Connect with us

Chamarajanagar

ಮೆಕ್ಕೆಜೋಳ ಖರೀದಿಸಲು ನೊಂದಣಿ ಕೇಂದ್ರ ಕಾರ್ಯಾರಂಭ

Published

on

ಚಾಮರಾಜನಗರ: ಕರ್ನಾಟಕ ಹಾಲು ಮಹಾಮಂಡಳಿಯು (ಕೆಎಂಎಫ್) ರೈತರಿಂದ ನೇರವಾಗಿ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಮೂಲಕ ಮೆಕ್ಕೆಜೋಳ ಖರೀದಿಸುತ್ತಿದ್ದು, ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಚಾಮುಲ್) ಸಹಕಾರ ಸಂಘಗಳ ಮೂಲಕವೂ ಖರೀದಿ ಕೇಂದ್ರ ತೆರೆಯಲಾಗಿದೆ.

ಚಾಮರಾಜನಗರದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ನಿಯಮಿತವು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಒಡೆತನದ ಪಶು ಆಹಾರ ಘಟಕಗಳಿಗೆ ಪಶು ಆಹಾರ ಉತ್ಪಾದನೆಗೆ ಅವಶ್ಯವಿರುವ ಮೆಕ್ಕೆಜೋಳವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ 2,400 ರೂ. ಗಳಂತೆ (ಮೂಲ ಬೆಲೆ, ಎರಡು ಗೋಣಿಚೀಲದ ಮೊತ್ತ ಮತ್ತು ಸಾಗಾಣಿಕೆ ಮೊತ್ತ ಸೇರಿದಂತೆ) ಗುಣಮಟ್ಟ ನಿಬಂಧನೆಗೊಳಪಟ್ಟು ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನವಾಗಿರುತ್ತದೆ.

ಅದರಂತೆ ಜಿಲ್ಲೆಯ ರೈತರಿಂದ ಕರ್ನಾಟಕ ಹಾಲು ಮಹಾಮಂಡಳಿಯ ಹಾಸನ ಪಶು ಆಹಾರ ಘಟಕಕ್ಕೆ ನಿಗದಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿಸಲು ಪ್ರಕ್ರಿಯೆ ಆರಂಭವಾಗಿರುತ್ತದೆ. ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿ ಹಾಗೂ ಒಕ್ಕೂಟದ ನಿಯೋಜಿತ ಅಧಿಕಾರಿಗಳ ಸಮನ್ವಯದೊಂದಿಗೆ ಎನ್‍ಇಎಂಎಲ್ ಸಂಸ್ಥೆ ಅಭಿವೃದ್ಧಿಪಡಿಸಿದ ಇ-ಸಂವೃದ್ಧಿ ಹಾಗೂ ಸರ್ಕಾರದ ಫ್ರೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ನಂತರ ಖರೀದಿಸಲಾಗುವುದು.

ಮೆಕ್ಕೆಜೋಳ ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮೆಕ್ಕೆಜೋಳ ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಎಕರೆಗೆ 12 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳವನ್ನು ಮಾತ್ರ ಖರೀದಿಸಲಾಗುವುದು. ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಪಾವತಿಸಲಾಗುವುದು.

ಮೆಕ್ಕೆಜೋಳ ಮಾರಾಟ ಮಾಡಲು ಆಸಕ್ತ ರೈತರು ಚಾಮರಾಜನಗರದ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯ ತಾಲೂಕು ಉಪ ಕಚೇರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಚಾಮುಲ್ ಮೊ.ಸಂ. 6366824213, ಚಾಮರಾಜನಗರ ಮತ್ತು ಯಳಂದೂರು ಮೊ.ಸಂ. 9945828993, ಗುಂಡ್ಲುಪೇಟೆ ಮೊ.ಸಂ. 9606098335, ಹನೂರು ಮೊ.ಸಂ 9740576484, ಕೊಳ್ಳೇಗಾಲ ಮೊ.ಸಂ. 6366824224 ಸಂಪರ್ಕಿಸುವಂತೆ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ರಾಜ್‍ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

Continue Reading

Chamarajanagar

ಜಾನುವಾರುಗಳ ಮರಣಕ್ಕೆ ರೋಗೋದ್ರೇಕ ಕಾರಣವಲ್ಲ : ಜಿಲ್ಲಾಧಿಕಾರಿ ಶ್ರೀರೂಪ ಸ್ಪಷ್ಟನೆ

Published

on

ಚಾಮರಾಜನಗರ: ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ 6 ದನಗಳು ಹಾಗೂ ಗುನ್ನೂರು ಬಯಲು ಪಳನಿಮೇಡು ಗ್ರಾಮದ 5 ದನಗಳು ವಿಷಯುಕ್ತ ನೀರು ಸೇವಿಸಿ ಮರಣಹೊಂದಿದೆ. ಈ ಜಾನುವಾರುಗಳು ಯಾವುದೇ ರೋಗೋದ್ರೇಕ ಕಾರಣಗಳಿಂದ ಮರಣ ಹೊಂದಿಲ್ಲ ಎಂಬುವುದು ದೃಢಪಟ್ಟಿರುವುದರಿಂದ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶ್ರೀರೂಪ ತಿಳಿಸಿದ್ದಾರೆ.

ಫೆ. 4 ರಂದು ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಪರಶಿವಮೂರ್ತಿ ಅವರ 6 ದನಗಳು (ಹಳ್ಳಿಕಾರ್) ಹಾಗೂ ಫೆ. 5 ರಂದು ಗುನ್ನೂರು ಬಯಲು ಪಳನಿಮೇಡು ಗ್ರಾಮದ ತಂಗರಾಜು ಅವರ 5 ದನಗಳು (ಸ್ಥಳೀಯ) ಮೇಯಲು ಹೋಗಿದ್ದ ಸಂದರ್ಭದಲ್ಲಿ ಹಠಾತ್ ಆಗಿ ಒಟ್ಟು 11 ಜಾನುವಾರುಗಳು ಮೃತಪಟ್ಟಿವೆ.

ಸದರಿ ದನಗಳ ಮರೋಣೋತ್ತರ ಪರೀಕ್ಷೆಯನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ (ಐಎಎಚ್ ಮತ್ತು ವಿಬಿ, ಬೆಂಗಳೂರು) ತಜ್ಞ ವಿಜ್ಞಾನಿಗಳ ತಂಡವು ನಡೆಸಿದ್ದು, ವಿಷಯುಕ್ತ ನೀರು ಸೇವಿಸಿರುವುದರಿಂದ ಜಾನುವಾರುಗಳು ಮರಣ ಹೊಂದಿರುತ್ತದೆ ಎಂದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿರುತ್ತದೆ.

ಈ ಜಾನುವಾರುಗಳು ಯಾವುದೇ ರೋಗೋದ್ರೇಕ ಕಾರಣಗಳಿಂದ ಮರಣ ಹೊಂದಿಲ್ಲ ಎಂಬುವುದು ದೃಢಪಟ್ಟಿರುವುದರಿಂದ ರೈತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶ್ರೀರೂಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಫಲಾನುಭವಿಗಳಿಗೆ ವಿವಿಧ ಯೋಜನೆಯ ದಾಖಲೆಗಳ ವಿತರಿಸಿ ಶಾಸಕ ಮಂಜುನಾಥ್

Published

on

ಹನೂರು : ಹಲವಾರು ವರ್ಷಗಳಿಂದ ಬಗೆಹರಿಯದ ಸಮಸ್ಯೆಗಳನ್ನು ವಿಶೇಷವಾಗಿ ರಾಜ್ಯದ ಜನಕ್ಕೆ, ಅರ್ಹ ಫಲಾನುಭವಿಗಳಿಗೆ ಸರ್ಕಾರ ಹಾಗೂ ಕಂದಾಯ ಇಲಾಖೆ ಡಿಜಿಟಲ್ ಮೂಲಕ ದಾಖಲೆ ನೀಡಲಾಗುತ್ತಾ ಬರಲಾಗುತ್ತಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

ಹನೂರು ತಾಲೂಕಿನ ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ/ಪಿಂಚಣಿ ಅದಾಲತ್ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಯ ದಾಖಲೆಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ರೈತರಿಗೆ ಹಾಗೂ ಸ್ಟಳೀಯ ನಿವಾಸಿಗಳಿಗೆ ಆಧಾರವಾಗವಂತೆ ಮನೆ, ಜಮೀನು ಹಕ್ಕು ಪತ್ರ ಸೇರಿದಂತೆ ಯೋಜನೆಯ ಆದೇಶಗಳನ್ನು ವಿತರಣೆ ಮಾಡಲಾಗುತ್ತಿದೆ. ಜಮೀನು ಪೋಡಿಗೆ ರೈತರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಸಂಬಂಧ ಕಂದಾಯ ಇಲಾಖೆ ದಿಟ್ಟ ನಿರ್ಧಾರ ಕೈಗೊಂಡು ಅರ್ಹರಿಗೆ ಹಕ್ಕು ದಕ್ಕಿಸುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯವನ್ನು ಕಂದಾಯ ಇಲಾಖೆ ಮನೆ ಬಾಗಿಲಿಗೆ ಯೋಜನೆಯನ್ನು ಒದಗಿಸುವ ಕಾರ್ಯ ಮಾಡುತ್ತಿರುವುದು ಸ್ವಾಗತರ್ಹ ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಚೈತ್ರಾ, ಕೊಳ್ಳೇಗಾಲ ಉಪ ತಹಸೀಲ್ದಾರ್ ರವಿ, ಸರ್ವೇ ಅಧೀಕ್ಷಕ ಕುಮಾರಸ್ವಾಮಿ, ಲೊಕ್ಕನಹಳ್ಳಿ ರಾಜಸ್ವ ನಿರೀಕ್ಷಕ ಮಹಾದೇವಸ್ವಾಮಿ, ಕಂದಾಯ ಆಡಳಿತ ಅಧಿಕಾರಿಗಳಾದ ಮಾರುತಿ, ವಿದ್ಯಾಶ್ರೀ, ಶಿವಕುಮಾರ್, ನಂಜುಂಡ, ವಿಷಯ ನಿರ್ವಾಹಕರಾದ ಮಹೇಶ್ವರಿ ಸಿಬ್ಬಂದಿಗಳಾದ ನಿಂಗರಾಜು, ಕೃಷ್ಣ ಮೂರ್ತಿ, ಸಿದ್ದರಾಜು, ಶಿವಚಂದ್ರ, ಇನ್ನಿತರರು ಇದ್ದರು.

Continue Reading

Chamarajanagar

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

Published

on

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕಾವೇರಿ ನದಿ ಮೂಲಕ ಪಾದಯಾತ್ರೆ ಬರುವ ಬಸವನಕಡ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ ಐದು ದಿನಗಳ ಕಾಲ ನಡೆಯುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯ ಸೇರಿದಂತೆ ನೆರೆಯ ತಮಿಳುನಾಡು ರಾಜ್ಯಗಳಿಂದ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಕನಕಪುರ ರಾಮನಗರ, ಚನ್ನಪಟ್ಟಣ ಮಾಗಡಿ ತಾಲೂಕಿನಿಂದ ಪ್ರತಿ ವರ್ಷ ಲಕ್ಷಾಂತರ ಭಕ್ತಾದಿಗಳು ಕಾವೇರಿ ನದಿ ಸಂಗಮದ ಮೂಲಕ ಹಾದು ಬಸವನಕಡ ತಲುಪಿ ನಂತರ ಕಾವೇರಿ ವನ್ಯಜೀವಿ ದಾಮದ ಅರಣ್ಯ ಪ್ರದೇಶದ ಮೂಲಕ ಶಾಗ್ಯ, ಹಲಗಾಪುರ, ತೋಮಿಯಾರ್ ಪಾಳ್ಯ, ಡಿ ಎಮ್ ಸಮುದ್ರದ ಮೂಲಕ ಎಲ್ಲೇಮಾಳ ತಲುಪಿ ಮಲೆ ಮಹದೇಶ್ವರ ಮುಖ್ಯ ರಸ್ತೆಯ ಮೂಲಕ ತೆರಳುವುದು ವಾಡಿಕೆ.

ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಬಸವನಕಡ ಸ್ಥಳಕ್ಕೆ ಭೇಟಿ ನೀಡಿ ಪಾದಯಾತ್ರಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ಕ್ರಮವಾಗಿ ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿದರು.

ನಂತರ ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಈ ಬಾರಿಯೂ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ನಿರೀಕ್ಷೆಗೂ ಮೀರಿ ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಕೆ ಆರ್ ಎಸ್ ಜಲಾಶಯದಿಂದ ನೀರಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಭಕ್ತಾದಿಗಳು ಅರಣ್ಯ ಪ್ರದೇಶದ ಮೂಲಕ ತೆರಳುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಪಾದಯಾತ್ರೆ ತೆರಳುವ ಮಾರ್ಗದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಕಾವೇರಿ ನದಿಯನ್ನು ದಾಟಿ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ತೆರಳಬೇಕಿರುವುದರಿಂದ ಮುಂಜಾಗ್ರತ ಕ್ರಮವಾಗಿ ಎಸ್‌ಟಿಆರ್‌ಎಫ್ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಹೆಚ್ಚು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಸಹ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುವುದರಿಂದ ಬೆಳಕು ಇರುವ ಸಮಯದಲ್ಲಿ ಮಾತ್ರ ತಾವು ಪಾದಯಾತ್ರೆ ಮಾಡಬೇಕು. ತಮ್ಮ ಆಚಾರ ವಿಚಾರ ಸಂಸ್ಕೃತಿಗಳಿಗೆ ಯಾವುದೇ ಧಕ್ಕೆಯಾಗದಂತೆ ಎಲ್ಲ ರೀತಿಯ ಕ್ರಮ ವಹಿಸಲಾಗುವುದು. ಭಕ್ತರು ಸಹ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಗೆ ಕೈಜೋಡಿಸುವ ಮೂಲಕ ತಮ್ಮ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕು. ನಾವು ನಿಮಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.

ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಪಾದಯಾತ್ರಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಾದಯಾತ್ರೆಯ ಮಾರ್ಗದಲ್ಲಿ ಆರೋಗ್ಯ ಇಲಾಖೆ ವತಿಯಿಂದ ತುರ್ತು ಚಿಕಿತ್ಸೆ ಕೇಂದ್ರಗಳನ್ನು ತಜ್ಞ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲ ಕ್ರಮ ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ಜನವರಿ 23 ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಬೆಂಗಳೂರು ದಕ್ಷಿಣ ಜಿಲ್ಲೆಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಪಾದಯಾತ್ರಿಕರಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿರುವುದನ್ನು ಸ್ಮರಿಸಬಹುದು.

ಪರಿಶೀಲನೆ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ತಹಸೀಲ್ದಾರ್ ಚೈತ್ರ, ಮಲೆ ಮಹದೇಶ್ವರ ವನ್ಯ ಧಾಮದ ಡಿಸಿಎಫ್ ಭಾಸ್ಕರ್, ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಎ ಸಿಎಫ್ ವಿರಾಟ್ ಹೊಸೂರು, ಮರಿಸ್ವಾಮಿ ಇನ್ಸೆಕ್ಟರ್ ಆನಂದಮೂರ್ತಿ, ಆರ್‌ಎಫ್ ಒ ನಿರಂಜನ್, ಕಂದಾಯ ನಿರೀಕ್ಷಕ ಮಲ್ಲೇಶ್, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Continue Reading

Trending

error: Content is protected !!