Connect with us

Mysore

ರಾಗಿ ಖರೀದಿ ಕೇಂದ್ರದಲ್ಲಿ, ರೈತರಿಗೆ ಅನ್ಯಾಯ : ರೈತ ಸಂಘದಿಂದ ಪ್ರತಿಭಟನೆ ಎಚ್ಚರಿಕೆ

Published

on

ಸಾಲಿಗ್ರಾಮ ಪಟ್ಟಣದ ಎ ಪಿ ಎಂ ಸಿ ಆವರಣದಲ್ಲಿ  ರಾಗಿ ಖರೀದಿ ಕೇಂದ್ರದಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದ್ದು , ತೂಕದಲ್ಲಿ ಮೋಸ ಮಾಡಿ, ರೈತರಿಂದ ಹಣವನ್ನು  ವಸೂಲಿ ಮಾಡುತ್ತಿದ್ದು, ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ರೈತ ಸಂಘ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡುವುದಾಗಿ ರೈತ ಸಂಘದ ಅಧ್ಯಕ್ಷ ಎಸ್. ಬಿ. ಶೇಖರ್ ಎಚ್ಚರಿಕೆ ನೀಡಿದರು.

ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿದ ರೈತ ಸಂಘದವರು ನಂತರ ಮಾತನಾಡಿ   ಆವರಣದಲ್ಲಿ ಕೇಂದ್ರವನ್ನು ತೆರೆದು  15 ದಿನಗಳು ಕಳೆದಿದ್ದು, ಪ್ರಾರಂಭದಿಂದಲೂ ಇಲ್ಲಿಯತನಕ ಟೆಂಡರ್  ಪಡೆದವರಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ  ಇತ್ತ ಕಡೆ ತಲೆ ಹಾಕಿಲ್ಲ, 50 ಕೆ ಜಿ ಚೀಲದ ರಾಗಿಗೆ 52 ಕೆಜಿ ರಾಗಿಯನ್ನು ತೂಕ ಹಾಕಿ  ಹೆಚ್ಚುವರಿಯಾಗಿ ಪಡೆಯುತ್ತಿದ್ದಾರೆ ಮತ್ತು ಒಂದು ಕ್ವಿಂಟಾಲ್  ರಾಗಿಗೆ ರೈತರಿಂದ 20 ರೂ ಪಡೆಯುವ ಬದಲು 50 ರೂ ಗಳನ್ನು ಬಲವಂತವಾಗಿ ತೆಗೆದು ಕೊಳ್ಳುತ್ತಿದ್ದಾರೆ. ರೈತರು ಬರಗಾಲದ ಪರಿಸ್ಥಿತಿಯಲ್ಲೂ ಸಹ ಸಾಲ, ಸೋಲ ಮಾಡಿ, ಬೆವರು ಸುರಿಸಿ ಕಷ್ಟ ಪಟ್ಟು ದುಡಿಮೆ ಮಾಡಿ ಅದರಲ್ಲಿ   ಅಲ್ಪ, ಸ್ವಲ್ಪ ವಾಗಿ ಬಂದಂತಹ ರಾಗಿ ಬೆಳೆಯನ್ನು ಖರೀದಿ ಕೇಂದ್ರಕ್ಕೆ ತಂದರೆ ಇಲ್ಲಿಯೂ ರೈತರಿಗೆ ಮೋಸ ವಾಗುತ್ತಿದೆ. ಸ್ಥಳಕ್ಕೆ ಅಧಿಕಾರಿಗಳು ಬಂದು  ಇದನ್ನು ಸರಿಪಡಿಸದಿದ್ದರೆ ರೈತ ಸಂಘದ ವತಿಯಿಂದ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ರೈತ ಸಂಘದ ಅಧ್ಯಕ್ಷ ಎಸ್ ಬಿ ಶೇಖರ್, ಪದಾಧಿಕಾರಿಗಳಾದ ಎಸ್ ಜೆ ಕುಮಾರ, ಗೌತಮ್, ಶ್ರೀನಿವಾಸ, ನಂಜುಂಡೇಗೌಡ, ಡ್ರೈವರ್ ಕುಮಾರ್ ಸೇರಿದಂತೆ ಇನ್ನಿತರ ರೈತರು ಇದ್ದಾರೆ.

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ಜೂಜಾಡುತ್ತಿದ್ದ ನಾಲ್ವರ ಬಂಧನ

Published

on

ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.

ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

Continue Reading

Mysore

ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.

Published

on

ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.

ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Continue Reading

Mysore

ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ

Published

on

ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.

ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

Trending

error: Content is protected !!