Crime
ದರೋಡೆ ಪ್ರಕರಣ – ರಾಜಸ್ಥಾನ ಮೂಲದ ಆರೋಪಿ ಸೆರೆ

ಮಡಿಕೇರಿ : ಮನೆಯಲ್ಲಿದ್ದ ವೃದ್ಧ ಮಹಿಳೆ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬAಧಪಟ್ಟAತೆ ಮಿಂಚಿನ ಕಾರ್ಯಚರಣೆ ನಡೆಸಿ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್, ದರೋಡೆ ನಡೆದ 12 ಗಂಟೆಯಲ್ಲೆ ರಾಜಸ್ಥಾನ ಮೂಲದ ಆರೋಪಿ ವಿಕಾಸ್ ಚೋರ್ಡಿಯಾ (33) ಎಂಬಾತನನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದು, 27 ಗ್ರಾಂ ತೂಕದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಆರೋಪಿ. ಸಿಸಿ ಕ್ಯಾಮರ ಹಾಗೂ ರೆಸಾರ್ಟ್ ಸಿಬ್ಬಂದಿಗಳ ಮಾಹಿತಿ ಆಧಾರಿಸಿ ಅರೋಪಿಯ ಬಂಧನವಾಗಿದೆ.
ಘಟನೆ ನಡೆದ ಬಳಿಕ ಎಸ್ಪಿ ಕೆ. ರಾಮರಾಜನ್, ಎಎಸ್ಪಿ ಸುಂದರ್ ರಾಜ್ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ, ಸಾಕ್ಷಾಧಾರಗಳನ್ನು ಕಲೆಹಾಕಿದ್ದರಾದರೆ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಉಮೇಶ್, ಉಪ್ಪಳಿಕೆ ಅವರು ಎಲ್ಲಾ ಹೊಟೇಲ್, ಹೋಂ ಸ್ಟೇ ಮತ್ತು ರೆಸಾರ್ಟ್ ಮಾಹಿತಿ ನೀಡಿ ಆರೋಪಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.
ಪ್ರಕರಣವನ್ನು ಭೇದಿಸುವ ಸಲುವಾಗಿ ಮಡಿಕೇರಿ ನಗರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಅವರು ಉಪವಿಭಾಗ ಮಟ್ಟದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳು ಮತ್ತು ಡಿಸಿಆರ್ಬಿ ಸಿಬ್ಬಂದಿಗಳನ್ನು ಒಳಗೊಂಡ0ತೆ ತಂಡವನ್ನು ರಚಿಸಿ ತನಿಖೆೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಹಿನ್ನೆಲೆ : ಮಡಿಕೇರಿ ನಗರದ ಹೃದಯ ಭಾಗದಲ್ಲಿ ಭಾನುವಾರ ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೇ ನುಗ್ಗಿದ ಚೋರ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ತಾಳಿ ಹಾಗೂ ಉಂಗುರು ಕದ್ದೊಯ್ಯಲು ಯತ್ನಿಸಿದ್ದ. ನಗರದ ಐಡಿಬಿಐ ವಾಸವಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಸಿ.ಪ್ರಭಾಕರ್ ಅವರ ಮನೆಗೆ ಭಾನಯವಾರ ಸಂಜೆ 6.40 ರ ವೇಳೆಗೆ ಲಗ್ಗೆ ಇಟ್ಟ ಕಳ್ಳ ಪತ್ನಿ ಸಾಕಮ್ಮ ಅವರ ತಲೆಯ ಭಾಗಕ್ಕೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದ್ದಾನೆ. ನಂತರ ಕುತ್ತಿಗೆಯಲ್ಲಿದ್ದ ತಾಳಿ ಸರವನ್ನು ಕಸಿಯಲು ಯತ್ನಿಸಿದ್ದಾನೆ. ಆದರೆ ಸಾಕಮ್ಮ ಜೋರಾಗಿ ಕಿರುಚಿಕೊಂಡ ಕಾರಣ ಆತ ಬಂದ ದಾರಿಗೆ ಸುಂಕವಿಲ್ಲವೆAದು ಸ್ಥಳದಿಂದ ಪರಾರಿಯಾಗಿದ್ದಾರೆ. ಸರ ಸಾಕಮ್ಮ ಅವರ ಕುತ್ತಿಗೆಯಲ್ಲೇ ಉಳಿದಿದೆ. ವಾಯು ವಿಹಾರಕ್ಕೆಂದು ಹೋಗಿದ್ದ ಪತಿ ಪ್ರಭಾಕರ್ ಅವರು ಮನೆಗೆ ಮರಳಿದಾಗ ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಸ್ಥಳೀಯರ ಸಹಕಾರದಿಂದ ಸಾಕಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
Crime
ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ – ಕಿಡ್ನಾಪರ್ಸ್ನ್ನು ಪತ್ತೆ ಹಚ್ಚಿದ ಪೊಲೀಸರು

ಹಾಸನ : ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ
ಕಿಡ್ನಾಪರ್ಸ್ನ್ನು ಪತ್ತೆ ಹಚ್ಚಿದ ಪೊಲೀಸರು
ನೆಲ್ಯಾಡಿ ಬಳಿ ತೆರಳುತ್ತಿದ್ದ ವೇಳೆ ಎಲ್ಲರೂ ಪೊಲೀಸರ ವಶಕ್ಕೆ
ಅರ್ಪಿತಳನ್ನು ರಕ್ಷಿಸಿ ಕಿಡ್ನಾಪ್ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು
ಹಾಸನ ನಗರ ಪೊಲೀಸ್ ಠಾಣೆಗೆ ಕರೆತರುತ್ತಿರುವ ಪೊಲೀಸರು
ಯುವತಿ ಅಪಹರಿಸಿ ಸೋಮವಾರಪೇಟೆ ಕಡೆ ಕರೆದೊಯ್ದಿದ್ದ ಖತರ್ನಾಕ್ ಕಿಡ್ನಾಪರ್ಸ್
ಪೊಲೀಸರಿಗೆ ಸಿಗದ ರೀತಿ ಪ್ಲಾನ್ ಮಾಡಿ ಅರ್ಪಿತಾಳನ್ನು ಕರೆದೊಯ್ಯಲು ಯತ್ನಿಸುತ್ತಿದ್ದ ರಾಮು ಮತ್ತು ತಂಡ
ಅಪರಹರಣಕ್ಕೊಳಗಾಗಿದ್ದ ಅರ್ಪಿತಾಳನ್ನು ರಕ್ಷಿಸಿ ರಾಮು ಮತ್ತು ತಂಡವನ್ನು ವಶಕ್ಕೆ ಪಡೆದು ಹಾಸನಕ್ಕೆ ಕರೆತರುತ್ತಿರುವ ಪೊಲೀಸರು
Crime
ಉದ್ಯಮಿ ಕೃಷ್ಣೇಗೌಡ ಕೊಲೆ ಪ್ರಕರಣ CIDಗೆ – ಇಂದಿನಿಂದಲೇ CID ಡ್ರಿಲ್

ಹಾಸನ : ಮಾಜಿ ಸಚಿವ ಎಚ್.ಡಿ.ರೇವಣ್ಣ ಆಪ್ತ ಉದ್ಯಮಿ ಕೃಷ್ಣೇಗೌಡ ಕೊಲೆ ಪ್ರಕರಣ
ಆರೋಪಿಗಳ ಬಂಧನದ ವಿಷಯದಲ್ಲಿ ಜಿಲ್ಲಾ ಪೊಲೀಸ್ ವಿಫಲ
ಪ್ರಕರಣ ಮುಚ್ಚಿ ಹೋಗಬಹುದು ಸಾಧ್ಯತೆ ಹಿನ್ನಲೆ
ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ
ತಕ್ಷಣದಿಂದ ಜಾರಿಗೆ ಬರುವಂತೆ ಪ್ರಕರಣದ ತನಿಖಾಧಿಕಾರಿ ಹತ್ಯೆಗೆ ಸಂಬಂಧಿಸಿದ ಎಲ್ಲ ಕಡತಗಳನ್ನು ಸಿಐಡಿಗೆ ಸಲ್ಲಿಸಲು ಸೂಚನೆ
ಕೃಷ್ಣೇಗೌಡ ಹತ್ಯೆ ನಂತರ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು
ಪ್ರಮುಖ ಆರೋಪಿಗಳಾದ ಯೋಗಾನಂದ ಹಾಗೂ ಅನಿಲ್ ಅವರಿಬ್ಬರ ಸುಳಿವು ಪತ್ತೆಯಲ್ಲಿ ಸಂಪೂರ್ಣ ವಿಫಲ
ಈ ನಡುವೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ
ಇಡೀ ರಾಜ್ಯದ ಗಮನ ಸೆಳೆದಿದ್ದ ಪ್ರಕರಣ ಹಳ್ಳ ಹಿಡಿಯುವ ಸಾಧ್ಯತೆ
ಪ್ರಕರಣದ ಗಂಭೀರತೆಗೆ ತಕ್ಕಂತೆ ತನಿಖೆ ನಡೆಯದಿರುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಚರ್ಚೆ
ಪ್ರಕರಣ ನಡೆದಾಗ ಇದ್ದ ಎಸ್ಪಿ ಹರಿರಾಂಶಂಕರ್ ವರ್ಗಾವಣೆ
ಆ ಸ್ಥಾನಕ್ಕೆ ಬಂದ ಮೊಹಮದ್ ಸುಜೀತಾ ಅವರಿಂದಲೂ ಆರೋಪಿಗಳ ಬಂಧಿಸುವಲ್ಲಿ ವಿಫಲ
ಈಗ ಸಿಐಡಿ ಪ್ರವೇಶದಿಂದ ಪ್ರಕರಣದ ತನಿಖೆಯ ದಿಕ್ಕು ಬದಲಾಗುವ ಸಾಧ್ಯತೆ
Crime
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಹಾಸನ : ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಆಲೂರು ತಾಲ್ಲೂಕಿನ ಕವಳಗೆರೆ ಗ್ರಾಮದ ಸುಚಿತ್ರಾ (20) ಕೊಲೆಯಾದ ಯುವತಿ
ಹಾಸನ ತಾಲ್ಲೂಕಿನ, ಕುಂತಿಗುಡ್ಡದಲ್ಲಿ ಘಟನೆ
ತೇಜಸ್ (23) ಕೊಲೆ ಮಾಡಿರುವ ಆರೋಪಿ
ಮೊಸಳೆಹೊಸಳ್ಳಿ ಇಂಜಿನಿಯರ್ ಕಾಲೇಜಿನಲ್ಲಿ ಬಿಇ ಮ್ಯಾಕಾನಿಕಲ್ ಓದುತ್ತಿದ್ದ ಸುಚಿತ್ರಾ
ಸುಚಿತ್ರಾಳ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿರುವ ಆರೋಪಿ ತೇಜಸ್
ಮುಂಚಿನ ಕಾರ್ಯಾಚರಣೆ ನಡೆದಿ ಗ್ರಾಮಾಂತರ ಪೊಲೀಸರು
ಯುವತಿ ಕೊಂದಿದ್ದ ಇಂಜಿನಿಯರಿಂಗ್ ಪದವಿಧರ ತೇಜಸ್ ಪೊಲೀಸರ ವಶಕ್ಕೆ
ಪ್ರೇಮ ವೈಫಲ್ಯದಿಂದ ಗೆಳತಿಯನ್ನೇ ಬರ್ಬರವಾಗಿ ಕೊಲೆ ಮಾಡಿರೊ ಆರೋಪ
ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಮಾಡಿದ್ದ ತೇಜಸ್
ಪ್ರೀತಿಸಲು ನಿರಾಕರಿಸಿದ್ದಕ್ಕೆ ಕುಂತಿ ಬೆಟ್ಟಕ್ಕೆ ಕರೆದೊಯ್ದು ಹತ್ಯೆ ಮಾಡಿರೊ ಆರೋಪ
ಇಂದು ಮುಂಜಾನೆ ಯುವತಿಯನ್ನು ತನ್ನೊಟ್ಟಿಗೆ ಕರೆದೊಯ್ದಿದ್ದ ತೇಜಸ್
ಒಂಟಿಯಾಗಿ ಕರೆದೊಯ್ದು ಕುತ್ತಿಗೆ ಸೀಳಿ ಹತ್ಯೆಮಾಡಿದ್ದ ಪಾತಕಿ
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ