Mandya
ಸಾಲದ ವಸೂಲಾತಿಗೆ ರೈತರ ಮೇಲೆ ಕಿರುಕುಳ ನೀಡಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಮೈಕ್ರೋ ಫೈನಾನ್ಸ್ ಕಂಪನಿಯವರು ರೈತರಿಗೆ ಮತ್ತು ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವ ಸಂದರ್ಭದಲ್ಲಿ ಅವರುಗಳ ಮೇಲೆ ಯಾವುದೇ ತರಹ ಕಿರುಕುಳ ಮತ್ತು ಒತ್ತಡ ನೀಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಕಂಪನಿಗಳು ಸಭೆ ನಡೆಸಿ ಮಾತನಾಡಿ, ರೈತರಿಗೆ ಸಾರ್ವಜನಿಕರಿಗೆ ನೀಡಿರುವ ಸಾಲ ವಸೂಲತಿ ಮಾಡುವಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನಗಳ ಮೇಲೆ ಕಿರುಕುಳ ಹಾಗೂ ಒತ್ತಡ ನೀಡುತ್ತಿರುವುದು ಕಂಡು ಬಂದಿದೆ.
ಇದು ಅತಿರೇಖವಾದಲ್ಲಿ ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಸಾಲ ವಸೂಲತಿ ಮಾಡುವ ಮೈಕ್ರೋಪೈನಾನ್ಸ್ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಕಿರುಕುಳ ನೀಡಿದ ಮೈಕ್ರೋಪೈನಾನ್ಸ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

2 ರಿಂದ 3 ತಿಂಗಳು ಸಾಲ ವಸೂಲಾತಿ ಮಾಡುವಂತಿಲ್ಲ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಗಳೆಂದು ಘೋಷಿಸಿ 77 ಸಾವಿರ ರೈತರಿಗೆ ರೂ 34 ಕೋಟಿ ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಏರದಂತೆ ನೋಡಿಕೊಳ್ಳಿ ಎಂದರು.
ಬೆಳಗಿನ ಜಾವ ಹಾಗೂ ರಾತ್ರಿ ವೇಳೆಯಲ್ಲಿ ಸಾಲ ವಸೂಲಾತಿ ಮಾಡುವವರು ಪ್ರತಿದಿನ ಮನೆಗೆ ಭೇಟಿ ನೀಡುತ್ತಿದ್ದು, ಇದರಿಂದ ಸಾರ್ವಜನಿಕರು ತಮಗೆ ಪ್ರತಿ ದಿನದ ಕೆಲಸ ಮಾಡಲು ತೊಂದರೆ ಹಾಗೂ ಕಿರಿ ಕಿರಿ ಉಂಟಾಗುತ್ತಿದೆ ಎಂದು ದೂರುಗಳು ಬರುತ್ತಿದ್ದು, ಸಾಲ ವಸೂಲಾತಿಗೆ ಸರಿಯಾದ ಸಮಯ ನಿಗದಿಮಾಡಿಕೊಳ್ಳುವಂತೆ ತಿಳಿಸಿದರು.

ಸಾಲ ಮರುಪಾವತಿಗೆ ಸಂಬಂಧಿಸಿದಂತೆ ಮೈಕ್ರೋಪೈನಾನ್ಸ್ ಗಳು ತೊಂದರೆ ನೀಡುತ್ತಿದ್ದಲ್ಲಿ ಸಹಾಯವಾಣಿ ಸಂಖ್ಯೆ: 18004255654, 18001021080, 011 47174410, ನ್ನು ಸಂಪರ್ಕಿಸಬಹುದು ಎಂದರು.
ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲ, ಹಾಗೂ ವಿವಿಧ ಮೈಕ್ರೋ ಫೈನಾನ್ಸ್ ನ ವ್ಯವಸ್ಥಾಪಕರು ಉಪಸ್ಥಿತರಿದ್ದರು.
Mandya
ತಿಪ್ಪಣ್ಣಪ್ಪ ಕಮಕನೂರ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮುಂದುವರೆಸಿ : ಎಸ್.ರಮೇಶ್
ಮಂಡ್ಯ: ಗಂಗಾಮತಸ್ಥರ (ಬೆಸ್ತರ್) ಸಮುದಾಯದ ತಿಪ್ಪಣ್ಣಪ್ಪ ಕಮಕನೂರ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಮುಂದುವರೆಸುವಂತೆ ಒತ್ತಾಯಿಸಿ ಮಂಡ್ಯ ಜಿಲ್ಲಾ ಗಂಗಾಮತಸ್ಥರ (ಬೆಸ್ತರ್) ಸಂಘದ ಅಧ್ಯಕ್ಷ ಎಸ್.ರಮೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪ್ಪಣ್ಣಪ್ಪ ಕಮಕನೂರ ಅವರು ಸಮುದಾಯಕ್ಕೆ ಚಿರಪರಿಚಿತರಾಗಿದ್ದು ವಿಧಾನ ಪರಿಷತ್ ಸದಸ್ಯರಾಗಿ ದೊರೆತ ಅಲ್ಪಾವಧಿಯಲ್ಲೇ ಉತ್ತಮ ಕೆಲಸ ಮಾಡಿದ್ದಾರೆ ಎಂದರು.

ಅಲ್ಲದೇ ಜಿಲ್ಲಾಧ್ಯಂತ ಪ್ರವಾಸ ಕೈಗೊಂಡು ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ದೊರೆಯುವಂತೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಮಾಜದ ಏಕೈಕ ರಾಜಕೀಯ ಧುರೀಣರಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖಗೆ ಅವರ ಅನಿಯಾಯಿಗಳಾಗಿದ್ದಾರೆ. ಆದ್ದರಿಂದ ಸಮಾಜದ ಪರವಾಗಿ ಒಕ್ಕೊರಳಿನಿಂದ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನ ನೀಡುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಪ್ರಧಾನಕಾರ್ಯದರ್ಶಿ ಹೊನ್ನಪ್ಪ, ಉಪಾಧ್ಯಕ್ಷ ಸಿದ್ದಪ್ಪ, ನಿರ್ದೇಶಕ ಈರಯ್ಯ, ಗಂಗಾಮತಸ್ಥರ (ಬೆಸ್ತರ್) ಸೌಹಾರ್ದ ಸಂಘದ ಅಧ್ಯಕ್ಷ ಬಿ.ಲಿಂಗಯ್ಯ ಇದ್ದರು.
Mandya
“ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಕೆ.ಟಿ. ಚಂದು”
ಮದ್ದೂರು: ಮಕ್ಕಳಿಗೆ ಕೇವಲ ಪುಸ್ತಕ ಮತ್ತು ಅಂಕಗಳಿಗೆ ಸೀಮಿತವಾದ ಶಿಕ್ಷಣ ನೀಡದೆ ಉತ್ತಮ ವ್ಯಕ್ತಿತ್ವ, ಯೋಜನಾ ಶಕ್ತಿ ಮತ್ತು ಜೀವನ ಕೌಶಲ್ಯಗಳನ್ನು ಬೆಳೆಸುವಂತಹ ಶಿಕ್ಷಣವನ್ನು ನೀಡಬೇಕೆಂದು ಹಿರಿಯ ಸ್ವಾತಂತ್ರ ಹೋರಾಟಗಾರ ಕೆ . ಟಿ. ಚಂದು ಹೇಳಿದರು.
ನಗರದ ಡಾ. ಎಚ್. ಕೆ. ಮರಿಯಪ್ಪ ಕಾನ್ವೆಂಟಿನಲ್ಲಿ ಎಂ.ಹೆಚ್ .ಚನ್ನೇಗೌಡ ವಿದ್ಯಾ ಸಂಸ್ಥೆಯಡಿ ಎಚ್. ಕೆ .ವೀರಣ್ಣಗೌಡರ ಮಡದಿ ತಾಯಮ್ಮ ವೀರಣ್ಣಗೌಡರ ಹೆಸರಿನಲ್ಲಿ ನೂತನವಾಗಿ ಪ್ರಾರಂಭವಾದ” ತಾಯಿ ನೆಸ್ಟ್” ಶಿಶುವಿಹಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆ ಶೈಕ್ಷಣಿಕ ಜ್ಞಾನದಷ್ಟೇ, ಮೌಲ್ಯ ಶಿಕ್ಷಣವು ಅಗತ್ಯವಾಗಿದ್ದು ಒಳ್ಳೆಯ ನಡತೆ ಮತ್ತು ಮಾನವೀಯತೆಯನ್ನು ಬೆಳೆಸುವಂತಹ ಪರಿಸರದೊಂದಿಗೆ ಶಿಕ್ಷಣವನ್ನು ನೀಡುವುದು ಅನಿವಾರ್ಯ ವಾಗಿದೆ ಎಂದರು.
ಬಾಲ್ಯದಿಂದಲೇ ಮಕ್ಕಳಲ್ಲಿ ಪ್ರಾಮಾಣಿಕತೆ, ದಯೆ, ಸಹಾನುಭೂತಿ ಮತ್ತು ಗೌರವದಂತಹ ಗುಣಗಳನ್ನು ಬೆಳೆಸುವುದು ಶಿಕ್ಷಣದ ಮುಖ್ಯ ಉದ್ದೇಶವಾದಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಶಿಸ್ತು, ನೈತಿಕತೆ ಬೆಳೆದು ಸಾಮಾಜಿಕ ಜವಾಬ್ದಾರಿಗಳನ್ನು ಮೈಗೂಡಿಸಿಕೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು.
ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ್ ಮಾತನಾಡಿ ಆಧುನಿಕ ಒತ್ತಡದ ಜೀವನದಿಂದಾಗಿ ಪೋಷಕರು ಮಕ್ಕಳ ಸಾಮಾಜಿಕ ಜೀವನದ ಕಡೆಗೆ ಗಮನ ಕೊಡುವುದು ಕಡಿಮೆಯಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಿಕ್ಷಕರು ಕಲಿಕೆಯ ಜೊತೆಯಲ್ಲಿ ಮಕ್ಕಳು ಕೋಪ, ಭಯ, ಒತ್ತಡದಂತ ಭಾವನೆಗಳನ್ನು ಸಮರ್ಥವಾಗಿ ನಿಭಾಯಿಸುವಂತಹ ಮನೋಭಾವನೆಯನ್ನು ಬೆಳೆಸುವ ಜೊತೆಗೆ ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸುವ ಜವಾಬ್ದಾರಿ ಇದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ಪ್ರಾಥಮಿಕ ಶಾಲೆ ಶಿಕ್ಷಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿ.ಟಿ. ಹೇಮಾವತಿ ಹಾಗೂ ಬಿಇಓ ಧನಂಜಯ ರವರನ್ನು ಸಂಸ್ಥೆಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎಂ. ಹೆಚ್ . ಚನ್ನೇಗೌಡ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಂ. ಸ್ವರೂಪ ಚಂದ್, ಕಾರ್ಯದರ್ಶಿ ಸಿ, ಅಪೂರ್ವಚಂದ್ರ ನಿರ್ದೇಶಕ ಪ್ರೊ. ಮಲ್ಲಿಕಾರ್ಜುನ್, ಶಾಂತಾ ಚಂದು, ಕವಿತಾ ಅಪೂರ್ವ ಚಂದು, ಪ್ರಾಂಶುಪಾಲರುಗಳಾದ ಯು.ಎಸ್ ಶಿವ ಕುಮಾರ್, ಎಸ್. ಪಿ. ಕಿರಣ್, ಮುಖ್ಯ ಶಿಕ್ಷಕರಾದ ಎನ್. ಕೃಷ್ಣ, ಎಂ.ಟಿ. ಚಂದ್ರಶೇಖರ್, ವರದರಾಜು ಆಡಳಿತ ಅಧಿಕಾರಿ ಯು.ಎಸ್. ರವಿ ,ಹರೀಶ, ಚೆನ್ನಪ್ಪ ಸೇರಿದಂತೆ ಇತರರು ಹಾಜರಿದ್ದರು.
Mandya
ಮುಸ್ಲೀಂ ಬಾಂಧವರಿಂದ ಬಕ್ರೀದ್ ಆಚರಣೆ
ಮಂಡ್ಯ: ನಗರದ ಸಂತೆ ಮೈದಾನ ಬಳಿಯ ಈದ್ಗಾ ಮೈದಾನ ಮಸೀದಿಯ ಮುಂಭಾಗದಲ್ಲಿ ಮುಸಲ್ಮಾನ ಭಾಂದವರು ಪ್ರಾರ್ಥನೆ ಸಲ್ಲಿಸಿ ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.


ತ್ಯಾಗ, ಬಲಿದಾನ ಮತ್ತು ಸಹೋದರತ್ವದ ಪ್ರತೀಕವಾದ ಪವಿತ್ರ ಬಕ್ರೀದ್ ಹಬ್ಬದ ಶುಭ ಸಂದರ್ಭದಲ್ಲಿ ಮುಸ್ಲೀಂ ಬಾಂಧವರು ಪ್ರಾರ್ಥನೆ ಸಲ್ಲಿಸಿ ಪರಸ್ಪರ ಆಲಿಂಗನೆ ಮೂಲಕ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.
-
Special18 hours agoಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ: ಅರ್ಜಿ ಆಹ್ವಾನ!
-
Chamarajanagar22 hours agoಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿ ಬಂಧನ
-
Hassan21 hours agoಹಾಸನ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆ–ಕಟ್ಟೆಗಳು ತುಂಬಿ ರೈತರಲ್ಲಿ ಸಂತಸ
-
Special7 hours agoLPG ಸಿಲಿಂಡರ್ ಹೊಸ ನಿಯಮಗಳು: ಈ ತಪ್ಪು ಮಾಡಿದ್ರೆ ಗ್ಯಾಸ್ ಕನೆಕ್ಷನ್ ಬ್ಲಾಕ್ ಆಗಬಹುದು!
-
State20 hours agoಕರ್ನಾಟಕದಲ್ಲಿ ಗುಡುಗು–ಸಿಡಿಲು ಮಳೆ ಎಚ್ಚರಿಕೆ: ಆರೆಂಜ್, ಯೆಲ್ಲೋ ಅಲರ್ಟ್ IMDಯಿಂದ ಘೋಷಣೆ
-
National19 hours agoಈ ಬಾರಿ ಕೋಲ್ಕತ್ತಾದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
-
Politics23 hours agoಮುಂದಿನ ಸಿಎಂ ಆಯ್ಕೆ ಬಗ್ಗೆ ಸಿದ್ದರಾಮಯ್ಯ ಮೌನ
-
Mandya23 hours agoಮೇ.30 ರಂದು ಹೆಜ್ಜೆ ಗುರುತು ಕವನ ಸಂಕಲನ ಬಿಡುಗಡೆ ಸಮಾರಂಭ : ಡಾ.ಚಂದ್ರಶೇಖರ್
