Connect with us

Chamarajanagar

ಕಾಲಮಿತಿಯೊಳಗೆ ಜನರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

Published

on

ಕಾಲಮಿತಿಯೊಳಗೆ ಜನರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.ಚಾಮರಾಜನಗರಕ್ಕೆ ತೆರಳುವ ಮಾರ್ಗ ಮಧ್ಯೆ ಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವರು ಕಂದಾಯ ಇಲಾಖೆಗೆ ಸಂಬAಧಿಸಿದ ಕಚೇರಿಗಳಿಗೆ ತೆರಳಿ ಪರಿಶೀಲಿಸಿದರು.
ಆಧಾರ್ ನೋಂದಣಿ ಕೇಂದ್ರ, ಆರ್‌ಟಿಸಿ ವಿತರಣಾ ಕೇಂದ್ರಗಳಿಗೆ ತೆರಳಿ ಪರಿಶೀಲಿಸಿದರು. ಜನರಿಗೆ ಆಧಾರ್, ಆರ್‌ಟಿಸಿ ವಿತರಣೆಯಲ್ಲಿ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳುವಂತೆ ಸೂಚಿಸಿದರು. ಬಳಿಕ ಚುನಾವಣಾ ಕೇಂದ್ರಕ್ಕೆ ತೆರಳಿ ಮತದಾರರ ನೋಂದಣಿ ಸಂಬAಧ ಮಾಹಿತಿ ಪಡೆದುಕೊಂಡರು. ನಂತರ ಸಬ್ ರಿಜಿಸ್ಟಾçರ್ ಕಚೇರಿ, ರೆಕಾರ್ಡ್ ರೂಂ, ಕಂದಾಯ ಇಲಾಖೆಯ ಕಚೇರಿಗೆ ತೆರಳಿ ಇಲಾಖೆಗಳ ಪ್ರಗತಿ ಸಂಬAಧ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರೆಕಾರ್ಡ್ ರೂಂ ತೆರಳಿದ ಸಚಿವರು, ಅಲ್ಲಿ ಕೈಗೊಂಡಿರುವ ಭದ್ರತೆಯ ಬಗ್ಗೆ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು.
ಸರ್ವೇ ಇಲಾಖೆಗೆ ತೆರಳಿದ ಸಚಿವರು ಸರ್ಕಾರಿ ಜಾಗಗಳ ಮಾಹಿತಿ ಪಡೆದುಕೊಂಡರು. ಸರ್ಕಾರಿ ಜಾಗಗಳನ್ನು ಅತಿಕ್ರಮಣ ಮಾಡಿರುವ ಹಾಗೂ ಸರ್ಕಾರಿ ಜಾಗ ಅದಲು ಬದಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಈ ಸಂಬAಧ ಸೂಕ್ತವಾಗಿ ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸೂಚಿಸಿದರು.
ತಾಲೂಕಿನಲ್ಲಿ ಕಂದಾಯ ಇಲಾಖೆಯಿಂದ ಸರ್ವೆ ಕೆಲಸಗಳು ನಡೆಯುತ್ತಿವೆಯ ಎಂದು ಪ್ರಶ್ನಿಸಿದ ಸಚಿವರು, ಇಲ್ಲಿಯ ತನಕ ಎಷ್ಟು ಕೆಲಸಗಳು ನಡೆದಿವೆ. ಎಷ್ಟು ಕೆಲಸಗಳು ಬಾಕಿಯಿವೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಶಿವರಾಜ್, ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಅರಣ್ಯಕ್ಕೆ ಹೊಂದಿಕೊAಡಿರುವAತೆ ಸರ್ವೆ ಕಾರ್ಯಗಳು ನಡೆದಿಲ್ಲ. ಹಾಗಾಗಿ ಸ್ವಲ್ಪ ತಡವಾಗಿದೆ. ಒಟ್ಟಾರೆ ತಾಲೂಕಿನಲ್ಲಿ ಶೇ.೬೦ ರಷ್ಟು ಕೆಲಸಗಳು ಆಗಿವೆ ಎಂದರು. ಇದಕ್ಕೆ ಕೋಪಗೊಂಡ ಸಚಿವರು ಉಳಿದ ಶೇ.೪೦ ರಷ್ಟು ಕೆಲಗಳು ಯಾಕೆ ಆಗಿಲ್ಲ ಎಂದು ಪ್ರಶ್ನಿಸಿ ಸಂಬAಧಪಟ್ಟವರಿAದ ಮಾಹಿತಿ ಪಡೆದುಕೊಂಡರು.
ಕAದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸಬೇಕು. ಜನರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಕೆಲಸ ಕಾರ್ಯಗಳನ್ನು ವಿಳಂಬ ಮಾಡಬಾರದು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ಮಹೇಶ್, ಚಾಮರಾಜನಗರ ತಹಸೀಲ್ದಾರ್ ಬಸವರಾಜು ಸೇರಿದಂತೆ ಇತರರಿದ್ದರು

 

Continue Reading
Click to comment

Leave a Reply

Your email address will not be published. Required fields are marked *

Chamarajanagar

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಚೇರ್ ನೀಡಿದ ಗ್ರಾಪಂ ಸದಸ್ಯ ಗುರುಲಿಂಗಯ್ಯ

Published

on

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ-2 ಗೆ ಗ್ರಾಮ ಪಂಚಾಯತಿ ಸದಸ್ಯ ಗುರುಲಿಂಗಯ್ಯ ಕೆಸ್ತೂರು ಗ್ರಾಮ ಪಂಚಾಯತಿ 15 ನೇ ಹಣಕಾಸಿನಲ್ಲಿ 30 ಚೇರ್ ಗಳನ್ನು ಒದಗಿಸಿಕೊಟ್ಟಿದ್ದಾರೆ.

ವಿದ್ಯಾರ್ಥಿಗಳು ಚೇರ್ ನಲ್ಲಿ ಕೂತು ಅಧ್ಯಾಯನ ಮಾಡಲಿ. ವಿದ್ಯಾರ್ಥಿಗಳ ಹಿತಾ ದೃಷ್ಟಿಯಿಂದ ಚೇರ್ ಗಳನ್ನು ಪಂಚಾಯತಿ ಅನುದಾನದಲ್ಲಿ ನೀಡಲಾಗಿದೆ ಎಂದರು.

ಈ ಶಾಲೆಯು ಪರಿಶಿಷ್ಟರ ಕಾಲೋನಿಯಲ್ಲಿದ್ದು ಶೋಷಿತರ ಮಕ್ಕಳು ಚೆನ್ನಾಗಿ ಓದಬೇಕು ಅವರಿಗೆ ಯಾವುದೇ ಮೂಲಭೂತ ಸಮಸ್ಯೆಗಳು ಇರಬಾರದು ಡಾ ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ನಾವೆಲ್ಲರೂ ಅವರ ಮಾರ್ಗದಲ್ಲಿ ನಡೆಯಬೇಕಿದೆ. ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಂತ ಭಿನ್ನವಾಗಿರಬೇಕು.‌ ಪೋಷಕರು ದಯವಿಟ್ಟು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಯಲ್ಲಿಯೇ ಗುಣಮಟ್ಟ ಶಿಕ್ಷಣವನ್ನು ನೀಡಲಾಗುತ್ತದೆ.

ನಮಗೆ ಸಹಕಾರ ನೀಡಿದ ಗ್ರಾಮಪಂಚಾಯತಿ ಅಧ್ಯಕ್ಷಕರಿಗೆ, ಎಲ್ಲಾ ಸದಸ್ಯರಿಗೆ ಹಾಗೂ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ಸಹಕಾರದಿಂದ ಈ ಶಾಲೆಗೆ ಚೇರ್ ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಕೆ.ಚಿನ್ನಸ್ವಾಮಿ, ಮುಖ್ಯೋಪಾಧ್ಯಾಯರಾದ ಸಿದ್ದರಾಜು, ಶಿಕ್ಷಕರಾದ ನಂಜಯ್ಯ, ರಾಜೇಶ್, ಯುವ ಮುಖಂಡ ಮನೋಹರ್ ಹಾಗೂ ಇತರರು ಹಾಜರಿದ್ದರು.

Continue Reading

Chamarajanagar

ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 23ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಂತೇಮರಹಳ್ಳಿ ರಸ್ತೆ, ಆದಿಶಕ್ತಿ ದೇವಸ್ಥಾನ ಸುತ್ತಮುತ್ತ, ಪುಟ್ಟಮಣಿ ಪಾರ್ಕ್, ರೈಲ್ವೆ ಬಡಾವಣೆ, ಮೈಸೂರು ನಂಜನಗೂಡು ರಸ್ತೆ, ನಂದಿಭವನ ರಸ್ತೆ, ಹೊಸ ಖಾಸಗಿ ಬಸ್ ನಿಲ್ದಾಣ ಸುತ್ತಮುತ್ತ, ಪೊಲೀಸ್ ಕ್ವಾಟ್ರಸ್ ಮತ್ತು ಕೆ.ಹೆಚ್.ಬಿ ಕಾಲೋನಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳ ನಿರ್ದೇಶಕರಾಗಿ ಲಿಂಗರಾಜು ಆಯ್ಕೆ

Published

on

ಯಳಂದೂರು ಜ 22

ತಾಲೂಕಿನ ವಿವಿಧ ಮುಖಂಡರಿಂದ ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳ ನಿರ್ದೇಶಕರಾಗಿ ಆಯ್ಕೆಯಾದ ಅಗರ ಕೆ ಲಿಂಗರಾಜು ಅವರನ್ನು ಪಟ್ಟಣದ ಅಂಬೇಡ್ಕರ್ ಭವನದಲ್ಲಿರುವ ಬುದ್ಧ ಕೇಂದ್ರದಲ್ಲಿ ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಗರ ಕೆ ಲಿಂಗರಾಜು ಜಿಲ್ಲೆಯ ಮೀನುಗಾರರಿಗೆ ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ. ಇಲಾಖೆ ವತಿಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ರಾಜ್ಯದಲ್ಲಿ ಮೀನುಗಾರರ ಸಮಸ್ಯೆ ಹೆಚ್ಚಾಗಿದೆ ಇವರ ಅಭಿವೃದ್ಧಿಗೆ ಹಲವಾರು ಯೋಜನೆಗಳಿವೆ. ಸರ್ಕಾರ ಮಟ್ಟದಲ್ಲಿ ಸಂಬಂಧಪಟ್ಟ ಸಚಿವರ ಗಮನ ಸೆಳೆದು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಮೀನುಗಾರರ ಮಕ್ಕಳಿಗೆ ಶಿಕ್ಷಣ ಸಿಗುವುದರ ಜೊತೆಗೆ ಅವರ ಆರ್ಥಿಕ ಮಟ್ಟವನ್ನು ಸುಧಾರಿಸಲಾಗುವುದು. ರಾಜ್ಯದ ಮೀನುಗಾರರು ಸೇರಿದಂತೆ ಜಿಲ್ಲೆಯ ಮೀನುಗಾರರಿಗೆ ಸರ್ಕಾರದಿಂದ ದೊರಕುವ ಸೌಲತ್ತುಗಳನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಮುಖಂಡ ಕಿನಕಹಳ್ಳಿ ರಾಚಯ್ಯ ಮಾತನಾಡಿ ಸತತವಾಗಿ ಎರಡನೇ ಬಾರಿಗೆ ಕರ್ನಾಟಕ ರಾಜ್ಯ ಸಹಕಾರಿ ಮೀನುಗಾರಿಕೆ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗುವುದು ಸುಲಭವಾದ ಮಾತಲ್ಲ, ಅಗರ ಕೆ ಲಿಂಗರಾಜು ಅವರು ಸರಳ ಜೀವಿಯಾಗಿದ್ದು ಅವರು ಸತತವಾಗಿ ಎರಡನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಅವರ ಪ್ರಾಮಾಣಿಕತೆ, ಪ್ರಬುದ್ಧತೆ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ .ಮುಂದಿನ ದಿನಗಳಲ್ಲಿ ಮಹಾಮಂಡಲದ ಅಧ್ಯಕ್ಷರಾಗಬೇಕು ಎಂದು ಹಾರೈಸಿದರು.

ಗುತ್ತಿಗೆದಾರ ಮದ್ದೂರು ನಾರಾಯಣಸ್ವಾಮಿ, ಮುಖಂಡರಾದ ಜನಾರ್ಧನ ,ಗೌಡಳ್ಳಿ ಚಂದ್ರು, ಚಕ್ರವರ್ತಿ, ಇರಿಸವಾಡಿ ಶಿವಪ್ರಕಾಶ್, ರೇವಣ್ಣ, ಜಯರಾಮ, ಪರಿಶಿವ ,ಟೌನ್ ನಂಜುಂಡಸ್ವಾಮಿ, ನಟರಾಜು ಸೇರಿದಂತೆ ಇತರರು ಹಾಜರಿದ್ದರು

Continue Reading

Trending

error: Content is protected !!