Connect with us

National - International

ಮುತ್ತಯ್ಯ ಮುರಳೀಧರನ್ ದಾಖಲೆ ಸರಿಗಟ್ಟಿದ ಆರ್.ಅಶ್ವಿನ್

Published

on

ಚೆನ್ನೈ: ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮುತ್ತಯ್ಯ ಮುರಳೀಧರನ್ ಅವರ ಟೆಸ್ಟ್ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಕಾನ್ಪುರದಲ್ಲಿ ನಡೆದ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 7 ವಿಕೆಟ್‌ಗಳ ಜಯ ಸಾಧಿಸಿದ ನಂತರ ಅಶ್ವಿನ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಚೆನ್ನೈನಲ್ಲಿ ತಮ್ಮ ತವರು ಮೈದಾನದಲ್ಲಿ ಪಂದ್ಯ ಗೆಲ್ಲುವ ಶತಕ ಸೇರಿದಂತೆ 114 ರನ್ ಗಳಿಸಿದರು ಮತ್ತು ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಅಗ್ರಸ್ಥಾನ ಹಂಚಿಕೊಳ್ಳಲು 11 ವಿಕೆಟ್‌ಗಳನ್ನು ಪಡೆದರು. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮುತ್ತಯ್ಯ ಮುರಳಿಧರನ್ ಅವರೊಂದಿಗೆ ಸಮಬಲ ಸಾಧಿಸಲು ವೃತ್ತಿಜೀವನದಲ್ಲಿ 11 ನೇ ಬಾರಿಗೆ ಪಿಒಎಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಕಳೆದ ಟೆಸ್ಟ್‌ನಲ್ಲಿ ಗೆದ್ದ ಪ್ರಶಸ್ತಿ ಸೇರಿದಂತೆ 10 ಪಂದ್ಯದ ಆಟಗಾರ ಪ್ರಶಸ್ತಿಗಳನ್ನು ಹೊಂದಿದ್ದಾರೆ. ಮುರಳೀಧರನ್ ತಮ್ಮ 18 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಶ್ರೀಲಂಕಾ ಪರ 61 ಟೆಸ್ಟ್ ಸರಣಿಗಳಲ್ಲಿ ಕಾಣಿಸಿಕೊಂಡರು, 2011 ರಲ್ಲಿ ತಮ್ಮ ಟೆಸ್ಟ್ ಚೊಚ್ಚಲ ಪಂದ್ಯವನ್ನು ಮಾಡಿದ ಅಶ್ವಿನ್, ಬಾಂಗ್ಲಾದೇಶದ ವಿರುದ್ಧ ತಮ್ಮ 42 ನೇ ಪಂದ್ಯವನ್ನು ಆಡಿದ್ದಾರೆ

Continue Reading

National - International

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ

Published

on

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಉಳಿದ ಏಳು ಜನರಿಗೆ ನೀಡಿದ್ದ ಜಾಮೀನು ಅರ್ಜಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರಕ್ಕೆ ಅಲ್ಪ ಹಿನ್ನಡೆಯಾಗಿದ್ದರೂ ಮತ್ತೊಂದೆಡೆ ಅಲ್ಪ ಮುನ್ನಡೆಯಾಗಿದೆ.

ದರ್ಶನ್‌ ಜಾಮೀನು ಅರ್ಜಿ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಶುಕ್ರವಾರ (ಜ.24) ನಡೆಸಿದ ಕೋರ್ಟ್‌, ಜಾಮೀನು ರದ್ದುಗೊಳಿಸಲು ಸುಪ್ರೀಂ ನಿರಾಕರಿಸಿದೆ. ಅದ್ಯಾಗೋ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಪರಿಶೀಲಿಸಲು ಕೋರ್ಟ್‌ ಅನುಮತಿಸಿದೆ.

ಈ ಪ್ರಕರಣ ಸಂಬಂಧ ನ್ಯಾಯಾಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಹಾಗೂ ಆರ್‌. ಮಹದೇವನ್‌ ಇದ್ದ ಪೀಠವು ದರ್ಶನ್‌ ಹಾಗೂ ಉಳಿದ ಆರು ಮಂದಿಗೆ ನೋಟಿಸ್‌ ಹೊರಡಿಸಿದೆ.

Continue Reading

National - International

IAS, IPS ಸೇರಿದಂತೆ ವಿವಿಧ 979 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ

Published

on

UPSC Recruitment 2025 – IAS Notification : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದೇಶದ ಉನ್ನತ ಗ್ರೂಪ್ ಎ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಲೋಕಸೇವಾ ಆಯೋಗವು (UPSC) ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.

ಎಷ್ಟು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಮತ್ತು ಯಾವ ಯಾವ ಹುದ್ದೆಗಳು?

ಕೇಂದ್ರ ಲೋಕಸೇವಾ ಆಯೋಗವು ಪ್ರತಿವರ್ಷ ಈ ನೇಮಕಾತಿಯನ್ನು ನಡೆಸುತ್ತದೆ. ಪ್ರಸ್ತುತ ಈ ವರ್ಷ ಒಟ್ಟು 979 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಅವುಗಳಲ್ಲಿ IAS, IPS, IFS, IRS ಸೇರಿದಂತೆ ಹಲವು ಇಲಾಖೆಗಳ ಹುದ್ದೆಗಳು.

ಶೈಕ್ಷಣಿಕ ಅರ್ಹತೆ : ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ನೀವು ಯಾವುದಾದರು ಪದವಿ ಮುಗಿಸಿದ್ದರೆ ಸಾಕು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಿರಿ.

Prelims Exam ನಡೆಯುವ ದಿನಾಂಕ – ಪೂರ್ವಭಾವಿ ಪರೀಕ್ಷೆಯು 25 ಮೇ 2025 ರಂದು ರಾಜ್ಯದ ಬೆಂಗಳೂರು, ಮೈಸೂರು ಮತ್ತು ಧಾರವಾಡ ಜಿಲ್ಲೆಯಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ :

ಅರ್ಹತೆ ಇರುವ ಅಭ್ಯರ್ಥಿಗಳು ಫೆಬ್ರವರಿ 11 ನೇ ತಾರೀಕಿನ ಒಳಗಾಗಿ ಆನ್ಲೈನ್ ಮೂಲಕ ಕೆಳಗಿನ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು UPSC ಅಧಿಕೃತ ಜಾಲತಾಣದ ಲಿಂಕ್ – https://upsconline.gov.in/upsc/OTRP/

Continue Reading

National - International

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2025: ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸವಿದೆ ಎಂದ ಆಯುಕ್ತ ಹೇಮಂತ ನಿಂಬಾಳ್ಕರ್

Published

on

ನವದೆಹಲಿ: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯದಿಂದ ಭಾಗವಹಿಸಲಿರುವ ಸ್ತಬ್ಧಚಿತ್ರವು ಗದಗಿನ ಲಕ್ಕುಂಡಿಯಲ್ಲಿರುವ ಮಂದಿರಕ್ಕೆ ಹೋಲುವಂತಿರುವ ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ 50ಕ್ಕೂ ಹೆಚ್ಚು ಜನ‌ ಕಲಾವಿದರು,ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣಗೊಳಿಸಿದ್ದಾರೆ.
ಜ.23ರ ಗುರುವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಸ್ತಬ್ಧಚಿತ್ರದ ಪೂರ್ವಾಭ್ಯಾಸದಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರಕ್ಕೆ ಎರಡೂ ಬದಿಯಲ್ಲಿ ನೆರೆದ ಜನಸ್ತೋಮವು ತಮ್ಮ ಹತ್ತಿರ ಸ್ತಬ್ಧಚಿತ್ರ ಬಂದಾಗ ಅದರ ವಿನ್ಯಾಸ, ಶಿಲ್ಪಕಲೆ, ಸಂಸ್ಕೃತಿ, ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಿದ ಕಲಾವಿದರ ದೃಶ್ಯವನ್ನು ಕಂಡ ಜನರು ಕರತಾಡನ ಮೂಲಕ ಅಭೂತಪೂರ್ವವಾಗಿ ಸ್ವಾಗತಿಸಿ ಪ್ರಶಂಸೆ ವ್ಯಕ್ತಪಡಿಸಿದರು.

ಕರ್ತವ್ಯಪಥದಲ್ಲಿ ಸೇರಿದ ಜನರಿಂದ ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆಗೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ದೊರೆಯಲಿದೆ ಎಂಬ ವಿಶ್ವಾಸವನ್ನು ಆಯುಕ್ತರಾದ ಹೇಂಮಂತ್ ನಿಂಬಾಳ್ಕರ್ ಅವರು ವ್ಯಕ್ತಪಡಿಸಿದರು.

ಕರ್ತವ್ಯ ಪಥದಲ್ಲಿ ಸಾಗಿದ ಸ್ತಬ್ದಚಿತ್ರಕ್ಕೆ ಕನ್ನಡ ಸಾಹಿತ್ಯ ಇರುವ “ಶಿಲ್ಪಕಲೆಯ ತೊಟ್ಟಿಲು ನಮ್ಮ ಗದುಗಿನ ಲಕ್ಕುಂಡಿ” ಎಂಬ ಹಾಡಿಗೆ ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್ ಅವರ ಸಂಗೀತ ಸಂಯೋಜನೆಯ ನೀನಾದಕ್ಕೆ ಗದಗ, ಬೆಂಗಳೂರು, ಮೈಸೂರು ಹಾಗೂ ಧಾರವಾಡದಿಂದ ಆಗಮಿಸಿದ ಸ್ತಬ್ಧಚಿತ್ರದ ಕಲಾವಿದರು ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿ ಹೆಚ್ಚಿನ ಮೆರಗು ತಂದಿದ್ದಲ್ಲದಲೇ ಅಲ್ಲಿ ಸೇರಿದವರನ್ನು ರೋಮಾಂಚನಗೊಳಿಸಿತು.

ಸ್ತಬ್ದಚಿತ್ರದ ಮೇಲ್ಭಾಗದಲ್ಲಿ 10 ಜನ ಕಲಾವಿದರು ಸೇರಿದಂತೆ 18 ಜನ ಕಲಾವಿದರಿದ್ದು, ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ನಾಲ್ಕು ಪುರುಷ-ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು, ಸ್ತಬ್ಧಚಿತ್ರಕ್ಕೆ ಇನ್ನಷ್ಟು ಮೆರಗು ತಂದಿತು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, ಕ್ರಿ. ಶ. 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

Continue Reading

Trending

error: Content is protected !!