Sports
ಮೆಗಾ ಹರಾಜಿಗೂ ಮುನ್ನ RCB ಉಳಿಸಿಕೊಂಡ ಆಟಗಾರರು ಇವರೇ ನೋಡಿ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಆರು ಆಟಗಾರರನ್ನು ರಿಟೈನ್ ಮಾಡಲು ಬಯಸಿದರೆ ಹರಾಜು ಮೊತ್ತದಿಂದ 79 ಕೋಟಿ ರೂ. ನೀಡಬೇಕಾಗುತ್ತದೆ.
ಐಪಿಎಲ್ ಇತಿಹಾಸದಲ್ಲಿ ಮೆಗಾ ಹರಾಜು ನಡೆದಿರುವುದು ಕೇವಲ ನಾಲ್ಕು ಬಾರಿ ಮಾತ್ರ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಉಳಿಸಿಕೊಂಡಿದ್ದು ಕೇವಲ ಆರು ಆಟಗಾರರನ್ನು ಮಾತ್ರ. ಇವರಲ್ಲಿ ಆರ್ಸಿಬಿ ತಂಡದ ಮೊದಲ ರಿಟೈನ್ ಆಟಗಾರ ವಿರಾಟ್ ಕೊಹ್ಲಿ ಸೆಂಟರ್ ಅಟ್ರಾಕ್ಷನ್.
2011 ರಲ್ಲಿ ನಡೆದ ಮೊದಲ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರಾಟ್ ಕೊಹ್ಲಿಯನ್ನು ಮಾತ್ರ ರಿಟೈನ್ ಮಾಡಿಕೊಂಡಿತ್ತು. ಅಂದು ಆರ್ಸಿಬಿ 8.20 ಕೋಟಿ ರೂ. ನೀಡಿ ಕಿಂಗ್ ಕೊಹ್ಲಿಯನ್ನು ತಂಡದಲ್ಲೇ ಉಳಿಸಿಕೊಳ್ಳಲು ಯಶಸ್ವಿಯಾಗಿದ್ದರು.
ಇದಾದ ಬಳಿಕ ಮೆಗಾ ಹರಾಜು ನಡೆದಿದ್ದು 2014 ರಲ್ಲಿ. ಈ ಹರಾಜಿಗೂ ಮುನ್ನ ಆರ್ಸಿಬಿ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರೆಂದರೆ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್. ಅಂದು ಆರ್ಸಿಬಿ ಕೊಹ್ಲಿಗೆ 12.50 ಕೋಟಿ ರೂ. ನೀಡಿದರೆ, ಕ್ರಿಸ್ ಗೇಲ್ಗೆ 7.50 ಕೋಟಿ ರೂ. ಹಾಗೂ ಎಬಿಡಿಗೆ 9.50 ಕೋಟಿ ರೂ. ಪಾವತಿಸಿದ್ದರು.
ಇನ್ನು ಮೂರನೇ ಮೆಗಾ ಹರಾಜು ನಡೆದದ್ದು 2018 ರಲ್ಲಿ. ಈ ಮೆಗಾ ಆಕ್ಷನ್ಗೂ ಮುನ್ನ ಆರ್ಸಿಬಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಹಾಗೂ ಸರ್ಫರಾಝ್ ಖಾನ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದರು. ಅಂದು ಕೊಹ್ಲಿ ಗಾಗಿ 17 ಕೋಟಿ ರೂ. ಡಿವಿಲಿಯರ್ಸ್ಗೆ 11 ಕೋಟಿ ರೂ. ನೀಡಲಾಗಿತ್ತು. ಹಾಗೆಯೇ ಸರ್ಫರಾಝ್ ಖಾನ್ಗೆ 3 ಕೋಟಿ ರೂ. ನೀಡಲಾಗಿತ್ತು.
2022 ರಲ್ಲಿ ನಡೆದ ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಅವರನ್ನು ರಿಟೈನ್ ಮಾಡಿಕೊಂಡಿದ್ದರು. ಈ ವೇಳೆ ಕೊಹ್ಲಿಗೆ ನೀಡಲಾದ ಮೊತ್ತ 15 ಕೋಟಿ ರೂ. ಇನ್ನು ಗ್ಲೆನ್ ಮ್ಯಾಕ್ಸ್ವೆಲ್ 11 ಕೋಟಿ ರೂ. ಪಡೆದಿದ್ದರು. ಹಾಗೆಯೇ ಮೊಹಮ್ಮದ್ ಸಿರಾಜ್ಗೆ 7 ಕೋಟಿ ರೂ. ನೀಡಲಾಗಿತ್ತು.
ಇದೀಗ ಐಪಿಎಲ್ ಸೀಸನ್ 18ರ ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ಕೆಲ ಸ್ಟಾರ್ ಆಟಗಾರರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಮೊಹಮ್ಮದ್ ಸಿರಾಜ್ ಹೆಸರು ಪಟ್ಟಿಯಲ್ಲಿ ಮೊದಲಿದೆ.
Sports
WCL-2025: ಆಪರೇಷನ್ ಸಿಂಧೂರ ಬಳಿಕ ಭಾರತ-ಪಾಕ್ ಮುಖಾಮುಖಿ

ನವದೆಹಲಿ: ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್ನ ಎರಡನೇ ಆವೃತ್ತಿ ಶುಕ್ರವಾರ(ಜು. 18 ) ಪ್ರಾರಂಭವಾಗಿದ್ದು, ಲೀಗ್ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಚಾಂಪಿಯನ್ ತಂಡವನ್ನು ಪಾಕಿಸ್ತಾನ ಚಾಂಪಿಯನ್ ತಂಡ ಸೋಲಿಸಿದೆ. ಆದರೆ ನಾಳೆ(ಜು.20) ಕಳೆದ ಆವೃತ್ತಿಯ ಚಾಂಪಿಯನ್ ಆಗಿದ್ದ ಭಾರತ ಚಾಂಪಿಯನ್ಸ್ ತಂಡವನ್ನು ಪಾಕಿಸ್ತಾನ ತಂಡ ಆಪರೇಷನ್ ಸಿಂಧೂರದ ನಂತರ ಪ್ರಥಮ ಬಾರಿಗೆ ಮುಖಾಮುಖಿಯಾಗಲಿವೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಪಂದ್ಯವೂ ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಭಾರತದ ಸಮಯದ ಪ್ರಕಾರ ರಾತ್ರಿ 9:00 ಗಂಟೆಗೆ ನಡೆಯಲಿದೆ.
ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಪ್ರಸಾರವಾಗಲಿದೆ.
ಭಾರತ ಚಾಂಪಿಯನ್ ತಂಡದಲ್ಲಿ ಯಾರೆಲ್ಲಾ ಆಡಲಿದ್ದಾರೆ?
ಯುವರಾಜ್ ಸಿಂಗ್, ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಪಿಯೂಷ್ ಚಾವ್ಲಾ, ಸ್ಟುವರ್ಟ್ ಬಿನ್ನಿ, ವರುಣ್ ಆರೋನ್, ವಿನಯ್ ಕುಮಾರ್, ಅಭಿಮನ್ಯು ಮಿಥುನ್, ಸಿದ್ಧಾರ್ಥ್ ಕೌಲ್, ಗುರುಕೀರತ್ ಮಾನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಪಾಕಿಸ್ತಾನ ಚಾಂಪಿಯನ್ ಯಾರೆಲ್ಲಾ ಆಡಲಿದ್ದಾರೆ?
ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಸರ್ಫರಾಜ್ ಅಹ್ಮದ್, ಶಾರ್ಜೀಲ್ ಖಾನ್, ವಹಾಬ್ ರಿಯಾಜ್, ಆಸಿಫ್ ಅಲಿ, ಶಾಹಿದ್ ಅಫ್ರಿದಿ, ಕಮ್ರಾನ್ ಅಕ್ಮಲ್, ಅಮೇರ್ ಯಾಮಿನ್, ಸೊಹೈಲ್ ಖಾನ್, ಸೊಹೈಲ್ ತನ್ವೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Sports
ಶ್ರೀಲಂಕಾ ವಿರುದ್ಧ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ, ಹರ್ಭಜನ್ ಸಿಂಗ್ ದಾಖಲೆ ಮುರಿದ ಮೆಹದಿ ಹಸನ್

ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಐತಿಹಾಸಿಕ ಜಯ ಸಾಧಿಸಿದೆ.
ಕೊಲಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಐತಿಹಾಸಿಕ ಜಯ ಸಾಧಿಸಿದ್ದು, ತಂಡದ ಸ್ಟಾರ್ ಬೌಲರ್ ಮೆಹದಿ ಹಸನ್ ಭಾರತದ ಸ್ಪಿನ್ ಲೆಜೆಂಡ್ ಹರ್ಭಜನ್ ಸಿಂಗ್ ದಾಖಲೆ ಮುರಿದಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಬಾಂಗ್ಲಾದೇಶ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಐತಿಹಾಸಿಕ ಜಯ ಸಾಧಿಸಿದೆ. ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಸಾಧಿಸಿದೆ.
ಆರ್ ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಚರಿತ್ ಅಸಲಂಕಾ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಸ್ಸಾಂಕಾ (46 ರನ್) ಮತ್ತು ಶನಕ (35 ರನ್) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು.
ಈ ಸುಲಭದ ಗುರಿಯನ್ನು ಬೆನ್ನು ಹತ್ತಿದ ಬಾಂಗ್ಲಾದೇಶ ಪರ ತಂಝೀಮ್ ಹಸನ್ ತಮೀಮ್ 47 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 1 ಫೋರ್ನೊಂದಿಗೆ ಅಜೇಯ 73 ರನ್ ಬಾರಿಸಿದರು. ಇನ್ನು ನಾಯಕ ಲಿಟ್ಟನ್ ದಾಸ್ 32 ರನ್ ಕಲೆಹಾಕಿದರು. ಇನ್ನು ತೌಹಿದ್ ಹೃದೋಯ್ 27 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡವು 16.3 ಓವರ್ಗಳಲ್ಲಿ 133 ರನ್ ಬಾರಿಸಿ, 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಬಾಂಗ್ಲಾದೇಶಕ್ಕೆ ಐತಿಹಾಸಿಕ ಜಯ
ಇನ್ನು ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಬಾಂಗ್ಲಾದೇಶಕ್ಕೆ ಇದು ಚೊಚ್ಚಲ ಸರಣಿ ಜಯವಾಗಿದೆ. ಬಾಂಗ್ಲಾದೇಶ ತಂಡವು ಈವರೆಗೆ ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದಿಲ್ಲ. ಈ ಬಾರಿ ಲಂಕಾ ಪಡೆ ವಿರುದ್ಧ 2-1 ಅಂತರದಿಂದ ಸರಣಿ ಗೆಲ್ಲುವ ಮೂಲಕ ಬಾಂಗ್ಲಾದೇಶ್ ತಂಡವು ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದೆ.
ಹರ್ಭಜನ್ ದಾಖಲೆ ಮುರಿದ ಮೆಹದಿ ಹಸನ್
ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಮೆಹದಿ ಹಸನ್ 4 ಓವರ್ ನಲ್ಲಿ ಕೇವಲ 2.80 ಸರಾಸರಿಯಲ್ಲಿ ಕೇವಲ 11ರನ್ ನೀಡಿದ್ದರು. ಈ ಪೈಕಿ ಒಂದು ಮೇಡಿನ್ ಕೂಡ ಸೇರಿತ್ತು. ಇದು ಪ್ರೇಮದಾಸ ಕ್ರೀಡಾಂಗಣದಲ್ಲಿ ಬೌಲರ್ ಒಬ್ಬರ ಟಿ20 ಪಂದ್ಯದ ಅತ್ಯುತ್ತಮ ಪ್ರದರ್ಶನವಾಗಿ ದಾಖಲಾಗಿದೆ.
ಈ ಹಿಂದೆ ಈ ದಾಖಲೆ ಭಾರತದ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. 2012ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಭಜನ್ ಸಿಂಗ್ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಇದು ಈ ಕ್ರೀಡಾಂಗಣದಲ್ಲಿ ವಿದೇಶಿ ಬೌಲರ್ ಒಬ್ಬರ ಅತ್ಯುತ್ತಮ ಪ್ರದರ್ಶನವಾಗಿತ್ತು. ಇದೀಗ ಈ ದಾಖಲೆಯನ್ನು ಬಾಂಗ್ಲಾದೇಶದ ಮೆಹದಿ ಹಸನ್ ಹಿಂದಿಕ್ಕಿದ್ದಾರೆ.
ಉಳಿದಂತೆ ಈ ಮೈದಾನದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ದಾಖಲೆ ಶ್ರೀಲಂಕಾದ ವನಿಂದು ಹಸರಂಗ ಹೆಸರಲ್ಲಿದೆ. ಅವರು ಕೇವಲ 9 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.
Sports
ಲೈಂಗಿಕ ಕಿರುಕುಳ ಆರೋಪ: RCB ಆಟಗಾರ ಯಶ್ ದಯಾಳ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ

ಪ್ರಯಾಗ್ರಾಜ್: ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅನಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಕ್ರಿಕೆಟಿಗ ಯಶ್ ದಯಾಳ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಮುಂದಿನ ವಿಚಾರಣೆಯವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪರ ಆಡುವ ದಯಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ ಎಂದು ಅವರ ಪರ ವಕೀಲ ಗೌರವ್ ತ್ರಿಪಾಠಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅನಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
27 ವರ್ಷದ ಯಶ್ ದಯಾಳ್ ವಿರುದ್ಧ ಜುಲೈ 6 ರಂದು ಗಾಜಿಯಾಬಾದ್ ಜಿಲ್ಲೆಯ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ನ ಸೆಕ್ಷನ್ 69 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮದುವೆಯ ನೆಪದಲ್ಲಿ ಮಹಿಳೆಯೊಬ್ಬರನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಯಶ್ ದಯಾಳ್ ಮೇಲಿದೆ.
ದೂರುದಾರರ ಪ್ರಕಾರ, ಇಬ್ಬರೂ ಸುಮಾರು ಐದು ವರ್ಷಗಳ ಹಿಂದೆ ಭೇಟಿಯಾದೆವು. ದಯಾಳ್ ಮದುವೆಯ ಆಮಿಷವೊಡ್ಡಿ ತನ್ನನ್ನು ಭಾವನಾತ್ಮಕವಾಗಿ, ಮಾನಸಿಕವಾಗಿ ಮತ್ತು ದೈಹಿಕವಾಗಿ ಶೋಷಿಸಿದ್ದಾರೆ. ಮದುವೆ ವಿಷಯವನ್ನು ದಯಾಳ್ ಮುಂದೂಡುತ್ತಲೇ ಇದ್ದರು ಮತ್ತು ಅಂತಿಮವಾಗಿ ದಯಾಳ್ ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿರುವುದು ತಿಳಿಯಿತು ಎಂದು ಸಂತ್ರಸ್ತೆ ಹೇಳಿದ್ದಾರೆ.
ಆರಂಭದಲ್ಲಿ ಜೂನ್ 21 ರಂದು ಮುಖ್ಯಮಂತ್ರಿಗಳ ಆನ್ಲೈನ್ ದೂರು ಪೋರ್ಟಲ್ (ಐಜಿಆರ್ಎಸ್) ಮೂಲಕ ಸಂತ್ರಸ್ತೆ ಯಶ್ ದಯಾಳ್ ಅವರ ವಿರುದ್ಧ ದೂರು ಸಲ್ಲಿಸಿದ್ದರು.
-
State15 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya10 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar16 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar10 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore12 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special15 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu11 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar10 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು