Sports
Ranji Trophy: ಕಳಪೆ ಫಾರ್ಮ್ ಮುಂದುವರಿಸಿದ ಹಿಟ್ಮ್ಯಾನ್

ಮುಂಬೈ: ಇಲ್ಲಿನ ಬಿಕೆಸಿ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಹಾಗೂ ಜಮ್ಮು ಕಾಶ್ಮೀರ ನಡುವಣ ರಣಜಿ ಪಂದ್ಯದಲ್ಲಿ ಮುಂಬೈ ಪರವಾಗಿ ಬ್ಯಾಟ್ ಬೀಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಲ್ಲಿಯೂ ತಮ್ಮ ಕಳಪೆ ಫಾರ್ಮ್ ಮುಂದುವರೆಸಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನ್ನಿಂಗ್ಸ್ ಆರಂಭಿಸಿದ ಜೈಸ್ವಾಲ್ ಹಾಗೂ ಹಿಟ್ ಮ್ಯಾನ್ ಮುಂಬೈಗೆ ವರವಾಗಲಿಲ್ಲ. ಅಂತರಾಷ್ಟ್ರೀಯ ಕ್ರಿಕೆಟ್ನಲ್ಲ ಕಳಪೆ ಫಾರ್ಮ್ನಿಂದಾಗಿ ರಣಜಿ ಆಡುವುದಾಗಿ ಹೇಳಿದ್ದರು.
ಇನ್ನು ಈ ಪಂದ್ಯದಲ್ಲಿಯೂ ಫ್ಲಾಪ್ ಆಗಿರುವ ರೋಹಿತ್ ಶರ್ಮಾ 19 ಎಸೆತ ಎದುರಿಸಿ ಕೇವಲ 3 ರನ್ ಬಾರಿಸಿ ಔಟಾಗಿದ್ದಾರೆ. ಜಮ್ಮು ಬೌಲರ್ ಉಮರ್ ನಝೀರ್ ಅವರ ಬೌಲಿಂಗ್ನಲ್ಲಿ ಮಿಡ್ ಆಫ್ ಫೀಲ್ಡರ್ ಪರಾಸ್ ದೋಗ್ರಾಗೆ ಕ್ಯಾಚ್ ನೀಡಿ ನಿರ್ಗಮಿಸಿದ್ದಾರೆ.
2015ರಲ್ಲಿ ರೋಹಿತ್ ಶರ್ಮಾ ಉತ್ತರ ಪ್ರದೇಶ ವಿರುದ್ಧ ಕೊನೆಯ ಬಾರಿ ರಣಜಿ ಆಡಿದ್ದರು. ಈಗ ದಶಕಗಳ ಬಳಿಕ ಹಿಟ್ಮ್ಯಾನ್ ಜಮ್ಮು ಕಾಶ್ಮೀರ ವಿರುದ್ಧ ಪಂದ್ಯವಾಡಿದರು. ಈ ಪಂದ್ಯದಲ್ಲಿಯೂ ರೋಹಿತ್ ಫ್ಲಾಪ್ ಆಗಿದ್ದಾರೆ.
Sports
RCB ಅಭಿಮಾನಿಗಳ ಗಮನಕ್ಕೆ ಇಂದೇ ನಡೆಯಲಿದೆ ವಿಜಯಯಾತ್ರೆ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ನಿಂದ ಆರ್ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆಗೆ ಸಿದ್ಧತೆಯನ್ನು ನಡೆಸಲಿದೆ.
ಸಂಜೆ 3.30 ಕ್ಕೆ ಬೆಂಗಳೂರಿನ ವಿಧಾನಸೌಧದಿಂದ ಆರ್ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ ಪರೇಡ್ ಮುಂದುವರೆಯಲಿದೆ.
ಇನ್ನು ಈ ವಿಜಯಯಾತ್ರೆ ವೇಳೆ 2024 ರಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ಸಿಬಿ ಮಹಿಳಾ ತಂಡವನ್ನು ಸಹ ಕರೆತರುವ ಸಾಧ್ಯತೆಯಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಎರಡು ಟ್ರೋಫಿಗಳೊಂದಿಗೆ ವಿಜಯಯಾತ್ರೆ ನಡೆಸುವ ಬಗ್ಗೆ ಚಿಂತಿಸಿದೆ.
ಇದಾಗ್ಯೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡದ ವಿಜಯೋತ್ಸವ ನಡೆಯಲಿದೆಯಾ ಎಂಬುದರ ಬಗ್ಗೆ ಯಾವುದೇ ಖಚಿತ ಮಾಹಿತಿ ಹೊರಬಿದ್ದಿಲ್ಲ. ಸದ್ಯ ಇಂದು ಸಂಜೆ 3.30 ರಿಂದ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೆ ವಿಜಯಯಾತ್ರೆ ನಡೆಸುವುದಾಗಿ ಮಾಹಿತಿ ಆರ್ಸಿಬಿ ಫ್ರಾಂಚೈಸಿ ಹೇಳಿಕೊಂಡಿದೆ. ಇದಾದ ಬಳಿಕ ಆರ್ಸಿಬಿ ತಂಡವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಿಸಿದರೂ ಅಚ್ಚರಿಪಡಬೇಕಿಲ್ಲ.
National - International
ಕೊನೆಗೂ ಈ ಸಲ ಕಪ್ ನಮ್ದೇ : ಚೊಚ್ಚಲ ಕಪ್ ಆರ್ಸಿಬಿ ಮುಡಿಗೆ

ಅಹಮದಾಬಾದ್: 2025-26ನೇ ಆವೃತ್ತಿಯ ಐಪಿಎಲ್ನ ಫೈನಾಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಆರು ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು, ಕೊನೆಗೂ ಈ ಸಲ ಕಪ್ ನಮ್ದು ಎಂದು ಚೊಚ್ಚಲ ಕಪ್ ಅನ್ನು ತನ್ನ ಮುಡಿಗೇರಿಸಿಕೊಂಡಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ ಇಂದು ರಾತ್ರಿ 7.30 ಗಂಟೆಗೆ ಆರ್ಸಿಬಿ v/s ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಆರ್ಸಿಬಿ ತಂಡವೂ 17 ವರ್ಷಗಳ ವನವಾಸವನ್ನು ಅಂತ್ಯಗೊಳಿಸಿ 18ನೇ ವರ್ಷಕ್ಕೆ ಈ ಸಲ ನಮ್ದೇ ಎಂದು ಹೇಳಿ ರಜತ ಮಹೋತ್ಸವವನ್ನು ಆಚರಿಸಿದೆ.
ಇಂದು ನಡೆದ ಪಂದ್ಯದಲ್ಲಿ ಪಂಜಾಬ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವೂ 9 ವಿಕೆಟ್ಗಳ ನಷ್ಟಕ್ಕೆ 190 ರನ್ಗಳನ್ನು ಗುರಿಯಾಗಿ ನೀಡಿತ್ತು. ಇದನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 7 ವಿಕೆಟ್ಗಳ ನಷ್ಟಕ್ಕೆ 184 ರನ್ಗಳನ್ನು ಗಳಿಸಿದರು. ಹೀಗಾಗಿ ಆರ್ಸಿಬಿ ತಂಡವೂ 6 ರನ್ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ 18 ವರ್ಷಗಳ ನಂತರ ಇತಿಹಾಸ ಸೃಷ್ಠಿಸಿದೆ.
ಒಂದು ಬಾರಿಯಾದರೂ ಕಪ್ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ
Sports
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕನ್ನಡದ ಮೂವರು ಆಟಗಾರರಿಗೆ ಸ್ಥಾನ

ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ಕನ್ನಡದ ಮೂವರು ಆಟಗಾರರಿಗೆ ಸ್ಥಾನ ದೊರೆತಿದೆ.
ಬಿಸಿಸಿಐ ಸಂಸ್ಥೆಯೂ ಅಧಿಕೃತವಾಗಿ ಟೆಸ್ಟ್ ತಂಡದ 18 ಆಟಗಾರರನ್ನು ಘೋಷಿಸಿದೆ. ಅದರಲ್ಲಿ ಟೆಸ್ಟ್ ತಂಡದ ನಾಯಕರಾಗಿ ಶುಭ್ಮನ್ ಗಿಲ್, ಉಪ ನಾಯಕರಾಗಿ ರಿಷಬ್ ಪಂತ್ ನೇಮಕವಾಗಿದ್ದಾರೆ. ಅಂತೆಯೇ ಕನ್ನಡಿಗರಾದ ಕೆ.ಎಲ್.ರಾಹುಲ್, ಪ್ರಸಿದ್ ಕೃಷ್ಣ ಹಾಗೂ ಕರುಣ್ ನಾಯರ್ಗೆ ಸ್ಥಾನ ದೊರೆತಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ತಂಡದ ಆಟಗಾರರು
ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ಸಾಯಿ ಸುದರ್ಶನ್, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ ಅವರು ಟೀಂ ಇಂಡಿಯಾ ಪರ ಆಡಲಿದ್ದಾರೆ.
ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ
ಮೊದಲ ಟೆಸ್ಟ್: 2025ರ ಜೂನ್ 20-24
2ನೇ ಟೆಸ್ಟ್: 2025ರ ಜುಲೈ 2-6
3ನೇ ಟೆಸ್ಟ್: 2025ರ ಜುಲೈ 10-14
4ನೇ ಟೆಸ್ಟ್: 2025ರ ಜುಲೈ 23-27
5ನೇ ಟೆಸ್ಟ್: 2025ರ ಜುಲೈ 31-ಆಗಸ್ಟ್ 4
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya24 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State21 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ