Manglore
ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ
—
ಮಂಗಳೂರು :ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಶನಿವಾರ ಸಂಘದ ಕಛೇರಿಯಲ್ಲಿ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆ ಗೊಂಡರೆ, ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಡೆಸಿಕೊಟ್ಟರು.
ಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ , 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ , ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಕಳೆದ ಹತ್ತು ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
==
ಡಾ.ಎಂಎನ್ ಆರ್ ಅವರಿಗೆ ಕೃತಜ್ಞತೆ ಸಮರ್ಪಣೆ : ಸುಮಾರು 93 ವರ್ಷಗಳ ಇತಿಹಾಸವನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ನೌಕರರ ಏಕೈಕ ಸಹಕಾರಿ ಸಂಸ್ಥೆ ‘ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಇಂದು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಮುಖ್ಯ ಕಾರಣಕರ್ತರಾಗಿದ್ದಾರೆ. ಅವರ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನದಿಂದಲೇ ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್ ನಲ್ಲಿ ಮೂರು ಅಂತಸ್ತಿನ ಸುಸಜ್ಜಿತ ಸ್ವಂತ ಕಟ್ಟಡವನ್ನು ಹೊಂದಲು ಸಾಧ್ಯವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಕೂಡ ಅವರ ಮಾರ್ಗದರ್ಶನದಲ್ಲೇ ನಡೆದು 15 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಇದೀಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಕೂಡ ಅವಿರೋಧವಾಗಿ ಆಯ್ಕೆಗೊಂಡಿದ್ದು, ಈ ಸಂದರ್ಭದಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ನೂತನ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ಎಸ್.ಜಗದೀಶ್ಚಂದ್ರ ಅಂಚನ್ ಕೃತಜ್ಞತೆಯನ್ನು ಸಮರ್ಪಿಸಿದರು.
==
ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ನಿರ್ದೇಶಕರಾದ ದಿವಾಕರ ಶೆಟ್ಟಿ ಕೆ. ಕಾರ್ಕಳ, ವಿಶ್ವೇಶ್ವರ ಐತಾಳ್ ಎಸ್. ಕುಂದಾಪುರ, ಜಯಪ್ರಕಾಶ್ ರೈ ಸಿ. ಪುತ್ತೂರು, ವಿಶ್ವನಾಥ್ ಕೆ.ಟಿ. ಸುಳ್ಯ, ವಿಶ್ವನಾಥ್ ಎನ್. ಅಮೀನ್ ಉಡುಪಿ, ಶಿವಾನಂದ ಪಿ. ಬಂಟ್ವಾಳ, ಗಿರಿಧರ್ ಕೆ. ಬೆಳ್ತಂಗಡಿ, ಚಂದ್ರಕಲಾ ಕೆ. ಮಂಗಳೂರು, ಗೀತಾಕ್ಷಿ ಮಂಗಳೂರು, ಕಿರಣ್ ಕುಮಾರ್ ಶೆಟ್ಟಿ ಮಂಗಳೂರು, ನಿಶಿತಾ ಜಯರಾಮ್ ಮಂಗಳೂರು, ಮೋಹನ್ ಎಸ್. ಮಂಗಳೂರು, ಪ್ರೇಮರಾಜ್ ಭಂಡಾರಿ ಮಂಗಳೂರು ಹಾಗೂ ಸಂಘದ ಮುಖ್ಯಕಾರ್ಯನಿರ್ಹಣಾಧಿಕಾರಿ ಸತೀಶ್ ಪೂಜಾರಿ ಉಪಸ್ಥಿತರಿದ್ದರು.
Manglore
ಬಹುಕೋಟಿ ವಂಚನೆ: ಐಷಾರಾಮಿ ಮನೆಯಲ್ಲಿ ಅಡಗುತಾಣ ನಿರ್ಮಿಸಿ ವಂಚಿಸುತ್ತಿದ್ದ ಆರೋಪಿ ಬಂಧನ

ಮಂಗಳೂರು: ಐಷಾರಾಮಿ ವ್ಯಕ್ತಿಗಳು ಹಾಗೂ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಅಂದಾಜು 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಮಾಡಿದ ಆರೋಪಿ ಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಜಪ್ಪಿನಮೊಗರು ನಿವಾಸಿ ದುಬಾಯ್ಸ್ ರೋಶನ್ ಸಲ್ಮಾನ ಕೆ, (45) ಬಂಧಿತ ಆರೋಪಿ.ಈತ ಉದ್ಯಮಿಯೆಂದು ಬಿಂಬಿಸಿ ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನೇ ಗುರಿಯಾಗಿಸಿ ಭೂಮಿಯ ವ್ಯವಹಾರ, ಸಾಲ ನೀಡುವ ನೆಪದಲ್ಲಿ ನಂಬಿಕೆಯನ್ನು ಸೃಷ್ಟಿಸುತ್ತಿದ್ದ. ಬಳಿಕ ತನ್ನ ಜಪ್ಪಿನ ಮೊಗರಿನಲ್ಲಿರುವ ಐಷಾರಾಮಿ ಬಂಗಲೆಗೆ ಕರೆದು ವ್ಯವಹರಿಸುತ್ತಿದ್ದ. ಈತನ ಬಂಗಲೆ, ಜೀವನಶೈಲಿಗೆ ಮೋಡಿಯಾದ ಉದ್ಯಮಿಗಳು ವ್ಯವಹಾರಕ್ಕೆ ಮುಂದಾಗುತ್ತಿದ್ದರು. ಪ್ರತಿಯೊಂದು ವ್ಯವಹಾರದಲ್ಲೂ 50 ರಿಂದ 100 ಕೋಟಿ ರೂ. ವರೆಗೆ ವ್ಯವಹಾರ ಕುದುರಿಸುತ್ತಿದ್ದ.
ಪೊಲೀಸರು ದಾಳಿ ಮಾಡುವ ವೇಳೆ ಮನೆಯಲ್ಲಿ ಮಲೇಷ್ಯಾದ ಯುವತಿಯೊಬ್ಬಳು ಮತ್ತು 5 ಮಂದಿ ಕಾರ್ಮಿಕರು ಪತ್ತೆಯಾಗಿ ದ್ದಾರೆ.
ಈತನ ಐಷಾರಾಮಿ ಜೀವನ ಹೇಗಿದೆಯೆಂದರೆ ಮನೆಯೊಳಗೆ ಬಾರ್ ಇದ್ದು, ಇದರಲ್ಲಿ ದೇಶ- ವಿದೇಶದಿಂದ ತರಿಸಲಾದ ದುಬಾರಿ ಮದ್ಯಗಳು ಪತ್ತೆಯಾಗಿದೆ. ಇದನ್ನು ಉದ್ಯಮಿಗಳಿಗೆ ತೋರಿಸಿ ತನ್ನ ಶ್ರೀಮಂತಿಕೆಯನ್ನು ಬಣ್ಣಿಸಿ, ಬಲೆಗೆ ಬೀಳಿಸುತ್ತಿದ್ದನು.
ಮನೆಯೊಳಗೆ ಅಡಗುತಾಣ: ಸುಮಾರು 10 ವರ್ಷದಿಂದ ಅನೇಕ ಉದ್ಯಮಿಗಳಿಗೆ ಈತ ಕೋಟ್ಯಂತರ ರೂ. ವಂಚಿಸಿದ್ದಾನೆ. ಕೆಲವೊಂದು ಪ್ರಕರಣದಲ್ಲಿ ಈತನ ಮನೆಗೆ ಪೊಲೀಸರು ಹೋದಾಗ ಮನೆಯೊಳಗಿರುವ ಅಡಗುದಾಣದಲ್ಲಿ ಬಚ್ಚಿಟ್ಟು ಕುಳಿತುಕೊಳ್ಳುತ್ತಿದ್ದ. ಈ ಅಡಗುದಾಣವು ವಿಶೇಷ ರೀತಿಯಲ್ಲಿತ್ತು. ಮೇಲ್ನೋಟಕ್ಕೆ ಕಪಾಟಿನಂತೆ ಕಾಣುವ ಬಾಗಿಲನ್ನು ತೆರೆದರೆ, ಈತನ ಅಡಗುದಾಣಕ್ಕೆ ಪ್ರವೇಶವಿರುತ್ತಿತ್ತು.ಆ ಬಳಿಕ ಅಲ್ಲಿಂದ ಕೆಳಭಾಗಕ್ಕೆ ಮೆಟ್ಟಿಲು ಇದ್ದು, ಕೆಳಭಾಗದಲ್ಲಿ ರೂಂ ಒಂದಿದೆ. ಅದರ ಗೋಡೆಗಳ ನಡುವೆ ಯಾರಿಗೂ ಗುರುತಿಸಲಾಗದಂತಹ ಬಾಗಿಲು ಇದ್ದು, ಇದರೊಳಗೆ ಈತನ ಅಡಗುದಾಣ ಇತ್ತು. ಇದನ್ನು ಪೊಲೀಸರು
ದಾಳಿ ವೇಳೆ ಒಡೆದು ಒಳನುಗ್ಗಿದ್ದಾರೆ.
ಎಲ್ಲೆಲ್ಲೂ ಸಿಸಿ ಕ್ಯಾಮೆರಾ: ಈತನ ಮನೆಯ ಸುತ್ತ, ರಸ್ತೆ ಸೇರಿದಂತೆ 10 ಕ್ಕೂ ಅಧಿಕ ದೊಡ್ಡ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಪೊಲೀಸರು ಬಂದಲ್ಲಿ ಸಿಸಿ ಕ್ಯಾಮೆರಾ ನೋಡಿಯೇ ಈತ ಅಡಗುತಾಣದಲ್ಲಿ ತಪ್ಪಿಸಿಕೊಳ್ಳುತ್ತಿದ್ದನು.
ಆರೋಪಿಯನ್ನು ಬಂಧಿಸಲು ತೆರಳುವ ವೇಳೆ ರಿಮೋಟ್ ಮೂಲಕ ಗೇಟ್ ತೆರೆಯಲು ಒಪ್ಪಲಿಲ್ಲ. ಇದರಿಂದ ಪೊಲೀಸರು ಮನೆಯ ಗೇಟ್ ಹಾರಿ ಒಳಗೆ ಹೋಗಬೇಕಿತ್ತು. ಮುಂಜಾಗ್ರತಾ ಕ್ರಮವಾಗಿ ಆತ ಗೇಟ್ಗೂ ಸಂಪೂರ್ಣ ಗ್ರೀಸ್ ಹಾಕಿ ಕಾರ್ಯಾಚರಣೆಗೆ ಅಡ್ಡಿ ಮಾಡಿದ್ದ.
ಬೆನ್ನಟ್ಟಿ ಹಿಡಿದ ಪೊಲೀಸರು: ಪೊಲೀಸ್
ದಾಳಿ ವೇಳೆ ಆರೋಪಿ ರೋಶನ್ ಸಲ್ದಾನಾ ಜತೆಗಿದ್ದ ಇನ್ನೊಬ್ಬ ಆರೋಪಿ ಪರಾರಿಗೆ ಯತ್ನಿಸಿದ್ದ. ಈ ಸಂದರ್ಭ ಆತನನ್ನು ತೋಟ, ಗದ್ದೆಗಳಲ್ಲಿ ಬೆನ್ನಟ್ಟಿದ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಯುವತಿ ಜತೆ ಮದ್ಯ ಸೇವಿಸುತ್ತಿದ್ದ:
ಆರೋಪಿ ಪೊಲೀಸ್ ದಾಳಿ ವೇಳೆ ಮಲೇಷ್ಯಾ ಯುವತಿ ಜತೆ ಕುಳಿತು ಮದ್ಯ ಸೇವಿಸುತ್ತಿದ್ದುದು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಟೇಬಲ್ ಮೇಲೆ ಮದ್ಯದ ಬಾಟಲಿ, ಸ್ಪ್ಯಾಕ್ಸ್ ಹಾಗೂ ಇತರ ಸೊತ್ತುಗಳು ಪತ್ತೆಯಾಗಿದೆ.
ಮೋಜು ಮಸ್ತಿ ಜೀವನ: ಆರೋಪಿ
ರೋಶನ್ ಅವನದ್ದು ಮೋಜು ಮಸ್ತಿ ಜೀವನ. ಈತನ ಪತ್ನಿ, ಮಕ್ಕಳು ಅನಾರೋಗ್ಯ ನಿಮಿತ್ತ ಚೆನ್ನೈಯಲ್ಲಿದ್ದು ಈತ ಮಲೇಷ್ಯಾ ಯುವತಿಯರನ್ನು ಕರೆದುಕೊಂಡು ಮೋಜು ಮಸ್ತಿ ಜೀವನ ನಡೆಸುತ್ತಿದ್ದ.ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್ ಮತ್ತು ತಂಡ ದಾಳಿ ನಡೆಸಿದೆ.
ಮೊದಲ ಸುತ್ತಿನ ಮಾತುಕತೆ ಮುಗಿದ ಬಳಿಕ ನೇರವಾಗಿ ಉದ್ಯಮಿಗಳನ್ನು ತನ್ನ ವಂಚನಾ ಜಾಲದ ಖೆಡ್ಡಾಕ್ಕೆ ಬೀಳಿಸಲು ಪ್ರಾರಂಭಿಸುತ್ತಿದ್ದ. 50-100 ಕೋಟಿ ವ್ಯವಹಾರ ಅಥವಾ ಅದಕ್ಕಿಂತ ದೊಡ್ಡ ಮೊತ್ತದ ವ್ಯವಹಾರಕ್ಕೆ 5- 10 ಕೋಟಿ ಸ್ಟ್ಯಾಂಪ್ ಡ್ಯೂಟಿ ಹಣ ನೀಡಬೇಕೆಂದು ಬೇಡಿಕೆ ಇರಿಸುತ್ತಿದ್ದ. ಈತನ ಬಣ್ಣದ ಮಾತಿಗೆ ಮರುಳಾದ ಉದ್ಯಮಿಗಳು ಸುಲಭದಲ್ಲಿ ಸಾಲ ಅಥವಾ ಕಡಿಮೆ ದರಕ್ಕೆ ಜಾಗ ಸಿಗುವಾಗ ಹಿಂದು-ಮುಂದು ನೋಡದೆ ಕೋಟ್ಯಂತರ ರೂ. ಹಣವನ್ನು ನಗದು ರೂಪದಲ್ಲಿ ನೀಡುತ್ತಿದ್ದರು. ತಾನು ನಿರೀಕ್ಷೆ ಮಾಡಿದಷ್ಟು ಹಣ ವಸೂಲಿಯಾದ ಬಳಿಕ ನಾನ ನೆಪ ಹೇಳಿ ಉದ್ಯಮಿಗಳಿಂದ ದೂರವಾಗುತ್ತಿದ್ದ. ಇದೇ ರೀತಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಇದೇ ರೀತಿ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿರುವುದು ಮೂಲಗಳಿಂದ ತಿಳಿದು ಬಂದಿದೆ.
Manglore
ಮಂಗಳೂರು: ಹೆಬ್ಬಾವು ಮಾರಾಟ ಜಾಲ ಅಪ್ರಾಪ್ತ ಸೇರಿ ನಾಲ್ವರು ಅಂದರ್- ಆರೋಪಿಗಳ ಕೃತ್ಯಕ್ಕೆ ಅಧಿಕಾರಿಗಳೇ ಶಾಕ್!

ಮಂಗಳೂರು: ನಗರದಲ್ಲಿ ಅಪರೂಪದ ಹೆಬ್ಬಾವು ಅಕ್ರಮ ಮಾರಾಟ ಜಾಲ ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯು ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಹೆಡೆಮುರಿ ಕಟ್ಟಿ ಬಂಧಿಸಿದೆ.
ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಶಾಲ್ ಹೆಚ್. ಶೆಟ್ಟಿ(18), ಸ್ಟೇಟ್ಬ್ಯಾಂಕ್ ಬಳಿಯ ಪೆಟ್ಝೋನ್ ಮಾಲಕ ಇಬ್ರಾಹೀಂ ಶಕೀಲ್ ಇಸ್ಮಾಯಿಲ್(35), ಪೆಟ್ಝೋನ್ನ ಸಿಬ್ಬಂದಿ ಮಹಮ್ಮದ್ ಮುಸ್ತಫಾ(22) ಬಂಧಿತ ಆರೋಪಿಗಳು. ಮಂಗಳೂರಿನ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ ಮತ್ತೋರ್ವ ಅಪ್ರಾಪ್ತ ಆರೋಪಿ.
ಹೆಬ್ಬಾವು ಅಕ್ರಮ ಮಾರಾಟ ಜಾಲ ಸಕ್ರಿಯವಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಮತ್ತು ತಂಡ ಕಾರ್ಯಾಚರಣೆಗಿಳಿದೆ. ಮೊದಲಿಗೆ ಇಬ್ಬರನ್ನು ಹೆಬ್ಬಾವು ಖರೀದಿಸುವ ಸೋಗಿನಲ್ಲಿ ಕಳುಹಿಸಿದೆ. ನಗರದ ಕದ್ರಿಯ ಅಶ್ವತ್ಥ ಕಟ್ಟೆಯ ಬಳಿ ಆಗಮಿಸಿದ ಆರೋಪಿ ವಿಶಾಲ್ ಹೆಚ್.ಶೆಟ್ಟಿ ಬಳಿಗೆ ಹೋದ ಅರಣ್ಯ ಇಲಾಖೆಯ ಕಡೆಯ ಇಬ್ಬರು ಹೆಬ್ಬಾವು ಖರೀದಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾವು ತೋರಿಸಿದ ಆತ 45,000ಕ್ಕೆ ವ್ಯವಹಾರ ಕುದುರಿಸಿದ್ದಾನೆ. ಈ ವೇಳೆ ಅರಣ್ಯ ಇಲಾಖೆ ದಾಳಿ ನಡೆಸಿ ಆತನನ್ನು ಬಂಧಿಸಿದೆ.
ಇದರಿಂದ ಭೀತಿಗೊಳಗಾದ ವಿಶಾಲ್ ಹೆಚ್.ಶೆಟ್ಟಿ ಈ ಹಾವು ತನ್ನದಲ್ಲ ಅಪ್ರಾಪ್ತನ ಹೆಸರು ಹೇಳಿ ಆತ ತನಗೆ ಮಾರಲು ನೀಡಿದ್ದು ಎಂದು ಬಾಯಿ ಬಿಟ್ಟಿದ್ದಾನೆ. ತಕ್ಷಣ ಉಪಾಯವಾಗಿ ಅಪ್ರಾಪ್ತನಿಗೆ ಕರೆ ಮಾಡಿ ಮಾಲ್ವೊಂದರ ಬಳಿ ಹೋಗಿ ಆತನನ್ನು ತಮ್ಮ ಖೆಡ್ಡಾಕ್ಕೆ ಕೆಡವಿ ಅಧಿಕಾರಿಗಳು ಬಂಧಿಸಿದ್ದಾರೆ.
ಹಾವು ಮಾರಾಟದ ಬಗ್ಗೆ ಸ್ಟೇಟ್ಬ್ಯಾಂಕ್ನಲ್ಲಿರುವ ಪೆಟ್ಝೋನ್ ಮೇಲೂ ಕಣ್ಣಿಟ್ಟಿದ್ದ ಅರಣ್ಯ ಇಲಾಖೆ ಇದೇ ಸಂದರ್ಭ ಗ್ರಾಹಕರ ಸೋಗಿನಲ್ಲಿ ಓರ್ವ ಯುವಕನನ್ನು ಅಲ್ಲಿಗೆ ಕಳುಹಿಸಿದೆ. ಆಗ ಅಲ್ಲಿನ ಸಿಬ್ಬಂದಿ ತಮ್ಮಲ್ಲಿ ಹಾವಿದೆ ತರಿಸಿ ಕೊಡುತ್ತೇವೆ ಎಂದು ಬಂಧಿತ ವಿಶಾಲ್ ಶೆಟ್ಟಿಗೆ ಕರೆ ಮಾಡಿದ್ದಾನೆ. ತಕ್ಷಣ ದಾಳಿ ನಡೆಸಿದ ಅರಣ್ಯ ಇಲಾಖೆಯು ಪೆಟ್ಝೋನ್ನ ಮಾಲಕ ಹಾಗೂ ಸಿಬ್ಬಂದಿಯನ್ನು ಬಂಧಿಸಿದೆ. ಈ ಪೆಟ್ಝೋನ್ನಲ್ಲಿ ನಕ್ಷತ್ರ ಆಮೆಗಳೂ ಸಿಕ್ಕಿದ್ದು, ಅದನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನುಸೂಚಿತ (ಶೆಡ್ಯೂಲ್ 1) ಭಾಗ ಸಿ ಪ್ರಾಣಿಯಾದ ಇಂಡಿಯನ್ ರಾಕ್ ಪೈಥಾನ್(ಹೆಬ್ಬಾವು) ಅನ್ನು ಆರೋಪಿಗಳು ಹೊರದೇಶದ ಅಂದರೆ ಬರ್ಮಿಸ್ ಬಾಲ್ ಪೈಥಾನ್ ಎಂದು ಮಾರುತ್ತಿದ್ದರು. ಇದನ್ನು ಕೆಲವರು ಮನೆಯಲ್ಲಿ ಸಾಕುವ ಉದ್ದೇಶದಿಂದ ಖರೀದಿಸುತ್ತಿದ್ದರು. ಈ ಜಾಲಕ್ಕೆ ತಮಿಳುನಾಡುವರೆಗೆ ಸಂಪರ್ಕವಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಆದ್ದರಿಂದ ತನಿಖೆ ಮುಂದುವರಿದಿದೆ.
Manglore
ಕೌಟುಂಬಿಕ ಕಲಹ: ಪತ್ನಿಯನ್ನು ಕೊ*ಲೆ ಮಾಡಿದ ಪತಿ

ಮಂಗಳೂರು: ಕೌಟುಂಬಿಕ ಕಲಹದಲ್ಲಿ ಪತ್ನಿಯನ್ನು ಪತಿ ಕೊ*ಲೆ ಮಾಡಿದ ಘಟನೆ ನಡೆದಿದೆ.
ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ, ಬೆಳ್ತಂಗಡಿ, ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ವಾಸವಿದ್ದ ಝೀನತ್ (40) ಕೊ*ಲೆಯಾದವರು.
ಝೀನತ್ ಅವರು ರಫೀಕ್ ಎಂಬಾತನೊಂದಿಗೆ ಸುಮಾರು 18 ವರ್ಷದ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಈ ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿದಡ. ಜುಲೈ 17 ರಂದು ಬೆಳಿಗ್ಗೆ ಕೌಟುಂಬಿಕ ಕಲಹ ನಡೆದಾಗ ಆರೋಪಿ ರಫೀಕ್ ನು ತನ್ನ ಪತ್ನಿ ಝೀನತ್ (40)ಗೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್ ರವರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಕೆಯು ಮೃತಪಟ್ಟಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ: ಅ.ಕ್ರ 64/2025 ಕಲಂ: 103(1) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಆರೋಪಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
State14 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya10 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar16 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar10 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore12 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special15 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu10 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
State9 hours ago
ಆಗಸ್ಟ್.11ರೊಳಗೆ ಸಮಾನವಾಗಿ ಅನುದಾನ ಹಂಚಿಕೆ ಆಗಬೇಕು: ಸುರೇಶ್ ಬಾಬು