Connect with us

Education

ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ಕಲಿಸಿಕೊಡುತ್ತದೆ

Published

on

ಆಲೂರು: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ಕಲಿಸಿಕೊಡುತ್ತದೆ ಎಂದು ಶಾಸಕ‌ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಲಯನ್ಸ್ ಕ್ಲಬ್ ಭವನದಲ್ಲಿ ಶನಿವಾರ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸೇವೆ ಹಾಗೂ ಅರಕಲಗೂಡು ವರದರಾಜು ಕಾಂತಮ್ಮ ಪದವಿಪೂರ್ವ ಕಾಲೇಜು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ವಿಶೇಷ ಶಿಬಿರ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಸಾಮಾಜಿಕ ಸೇವಾಗುಣ, ನಾಯಕತ್ವ ಗುಣ, ಸಹಬಾಳ್ವೆ, ಸಮುದಾಯ ಅಭಿವೃದ್ಧಿ, ವ್ಯಕ್ತಿತ್ವ ವಿಕಸನ, ಸಂಘಟನೆ, ಮಾನವೀಯ ಗುಣ, ಶ್ರಮದಾನದಂತಹ ಅನೇಕ ಮೌಲ್ಯಗಳನ್ನು ಕಲಿಸಿಕೊಡುತ್ತವೆ. ವಿದ್ಯಾರ್ಥಿಯ ಜೀವನದಲ್ಲಿಯೇ ಆದರ್ಶಗಳನ್ನು ರೂಡಿಸಿಕೊಳ್ಳಲು ಅನುಕೂಲವಾಗಿವೆ ಎಂದರು.

ಅರಕಲಗೂಡು ವರದರಾಜು ಕಾಂತಮ್ಮ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಚಂದ್ರಶೇಕರ್ ಮಾತನಾಡಿ, ಏಳು ದಿನಗಳ ಕಾಲದ ಸೇವಾ ಶಿಬಿರದಲ್ಲಿ
ಬದುಕಿಗೆ ಬೇಕಾದ ಮೌಲ್ಯಯುತ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ. ಯುಪೀಳಿಗೆಯು ಗ್ರಾಮಗಳನ್ನು ಸ್ವಚ್ಚ ಮತ್ತು ಸುಂದರ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸಬೇಕು. ನೈರ್ಮಲ್ಯ, ಆರೋಗ್ಯ, ಶಿಕ್ಷಣದ ಬಗೆಗೆ ಗ್ರಾಮೀಣಭಾಗದ ಜನರಲ್ಲಿ ಅರಿವು ಮೂಡಿಸಲು ಶಿಬಿರಾರ್ಥಿಗಳು ಪ್ರಯತ್ನಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕ ಮಂಜೇಗೌಡ, ಜ್ಯೂಯಲರಿ ಮಾಲೀಕ ಚಂದ್ರು, ಲಯನ್ಸ್ ಕ್ಲಬ್ ಸದಸ್ಯರಾದ ಪ್ರವೀಣ್, ರಾಜಣ್ಣ ಬಿ. ಜೆ.ಪಿ ಮುಖಂಡರಾದ ರುದ್ರೇಗೌಡ,‌ ಅಬ್ಬನ‌ಕೃಷ್ಣಮೂರ್ತಿ, ಅಜಿತ್, ಲೊಕೇಶ್, ಹನುಮಂತೇಗೌಡ,‌ ಜೆ.ಸಿ.ಬಿ ರವಿ ಸೇರಿದಂತೆ, ಚೇತನ್ ಮಗ್ಗೆ ಮುಂತಾದವರು ಮುಂತಾದವರು ಹಾಜರಿದ್ದರು.

ವರದಿ ಸತೀಶ್ ಚಿಕ್ಕಕಣಗಾಲು

Continue Reading

Education

Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ

Published

on

Free Coaching for KAS, Banking, SSC 2025 – ಸಮಾಜ ಕಲ್ಯಾಣ ಇಲಾಖೆಯಿಂದ ಸರ್ಕಾರಿ ನೌಕರಿಗಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

2024-25ನೇ ಸಾಲಿಗೆ ಸಂಪೂರ್ಣ ಉಚಿತ ತರಬೇತಿಯನ್ನು ಅರ್ಹ ಅಭ್ಯರ್ಥಿಗಳಿಗೆ ನೀಡುತ್ತಿದ್ದು, ಅರ್ಜಿ ಸಲ್ಲಿಸುವ ಹಾಗೂ ಉಚಿತ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಯಾವ ಯಾವ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು?

ಈ ಯೋಜನೆಯ ಅಡಿಯಲ್ಲಿ KAS, SSC, Banking, ರೈಲ್ವೆ, ನ್ಯಾಯಾಂಗ ಸೇವೆ ಸೇರಿದಂತೆ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುತ್ತದೆ. ಇದರ ಜೊತೆಗೆ ಮಾಸಿಕ 5,000ರೂ. ಆರ್ಥಿಕ ಸಹಾಯ ನೀಡಲಾಗುವುದು.

ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು?

SC ಹಾಗೂ ST ವರ್ಗಕ್ಕೆ ಸೇರಿದವರಾಗಿದ್ದು, ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆಧಾಯವು 5 ಲಕ್ಷ ರೂ. ಒಳಗೆ ಇರಬೇಕು ಹಾಗೂ ಅಭ್ಯರ್ಥಿಯ ವಯಸ್ಸು 21 ರಿಂದ 37 ವರ್ಷದ ಒಳಗಿರಬೇಕು.

ಆಯ್ಕೆ ಮಾಡಿಕೊಳ್ಳುವ ವಿಧಾನ – ಸಾಮಾನ್ಯ ಪ್ರವೇಶ ಪರೀಕ್ಷೆ ಮುಕಾಂತರ

2024-25ನೇ ಸಾಲಿಗೆ ಸಮಾಜ ಕಲ್ಯಾಣ ವತಿಯಿಂದ SC / ST ವಿದ್ಯಾರ್ಥಿಗಳಿಗಾಗಿ KAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ Free Coaching ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಫೆಬ್ರವರಿ 2025:

ಅರ್ಜಿ ಸಲ್ಲಿಸಲು ಜಾಲತಾಣದ ವಿಳಾಸ : https://swdservices.karnataka.gov.in/IGCCD

Continue Reading

Education

ದ್ವಿಚಕ್ರ ವಾಹನ ಖರೀದಿಸಲು ಕೇಂದ್ರದಿಂದ 32,500ರೂ. ತನಕ ಸಹಾಯಧನ : ಅರ್ಜಿ ಸಲ್ಲಿಸೋದು ಹೇಗೆ?

Published

on

PM E Drive Scheme : ದೇಶದಲ್ಲಿ ವಿದ್ಯುತ್ ಚಲನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಾನ್ಯ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟವು ಸೆಪ್ಟೆಂಬರ್ 11, 2024ರಂದು PM ಎಲೆಕ್ಟ್ರಿಕ್ ಡ್ರೈವ್ ಎಂಬ ಯೋಜನೆಗೆ ಅನುಮೋದನೆ ನೀಡಿತು. ಈ ಯೋಜನೆಯು ಎರಡು ವರ್ಷದ ಅವಧಿಯಲ್ಲಿ ಒಟ್ಟು ₹10,900 ಕೋಟಿ ಆರ್ಥಿಕ ವೆಚ್ಚವನ್ನು ಹೊಂದಿದೆ.

ಪಿ. ಎಂ. ಇ ಡ್ರೈವ್ ಯೋಜನೆಯ ಉದ್ದೇಶ :

ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳಿಂದ ಪರಿಸರದ ಮಾಲಿನ್ಯದ ಹೆಚ್ಚಾಗುತ್ತಿದ್ದೂ, ಇದನ್ನು ಹತೋಟಿಗೆ ತರಲು ಮತ್ತು ವಿದ್ಯುತ್ ಚಾಲಿತ ವಾಹನ ಉಪಯೋಗವನ್ನು ಹೆಚ್ಚಿಸುವ ಉದ್ದೇಶ ಈ ಯೋಜನೆಯದ್ದಾಗಿದೆ.

ಈ ಯೋಜನೆಯ ಅಡಿಯಲ್ಲಿ ವಿವಿಧ ವಿದ್ಯುತ್ ಚಾಲಿತ ವಾಹನಗಳನ್ನು ಖರೀದಿಸಲು ಕೇಂದ್ರ ಸರ್ಕಾರವು 32,500ರೂ. ವರೆಗೆ ಸಬ್ಸಿಡಿ ನೀಡುತ್ತಿದೆ.

ಯಾವ ವಾಹನಗಳಿಗೆ ಎಷ್ಟು ಸಬ್ಸಿಡಿ ?

• ಎಲೆಕ್ಟ್ರಿಕ್ ದ್ವಿ-ಚಕ್ರ ವಾಹನ ಖರೀದಿಸುವವರಿಗೆ ಮೊದಲ ವರ್ಷದಲ್ಲಿ 10,000ರೂ. ಹಾಗೂ ಎರಡನೇ ವರ್ಷ 5,000ರೂ. ನೀಡಲಾಗುವುದು.
• ತ್ರಿ-ಚಕ್ರ ವಾಹನಗಳಿಗೆ ಮೊದಲ ವರ್ಷ 25,000ರೂ. ಹಾಗೂ ಎರಡನೇ ವರ್ಷ 12,500ರೂ. ನೀಡಲಾಗುತ್ತದೆ.

ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯ ಅಡಿಯಲ್ಲಿ ಲಾಭ ಪಡೆಯಲು ಮೊದಲು ನಿಮ್ಮ ವಿದ್ಯುತ್ ವಾಹನವನ್ನು ನಿಮ್ಮ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಣಿ ಮಾಡಿಸಿರಿ. ನಂತರದಲ್ಲಿ ನಿಮ್ಮ ವಾಹನದ ಡಿಲರ್ ನಿಮ್ಮ ಆಧಾರ್ ಸಂಖ್ಯೆ ಬಳಸಿ ನಿಮಗೆ e-Voucher ನೀಡುತ್ತಾರೆ.

ಇದರ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ – https://pmedrive.heavyindustries.gov.in/

Continue Reading

Education

ಈ ವರ್ಷದ ಸಂಕ್ರಾಂತಿ ಹಬ್ಬಕ್ಕೆ ಸರ್ಕಾರದಿಂದ ಮಹಿಳೆಯರಿಗೆ ಕೊಡುಗೆ : ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ!

Published

on

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತಹ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಇಲ್ಲಿಯವರೆಗೆ 15 ಕಂತಿನಲ್ಲಿ 30,000ರೂ. ನೀಡಲಾಗಿದೆ.

ಈ ಯೋಜನೆಯ ಹಣವನ್ನು ಪ್ರತಿ ತಿಂಗಳು ಅರ್ಹ ಮಹಿಳಾ ಪಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆಯ (DBT – Direct Benefit Transfer) ಮುಕಾಂತರ 2,000ರೂ. ಹಣವನ್ನು ಜಮಾ ಮಾಡಲಾಗುತ್ತಿದೆ.

16ನೇ ಕಂತಿನ ಹಣವನ್ನು ಯಾವಾಗ ಜಮಾ ಮಾಡಲಾಗುವುದು?

ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರತಿ ತಿಂಗಳು 11ನೇ ತಾರೀಕಿನಿಂದ 16ನೇ ತಾರೀಕಿನ ಒಳಗಾಗಿ ಜಮಾ ಮಾಡಲಾಗುತ್ತಿದೆ. ಅದೇ ರೀತಿ ಈ 16ನೇ ಕಂತಿನ 2,000ರೂ. ಹಣವನ್ನು ಜನವರಿ 11, 2025ರಿಂದ ಜನವರಿ 16, 2025ನೇ ತಾರೀಕಿನ ಒಳಗಾಗಿ ಜಮಾ ಮಾಡಲಾಗುವುದು…

Continue Reading

Trending

error: Content is protected !!