Uncategorized
||ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ||

ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದು ಆಕ್ರೋಶ
ಬ್ಯಾಂಕ್ ಗಳ ಜತೆ ಚರ್ಚೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
**
ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್ ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು ಎನ್ನುವುದು ನನ್ನ ಆಗ್ರಹ ಎಂದು ಅವರು ತಿಳಿಸಿದ್ದಾರೆ.
Mandya
ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ : ಕೆ. ಆರ್ ನಂದಿನಿ

ಮಂಡ್ಯ : ಜಿಲ್ಲೆಯ ರೈತರು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ಭತ್ತ, ಕಬ್ಬು ಬೆಳೆಗಳ ಜೊತೆಗೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಅವರು ರೈತರನ್ನು ಉದ್ದೇಶಿಸಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಹಾಗೂ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಇಂದು ಜಿಲ್ಲಾಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಗತಿಪರ ರೈತರಿಗೆ ಸಮಗ್ರ ಕೃಷಿ ಪದ್ಧತಿ, ಹನಿ ನೀರಾವರಿ ಅಳವಡಿಕೆ ಹಾಗೂ ವಿವಿಧ ಬೆಳೆಗಳ ಕೋಯ್ಲೋತ್ತರ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಣ್ಣಿನ ಫಲವತ್ತತೆಯಲ್ಲಿ, ನೀರಿನ ಸೌಲಭ್ಯದಲ್ಲಿ ಜಿಲ್ಲೆಯು ಶ್ರೀಮಂತಿಕೆಯನ್ನು ಹೊಂದಿದೆ. ಅದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ರೈತರು ಒಂದೇ ರೀತಿಯ ಬೆಳೆಗಳನ್ನು ಬೆಳೆಯದೆ ಇತರೆ ಲಾಭದಾಯಕ ಬೆಳೆಗಳನ್ನು ಸಹ ಬೆಳೆಯಿರಿ ಎಂದು ಕಿವಿಮಾತು ಹೇಳಿದರು.
ರೈತರು ಉದ್ದಿಮೆದಾರರಾಗಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂಬುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದ್ದು, ಯಾವ ಮಣ್ಣಿಗೆ ಯಾವ ಬೆಳೆ ಬೆಳೆಯಬೇಕು, ಯಾವ ವರ್ತಮಾನದಲ್ಲಿ ಯಾವ ಬೆಳೆ ಉತ್ತಮ, ಯಾವುದು ಲಾಭದಾಯಕ ಎಂಬುದನ್ನು ಅರಿತು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಿ ಎಂದರು.
ಮೀನು ಅರೋಗ್ಯಕರ ಆಹಾರವಾಗಿದೆ ಆದರೆ ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಮೀನು ಮಾರಾಟ ಕಡಿಮೆಯಿದೆ. ರೈತ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳ ಮೂಲಕ ಮೀನುಗಾರಿಕೆ ಕುರಿತು ತರಬೇತಿಗಳನ್ನು ನೀಡಿ ಹಾಗೂ ಮೀನು ಮಾರಾಟ ಮಳಿಗೆಗಳನ್ನು ತೆರೆಯಲು ಲೈಸನ್ಸ್ ಸೇರಿತಂತೆ ಇತರೆ ಸಹಾಯಗಳನ್ನು ದೊರಕಿಸಿಕೊಡಲು ಮುಂದಾಗಿ ಎಂದು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸಮಗ್ರ ಕೃಷಿ ಎಂದರೆ ವ್ಯವಸಾಯದ ಒಟ್ಟಿಗೆ ಮೀನುಗಾರಿಕೆ, ತೋಟಗಾರಿಕೆ ಹಾಗೂ ಪಶುಸಂಗೋಪನೆ ಎಲ್ಲವನ್ನು ಒಳಗೊಂಡಿರುವುದು ಆಗಿದೆ. ಆಗಾಗಿ ಕೋಳಿ ಸಾಕಾಣಿಕೆ, ಹಸು ಸಾಕಾಣಿಕೆ ಹಾಗೂ ಕುರಿ ಸಾಕಾಣಿಕೆ ಪದ್ಧತಿಗಳನ್ನು ಅಳವಡಿಸಿಕೊಂಡು ಲಾಭದಾಯಕವಾಗಿ ಮುಂದುವರಿಯಿರಿ ಎಂದು ರೈತ ಭಾಂದವರಿಗೆ ಸಲಹೆ ನೀಡಿದರು.
ಬೆಂಗಳೂರು ಜಿಲ್ಲಾ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರು ಮಾತನಾಡಿ ರೈತರ ಕಷ್ಟವನ್ನು ನೀಗಿಸಲು ಮತ್ತು ರೈತರು ಉದ್ದಿಮೆದಾರರಾಗಲು ಸಲಹೆಗಳನ್ನು ನೀಡಿ ಮತ್ತು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ತೋಟಗಾರಿಕೆ, ಮೀನುಗಾರಿಕೆ ಹಾಗೂ ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ವ್ಯವಸಾಯದಲ್ಲಿ ಒಂದೇ ಹಾದಿಯಲ್ಲಿ ಸಾಗಿದರೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುವುದಿಲ್ಲ, ಸಮಗ್ರ ಕೃಷಿ ಪದ್ಧತಿಯೊಂದಿಗೆ ವ್ಯವಸಾಯ ಮಾಡಲು ಒಮ್ಮೆ ಪ್ರಯತ್ನಿಸಿ ಎಂದು ರೈತರಿಗೆ ಹೇಳಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಹಿತ್ತಲಮಣಿ ಅವರು ಮಾತನಾಡಿ ರೈತರು ದೇಶದ ಹಸಿವು ನೀಗಿಸುವವರು ಅವರನ್ನು ಗೌರವಿಸುವುದು ಎಲ್ಲರ ಆದ್ಯ ಕರ್ತವ್ಯ ಮೊದಲಿಗೆ ರೈತರ ಮಹತ್ವ ತಿಳಿದು ರೈತರನ್ನು ಸಮಾಜ ಗೌರವಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ನಾಗರಾಜು, ರೇಷ್ಮೆ ಇಲಾಖೆ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ರೂಪಶ್ರೀ, ವಿಜ್ಞಾನಿಗಳಾದ ಮಮತಾ, ಆಂಜನಪ್ಪ ಮತ್ತು ವಿಜಯಲಕ್ಷ್ಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Sports
ಮೇ.17 ರಿಂದ ಐಪಿಎಲ್-2025 ಪುನರ್ ಆರಂಭ

ಮುಂಬೈ: ಆಪರೇಷನ್ ಸಿಂಧೂರ ಪ್ರಯುಕ್ತ ಒಂದು ವಾರ ಮುಂದೂಡಿಕೆಯಾಗಿದ್ದ 2025ನೇ ಆವೃತ್ತಿಯ ಐಪಿಎಲ್ ಪಂದ್ಯಗಳು ಮೇ.17ರಿಂದ ಜೂನ್.3 ಮತ್ತೆ ಆರಂಭವಾಗಲಿದೆ.
ಮೇ.29ಕ್ಕೆ ಪ್ರಥಮ ಕ್ವಾಲಿಫೈಯರ್ ಪಂದ್ಯ ನಡೆದರೆ, ಮೇ.30 ಎಲಿಮಿನೇಟರ್ ಪಂದ್ಯ ನಡೆಯಲಿದೆ. ಜೂನ್.1ರಂದು ಎರಡನೇ ಪ್ವಾಲಿಫೈಯರ್ ಪಂದ್ಯ ನಡೆದರೆ ಜೂನ್.3ರಂದು ಫೈನಲ್ ಪಂದ್ಯ ನಡೆಯಲಿದೆ.
ಈ ಎಲ್ಲಾ ಪಂದ್ಯಗಳು ಬೆಂಗಳೂರು, ಜೈಪುರ, ದೆಹಲಿ, ಮುಂಬೈ, ಅಹಮದಾಬಾದ್, ಲಕ್ನೋದ ಕ್ರೀಡಾಂಗಣಗಳಲ್ಲಿ ನಡೆಯಲಿದೆ.
ಕ್ವಾಲಿಫೈಯರ್, ಎಲಿಮಿನೇಟರ್ ಹಾಗೂ ಫೈನಲ್ ಪಂದ್ಯದ ಸ್ಥಳಗಳು ಇನ್ನೂ ನಿಗದಿಯಾಗಿಲ್ಲ.
ಒಂದು ವಾರದ ಮೊದಲ ಪಂದ್ಯ ಆರ್ಸಿಬಿ ಮತ್ತು ಕೆಕೆಆರ್ ನಡುವೆ ನಡೆಯಲಿದ್ದು, ಮೇ.17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಯಾವ್ಯಾವ ದಿನ ಪಂದ್ಯ ನಡೆಯಲಿದೆ?
17-May-25
|
Sat
|
7:30 PM
|
Royal Challengers Bengaluru
|
Kolkata Knight Riders
|
Bengaluru
|
18-May-25
|
Sun
|
3:30 PM
|
Rajasthan Royals
|
Punjab Kings
|
Jaipur
|
18-May-25
|
Sun
|
7:30 PM
|
Delhi Capitals
|
Gujarat Titans
|
Delhi
|
19-May-25
|
Mon
|
7:30 PM
|
Lucknow Super Giants
|
Sunrisers Hyderabad
|
Lucknow
|
20-May-25
|
Tue
|
7:30 PM
|
Chennai Super Kings
|
Rajasthan Royals
|
Delhi
|
21-May-25
|
Wed
|
7:30 PM
|
Mumbai Indians
|
Delhi Capitals
|
Mumbai
|
22-May-25
|
Thu
|
7:30 PM
|
Gujarat Titans
|
Lucknow Super Giants
|
Ahmedabad
|
23-May-25
|
Fri
|
7:30 PM
|
Royal Challengers Bengaluru
|
Sunrisers Hyderabad
|
Bengaluru
|
24-May-25
|
Sat
|
7:30 PM
|
Punjab Kings
|
Delhi Capitals
|
Jaipur
|
25-May-25
|
Sun
|
3:30 PM
|
Gujarat Titans
|
Chennai Super Kings
|
Ahmedabad
|
25-May-25
|
Sun
|
7:30 PM
|
Sunrisers Hyderabad
|
Kolkata Knight Riders
|
Delhi
|
26-May-25
|
Mon
|
7:30 PM
|
Punjab Kings
|
Mumbai Indians
|
Jaipur
|
27-May-25
|
Tue
|
7:30 PM
|
Lucknow Super Giants
|
Royal Challengers Bengaluru
|
Lucknow
|
28-May-25
|
Wed
|
||||
29-May-25
|
Thu
|
7:30 PM
|
Qualifier 1
|
TBC
|
|
30-May-25
|
Fri
|
7:30 PM
|
Eliminator
|
TBC
|
|
31-May-25
|
Sat
|
||||
01-Jun-25
|
Sun
|
7:30 PM
|
Qualifier 2
|
TBC
|
|
02-Jun-25
|
Mon
|
||||
03-Jun-25
|
Tue
|
7:30 PM
|
Final
|
TBC
|
Uncategorized
ಅಸಭ್ಯ ವರ್ತನೆ: ಗ್ರಾ.ಪಂ. ಉಪಾಧ್ಯಕ್ಷನ ವಿರುದ್ಧ ಮಹಿಳೆ ದೂರು, ಪಕ್ಷದಿಂದ ಉಚ್ಚಾಟನೆ

ವಿಟ್ಲ: ರಸ್ತೆಯ ವಿವಾದಕ್ಕೆ ಸಂಬಂಧಿಸಿದ ಂತೆ ಮಹಿಳೆಯ ಜೊತೆ ಅಸಭ್ಯ ವರ್ತನೆ ತೋರಿದ ಗ್ರಾಮ ಪಂಚಾಯತಿ ಉಪಾಧ್ಯಕ್ಷನ ವಿರುದ್ಧ ಮಹಿಳೆ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ತಕ್ಷಣ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ
ಇಡ್ಕಿದು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಕೊಡೆಂಚರಪಾಲು ಪ್ರಕರಣದ ಆರೋಪಿ.ಮನೆಗೆ ಹೋಗುವ ರಸ್ತೆಗೆ ಸಂಬಂಧಿಸಿದ ಂತೆ ಮಹಿಳೆಗೂ ಪದ್ಮನಾಭ ಅವರಿಗೂ ವಿವಾದ ಇತ್ತು
ರಸ್ರೆಯ ಗೇಟಿಗೆ ಬೀಗ ಹಾಕಿದ್ದನ್ನು ವಿಚಾರಿಸಲು ಬಂದ ಮಹಿಳೆ ಮುಂದೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ (ಈ ಬಗ್ಗೆ ವೀಡಿಯೋ ವೈರಲ್ ಆಗಿದೆ.) ಎನ್ನಲಾಗಿದೆ. ಮಹಿಳೆ ಪದ್ಮನಾಭ ಸಪಲ್ಯ ಅವರ ವಿರುದ್ಧ ವಿಟ್ಲ ಪೊಲೀಸರಿಗೆ ದೂರು ನೀಡಿದರು.ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಚ್ಚಾಟನೆ; ರಾಜೀನಾಮೆಗೆ ಸೂಚನೆ
ಘಟನೆಯ ಮಾಹಿತಿ ಪಡೆದ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ತಕ್ಷಣದಿಂದ ಜಾರಿಗೆ ಬರುವಂತೆ ಪದ್ಮನಾಭ ಸಪಲ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಲ್ಲದೇ ಕೂಡಲೇ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ
-
Hassan20 hours ago
ಮುಹೂರ್ತ ಮುಗಿಸಿ ಪರೀಕ್ಷೆ ಬರೆಯಲು ಬಂದ ವಧು
-
Hassan20 hours ago
ಹಾಸನ : ಹೃದಯಾಘಾತದಿಂದ ಯುವಕ-ಯುವತಿ ಸಾ*ವು
-
Kodagu17 hours ago
ನಂದಿನೆರವಂಡ ಉತ್ತಪ್ಪ ನಿಧನ
-
Mandya16 hours ago
ವ್ಯವಸಾಯದಲ್ಲಿ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕಿದೆ : ಕೆ. ಆರ್ ನಂದಿನಿ
-
Kodagu17 hours ago
ಜಾತಿಗಣತಿ ಸಮೀಕ್ಷೆ ಲೋಪದೋಷ : ಅಧಿಕಾರಿಗಳಿಗೆ ತಹಸೀಲ್ದಾರ್ ಕ್ಲಾಸ್..!
-
Hassan15 hours ago
ಸಾಹಿತಿ ಭಾನುಮುಷ್ತಾಕ್ ರವರಿಗೆ ಬೂಕರ್ ಪ್ರಶಸ್ತಿ : ನಗರದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಸಂಭ್ರಮ
-
Kodagu19 hours ago
ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್ ಗಳಲ್ಲಿ)
-
Kodagu18 hours ago
ಸಮಸ್ಯೆ ಆಲಿಸಿದ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ