Uncategorized
SSLC Result: 8 ಕ್ಕೆ SSLC ರಿಸಲ್ಟ್?

Kodagu
ಮುದ್ದಂಡ ಹಾಕಿ – ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ಮುಂದಿನ ಹಂತಕ್ಕೆ

ಮಡಿಕೇರಿ : ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮುದ್ದಂಡ ಹಾಕಿ ಕಪ್ನ ಬುಧವಾರ ನಡೆದ ಪ್ರೀ-ಕ್ವಾರ್ಟರ್ ಫೈನಲ್ ಪಂದ್ಯಾವಳಿಯಲ್ಲಿ ನೆಲ್ಲಮಕ್ಕಡ, ಕೂತಂಡ, ಪುದಿಯೊಕ್ಕಡ, ಕರವಂಡ ತಂಡಗಳು ಮುಂದಿನ ಹಂತಕ್ಕೆ ಲಗ್ಗೆ ಇಟ್ಟಿದೆ.
ನೆಲ್ಲಮಕ್ಕಡ ಮತ್ತು ಕೋಳೇರ ನಡುವಿನ ಪಂದ್ಯದಲ್ಲಿ ೪-೦ ಗೋಲುಗಳ ಅಂತರದಲ್ಲಿ ನೆಲ್ಲಮಕ್ಕಡ ಗೆಲುವು ದಾಖಲಿಸಿತು. ನೆಲ್ಲಮಕ್ಕಡ ಪರ ಸಚಿನ್, ರಾಕೇಶ್ ಸುಬ್ರಮಣಿ, ರೋಶನ್ ಬೋಪಣ್ಣ ಹಾಗೂ ಅಯ್ಯಪ್ಪ ತಲಾ ೧ ಗೋಲು ದಾಖಲಿಸಿದರು. ಕೋಳೇರ ನಿಶಿಕ್ ನಾಚಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಕೂತಂಡ ಮತ್ತು ಅಮ್ಮಣಿಚಂಡ ನಡುವಿನ ಪಂದ್ಯದಲ್ಲಿ ೫-೦ ಗೋಲುಗಳ ಅಂತರದಲ್ಲಿ ಕೂತಂಡ ಜಯ ಸಾಧಿಸಿತು. ಕೂತಂಡ ಪರ ಬೋಪಣ್ಣ ೪ ಗೋಲು ದಾಖಲಿಸಿ ಗಮನ ಸೆಳೆದರೆ, ಸುರೇಶ್ ಅಪ್ಪಯ್ಯ ೧ ಗೋಲು ಬಾರಿಸಿದರು. ಅಮ್ಮಣಿಚಂಡ ಯಶ್ವಂತ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ನಾಳಿಯಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ ೨-೧ ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಮಿಥನ್ ಪೊನ್ನಪ್ಪ ಹಾಗೂ ವಿಪನ್ ಸೋಮಯ್ಯ ತಲಾ ೧ ಗೋಲು ದಾಖಲಿಸಿದರು. ನಾಳಿಯಂಡ ಪರ ಚರಣ್ ಚಿಣ್ಣಪ್ಪ ೧ ಗೋಲು ಬಾರಿಸಿದರು. ನಾಳಿಯಂಡ ರತ್ನ ಬೆಳ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಕರವಂಡ ಮತ್ತು ಕಾಂಡಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ ೨ ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ ೨-೧ ಗೋಲುಗಳ ಅಂತರದಲ್ಲಿ ಕರವಂಡ ಜಯ ಸಾಧಿಸಿತು. ಕರವಂಡ ಪರ ಕೃತನ್ ಅಪ್ಪಚ್ಚು ೨ ಗೋಲು ದಾಖಲಿಸಿದರು. ಕಾಂಡಂಡ ಪರ ಆದಿತ್ಯ ಅಪ್ಪಣ್ಣ ಹಾಗೂ ಕೌಶಿಕ್ ಕುಶಾಲಪ್ಪ ತಲಾ ೧ ಗೋಲು ಬಾರಿಸಿದರು. ಕಾಂಡಂಡ ಕೌಶಿಕ್ ಕುಶಾಲಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
Uncategorized
ಯುಪಿಎಸ್ ಸಿ ಮೈಸೂರಿನ ಮೂವರು ಸಾಧನೆ.

ಮೈಸೂರು: ಜಿಲ್ಲೆಯ ಮೂವರು
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಎ.ಪಿ.ಪ್ರೀತಿ 263, ಜೆ.ಭಾನುಪ್ರಕಾಶ್ 523 ಹಾಗೂ ಜಿ.ರಶ್ಮಿ 973 ನೇ ರ್ಯಾಂಕ್ ಪಡೆದಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಠಿಣ ಸಿದ್ಧತೆ ನಡೆಸಿದೆ. ಹೈದರಾಬಾದ್ನಲ್ಲಿ ಪಿಜಿ ರೂಮ್ನಲ್ಲಿ ವಾಸ್ತವ್ಯ ಹೂಡಿ, ಅಲ್ಲಿಯ ಗ್ರಂಥಾಲಯದಲ್ಲೇ ಓದಿಕೊಂಡು ಅಭ್ಯಾಸ ಮಾಡುತ್ತಿದ್ದೆ. ಯಾವುದೇ ಕೋಚಿಂಗ್ ತರಗತಿ ಸೇರಿರಲಿಲ್ಲ. ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಾದವರ ಸಲಹೆ ಪಡೆದು ಅಭ್ಯಾಸ ಯೋಜನೆ ರೂಪಿಸಿಕೊಂಡಿದ್ದ ಎಂದು ತಮ್ಮ ಅಭ್ಯಾಸ ವಿವರವನ್ನು ಹಂಚಿಕೊಂಡಿದ್ದಾರೆ.
Uncategorized
ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಈ ಕಾರ್ಯಾಚರಣೆ ನಡೆದಿದೆ
ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಸಾಮಾನ್ಯ ಪ್ರದೇಶದ ಮೂಲಕ ಸುಮಾರು ಎರಡು-ಮೂರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರುವಾಗ ಬುಧವಾರ ಎನ್ಕೌಂಟರ್ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ, ಇಬ್ಬರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ, ಬಾರಾಮುಲ್ಲಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ” ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಪ್ರವಾಸಿ ತಾಣದಲ್ಲಿ ನಡೆದ ಭೀಕರ ದಾಳಿಯಲ್ಲಿ 26 ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ಒಂದು ದಿನದ ನಂತರ ಈ ಎನ್ಕೌಂಟರ್ ನಡೆದಿದೆ
-
Mysore12 hours ago
ಅರಣ್ಯ ಇಲಾಖೆಯ ವಾಚರ್ ಆತ್ಮಹ*ತ್ಯೆ
-
Mysore14 hours ago
ನಂಜನಗೂಡಿನ ಸಬ್ ರಿಜಿಸ್ಟರ್ ಕಛೇರಿಗೆ ಬೀಗ: ಲೋಕಾಯುಕ್ತ ದಾಳಿ
-
National - International7 hours ago
ಪಹಲ್ಗಾಮ್ ದಾಳಿ; ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ವೀರ ಯೋಧ ಹುತಾತ್ಮ
-
State10 hours ago
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ
-
National - International8 hours ago
ದಾಳಿ ನಡೆಸಿದ ಉಗ್ರರಿಗೆ ಊಹೆಗೂ ಮೀರಿದ ಶಿಕ್ಷೆ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ
-
Kodagu22 hours ago
ಕೊಂಗಾಣದಲ್ಲಿ ಕಣ್ಣನೂರಿನ ಕೋಲಿಯಾ ಆಸ್ಪತ್ರೆಯ ಮಾಲೀಕನ ಕೊ*ಲೆ
-
Kodagu12 hours ago
ಜಿಲ್ಲಾ ಮಟ್ಟದ ಜ್ಞಾನಜ್ಯೋತಿ ಕಾರುಣ್ಯ ಕಾರ್ಯಕ್ರಮ
-
Chamarajanagar10 hours ago
ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್