಿ.ಕೆ. ಶಿವಕುಮಾರ್ ಸಿಎಂ ಚರ್ಚೆ: ದೇವೇಗೌಡರ ಮನೆಗೆ ಸೂತಕದ ಛಾಯೆ ಎಂದು ಚಲುವರಾಯಸ್ವಾಮಿ ವ್ಯಂಗ್ಯ

Published

on

ಬೆಂಗಳೂರು: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಚರ್ಚೆ ಕೇಳಿಬಂದ ನಂತರ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಎನ್.ಚಲುವರಾಯಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು,   ಒಕ್ಕಲಿಗ ಸಮುದಾಯದಲ್ಲಿನ ನಾಯಕತ್ವದ ವಿಚಾರವನ್ನು ಉಲ್ಲೇಖಿಸಿದ ಅವರು, ಡಿಕೆ ಶಿವಕುಮಾರ್ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದ್ದಾರೆ.

ಅವರು ಮತ್ತೊಂದು ಹೇಳಿಕೆಯಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತಾರೆ, ರಾಜ್ಯಸಭೆಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.

Continue Reading

Trending

error: Content is protected !!