Cinema
‘ಅಪ್ಪು ಅಭಿಮಾನಿ’ಯಾಗಿ ಬರುತ್ತಿದ್ದಾರೆ ತಾರಕಾಸುರ ಖ್ಯಾತಿಯ ರವಿಕಿರಣ್

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ.
‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ ಚಿತ್ರದಲ್ಲಿ ರವಿಕಿರಣ್, ಪುನೀತ್ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅಪ್ಪು ಅಭಿಮಾನಿಯೊಬ್ಬ ಜೀವನದಲ್ಲಿ ಏನೆಲ್ಲಾ ಸಾಧಿಸುತ್ತಾನೆ ಎಂದು ಸಾರುವ ಈ ಚಿತ್ರದಲ್ಲಿ ರವಿಕಿರಣ್ ಜೊತೆಗೆ ರಾಘವೇಂದ್ರ ರಾಜಕುಮಾರ್, ಶರತ್ ಲೋಹಿತಾಶ್ವ, ಸುಮನ್, ಚಿದಾನಂದ್, ಥ್ರಿಲ್ಲರ್ ಮಂಜು, ಶಿವಪ್ಪ ಕುಡ್ಲೂರು ಮುಂತಾದವರು ನಟಿಸುತ್ತಿದ್ದಾರೆ.
ಬಿಡುಗಡೆಗೆ ಸಿದ್ಧವಾಗುತ್ತಿರುವ ಈ ಚಿತ್ರದ ಪ್ರಚಾರದ ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರತಂಡವು ನರ್ತಕಿ ಚಿತ್ರಮಂದಿರದ ಎದುರು ಪುನೀತ್ ಅವರ 50 ಅಡಿ ಕಟೌಟ್ ನಿಲ್ಲಿಸಿದೆ. ಪುನೀತ್ ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ‘ಅಪ್ಪು’ ಇತ್ತೀಚೆಗೆ ಮರುಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ ‘ಅಪ್ಪು ಅಭಿಮಾನಿ’ ಚಿತ್ರತಂಡದ ವತಿಯಿಂದ ‘ಅಪ್ಪು ಅಭಿಮಾನಿ’ ಚಿತ್ರದ 50 ಅಡಿ ಕಟೌಟ್ ನಿಲ್ಲಿಸಲಾಗಿದೆ. ಚಿತ್ರದಲ್ಲಿ ನಾಯಕ ರವಿ ಕಿರಣ್, ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವುದರಿಂದ ಕಟ್ಔಟ್ನಲ್ಲಿ ಅಪ್ಪು ನಂತರ ನಾಯಕನ ಚಿತ್ರವೂ ಇದೆ.
ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ರಾಘವೇಂದ್ರ ರಾಜಕುಮಾರ್, ಸಾ.ರಾ. ಗೋವಿಂದು, ಎಂ.ಎನ್. ಸುರೇಶ್ ಮುಂತಾದವರು ಹಾಜರಿದ್ದರು.
ಅಕ್ಷಯ ಮೂವಿ ಫ್ಯಾಕ್ಟರಿ ಸಂಸ್ಥೆ ನಿರ್ಮಿಸಿರುವ ಈ ಚಿತ್ರವನ್ನು ಡಾ. ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಶೇಖ್ ಮುನೀರ್ ಪಾಷಾ ಕಥೆ, ಮಣಿಕಾಂತ್ ಕದ್ರಿ ಸಂಗೀತ ಈ ಚಿತ್ರಕ್ಕಿದೆ.
Cinema
ಲಾಂಗ್ ಹಿಡಿದು ರೀಲ್ಸ್ ಪ್ರಕರಣ: ಬಿಗ್ಬಾಸ್ ಖ್ಯಾತಿಯ ರಜತ್ ಮತ್ತೆ ಬಂಧನ

ಬೆಂಗಳೂರು: ಲಾಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಿಗ್ಬಾಸ್ ಖ್ಯಾತಿಯ ರಜತ್ನನ್ನು ಬುಧವಾರ ಬಂಧಿಸಲಾಗಿದೆ.
ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್ಗೆ ಪೊಲೀಸರು ನೋಟಿಸ್ ನೀಡಿದ್ದರು. ರೀಲ್ಸ್ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದು. ಆದರೆ ರಜತ್ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್ಬಿಡಬ್ಲ್ಯೂ ಜಾರಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್ನನ್ನು ಬಂಧಿಸಿದ್ದಾರೆ.
Cinema
ಬಾಲಿವುಡ್ ಭಾಯ್ ಜಾನ್ಗೆ ಮತ್ತೆ ಕೊಲೆ ಬೆದರಿಕೆ ಸಂದೇಶ: ಆತಂಕದಲ್ಲಿ ಫ್ಯಾನ್ಸ್

ಮುಂಬೈ: ಬಾಲಿವುಡ್ನ ಭಾಯ್ ಜಾನ್ ಎಂದೇ ಹೆಸರುವಾಸಿಯಾಗಿರುವ ನಟ ಸಲ್ಮಾನ್ ಖಾನ್ಗೆ ಇಂದು (ಸೋಮವಾರ) ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್ ಆತಂಕಕ್ಕೆ ಒಳಗಾಗಿದ್ದಾರೆ.
ಮುಂಬೈನ್ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್ಖಾನ್ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್ ನಂಬರ್ಗೆ ಸಂದೇಶ ಬಂದಿದೆ.
ಬೆದರಿಕೆ ಸಂದೇಶ ರವಾನಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಇದೀಗ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಬೆದರಿಕೆಯ ಹೊಣೆಯನ್ನೂ ಯಾರು ಸಹ ಹೊತ್ತುಕೊಂಡಿಲ್ಲ. ಇನ್ನು ನಟ ಸಲ್ಮಾನ್ ಖಾನ್ ಅವರಾಗಲಿ ಹಾಗೂ ಅವರ ಕುಟುಂಬಸ್ಥರಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿಂದೆಯೂ ಹಲವು ಬಾರಿ ಸಲ್ಮಾನ್ ಖಾನ್ಗೆ ಬೆದರಿಕೆಗಳು ಬಂದಿದ್ದವು. ಗ್ಯಾಂಗ್ಸ್ಟರ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್ನಿಂದ ಬೆದರಿಕೆಗಳು ಬಂದಿವೆ.
ಈ ಹಿನ್ನೆಲೆಯಲ್ಲಿ ನಟ ಸಲ್ಮಾನ್ ಖಾನ್ ಮನೆಯ ಸುತ್ತಮತ್ತ ಹಲವು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
Cinema
ಸುದೀಪ್ ಫ್ಯಾನ್ಸ್ಗೆ ಗುಡ್ ನ್ಯೂಸ್: ಏ.16ರಿಂದ ಶುರುವಾಗಲಿದೆ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು.
ಈಗ ಏಪ್ರಿಲ್.16ಕ್ಕೆ ಏನಾಗಲಿದೆ ಎಂದು ಸ್ವತಃ ಸುದೀಪ್ ಹೇಳಿಕೊಂಡಿದ್ದಾರೆ. ‘ಏಪ್ರಿಲ್.16ರಂದು ಏನಾಗಲಿದೆ ಎಂಬ ಕುತೂಹಲವಿರುವವರಿಗೆ, ಅಂದು ನಮ್ಮ ‘ಬಿಲ್ಲ ರಂಗ ಭಾಷಾ’ ಚಿತ್ರ ಪ್ರಾರಂಭವಾಗಲಿದೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬಹಳ ಖುಷಿಯಾಗಿದ್ದಾರೆ.
ಕಳೆದ ವರ್ಷ ಸುದೀಪ್ ಹುಟ್ಟುಹಬ್ಬದಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು ನಿರ್ದೇಶಕ ಅನೂಪ್ ಭಂಡಾರಿ. ಅದರಂತೆ, ಅದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿತ್ತು. ಆದರೆ, ಸುದೀಪ್ ಆ ನಂತರ ‘ಬಿಗ್ ಬಾಸ್’, ‘ಮ್ಯಾಕ್ಸ್’, ಸಿಸಿಎಲ್ನಲ್ಲಿ ಬ್ಯುಸಿಯಾಗಿದ್ದರಿಂದ ಚಿತ್ರವು ವಿಳಂಬವಾಯಿತು. ಈಗ ಕೊನೆಗೂ ಚಿತ್ರ ಏಪ್ರಿಲ್.16ಕ್ಕೆ ಪ್ರಾರಂಭವಾಗುತ್ತಿದೆ.
‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದರು. ’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾ ಆಗಲಿದೆ. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಲಿದೆ’ ಎಂದು ಅವರು ಹೇಳಿದ್ದರು.
ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್ ಬಸ್ಟರ್ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu19 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu16 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ