Connect with us

Hassan

ರೇವಣ್ಣ ಬಂಧನದಿಂದ ಬಿಡುಗಡೆವರೆಗೆ…

Published

on

 

ಏ.೨೨: ಹಾಸನ ಸಂಸದ ಪ್ರಜ್ವಲ್ ರೇವಣ್ಣ
ಭಾಗಿಯಾಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್

ಏ.೨೫: ರಾಜ್ಯ ಮಹಿಳಾ ಆಯೋಗದಿಂದ ತನಿಖೆ ನಡೆಸುವಂತೆ ಕೋರಿ ರಾಜ್ಯ ಸರಕಾರಕ್ಕೆ ಪತ್ರ

ಏ.೨೬-೨೭: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಕ್ತಾಯದ ದಿನವೇ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿ

ಏ.೨೮: ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್.ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್

ಏ.೨೮: ಅಶ್ಲೀಲ ಪೆನ್‌ಡ್ರೈವ್ ಪ್ರಕರಣದ ಸಮಗ್ರ ತನಿಖೆಗೆ ರಾಜ್ಯ ಸರಕಾರದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ

ಏ.೨೯: ರೇವಣ್ಣ, ಪ್ರಜ್ವಲ್‌ಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿಯಿಂದ ನೋಟಿಸ್

ಏ.೨೯: ಅಶ್ಲೀಲ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಎನ್ನಲಾದ ಮಹಿಳೆಯೊಬ್ಬರ ಅಪಹರಣ
ಮೇ ೧: ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಮೇ ೨: ರೇವಣ್ಣ ವಿರುದ್ಧ ಸಂತ್ರಸ್ತ ಮಹಿಳೆ ಅಪಹರಣದ ಕೇಸ್ ದಾಖಲು

ಮೇ ೩: ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋದ ರೇವಣ್ಣ

ಮೇ ೪: ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರಾಕರಣೆ

ಮೇ ೪: ಶನಿವಾರ ಸಂಜೆ ೬.೪೫ಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆದ ಎಸ್‌ಐಟಿ ಪೊಲೀಸರು

ಮೇ ೫: ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ೪ ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಮೇ ೭: ಎಸ್‌ಐಟಿ ವಶದಲ್ಲಿದ್ದ ರೇವಣ್ಣ ಆರೋಗ್ಯದಲ್ಲಿ ಏರುಪೇರು, ನಗರದ ಬೌರಿಂಗ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಪಾಸಣೆ

ಮೇ ೮: ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅಂತ್ಯ, ೭ ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಗರದ ೧೭ನೇ ಎಸಿಎಂಎಂ ನ್ಯಾಯಾಲಯ, ಪರಪ್ಪನ ಅಗ್ರಹಾರ ಜೈಲು ಸೇರಿದ ರೇವಣ್ಣ

 

ಮೇ ೯: ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-೮೨) ಅರ್ಜಿ ಸಲ್ಲಿಸಿದ್ದ ರೇವಣ್ಣ, ಎರಡು ತಾಸಿಗೂ ಹೆಚ್ಚು ಕಾಲ ವಾದ-ಪ್ರತಿವಾದದ ಬಳಿಕ ಮೇ ೧೩ರಂದು ಸೋಮವಾರಕ್ಕೆ ವಿಚಾರಣೆ ಮುಂದೂಡಿದ್ದ ನ್ಯಾಯಾಲಯ

ಮೇ ೧೧: ಪೆನ್ ಡ್ರೈವ್ ಹಂಚಿದ ಆರೋಪ ಎದುರಿಸುತ್ತಿರುವ ವಕೀಲ ದೇವರಾಜೇಗೌಡ ಅವರನ್ನು ಮೇ ೧೦ ರಂದು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದ ಹಿರಿಯೂರು ಗ್ರಾಮಾಂತರ ಪೊಲೀಸರು. ಶನಿವಾರ ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರ

ಮೇ ೧೨: ಸಂಸದ ಪ್ರಜ್ವಲ್ ರೇವಣ್ಣರ ಲೈಂಗಿಕ ದೌರ್ಜನ್ಯದ ವಿಡಿಯೋಗಳ ಬಹಿರಂಗ ಮತ್ತು ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಜೆ.ಗೌಡ ಆಪ್ತ ಸೇರಿ ಇಬ್ಬರನ್ನು ಬಂಧಿಸಿದ ಎಸ್‌ಐಟಿ ಅಧಿಕಾರಿಗಳು


ಮೇ ೧೨: ಕಿಡ್ನಾಪ್ ಆಗಿದ್ದರು ಎನ್ನಲಾದ ಸಂತ್ರಸ್ತೆ ವಿಡಿಯೋ ಜಾಲತಾಣದಲ್ಲಿ ವೈರಲ್, ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಎಲ್ಲಿಯೂ ಹೋಗಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ ಎಂದು ಹೇಳಿದ ಮಹಿಳೆ, ಪ್ರಕರಣಕ್ಕೆ ನಾಟಕೀಯ ತಿರುವು

ಮೇ ೧೩: ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು, ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆ ಸಾಧ್ಯತೆ

Continue Reading
Click to comment

Leave a Reply

Your email address will not be published. Required fields are marked *

Hassan

ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಬಗರ್‌ಹುಕುಂಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ, ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು, ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿದ್ದು, ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಲ್ಲಿರುವ ರೈತರ ಜಮೀನುಗಳ ಬಳಿ ತೆರಳಿ ತಹಶೀಲ್ದಾ‌ರ್ ಹಾಗೂ ಕಂದಾಯ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಮೀನಿಗೆ ಸಂಬಂಧಿಸಿದಂತೆ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸಬಾರದು. ಮಧ್ಯವರ್ತಿಗಳಿಗೆ ಅವಕಾಶ ನೀಡದೇ ಫಲಾನುಭವಿ ರೈತರಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳು ಮುಂದಾಗಬೇಕು. ಯಾವುದೇ ಸಮಸ್ಯೆ ಇದ್ದಲ್ಲಿ ಗಮನಕ್ಕೆ ತರಬೇಕು. ಅನ್ಯಾಯ ಆಗದಂತೆ ಪಾರದರ್ಶಕವಾಗಿ ಪರಿಶೀಲಿಸಿ, ನಿಯಮಾನುಸಾರ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಹಶೀಲ್ ಮಲ್ಲಿಕಾರ್ಜುನ್ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದ್ದು, 26 ಫಲಾನುಭವಿಗಳ ಪೈಕಿ, ಗುರುವಾರ ನಡೆದ ಸಭೆಯಲ್ಲಿ ಎರಡು ಅರ್ಜಿಗಳನ್ನು ಅನುಮೋದಿಸಲಾಯಿತು. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಉಪ ತಹಶೀಲ್ದಾ‌ರ್ ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ್, ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿಗಳು ಹಾಜರಿದ್ದರು.

ಪೋಟೋ ಕ್ಯಾಪ್ಶನ್: ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಇತ್ತೀಚೆಗೆ ನಡೆದ ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಮಾತನಾಡಿದರು.

Continue Reading

Hassan

ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ

Published

on

ಹಾಸನ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕೈಗೆ ಹಾಕಿದ್ದ ಕಾಶೀ ದಾರವನ್ನು ತೆಗೆದು ಹಾಕಲು ಹೇಳಿದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಬ್ರಾಹ್ಮಣ ಸಂಘದ ಸದಸ್ಯ ವೇಣುಗೋಪಾಲ್ ಬೇಸರವ್ಯಕ್ತಪಡಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವರ ಅವರ ಧರ್ಮದ ಆಚರಣೆಗಳನ್ನು, ಇನ್ನೊಬ್ಬರಿಗೆ ತೊಂದರೆ ಆಗದಂತೆ, ಪಾಲಿಸುವ ಅವಕಾಶ ನೀಡಿದೆ. ಹೀಗಿರುವಾಗ ಸಾಮಾನ್ಯ ನಾಗರೀಕನ ಹಕ್ಕನ್ನು ಮೋಟಕುಗೊಳಿಸುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನೆಪದಲ್ಲಿ ಬ್ರಾಹ್ಮಣ ಸಮಾಜದ ಧಾರ್ಮಿಕ ಆಚರಣೆಗಳನ್ನು ತಡೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Continue Reading

Hassan

ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ಹಲವು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಚರ್ಚ್‌ಗಳಲ್ಲಿ ಮೇಣದ ಬತ್ತಿ ಹಿಡಿದು ಪ್ರಾರ್ಥನೆ ಸಲ್ಲಿದ ದೃಶ್ಯ ಕಂಡು ಬಂತು.

ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದ ಸಂತ ಜೋಸೆಫರ ಚರ್ಚ್‌ನಲ್ಲಿ ಹಾಗೂ ಮಗ್ಗೆ ಗ್ರಾಮದಲ್ಲಿರುವ ಸೆಂಟ್ ಫ್ರಾನ್ಸಿಸ್ ಕ್ಷವಿಯರ್ ಚರ್ಚ್‌ನಲ್ಲಿ ಯೇಸು ಕ್ರಿಸ್ತನು ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಯ ಮೇಲೆ ಮರಣ ಹೊಂದುವ ತನಕದ ವಿವಿಧ ಘಟನೆಗಳನ್ನು ನೆನಪಿಸುವ ಪ್ರದರ್ಶನದ ಮೂಲಕ ಜನರಿಗೆ ಏಸು ಕ್ರಿಸ್ತನ ಕುರಿತ ಸಂದೇಶ ಸಾರಲಾಯಿತು. ನಂತರ ಯೇಸು ಕ್ರಿಸ್ತನು ಆಡಿದ ಮಹತ್ವದ ಏಳು ಮಾತುಗಳ ಕುರಿತು ಪ್ರವಚನ ನೀಡಲಾಯಿತು.

ಜೋಸೆಫ್ ನಗರದಲ್ಲಿರುವ ಜೋಸೆಫರ ಚರ್ಚ್ ನ ಧರ್ಮ ಗುರುಗಳಾದ ಒಂದನೆಯ ಫಾದರ್ ಆಲ್ವಿನ್ ಡಿಸೋಜಾ ಮಾತನಾಡಿ, ಕ್ರಿಶ್ಚಿಯನ್‌ ಧರ್ಮದಲ್ಲಿ ಮಹತ್ವದ ತಿರುವು ಪಡೆದ ಯೇಸುಕ್ರಿಸ್ತನ ಶಿಲುಬೆಗೇರಿಸುವಿಕೆಯ ಸನ್ನಿವೇಶವು ಗುಡ್ ಪ್ರೈಡೇಗೆ ಅಡಿಪಾಯವನ್ನು ಹಾಕಿದೆ. ಯೇಸುಕ್ರಿಸ್ತನು 2000 ಸಾವಿರ ವರ್ಷಗಳ ಹಿಂದೆ ಭೂಲೋಕಕ್ಕೆ ಮನುಷ್ಯ ಅವತಾರ ತಾಳಿ ಬಂದನು. ಮನುಷ್ಯನಂತೆ ಲೋಕದಲ್ಲಿ ಜೀವಿಸಿದನು. ಆದರೆ, ಪಾಪ ಮಾತ್ರ ಮಾಡಲಿಲ್ಲ. ಆದರೂ ಆಗಿನ ರೋಮ್ ಸಾಮ್ರಾಜ್ಯದಲ್ಲಿ ಯೆಹೂದ್ಯರು ಆತನನ್ನು ಶಿಲುಬೆಯ ಮರಣಕ್ಕೆ ಒಪ್ಪಿಸಿದರು. ಆದರೆ, ಆತನು ಮೂರು ದಿನಗಳ ನಂತರ ಪುನರುತ್ಥಾನವಾದನು. ಹೀಗಾಗಿ ಕ್ರೈಸ್ತರು ಕೂಡ ಲೋಕದಲ್ಲಿ ಇರುವಾಗ ಕ್ರಿಸ್ತನಿಗೆ ವಿರುದ್ಧವಾದ ಕೆಲಸಗಳನ್ನು ಮಾಡಬಾರದು. ಕ್ರಿಸ್ತನಂತೆ ಜೀವನ ಮಾಡಬೇಕು ಎಂದು ಸಂದೇಶ ನೀಡಿದರು.

ಪೋಟೋ ಕ್ಯಾಪ್ಶನ್: ಆಲೂರು ತಾಲೂಕಿನ ಪಾಳ್ಯ ಹೋಬಳಿ ಜೋಸೆಫ್ ನಗರದಲ್ಲಿರುವ ಸಂತ ಜೋಸೆಫರ ಚರ್ಚ್ ನಲ್ಲಿ ಶುಕ್ರವಾರ ಗುಡ್ ಪ್ರೈಡೆ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.

Continue Reading

Trending

error: Content is protected !!