Connect with us

Chamarajanagar

ಕಾಲಮಿತಿಯೊಳಗೆ ಜನರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

Published

on

ಕಾಲಮಿತಿಯೊಳಗೆ ಜನರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.ಚಾಮರಾಜನಗರಕ್ಕೆ ತೆರಳುವ ಮಾರ್ಗ ಮಧ್ಯೆ ಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವರು ಕಂದಾಯ ಇಲಾಖೆಗೆ ಸಂಬAಧಿಸಿದ ಕಚೇರಿಗಳಿಗೆ ತೆರಳಿ ಪರಿಶೀಲಿಸಿದರು.
ಆಧಾರ್ ನೋಂದಣಿ ಕೇಂದ್ರ, ಆರ್‌ಟಿಸಿ ವಿತರಣಾ ಕೇಂದ್ರಗಳಿಗೆ ತೆರಳಿ ಪರಿಶೀಲಿಸಿದರು. ಜನರಿಗೆ ಆಧಾರ್, ಆರ್‌ಟಿಸಿ ವಿತರಣೆಯಲ್ಲಿ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳುವಂತೆ ಸೂಚಿಸಿದರು. ಬಳಿಕ ಚುನಾವಣಾ ಕೇಂದ್ರಕ್ಕೆ ತೆರಳಿ ಮತದಾರರ ನೋಂದಣಿ ಸಂಬAಧ ಮಾಹಿತಿ ಪಡೆದುಕೊಂಡರು. ನಂತರ ಸಬ್ ರಿಜಿಸ್ಟಾçರ್ ಕಚೇರಿ, ರೆಕಾರ್ಡ್ ರೂಂ, ಕಂದಾಯ ಇಲಾಖೆಯ ಕಚೇರಿಗೆ ತೆರಳಿ ಇಲಾಖೆಗಳ ಪ್ರಗತಿ ಸಂಬAಧ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರೆಕಾರ್ಡ್ ರೂಂ ತೆರಳಿದ ಸಚಿವರು, ಅಲ್ಲಿ ಕೈಗೊಂಡಿರುವ ಭದ್ರತೆಯ ಬಗ್ಗೆ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು.
ಸರ್ವೇ ಇಲಾಖೆಗೆ ತೆರಳಿದ ಸಚಿವರು ಸರ್ಕಾರಿ ಜಾಗಗಳ ಮಾಹಿತಿ ಪಡೆದುಕೊಂಡರು. ಸರ್ಕಾರಿ ಜಾಗಗಳನ್ನು ಅತಿಕ್ರಮಣ ಮಾಡಿರುವ ಹಾಗೂ ಸರ್ಕಾರಿ ಜಾಗ ಅದಲು ಬದಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಈ ಸಂಬAಧ ಸೂಕ್ತವಾಗಿ ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸೂಚಿಸಿದರು.
ತಾಲೂಕಿನಲ್ಲಿ ಕಂದಾಯ ಇಲಾಖೆಯಿಂದ ಸರ್ವೆ ಕೆಲಸಗಳು ನಡೆಯುತ್ತಿವೆಯ ಎಂದು ಪ್ರಶ್ನಿಸಿದ ಸಚಿವರು, ಇಲ್ಲಿಯ ತನಕ ಎಷ್ಟು ಕೆಲಸಗಳು ನಡೆದಿವೆ. ಎಷ್ಟು ಕೆಲಸಗಳು ಬಾಕಿಯಿವೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಶಿವರಾಜ್, ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಅರಣ್ಯಕ್ಕೆ ಹೊಂದಿಕೊAಡಿರುವAತೆ ಸರ್ವೆ ಕಾರ್ಯಗಳು ನಡೆದಿಲ್ಲ. ಹಾಗಾಗಿ ಸ್ವಲ್ಪ ತಡವಾಗಿದೆ. ಒಟ್ಟಾರೆ ತಾಲೂಕಿನಲ್ಲಿ ಶೇ.೬೦ ರಷ್ಟು ಕೆಲಸಗಳು ಆಗಿವೆ ಎಂದರು. ಇದಕ್ಕೆ ಕೋಪಗೊಂಡ ಸಚಿವರು ಉಳಿದ ಶೇ.೪೦ ರಷ್ಟು ಕೆಲಗಳು ಯಾಕೆ ಆಗಿಲ್ಲ ಎಂದು ಪ್ರಶ್ನಿಸಿ ಸಂಬAಧಪಟ್ಟವರಿAದ ಮಾಹಿತಿ ಪಡೆದುಕೊಂಡರು.
ಕAದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸಬೇಕು. ಜನರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು. ಕೆಲಸ ಕಾರ್ಯಗಳನ್ನು ವಿಳಂಬ ಮಾಡಬಾರದು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ಮಹೇಶ್, ಚಾಮರಾಜನಗರ ತಹಸೀಲ್ದಾರ್ ಬಸವರಾಜು ಸೇರಿದಂತೆ ಇತರರಿದ್ದರು

 

Continue Reading
Click to comment

Leave a Reply

Your email address will not be published. Required fields are marked *

Chamarajanagar

ಹನೂರು ಪಟ್ಟಣದ ವಾಸಿ ದರ್ಶನ್ ರವರ ಮೆದುಳು ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಅಂಗಾಂಗ ದಾನ

Published

on

ಹನೂರು : ಪಟ್ಟಣದ ವಾಸಿ ದರ್ಶನ್ ರವರ ಮೆದುಳು ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿ ಪುತ್ರ ದರ್ಶನ್ ರಸ್ತೆ ಅಪಘಾತವಾದ ಹಿನ್ನಲೆ
ಮೈಸೂರಿನ ಖಾಸಗಿ ಆಸ್ಪತ್ರೆಗೆ ಕೂಡಲೇ ದಾಖಲು ಮಾಡಲಾಗಿತ್ತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿ ಆಗದೇ ಸಾವನ್ನಪ್ಪಿದರು ಎನ್ನಲಾಗಿದೆ ನಂತರ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.

ಈ ಮೂಲಕ ದರ್ಶನ್ ತನ್ನ ಸಾವಿನಲ್ಲಿ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.

ಮೈಸೂರಿನ ಅಪೋಲೋ ಆಸ್ಪತ್ರೆಗೆ ದರ್ಶನ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಶ(ಲಿವರ್‌), ಮೂತ್ರಪಿಂಡ(ಕಿಡ್ನಿ), ಕಣ್ಣು, ದಾನ ಮಾಡಿದ್ದಾರೆ.

Continue Reading

Chamarajanagar

ಯಳಂದೂರುಇಂದು ಕಾಲೇಜಿನ ಸಭಾಂಗಣದಲ್ಲಿ ಸಂತ ಕವಿಕನಕದಾಸರ ಜಯಂತಿ ಕಾರ್ಯಕ್ರಮ

Published

on

ಶ್ರೀ ವೈ ಎಂ ಮಲ್ಲಿಕಾರ್ಜುನ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಳಂದೂರುಇಂದು ಕಾಲೇಜಿನ ಸಭಾಂಗಣದಲ್ಲಿ ಸಂತ ಕವಿಕನಕದಾಸರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು ಸದರಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ಅಧ್ಯಕ್ಷತೆ ವಹಿಸಿದ್ದರು ಇಂದಿನ ಕಾರ್ಯಕ್ರಮವನ್ನು ಕುರಿತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀ ಮಹಂತೇಶ್ ಅವರು ಕನಕದಾಸರ ಜೀವನ ಚರಿತ್ರೆ ಅವರ ಸಾಹಿತ್ಯ ಸೇವೆ ಮತ್ತು ಭಾರತೀಯ ಸಂತ ಪರಂಪರೆಯಲ್ಲಿ ಕನಕದಾಸರ ಸ್ಥಾನ ಶ್ರೇಷ್ಠವಾದದ್ದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು ಅಲ್ಲದೆ ತಿಮ್ಮಪ್ಪನಾಯಕನಾಗಿದ್ದ ಕನಕದಾಸರು ಕನಕ ನಾಯಕರ ಬಗ್ಗೆ ಆನಂತ್ರದ ಅವರ ಜೀವನ ಮತ್ತು ಅವರ ಸಾಧನೆಗಳನ್ನು ಎಳೆ ಎಳೆಯಾಗಿ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದ ಅವರು


ಕನ್ನಡ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಪುರಂದರದಾಸರಿಗೆ ಯಾವ ಮಟ್ಟದ ಶ್ರೇಷ್ಠತೆಯು ಅಷ್ಟೇ ಶ್ರೇಷ್ಠತೆಯು ಕನಕದಾಸರಿಗೂ ಲಭ್ಯವಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಎಂದು ನುಡಿದರು ಸಾಮಾಜಿಕವಾಗಿ ತನ್ನನ್ನೇ ಸಮಾಜಕ್ಕೆ ಒಟ್ಟಿಕೊಂಡ ಕನಕದಾಸರು ಸಾಕಷ್ಟು ತರತಮಗಳಿಗೆ ಒಳಗಾದರೂ ಎದೆಗೊಂದದೆ ವ್ಯಾಸರಾಯರ ಶ್ರೇಷ್ಠ ಶಿಷ್ಯ ಪರಂಪರೆಯಲ್ಲಿ ಅಗ್ರಗಣ್ಯರಾಗಿ ರೂಪಗೊಂಡದ್ದು ನಿಜಕ್ಕೂ ಪ್ರಾಚಸ್ಮರಣೀಯ ಎಂದು ತಿಳಿಸಿದರು
ನಳಚರಿತ್ರೆ ಮೋಹನತರಂಗಿಣಿ ರಾಮಧಾನ್ಯ ಚರಿತೆಕೀರ್ತನೆಗಳು ಊಹಾಭೋಗಗಳು ಮುಂಡಿಗೆಗಳು ಇತ್ಯಾದಿ ಸಾಹಿತ್ಯ ಪ್ರಕಾರಗಳಲ್ಲಿ ಕಾವ್ಯಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಮಾತ್ರವಲ್ಲ ಇಡೀ ದಾಸ ಸಂತತಿಯಲ್ಲಿ ಅಗ್ರಗಣ್ಯ ದಾಸವರೇಣ್ಯರೆನಿಸಿ ಕೀರ್ತಿಗೆ ಭಾಜನರಾದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಕನಕದಾಸರು ಭಾರತೀಯ ಸಂತ ಪರಂಪರೆಯಲ್ಲಿ ಅತ್ಯಂತ ವಿಶಿಷ್ಟವಾದ ದಾಸರಾಗಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಆತ್ಮ ಯಾವ ಕುಲ ಜೀವ ಯಾವ ಕುಲ’ ಜಲವೇ ಸಕಲ ಕುಲಕ್ಕೆ ತಾಯಲ್ಲವೇ
ಜಲದ ನೆಲೆಯ ನೀನಾದರೂ ಬಲ್ಲಿರಾ ‘
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ‘
ಇತ್ಯಾದಿ ಕೀರ್ತನೆಗಳಲ್ಲದೆ ಅನೇಕ ಸಾಹಿತ್ಯ ಪ್ರಕಾರಗಳಲ್ಲಿ ಅವರ ಸಲ್ಲಿಸಿದ ಸೇವೆ ಅನನ್ಯವಾಗುವುದು ಎಂದು ತಿಳಿಸಿದರು ಸಾಮಾನ್ಯ ಪಾಳೇಗಾರನಾಗಿದ್ದನಾಯಕನಾಗಿ ಅನಂತರ ಕನಕದಾಸರಾಗಿ ಪರಿವರ್ತನೆ ಹೊಂದಿದ್ದೆ ಒಂದು ವಿಸ್ಮಯದ ಸಂಗತಿ ಎಂಬ ಅಂಶವನ್ನು ತಿಳಿಸಿದರು.ಎಲ್ಲ ಕಾಲಕ್ಕೂ ಸಲ್ಲಬಹುದಾದ ಅವರ ರಾಮಧಾನ್ಯ ಚರಿತೆ ಅಂದಿನ ಕಾಲದ ಅದ್ಭುತ ಕಲಾಕೃತಿಗಳಲ್ಲಿ ಒಂದು ಎಂದು ತಿಳಿಸಿದರು
ರಾಗಿ ಮತ್ತು ಭತ್ತವನ್ನು ಕಾವ್ಯದ ವಸ್ತುವನ್ನಾಗಿಸಿ ಅದರ ಹಿನ್ನೆಲೆಯಲ್ಲಿ ಸಮಾಜದಲ್ಲಿದ್ದ ಮೇಲು-ಕೀಳು ತರತಮ ಭಾವಗಳಿಗೆ ಆ ಕೃತಿಯ ಮೂಲಕ ಅವರು ಕೊಟ್ಟ ಸಂದೇಶ ಅತ್ಯಂತ ವಿಶೇಷವಾದದ್ದು ಎಂಬ ಅಂಶವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು ಎಲ್ಲರೂ ಎಲ್ಲ ಕಾಲಕ್ಕೂ ಓದಲೇಬೇಕಾದ ಅವರ ಸಾಹಿತ್ಯದ ಅನನ್ಯತೆಯನ್ನು ನಾವು ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳುವ ಮೂಲಕ ಕನಕ ಜಯಂತಿಯ ಶುಭಾಶಯಗಳು
ಕೋರಿದರು.ಐಕ್ಯೂ ಎಸಿ ಸಂಚಾಲಕರಾದ ವಿಕಾಸ್ ರವರು ಕಾರ್ಯಕ್ರಮವನ್ನು
ಅಚ್ಚುಕಟ್ಟಾಗಿ ನಿರೂಪಿಸಿದರು ಮತ್ತು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ
ತೆರೆ ಎಳೆಯಲಾಯಿತು
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶ್ವೇತಾ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಾಕ್ಷಾಯಿಣಿ ಕನ್ನಡ ವಿಭಾಗದ ಮುಖ್ಯಸ್ಥರಾದ
ಶ್ರೀಮತಿ ಪದ್ಮಹಾಗೂ ಅಧ್ಯಾಪಕರಾದ ಪುಷ್ಪ ಕುಮಾರ್ ಕಚೇರಿ ಸಿಬ್ಬಂದಿಗಳು ಎಲ್ಲರೂ ಹಾಜರಿದ್ದರು

Continue Reading

Chamarajanagar

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುವ ನರೇಗಾ ಕಾಮಗಾರಿಗಳನ್ನು ಸದುಪಯೋಗಪಡಿಸಿಕೊಳ್ಳಿ – ನೋಡಲ್ ಅಧಿಕಾರಿ ಮಲ್ಲಿಕಾರ್ಜುನ

Published

on

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುವ ನರೇಗಾ ಕಾಮಗಾರಿಗಳ ಸದುಪಯೋಗಪಡಿಸಿಕೊಂಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿಯನ್ನು ನಿರ್ಮಾಣ ಮಾಡಬೇಕು ಎಂದು ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ತಿಳಿಸಿದರು.

ಅವರು ಹೊನ್ನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಮತ್ತು 15ನೇ ಹಣಕಾಸು ಮತ್ತು 2024- 25 ನೇ ಸಾಲಿನ ಕ್ರಿಯಾಯೋಜನೆ ತಯಾರಿಸುವ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ ಮಾಹಿತಿಗಳನ್ನು ಪಡೆದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ತಾಲೂಕು ನರೇಗಾ ಸಂಯೋಜಕ ನಾರಾಯಣ ಮಾತನಾಡಿ ಗ್ರಾಮ ಪಂಚಾಯತಿ ವತಿಯಿಂದ ಒಟ್ಟು 233 ಕಾಮಗಾರಿಗಳನ್ನು ಮಾಡಲಾಗಿದೆ. ಇದರಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ 216 ತೋಟಗಾರಿಕೆ ಇಲಾಖೆ ವತಿಯಿಂದ ಆರು ರೇಷ್ಮೆ ಇಲಾಖೆ ವತಿಯಿಂದ ಒಂದು ಪಿ ಆರ್ ಐ ಡಿ ಇಲಾಖೆ ವತಿಯಿಂದ ಆರು ಕೃಷಿ ಇಲಾಖೆಯಿಂದ 2 ಅರಣ್ಯ ಇಲಾಖೆಯಿಂದ 2 ಕಾಮಗಾರಿಗಳನ್ನು ಮಾಡಲಾಗಿದೆ. ಇದಕ್ಕಾಗಿ ಒಟ್ಟು ಕೂಲಿ ಮೊತ್ತ
78,94,854 ರೂಪಾಯಿಗಳು , ಸಾಮಗ್ರಿ ಮೊತ್ತ 27, 29,412 ರೂಪಾಯಿಗಳು ಸೇರಿದಂತೆ ಒಟ್ಟು 1,06,24,266 ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು. ಇದಕ್ಕಾಗಿ 25549 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಹೇಳಿದರು.

ಕಡತ ನೀಡದೆ ಇರುವುದು, ಅಧಿಕೃತ ವೋಚರ್ಸ್ ಒದಗಿಸದೆ ಇರುವುದು ,ಮಾಸ್ಟರ್ ರೋಲ್ ಇಲ್ಲದಿರುವುದು ,ರಾಜಧನ ಜಮೆ ಮಾಡದೆ ಇರುವುದು ಮತ್ತು ನಾಮಫಲಕ ಇಲ್ಲದಿರುವುದು ಸೇರಿದಂತೆ ಒಟ್ಟು 38 ಪ್ರಕರಣಗಳಿಗೆ ವಸುಲಾತಿ ಮತ್ತು 127 ಪ್ರಕರಣಗಳಿಗೆ ಆಕ್ಷೇಪಣೆ ಸೇರಿದಂತೆ ಒಟ್ಟು 37,43,825 ರೂಪಾಯಿಗಳನ್ನು ಆಕ್ಷೇಪಣ ಮೊತ್ತದಲ್ಲಿ ಇರಿಸಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ರೂಪೇಶ್, ಉಪಾಧ್ಯಕ್ಷ ಎಚ್ ಬಿ ನಾಗರಾಜು, ಸದಸ್ಯರಾದ ರಾಧಾ, ಇಂದಿರಾ, ಆರ್ ಪುಟ್ಟ ಬಸವಯ್ಯ, ನೇತ್ರ, ಭಾಗ್ಯಮ್ಮ, ಕುಮಾರಸ್ವಾಮಿ, ಪಿಡಿಒ ನಿರಂಜನ್, ಸಾಮಾಜಿಕ ಅರಣ್ಯ ಇಲಾಖೆಯ ಸಂಪತ್, ರೇಷ್ಮೆ ಇಲಾಖೆಯ ಸತ್ಯಪಾಲ್, ತೋಟಗಾರಿಕೆ ಇಲಾಖೆಯ ಶಿವರಂಜಿನಿ, ಗ್ರಾಪಂ ಸಿಬ್ಬಂದಿ ಮಹಾದೇವಸ್ವಾಮಿ ,ಮಹದೇವಮ್ಮ ಸೇರಿದಂತೆ ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು

ವರದಿ : ಸೈಯದ್ ಮುಷರಫ್

Continue Reading

Trending