Connect with us

Hassan

ನಂಗೆ ಜೀವ ಅಪಾಯವಾದ್ರೆ ಹೊಳೆನರಸೀಪುರ ಶಾಸಕರೇ ಕಾರಣ ಆರ್. ಮೋಹನ್ ಆರೋಪ

Published

on

ಹಾಸನ : ಸುಳ್ಳು ವೈದ್ಯಕೀಯ ಪ್ರಮಾಣ ಪತ್ರ ಪಡೆದು ಸರಕಾರಕ್ಕೆ ವಂಚಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕ ವೃತ್ತಿ ಪಡೆದಿರುವ ಹಾಗೂ ರಾಜಕೀಯ ಮುಖಂಡರ ಕುಮಕ್ಕಿನ ಮೂಲಕ ರೌಡಿಗಳಿಂದ ನನ್ನನ್ನು ಹತ್ತಿಕ್ಕಲು ಹುನ್ನಾರ ನಡೆಸಲಾಗುತ್ತಿದ್ದು, ಜೀವ ಬೆದರಿಕೆ ಇದ್ದು, ಅವರ ವಿರುದ್ಧ ಕ್ರಮಕ್ಕೆ ಸಾಮಾಜಿಕ ಕಾರ್ಯಕರ್ತ ಆರ್. ಮೋಹನ್ ಗಂಬೀರವಾಗಿ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಅಂಗವಿಕಲರ ಕೋಟಾದಡಿ ನೇಮಕ ಗೊಂಡ ಹಲವಾರು ಶಿಕ್ಷಕರು ನಕಲಿ ಅಂಗವಿಕಲ ಪ್ರಮಾಣ ಪತ್ರ ಪಡೆದು ನೇಮಿ ಹೊಂದಿರುವ ಬಗ್ಗೆ ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣ ದಾಖಲಾತಿ ಪಡೆದು ದೂರಿನ ಬಗ್ಗೆ ತನಿಖೆ ನಡೆಸಿ ವಿವರ ನೀಡಲಿ. ಜಿಲ್ಲೆಯಲ್ಲಿ ೪೦೦ಕ್ಕೂ ಅಧಿಕ ಶಿಕ್ಷಕರು ಸರ್ಕಾರಿ ಸಂಬಳ ಪಡೆಯುತ್ತಿದ್ದಾರೆ. ಇಲಾಖೆಗೆ ಸಲ್ಲಿಸಿರುವ ವೈದ್ಯಕೀಯ ಪ್ರಮಾಣ ಪತ್ರ ಸಂಪೂರ್ಣ ನಕಲಿಯಾಗಿದೆ. ಈ ಬಗ್ಗೆ ಸೂಕ್ತ ದಾಖಲಾತಿಗಳೊಂದಿಗೆ ೨೦೧೨ರಲ್ಲಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೆ. ಹಾಸನ ಮಾತ್ರವಲ್ಲದೆ ರಾಮನಗರ, ಮೈಸೂರು ಜಿಲ್ಲೆಯಲ್ಲೂ ವಂಚನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪರಿಶೀಲನೆ ನಡೆಸಿದ ಲೋಕಾಯುಕ್ತ ಜಿಲ್ಲೆಯ ೪೨ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಆದೇಶಿಸಿದೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಯಾವ ಕ್ರಮವನ್ನು ಕೈಗೊಂಡಿಲ್ಲ ಎಂದರು. ಮೈಸೂರು ಮತ್ತು ರಾಮನಗರದಲ್ಲಿ ತಪ್ಪಿತಸ್ಥ ಶಿಕ್ಷಕರು ಶಿಕ್ಷೆ ಅನುಭವಿಸುತ್ತಿದ್ದಾರೆ. ಆದರೆ, ಹಾಸನದಲ್ಲಿ ಮಾತ್ರ ಕಾನೂನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು. ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವರೆಗೆ ಹೋರಾಟ ನಿಲ್ಲಿಸುವುದಿಲ್ಲ. ೨೦೨೩ರ ನವೆಂಬರ್‌ನಲ್ಲಿ ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯಕ್ಕೆ ನನ್ನ ಹೇಳಿಕೆ ಸಲ್ಲಿಸಿದ್ದೇನೆ. ಆ ಬಳಿಕ ನನ್ನ ಮೇಲೆ ದ್ವೇಷ ಸಾಧಿಸಲಾಗುತ್ತಿದೆ. ನೌಕರಿ ಕಳೆದುಕೊಳ್ಳುವ ಹಾಗು ಶಿಕ್ಷೆಗೆ ಗುರಿಯಾಗುವ ಭೀತಿಯಿಂದ ಶಿಕ್ಷಕರು ರಾಜಕೀಯ ನಾಯಕರ ದುಂಬಾಲು ಬಿದ್ದಿದ್ದಾರೆ. ಓಟಿನ ಆಸೆಗೆ ಮಾಜಿ ಸಚಿವ ರೇವಣ್ಣ ಅವರು ನನಗೆ ತೊಂದರೆ ನೀಡುತ್ತಿದ್ದಾರೆ. ನನಗೆ ಪ್ರಾಣ ಬೆದರಿಕೆ ಇರುವ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಜಗದೀಶ್, ಗೋವಿಂದಯ್ಯ, ಕಾಳೇಗೌಡ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಅಸಹಾಯಕ ಮಹಿಳೆಗೆ ಧಮ್ಕಿ ಹಾಕಿದ ಎಎಸ್ಐ ದೇವರಾಜ್

Published

on

ಅರಕಲಗೂಡು: ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿರುವ ಅರ್ಪಿತ ಎಂಬುವವರು  ಸಹಾಯಕ್ಕಾಗಿ 112 ಕರೆ ಮಾಡಿದರೆ ಸಮಯಕ್ಕೆ ಸರಿಯಾಗಿ ವಾಹನ ಬಾರದೇ ಇದ್ದರಿಂದ  ಪೊಲೀಸ್ ಠಾಣೆಗೆ ಕರೆ ಮಾಡಿದ್ದರು.  ಆಗ  ಎಎಸ್ಐ ದೇವರಾಜ್ ಸ್ಥಳಕ್ಕೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಏನಿದು ಘಟನೆ?

ಅಸಹಾಯಕ ಅರ್ಪಿತಾ ಅವರ  ಅತ್ತೆ ಭಾಗ್ಯಮ್ಮ, ಅತ್ತಿಗೆ ಗೀತಾ, ನಾದಿನಿ ಜ್ಯೋತಿ, ಬಾವ ಲೋಕೇಶ್ ಎಲ್ಲಾ ಸೇರಿ ಗಂಡ ಇಲ್ಲದ ವೇಳೆ ಅವರ ಮೇಲೆ ದಾಳಿ ಮಾಡಿದ್ದರು. ಅಲ್ಲದೇ ಮನೆಯ ಮಹಡಿಯ ಮೇಲೆ ವಾಸವಿದ್ದ ಅವರ ಮನೆಗೆ ಬೀಗ ಹಾಕಿ ಅವರನ್ನು ಮನೆ ಇಂದ ಹೊರ ಹಾಕುವ ಪ್ರಯತ್ನ ಮಾಡಿದ್ದರು.

ಅರ್ಪಿತಾ ಅವರಿಗೆ ಪ್ರೀತಿಸಿ 5 ವರ್ಷದ ಹಿಂದೆ ಮದುವೆ ಆಗಿತ್ತು. ಆದರೆ ಒಂದು ವರ್ಷದಿಂದ ಚೆನ್ನಾಗಿ ನೋಡಿಕೊಳ್ಳದೆ ಹೆಂಡತಿ ಇದ್ದರಿಂದ ಗಂಡನಿಂದ ದೂರ ಉಳಿದ್ದರು. ಇದೀಗ ಅರ್ಪಿತಾ ಅವರನ್ನು ಮನೆ ಖಾಲಿ ಮಾಡಿಸೋದಕ್ಕೆ ಅವರ ಅತ್ತೆ ಬಂದಿದ್ದಾರೆ.

ಈ ವೇಳೆ ಪೊಲೀಸರು ಆಕೆಯ ಸಹಾಯಕ್ಕೆ ಬಾರದೇ  ಹಲ್ಲೆ ಮಾಡಿದವರ ಜೊತೆ ಸೇರಿ  ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದಾರೆ.  ಈ  ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಈ ಹಲ್ಲೆಗೊಳಗಾದ ಅಸಹಾಯಕ ಮಹಿಳೆ ದೂರು ತೆಗೆದುಕೊಳ್ಳಲು   ಎಎಸ್ಐ ದೇವರಾಜ್ ನಿರಾಕರಿಸಿದ್ದಾರೆ.  ಆ ಅಸಹಾಯಕ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ,  ನ್ಯಾಯ ಸಿಗದೇ ಕಣ್ಣೀರು ಹಾಕಿಕೊಂಡು ತನ್ನ ಅಳಲನ್ನು ತೋಡಿಕೊಂಡು ಬೀದಿಗೆ ಬಿದ್ದಿದ್ದಾರೆ.


ಈ ಸಂತ್ರಸ್ಥೆಯೂ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು,  ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

Hassan

ಮನೆಗಳ್ಳನ ಬಂಧನ : 140 ಗ್ರಾಂ.ಚಿನ್ನ ವಶ

Published

on

ಅರೇಹಳ್ಳಿ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದ ಕೆಲವೇ ದಿನಗಳಲ್ಲಿ ಆಭರಣ ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಅರೇಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೇಲೂರು ತಾಲೂಕು ಸ್ಕೂಲ್‌ಗರ್ಜೆ ಗ್ರಾಮದ ಯೋಗೇಶ(24) ಬಂಧಿತ ಆರೋಪಿ. ಈತನಿಂದ ಅಂದಾಜು 20 ಲಕ್ಷ ರೂ. ಮೌಲ್ಯದ 140 ಗ್ರಾಂ. ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.


ಘಟನೆ ಹಿನ್ನೆಲೆ ಏನು?

ಸಮೀಪದ ನಾಗೇನಹಳ್ಳಿ ಗ್ರಾಮದ ಹನುಮೇಗೌಡ ಎಂಬುವರ ಮನೆಯಲ್ಲಿ ಕಳೆದ ಜನವರಿ 23ರಂದು ಬರೋಬ್ಬರಿ 140 ಗ್ರಾಂ. ತೂಕದ ಚಿನ್ನದ ವಡನೆಗಳನ್ನು ಆರೋಪಿ ಕಳ್ಳತನ ಮಾಡಿದ್ದ.

ಪತ್ತೆಗಾಗಿ ಎಸ್‌ಪಿ ಶುಭಾನ್ವಿತಾ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಕೆ.ತಮ್ಮಯ್ಯ ಹಾಗೂ ಶ್ರೀನಿಧಿ ಅವರ ಮಾರ್ಗದರ್ಶನದಲ್ಲಿ ಅರಸೀಕೆರೆ ಉಪ ವಿಭಾಗದ ಡಿವೈಎಸ್‌ಪಿ ಬಿ.ಆರ್.ಗೋಪಿ, ಹಳೇಬೀಡು ವೃತ್ತಿ ನಿರೀಕ್ಷಿಕ ಜಗದೀಶ್ ಬಿ.ಆರ್. ಅವರ ನೇತೃತ್ವದಲ್ಲಿ ತನಿಖಾ ತಂಡ ರಚನೆ ಮಾಡಿದ್ದರು.


ತಂಡದಲ್ಲಿ ಅರೇಹಳ್ಳಿ ಪಿಎಸ್‌ಐ ಶೋಭಾ, ಸಿಬ್ಬಂದಿಗಳಾದ ಪೃಥ್ವಿ , ಸುಪ್ರೀತ್, ಹೇಮಕಾಂತ್, ಫಕೃದ್ದೀನ್, ಸಮೀನಾ ತಾಜ್ ಇದ್ದರು.

ಈ ತಂಡವು ಕಳ್ಳತನ ನಡೆದ ಎರಡು ವಾರಗಳ ಅಂತರದಲ್ಲಿ ಆರೋಪಿ ಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಂದ 140 ಗ್ರಾಂ. ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ಕೆಲ ವರ್ಷ ಬೇಕರಿ ಕೆಲಸ ಮಾಡಿಕೊಂಡಿದ್ದ ಖದೀಮ, ಅದಾದ ಬಳಿಕ ಕಾರು ಚಾಲಕನಾಗಿದ್ದ. ಈಗ್ಗೆ ಆರು ತಿಂಗಳ ಹಿಂದೆ ಊರಿಗೆ ಬಂದವನೇ ಕಳ್ಳತನದ ಕಸುಬಿಗೆ ಇಳಿದಿದ್ದ. ಈ ಹಿಂದೆಯೂ ಒಂದು ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದ.

ಅಚ್ಚರಿ ಎಂದರೆ ಈತ ಜ.23 ರಂದು ಕಳವು ಮಾಡಿದ್ದ ಚಿನ್ನಾಭರಣಗಳನ್ನು ಮನೆಯಲ್ಲೇ ಇಟ್ಟಿದ್ದ ಎನ್ನಲಾಗಿದೆ. ಇದೀಗ ಮನೆಗಳ್ಳ ಖಾಕಿ ಕೈಗೆ ಸಿಕ್ಕಿ ಬಿದ್ದಿದ್ದಾನೆ. ತನಿಖಾ ತಂಡದ ಯಶಸ್ವಿ ಕಾರ್ಯಕ್ಕೆ ಎಸ್ಪಿ ಅವರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

Continue Reading

Hassan

ರಾಷ್ಟ್ರೀಯ ಚಿಂತನೆ ಮೈಗೂಡಿಸಿಕೊಳ್ಳಿ : ಶಾಸಕ ಸಿಮೆಂಟ್ ಮಂಜು

Published

on

ಸಕಲೇಶಪುರ: ದೇಶದ ಭವಿಷ್ಯವನ್ನು ರೂಪಿಸುವ ಯುವಕ-ಯುವತಿಯರು ರಾಷ್ಟ್ರೀಯ ಚಿಂತನೆಗಳನ್ನು ಮೈಗೂಡಿಸಿಕೊಂಡು ಬದುಕಿನಲ್ಲಿ ಮುನ್ನಡೆಯಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕಿನ ಹಾನುಬಾಳು ವಿನಾಯಕ ಎಜುಕೇಶನ್ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ವಿದ್ಯಾನಿಧಿ ಶಾಲೆಯ ವಾರ್ಷಿಕೋತ್ಸವ ‘ವಿದ್ಯಾನಿಧಿಯೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ನಮ್ಮ ಬದುಕಿನ ಮೂಲಮಂತ್ರವಾಗಬೇಕು. ಯಾವ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯುವತ್ತ ವಿದ್ಯಾರ್ಥಿಗಳು ದೃಢಸಂಕಲ್ಪ ಹೊಂದಬೇಕು ಎಂದರು.

ಯುವಕರು ದುಶ್ಚಟಗಳಿಗೆ ದಾಸರಾಗದೆ, ಬದುಕನ್ನು ರೂಪಿಸುವ ಶಿಕ್ಷಣದ ಕಡೆಗೆ ಗಮನ ಹರಿಸಬೇಕು. ಸಹನೆ, ಸೌಹಾರ್ದತೆ, ಸಹಬಾಳ್ವೆ ಹಾಗೂ ಸಾಮಾಜಿಕ ಕಳಕಳಿಯನ್ನು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಕಿವಿಮಾತು ಹೇಳಿದರು.

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ರಮಗಳ ಬೋಧನೆಗೆ ಸೀಮಿತವಾಗದೆ, ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾದ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ತುಂಬುವ ಮೂಲಕ ಅವರ ಆಲೋಚನಾ ಸಾಮರ್ಥ್ಯವನ್ನು ವೃದ್ಧಿಸಬೇಕಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ನಿರ್ಣಾಯಕವಾಗಿದೆ. ಶಿಕ್ಷಣ, ತಂತ್ರಜ್ಞಾನ ಜ್ಞಾನ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯ ಮೂಲಕ ಯುವಕರು ಬದಲಾವಣೆಯ ಹರಿಕಾರರಾಗಬಹುದು ಎಂದರು.

ಯುವಜನಾಂಗ ದೇಶದ ಅತಿ ದೊಡ್ಡ ಶಕ್ತಿಯಾಗಿದ್ದು, ದೃಢಸಂಕಲ್ಪ ಹಾಗೂ ಪ್ರಾಮಾಣಿಕತೆಯಿಂದ ಭ್ರಷ್ಟಾಚಾರ ಮುಕ್ತ ಭಾರತದ ಕನಸನ್ನು ನನಸಾಗಿಸಬಹುದು ಎಂದು ಹೇಳಿದರು.


ಭ್ರಷ್ಟಾಚಾರವನ್ನು ಕೇವಲ ಕಾನೂನಿನ ಮೂಲಕ ಸಂಪೂರ್ಣ ನಿರ್ಮೂಲನೆ ಮಾಡಲಾಗುವುದಿಲ್ಲ. ಆದರೆ ನಾಗರಿಕರ ಜಾಗೃತಿ ಮತ್ತು ಭ್ರಷ್ಟರನ್ನು ಸಮಾಜದಿಂದ ಬಹಿಷ್ಕರಿಸುವ ಮನೋಭಾವದ ಮೂಲಕ ಅದನ್ನು ನಿಯಂತ್ರಿಸಬಹುದು. ದುರಾಸೆಯೇ ಭ್ರಷ್ಟಾಚಾರದ ಮೂಲವೆಂದು ಅವರು ಅಭಿಪ್ರಾಯಪಟ್ಟರು.

ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಟಿ ಅಭಿನಯ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ಸಂದರ್ಭದಲ್ಲಿ ಹಾನುಬಾಳಿನಲ್ಲಿ ಕಳೆದ 28 ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ವಾಸು ಅವರನ್ನು ಶಾಲಾ ಆಡಳಿತ ಮಂಡಳಿಯಿಂದ ವಿಶೇಷವಾಗಿ ಗೌರವಿಸಲಾಯಿತು.


ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಪ್ಪ (ಹೂಡಿ ಚಿನ್ನಿ), ಸಾಮಾಜಿಕ ಹೋರಾಟಗಾರ ಯಡಹಳ್ಳಿ ಮಂಜುನಾಥ್, ಎಸ್‌ಡಿಎಂಸಿ ಸದಸ್ಯ ಗಣೇಶ್, ಉಪಾಧ್ಯಕ್ಷೆ ಅನ್ವಿತಾ, ವಿನಾಯಕ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಸವರಾಜು, ಕಾರ್ಯದರ್ಶಿ ಲಿಂಗದೇವರು, ಖಜಾಂಚಿ ಹರೀಶ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Trending

error: Content is protected !!