Politics
ವಿಬಿ ಜಿ ರಾಮ್ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರೀ ಗದ್ದಲ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್ಜಿ ಕಾಯ್ದೆವಿಚಾರದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಬಿ-ಜಿರಾಮ್ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.
ವಿಧಾನಸೌಧದಲ್ಲಿ ಇಂದು ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತದೆ. ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿ ಜಿ ರಾಮ್ ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮನರೇಗಾ ಸಂವಿಧಾನದ ಹಕ್ಕುಗಳನ್ನು ನೀಡುವ ಯೋಜನೆ. ಕೆಲಸದ ಹಕ್ಕು ಯೋಜನೆ ನೀಡುತ್ತಿದ್ದ ಯೋಜನೆ ಮನರೇಗಾ. ನರೇಗಾ ವಾಪಸ್ ಜಾರಿ, ವಿಬಿ ಜಿ ರಾಮ್ ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಆಗ್ರಹಿಸುತ್ತದೆ. ಈ ನಿರ್ಣಯವನ್ನು ಈ ಸದನ ನಿರ್ಣಯ ಅಂಗೀಕರಿಸುತ್ತದೆ ಎಂದು ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು.

ಇದೇ ವೇಳೆ ಈ ಸದನ ಅಲ್ಲ, ನಿಮ್ಮ ಸರ್ಕಾರ ವಿರೋಧಿಸುತ್ತದೆ ಎಂದು ಹೇಳಿ ಎಂದು ಅಶೋಕ್ ಒತ್ತಾಯಿಸಿದರು. ಆಗ ಈ ಸದನ ಈ ಸದನವೆಂದು ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ನೀಡಿದರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲವೆಂದು ವಿಪಕ್ಷ ಸದಸ್ಯರು ಟಾಂಗ್ ನೀಡಿದರು.
ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್.ಬಿ. ತಿಮ್ಮಾಪೂರ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದರು. ಅಧ್ಯಕ್ಷರೇ ಅವರನ್ನು ಕೂರಿಸಿ, ಯಾರು ನಿಮ್ಮ ಮಾತು ಕೇಳೋದಿಲ್ಲವೋ ಅವರನ್ನು ಹೊರಗೆ ಹಾಕಿ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರವೆಂದು ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ದರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು.
ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯಿತು. ಭೋಜನದ ನಂತರ ಕಲಾಪ ಶುರುವಾದರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು.
Politics
ಪ್ರಧಾನಿ ಮೋದಿ-ಟ್ರಂಪ್ ನಡುವಿನ ಒಪ್ಪಂದ ಮಹತ್ವದ ಮೈಲಿಗಲ್ಲು: ಬಸವರಾಜ ಬೊಮ್ಮಾಯಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವಿನ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
Politics
ರಾಜ್ಯಪಾಲರು v/s ಸರ್ಕಾರ ಮತ್ತೆ ಸಂಘರ್ಷ: ಸಹಿ ಹಾಕದೇ ರಾಷ್ಟ್ರಪತಿ ಅಂಗಳಕ್ಕೆ ದ್ವೇಷ ಭಾಷಣ ಬಿಲ್
ಬೆಂಗಳೂರು: ರಾಜ್ಯಪಾಲರು v/s ಸರ್ಕಾರ ನಡುವೆ ಸಂಘರ್ಷ ಪುನಃ ಶುರುವಾಗಿದ್ದು, ಸರ್ಕಾರದ ದ್ವೇಷ ಭಾಷಣ ಬಿಲ್ ಗೆ ರಾಜ್ಯಪಾಲರು ಕೊಕ್ಕೆ ಹಾಕಿದ್ದು, ಸಹಿ ಹಾಕದೇ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ಅಂಗಳಕ್ಕೆ ಕಳಿಸಿದ್ದಾರೆ. ಈ ಮೂಲಕ ಮತ್ತೆ ಸರ್ಕಾರ- ರಾಜ್ಯಪಾಲರ ಮಧ್ಯೆ ವಾರ್ ಶುರುವಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಪಾಸ್ ಆಗಿದ್ದ ದ್ವೇಷ ಭಾಷಣ ಬಿಲ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೊಕ್ಕೆ ಹಾಕಿದ್ದಾರೆ. ಬಿಲ್ಗೆ ಸಹಿ ಹಾಕದೇ ರಾಷ್ಟ್ರಪತಿಗಳ ಅಂಗಳಕ್ಕೆ ಮಸೂದೆ ರವಾನೆ ಮಾಡಿದ್ದಾರೆ. ದ್ವೇಷ ಭಾಷಣದ ವ್ಯಾಖ್ಯಾನವೇ ಮಸೂದೆಯಲ್ಲಿ ಅಸ್ಪಷ್ಟವಾಗಿದೆ. ಮಸೂದೆಗೆ ಒಪ್ಪಿಗೆ ಕೊಡದಂತೆ 40ಕ್ಕೂ ಹೆಚ್ಚು ಮನವಿ ಬಂದಿರೋ ಬಗ್ಗೆ ರಾಜ್ಯಪಾಲರು ಉಲ್ಲೇಖ ಮಾಡಿ ರಾಷ್ಟ್ರಪತಿ ಅಂಗಳಕ್ಕೆ ರವಾನಿಸಿದ್ದಾರೆ.

2. ಅರ್ಥಪೂರ್ಣ ಸಮಾಲೋಚನೆ ಮಾಡದೇ ಅಂಗೀಕಾರ.
3. ಮಸೂದೆ ಸಂಬಂಧ ಕೆಲವು ಕಾನೂನು ತೊಡಕುಗಳಿವೆ.
4. ಮಿತಿಮೀರಿದ ಮತ್ತು ಭಯಾನಕ ಪರಿಣಾಮಗಳನ್ನು ಬೀರಲಿವೆ.
5. ಅಭಿವ್ಯಕ್ತಿ ಸ್ವಾತಂತ್ರ್ಯ, ಮೂಲಭೂತ ಹಕ್ಕನ್ನು ಕಸಿಯುವ ಮುನ್ಸೂಚನೆ.
6. ಈ ಮಸೂದೆಯು ಉದ್ದೇಶಕ್ಕಿಂತ ಪರಿಣಾಮಕ್ಕೆ ಆದ್ಯತೆ ನೀಡಿರುತ್ತದೆ.
7. ಸತ್ಯವನ್ನು ಮಾತಾಡಿದ್ರೂ, ಬೌದ್ಧಿಕ ಟೀಕೆ ಮಾಡಿದ್ರೂ ಬಂಧಿಸಬಹುದಾಗಿದೆ.
8. ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆ ಒಬ್ಬ ವ್ಯಕ್ತಿ, ಸಮುದಾಯಕ್ಕೆ ಸೀಮಿತವಾಗಿರಬಾರದು.
9. ಇಡೀ ಸಮಾಜದ ಸಾಮೂಹಿಕ ಹಕ್ಕಾಗಿರಬೇಕು.
10. ಅಧಿಕಾರಿಗಳು ತೀರ್ಮಾನಿಸಿದರೆ ಯಾವುದೇ ಕಾರ್ಯಕ್ರಮ ನಿಷೇಧಿಸಬಹುದು.
11. ಮಸೂದೆಯಲ್ಲಿರುವ ಈ ಕ್ರಮ ಸರಿಯಲ್ಲ ಎಂದು ಕಾರಣವನ್ನು ಉಲ್ಲೇಖಿಸಿದ ರಾಜ್ಯಪಾಲರು ದ್ವೇಷ ಭಾಷಣ ಬಿಲ್ ಅನ್ನು ಸಹಿ ಮಾಡದೇ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ರವಾನೆ ಮಾಡಿದ್ದಾರೆ.
Politics
ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಚೊಂಬು ನೀಡಲಾಗಿದೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್ನಲ್ಲಿ ಏನೂ ನೀಡಿಲ್ಲ. ಕರ್ನಾಟಕಕ್ಕೆ ಒಂದು ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡೆರಡು ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪಿಡ್ ರೈಲು ನೀಡಿದ್ದಾರೆ. ಅದು ಕೂಡ 5 ವರ್ಷ ಸಮಯ ತೆಗೆದುಕೊಂಡಿದ್ದಾರೆ. ನಮಗೆ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರೈಲು ಬೇಕಾಗಿತ್ತು. ನೀರಾವರಿ ಯೋಜನೆಗೆ ಹಣ ಕೇಳಿದ್ದೇವೆ. ಆದರೆ, ನೀರಾವರಿ ಯೋಜನೆಗೆ ಒಂದೇ ಒಂದು ಶಬ್ದ ಇಲ್ಲ. ಅಪರ್ ಕೃಷ್ಣಾ ಹಾಗೂ ಅಪರ್ ಭದ್ರಾ ಯೋಜನೆಗೆ ಸಹಾಯ ಕೇಳಿದ್ರೂ ಏನು ನೀಡಿಲ್ಲ. ಈ ಹಿಂದೆ ಬಜೆಟ್ನಲ್ಲಿ ಯೋಜನೆಗೆ 5,200 ಕೋಟಿ ಹಣ ನೀಡುತ್ತೇವೆ ಎಂದಿದ್ದರು. ಆದರೆ, ಒಂದು ರೂಪಾಯಿ ಸಹ ಕೊಟ್ಟಿಲ್ಲ. ಮೇಕೆದಾಟು ಯೋಜನೆ ಪ್ರಕರಣ ಸಂಬಂಧ ತಮಿಳನಾಡು ಅರ್ಜಿ ವಜಾ ಆಗಿದೆ. ಆದರೂ ಸಹ ಆ ಯೋಜನೆಗೆ ಬಜೆಟ್ನಲ್ಲಿ ಹಣ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಪರಿಸರ ಇಲಾಖೆ ಅನುಮತಿ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾವು ಕ್ಲಿಯರ್ ಮಾಡುವುದಾಗಿ ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಪರಿಸರ ಇಲಾಖೆ ಬಜೆಟ್ನಲ್ಲಿ ಈ ಬಾರಿ ಸಹ ಅನುಮತಿ ಕೊಟ್ಟಿಲ್ಲ. ಈ ಮೂಲಕ ಕರ್ನಾಟಕದ ಜನತೆಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Manglore22 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan23 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan23 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
Hassan22 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Kodagu23 hours agoಗುಡುಗಳಲೆ ಜಾನುವಾರುಗಳ ಜಾತ್ರೆಗೆ ಚಾಲನೆ ನೀಡಿದ ಶ್ರೀ ಅಭಿನವ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ
-
Kodagu23 hours agoವಾಹನದ ಮೂಲ ಸ್ವರೂಪವನ್ನು ಬದಲು – ತನಿಖೆ
-
Mysore23 hours agoಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
-
Kodagu24 hours agoಸತತ ಪರಿಶ್ರಮದಿಂದ ಮಾತ್ರ ಜೀವನದ ಗುರಿ ಸಾಧನೆ ಸಾಧ್ಯ : ಈರಮಂಡ ಹರಿಣಿ ವಿಜಯ್ ಅಭಿಮತ
