Connect with us

Hassan

ಮಾಧ್ಯಮ ಕ್ಷೇತ್ರಕ್ಕೆ ಹೆಚ್ಚು ಮಹಿಳೆಯರು ಬರಬೇಕು

Published

on

ಪತ್ರಕರ್ತರ ಮಿಲನ ಸಮಾರಂಭದಲ್ಲಿ ಸಮ್ಜಾನಾ ಪೌಡಲ್ ಅಭಿಪ್ರಾಯ

ಹಾಸನ: ನೇಪಾಳ ಪತ್ರಿಕೋದ್ಯಮಕ್ಕೆ ಆರು ದಶಕಗಳ ಇತಿಹಾಸ ಇದ್ದು, ಇಲ್ಲಿನಂತೆಯೇ ಅಲ್ಲಿಯೂ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಹೆಚ್ಚು ಮಹಿಳಾ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಬರಬೇಕೆಂದು ನೇಪಾಳ ದೇಶದ ಹಿರಿಯ ಪತ್ರಕರ್ತರಾದ ಸಮ್ಜಾನಾ ಪೌಡಲ್ ಅಭಿಪ್ರಾಯಪಟ್ಟರು.

ನಗರದ ಹೊರವಲಯದಲ್ಲಿರುವ ಪವನಪುತ್ರ ರೆಸಾರ್ಟ್ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಹಾಸನ, ಕೊಡಗು, ಚಿಕ್ಕಮಗಳೂರು ಮಲೆನಾಡು ಮೂರು ಜಿಲ್ಲೆಗಳ ಪತ್ರಕರ್ತರೊಂದಿಗೆ ನೇಪಾಳ, ಶ್ರೀಲಂಕಾ ಪತ್ರಕರ್ತರ ಬಾಂಧವ್ಯ ಬೆಸೆದ ಮಿಲನ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಪತ್ರಕರ್ತರು ಕೌಟುಂಬಿಕ ಜವಾಬ್ದಾರಿಗಳ ಜತೆಗೆ ಪತ್ರಿಕೋದ್ಯಮದ ಕೆಲಸಗಳನ್ನು ನಿಬಾಯಿಸುವುದು ಕಷ್ಟಕರ ಎನ್ನುವ ಕಾರಣಕ್ಕಾಗಿ ಹೆಚ್ಚಿನ ಸ್ತ್ರೀಯರು ಪತ್ರಿಕೋದ್ಯಮಕ್ಕೆ ಬರುತ್ತಿಲ್ಲ. ಕರೊನಾ ಸಮಯದಲ್ಲಿ ಪತ್ರಕರ್ತರು ಎಲ್ಲೆಡೆ ಓಡಾಡುತ್ತಾರೆ. ಸೋಂಕು ಹರಿಡಿಸುತ್ತಾರೆ ಎನ್ನುವ ಕಾರಣಕ್ಕಾಗಿ ಮನೆ ಮಾಲೀಕರು ಬಾಡಿಗೆಗೆ ಮನೆ ನೀಡುತ್ತಿರಲಿಲ್ಲ. ಬಾಡಿಗೆಗಿದ್ದ ಪತ್ರಕರ್ತರನ್ನು ಮನೆ ಖಾಲಿ ಮಾಡುವಂತೆ ಒತ್ತಡ ಹೇರುತ್ತಿದ್ದರ. ಅಂತಹ ಸಮಸ್ಯೆಗಳ ನಡುವೆಯೂ ನಾನು ಪತ್ರಕರ್ತೆಯಾಗಿ ಉಳಿದಿದ್ದೇನೆ. ಹಾಸನದ ಪತ್ರಕರ್ತರೊಂದಿಗಿನ ಒಡನಾಟ ಅದ್ಭುತ ಅನುಭವ ನೀಡಿದೆ ಎಂದರು. ಒಳಗೊಳ್ಳುವಿಕೆ, ಲಿಂಗ ಸಮಾನತೆ ಮತ್ತು ಪತ್ರಿಕೋದ್ಯಮದ ಸಮಗ್ರತೆಯ ಸಂರಕ್ಷಣೆಗಾಗಿ ನಾವು ಶ್ರಮಿಸೋಣ. ಒಟ್ಟಾಗಿ, ನೇಪಾಳಿ ಪತ್ರಕರ್ತರ ಒಕ್ಕೂಟದಂತಹ ಸಂಸ್ಥೆಗಳು ಮತ್ತು ಗಡಿಯುದ್ದಕ್ಕೂ ಸಹಯೋಗದ ಪ್ರಯತ್ನಗಳ ಮೂಲಕ, ನಾವು ಸವಾಲುಗಳನ್ನು ಜಯಿಸಬಹುದು ಮತ್ತು ಮುಕ್ತ ಮತ್ತು ಜವಾಬ್ದಾರಿಯುತ ಪತ್ರಿಕಾ ತತ್ವಗಳನ್ನು ಎತ್ತಿಹಿಡಿಯಬಹುದು ಎಂದು ಹೇಳಿದರು.

ಶ್ರೀಲಂಕಾದ ಹಿರಿಯ ಪತ್ರಕರ್ತೆ ಪತುಮ್ ತಿಲಂಕಾ ವಿಕ್ರಮ ಸಿಂಗೇ ಮಾತನಾಡಿ, ಡಿಜಿಟಲ್ ಪ್ಲಾಟ್ ಫಾರ್ಮ್‌ಗಳು ಕಾಮೆಂಟ್‌ಗಳ ವಿಭಾಗಗಳು, ಲೈವ್ ಚಾಟ್‌ಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಎಲ್ಲರ ತೊಡಗಿಸಿಕೊಳ್ಳುವಿಕೆಯಂತಹ ಸಂವಾದಾತ್ಮಕ ವೈಶಿಷ್ಟ್ಯಗಳ ಮೂಲಕ ತಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ಪತ್ರಕರ್ತರನ್ನು ಸಕ್ರಿಯಗೊಳಿಸಿವೆ. ಈ ದ್ವಿಮುಖ ಸಂವಹನವು ಸಮುದಾಯದ ಪ್ರಜ್ಞೆಯನ್ನು ಬೆಳೆಸುತ್ತದೆ ಮತ್ತು ಮಾಧ್ಯಮ ಉದ್ಯಮದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಪ್ರೋತ್ಸಾಹಿಸುತ್ತದೆ ಎಂದರು. ನಿರಂತರವಾಗಿ ವಿಕಸನಗೊಳ್ಳುತ್ತಿರುವ ಈ ಡಿಜಿಟಲ್ ಲ್ಯಾಂಡ್‌ಸ್ಕೇಪ್ ನ್ನು ನಾವು ಪತ್ರಕರ್ತರು ಪತ್ರಿಕೋದ್ಯಮದ ಪ್ರಮುಖ ತತ್ವಗಳನ್ನು ಎತ್ತಿಹಿಡಿಯುವಲ್ಲಿ ಜಾಗರೂಕರಾಗಿರಲು ಇದು ನಿರ್ಣಾಯಕವಾಗಿದೆ. ನಿಖರತೆ, ನ್ಯಾಯೋಚಿತತೆ ಮತ್ತು ನಿಷ್ಪಕ್ಷಪಾತ, ಪರಿಕರಗಳು ಮತ್ತು ತಂತ್ರಜ್ಞಾನಗಳು ಬದಲಾಗಬಹುದಾದರೂ, ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ನಮ್ಮ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ಕಿವಿಮಾತು ಹೇಳಿದರು. ಪತ್ರಿಕೋದ್ಯಮದ ಮೇಲೆ ಡಿಜಿಟಲ್ ಮಾಧ್ಯಮದ ಪ್ರಭಾವವನ್ನು ನಿರಾಕರಿಸಲು ಸಾಧ್ಯವಿಲ್ಲದ ಸ್ಥಿತಿ ಇದೆ. ಉದ್ಯಮದ ಭವಿಷ್ಯಕ್ಕಾಗಿ ಸವಾಲುಗಳು ಮತ್ತು ಅವಕಾಶಗಳೆರಡನ್ನೂ ಪ್ರಸ್ತುತಪಡಿಸುವ ಮೂಲಕ ಸುದ್ದಿ ಮಾಡುವ, ವಿತರಿಸುವ ಮತ್ತು ಅದರ ಬಳಕೆದಾರನಾಗುವ ರೀತಿಯಲ್ಲಿ ಕ್ರಾಂತಿ ಮಾಡಿದೆ. ಪತ್ರಕರ್ತರಾದ ನಾವು ಈ ಡಿಜಿಟಲ್ ಕ್ರಾಂತಿಯನ್ನು ಆಶಾವಾದ ಮತ್ತು ಸಮಗ್ರತೆಯಿಂದ ಸ್ವೀಕರಿಸೋಣ, ಸಮಾಜದಲ್ಲಿ ನಮ್ಮ ಪಾತ್ರವು ಎಂದಿಗೂ ಹೆಚ್ಚು ಮಹತ್ವ ಕಳೆದುಕೊಂಡಿಲ್ಲ ಎಂದು ಸಲಹೆ ನೀಡಿದರು.

ಶ್ರೀಲಂಕಾದ ಪತ್ರಕರ್ತರಾದ ಎಂ.ಆರ್.ಪಿ. ಶುಭಾ ಮೆನಕೆ ರತ್ನಾಯಕೆ ಮಾತನಾಡಿ, ನಾವು ಶ್ರೀಲಂಕದವರು ನಿಮ್ಮನ್ನು ಎಂದಿಗೂ ಭಾರತದಿಂದ ಬೇರೆಯಾಗಿ ಭಾವಿಸುವುದಿಲ್ಲ. ನಮ್ಮ ದೇಶ ಭಾರತವೆಂಬ ನದಿಯ ಒಂದು ಉಪನದಿಯಾಗಿದೆ. ನಮ್ಮ ಸಾಂಸ್ಕೃತಿಕ ಹಿನ್ನೆಲೆಗಳು, ಭಾಷೆ, ಹವಾಮಾನ, ಸಂಸ್ಕೃತಿಯಲ್ಲಿ ಸಾಮ್ಯತೆಗಳಿವೆ. ಹೀಗಾಗಿ ಇಲ್ಲಿಗೆ ಆಗಮಿಸುವುದು ಬಹಳ ಆಪ್ತ ಎನ್ನಿಸುತ್ತದೆ ಎಂದರು. ಭಾರತೀಯ ಸಂಸ್ಕೃತಿ ಹಾಗೂ ಹಿಂದಿ ಸಾಹಿತ್ಯ ನನಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ವಿ. ಶಿವಾನಂದ ತಗಡೂರು ಮಾತನಾಡಿ, ದೂರದ ಶ್ರೀಲಂಕಾ, ನೇಪಾಳದಿಂದ ಅತಿಥಿಗಳು ಬಂದಿದ್ದಾರೆ. ಶ್ರವಣಬೆಳಗೊಳದಲ್ಲಿ ನಡೆದ ಸಮ್ಮೇಳನದಲ್ಲಿ ೪೦ಕ್ಕೂ ಹೆಚ್ಚು ಪತ್ರಕರ್ತರು ಬಂದಿದ್ದರು. ಆಗ ಶ್ರೀಲಂಕಾದೊಂದಿಗೆ ಬಾಂಧವ್ಯ ಬೆಸೆಯುವ ಕೆಲಸ ಆಗಿತ್ತು. ಮದನಗೌಡ ಅವರು ಹೊರ ದೇಶಗಳಲ್ಲೂ ಬಾಂಧವ್ಯ ಬೆಳೆಸಿದ್ದಾರೆ. ೧೯೯೩ರಲ್ಲಿ ಡಿ.ವಿ. ಗುಂಡಪ್ಪ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವನ್ನು ಸ್ಥಾಪಿಸಿದರು. ಇಂತಹ ಸಂಘಟನೆ ಪತ್ರಕರ್ತರ ವಿಶ್ವಾಸ, ವೃತ್ತಿ ಕೌಶಲ ಹೆಚ್ಚಿಸುವ ಕೆಲಸ ಮಾಡುತ್ತಿದೆ. ಮನೆಯ ಅಂಗಳದ ಹೆಸರಿನಲ್ಲಿ ಹಿರಿಯ ಪತ್ರಕರ್ತರ ಮನೆಗೆ ಸಂಘವೇ ಭೇಟಿ ನೀಡಿ ಗೌರವಿಸುತ್ತಿದೆ. ಎಲ್ಲರ ಅಭಿಪ್ರಾಯ ದಾಖಲು ಮಾಡುವ ಕೆಲಸ ಮಾಡುತ್ತಿದೆ ಎಂದು ಸಂಘದ ಕಾರ್ಯಚಟುವಟಿಕೆಗಳನ್ನು ಮೆಲುಕು ಹಾಕಿದರು.

ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಚ್.ಬಿ. ಮದನಗೌಡ ಮಾತನಾಡಿ, ನೇಪಾಳ ಮತ್ತು ಶ್ರೀಲಂಕಾ ದೇಶಕ್ಕೆ ಭೇಟಿ ಕೊಟ್ಟು ಆರೋಗ್ಯಕರ ಚರ್ಚೆ ಮಾಡುವುದು ನಮ್ಮ ಉದ್ದೇಶವಾಗಿದೆ. ನೇಪಾಳ ದೇಶದಲ್ಲಿ ಒಟ್ಟು ಮೂರು ಕೋಟಿ ಜನಸಂಖ್ಯೆ ಇದ್ದು, ೧೬ ಸಾವಿರ ಜನ ಪತ್ರಕರ್ತರು ಇದ್ದಾರೆ. ಇವರಿಗೆ ಯಾವ ಸೌಲಭ್ಯ ಇರುವುದಿಲ್ಲ. ಇನ್ನು ಶ್ರೀಲಂಕಾದಲ್ಲಿ ಸಲ್ಪ ಪರವಾಗಿಲ್ಲ. ಕೆಲ ಸೌಲಭ್ಯಗಳು ದೊರಕುತ್ತಿದೆ ಎಂದರು. ಇದೊಂದು ಪರಿಚಯಾತ್ಮಕವಾದ ಕಾರ್ಯಕ್ರಮವಾಗಿದ್ದು, ಎಲ್ಲಾ ವಿಚಾರವನ್ನು ಚರ್ಚೆ ಮಾಡಲು ಮುಕ್ತ ಅವಕಾಶವಿದೆ ಎಂದರು.

ಬೆಂಗಳೂರಿನ ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಮಾತನಾಡಿ, ಈ ಹಿಂದೆ ಪತ್ರಿಕೋದ್ಯಮವನ್ನು ಕಾವಲು ನಾಯಿ ಎಂದು ಕರೆಯುತ್ತಿದ್ದರು. ಈಗ ಅದು ಸಾಕು ನಾಯಿ ಆಗಿದೆ ಎಂದು ಹೇಳುವ ಮಟ್ಟಿಗೆ ಕ್ಷೇತ್ರದ ಗುಣಮಟ್ಟ ಕುಸಿದಿದೆ ಎಂದು ವಿಜಯವಾಣಿ ಪತ್ರಿಕೆ ಸುದ್ದಿ ಸಂಪಾದಕ, ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಬೇಸರ ವ್ಯಕ್ತಪಡಿಸಿದರು. ಯಾವುದೇ ಒಬ್ಬ ವ್ಯಕ್ತಿ, ಸಂಸ್ಥೆಯ ಗುಣಗಾನ ಮಾಡುತ್ತಾ ಕೂರುವುದರಿಂದ ನಾವು ಪತ್ರಿಕೋದ್ಯಮವನ್ನು ಹಿಂದಿನ ವೈಭವದ ದಿನಗಳಿಗೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದರು. ಮಾಧ್ಯಮ ಸಂಸ್ಥೆಗಳ ನಿರ್ವಹಣಾ ವೆಚ್ಚದ ಹೊರೆ, ಅದಕ್ಕಾಗಿ ಆರ್ಥಿಕ ಸಂಪನ್ಮೂಲ ಸಂಗ್ರಹಿಸುವ ಸವಾಲುಗಳಿಂದ ಪತ್ರಿಕೋದ್ಯಮದ ಗುಣಮಟ್ಟ ಹಾಗೂ ವಿಶ್ವಾಸಾರ್ಹತೆಗೆ ಧಕ್ಕೆ ತಂದೊಡ್ಡುತ್ತಿದೆ ಎಂದು ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಳ್ಳುಗೋಪಾಲ್ ಅಧ್ಯಕ್ಷತೆ ನುಡಿಯಲ್ಲಿ ಮಾತನಾಡಿ, ಕರ್ನಾಟಕದಿಂದ ನಾವು ಎಲ್ಲೆ ಹೋದರೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಊರೆಂದು ಹೇಳುತ್ತಾರೆ. ಯಾವುದೇ ಕೆಲಸವನ್ನು ಸಂತೋಷವಾಗಿ ಮಾಡಬೇಕು. ನಮ್ಮದೆಯಾದ ಚಿಂತೆ ಮತ್ತು ವ್ಯವಸ್ಥೆಗಳನ್ನು ನಾವುಗಳೆಲ್ಲಾ ಒಗ್ಗಟ್ಟಾಗಿ ಹತ್ತಿರ ಇರುವ ಮೂರು ಜಿಲ್ಲೆಯವರು ಸೇರಿ ಮಾತನಾಡಿ ಪರಿಚಯ ಮಾಡಿಕೊಂಡು ಏನಾದರೂ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು. ಈ ನಿಟ್ಟಿನಲ್ಲಿ ಮೂರು ಜಿಲ್ಲೆಗಳ ಸೇರಿ ಈ ಮಿಲನ ಸಮಾರಂಭ ಕಾರ್ಯಕ್ರಮವನ್ನು ನಡೆಸಲಾಗಿದೆ ಎಂದು ತಮ್ಮ ಅಭಿಪ್ರಾಯ ಹೇಳಿಕೊಂಡರು.

ಕಾರ್ಯಕ್ರಮದಲ್ಲಿ ಇತ್ತಿಚಿಗೆ ಪ್ರಶಸ್ತಿಗೆ ಬಾಜನರಾಗಿದ್ದ ಹೆತ್ತೂರ್ ನಾಗರಾಜ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಶ್ರೀಲಂಕಾದಿಂದ ಆಗಮಿಸಿದ್ದ ಪತ್ರಕರ್ತರಾದ ಪತುಂತಿಲಂಕಾ ವಿಕ್ರಮ ರತ್ನೆ, ಎಂ.ಆರ್. ಪಿ. ಶುಭಾ ಮೆನಕೆ ರತ್ನಾಯಕೆ ಹಾಗೂ ನೇಪಾಳದ ಹಿರಿಯ ಪತ್ರಕರ್ತೆ ಸಮ್ಜಾನಾ ಪೌಡಲ್ ಅವರ ಭಾರತದ ಬಗೆಗಿನ ಭಾವನಾತ್ಮಕ ಮಾತುಗಳು ಭಾಷೆ, ದೇಶಗಳ ಬೇಲಿ ಗಡಿದಾಟಿ ಬಾಂಧವ್ಯ ಬೆಸೆಯಿತು.

ಇದೆ ವೇಳೆ ರಾಜ್ಯ ಸಮಿತಿ ವಿಶೇಷ ಆಹ್ವಾನಿತ ರವಿನಾಕಲಗೂಡು, ಸಂಪಾದಕರ ಸಂಘದ ಅಧ್ಯಕ್ಷ ಕೆಂಚೇಗೌಡ, ರಾಷ್ಟ್ರೀಯ ಮಂಡಳಿ ಸದಸ್ಯ ಜಿ. ಪ್ರಕಾಶ್, ರಾಷ್ಟ್ರೀಯ ಮಂಡಳಿ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಆರ್.ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಕೆ.ಎಚ್. ವೇಣುಕುಮಾರ್, ಎನ್. ನಂಜುಂಡೇಗೌಡ, ಖಜಾಂಚಿ ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಜು ಬನವಾಸೆ, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎಸ್.ಎ. ಮೊದಲಿಯಾರ್, ಶ್ರವಣಬೆಳಗೊಳದ ಹಿರಿಯ ಪತ್ರಕರ್ತ ಎಸ್.ಎನ್. ಅಶೋಕ್ ಕುಮಾರ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಈ ಸಲದ ಗಣರಾಜ್ಯೋತ್ಸವ ಸನ್ಮಾನಕ್ಕೆ ಅಪರೂಪದ ವೈದ್ಯ ಡಾ.ನಿತಿನ್ ಆಯ್ಕೆ

Published

on

ಹಾಸನ: ನಗರದ ಪ್ರತಿಷ್ಠಿತ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿರುವ ಡಾ.ಎಸ್.ಎ.ನಿತಿನ್ ಅವರು ಈ ಬಾರಿಯ ಜಿಲ್ಲಾಡಳಿತದ ಗಣರಾಜ್ಯೋತ್ಸವದ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಜಿಲ್ಲಾಡಳಿತ ಅಭಿನಂದಿಸುತ್ತಿದ್ದು, ಈ ಸಲ ವೈದ್ಯಕೀಯ ಕ್ಷೇತ್ರದಿಂದ ಡಾ.ನಿತಿನ್ ಅವರನ್ನು ಆಯ್ಮೆ ಮಾಡಲಾಗಿದೆ. 2001 ರಿಂದ ಆಯುರ್ವೇದ ವೈದ್ಯರಾಗಿ ಜಿಲ್ಲೆಯಲ್ಲಿ ವೃತ್ತಿ ಆರಂಭಿಸಿದ ಇವರು, 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
ಹಾಸನದ ಪ್ರತಿಷ್ಠಿತ ರಾಜೀವ್ ಶಿಕ್ಷಣ ವಿದ್ಯಾಸಂಸ್ಥೆಯಲ್ಲಿ ವೈದ್ಯರಾಗಿ, ಶೈಕ್ಷಣಿಕ ಸಲಹೆಗಾರರಾಗಿ, ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2018 ರಿಂದ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು ಮತ್ತು ಮುಖ್ಯ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2024 ರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಶೈಕ್ಷಣಿಕ ಮಂಡಳಿ ಸದಸ್ಯರಾಗಿದ್ದಾರೆ.
2017 ರಲ್ಲಿ ರಾಷ್ಟ್ರೀಯ ಜೈನ್ ಯುವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜರಾಗಿದ್ದಾರೆ,
ವೈದ್ಯ ಸೇವೆ ಜೊತೆಗೆ ಜನಪರ ಕೆಲಸ ಕಾರ್ಯವನ್ನೂ ಮಾಡುತ್ತಿದ್ದಾರೆ. ವಿಶೇಷವಾಗಿ ರೋಗಿಗಳ ಔಷಧ ಚೀಟಿಯನ್ನೂ ಕನ್ನಡದಲ್ಲೇ ಬರೆಯುತ್ತಿರುವುದು ಇವರ ಕನ್ನಡ ಪ್ರೀತಿಗೆ ಹಿಡಿದ ಕನ್ನಡಿ.
ಜಿಲ್ಲೆ ಹಾಗೂ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ, ವಿವಿಧ ರೋಗ-ರುಜಿನಗಳ ಬಗ್ಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಲೇಖನ ಬರೆದು ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಈ ರೀತಿಯ 250ಕ್ಕೂ ಹೆಚ್ಚು ಲೇಖನ ಬರೆದಿದ್ದಾರೆ. ಅಲ್ಲದೆ ಈಗಿನ ಸಂದರ್ಭಕ್ಕೆ ಆಯುರ್ವೇದ ಮಹತ್ವದ ಬಗ್ಗೆಯೂ ಹತ್ತಾರು ಲೇಖನ ಬರೆದು ವೈದ್ಯಕೀಯ ಸೇವೆ ಜೊತೆಗೆ ಸಾಮಾಜಿಕ ಅರಿವು, ಜಾಗೃತಿ ಕೆಲಸವನ್ನೂ ಮಾಡುತ್ತಿರುವ ಅಪರೂಪದ ವೈದ್ಯರು. ಜೊತೆಗೆ 200ಕ್ಕೂ ಹೆಚ್ಚು ಹನಿಗವನ, 100ಕ್ಕೂ ಹೆಚ್ಚು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, 100ಕ್ಕೂ ಹೆಚ್ಚು ಆರೋಗ್ಯ ಮಾಹಿತಿ ಕುರಿತು ಉಪನ್ಯಾಸ, 70ಕ್ಕೂ ಹೆಚ್ಚು ಆರೋಗ್ಯ ಶಿಬಿರ ಮಾಡಿದ್ದಾರೆ. ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಪುರಸ್ಕಾರಕ್ಕೆ ಭಾಜನರಾಗಿರುವುದಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.
ಹಿರಿಯ ಪತ್ರಕರ್ತ ಶ್ರವಣಬೆಳಗೊಳದ ಎಸ್.ಎನ್.ಅಶೋಕ್ ಕುಮಾರ್-ಜಿ.ಪಿ.ಶ್ಯಾಮಲಾದೇವಿ ಅವರ ಸುಪುತ್ರರಾದ ನಿತಿನ್ ಅವರು, ಪ್ರಾಥಮಿಕ ಶಿಕ್ಷಣವನ್ನೇ ಶ್ರವಣಬೆಳಗೊಳದಲ್ಲೇ ಮುಗಿಸಿ ಪ್ರೌಢಶಿಕ್ಷಣವನ್ನು ಮಾವಿನಕೆರೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಡೆದರು. ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬಿಎಎಂಎಸ್, ಎಂಡಿ ಪಡೆದರು. ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಪಿಹೆಚ್ಡಿ ಪಡೆದರು.

Continue Reading

Hassan

ಅರೇಳ್ಳಿ: ಜ.26 ರಂದು 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಣೆ

Published

on

ಹಾಸನ: ಸಂವಿಧಾನ ದಿನಾಚರಣೆ ಅಂಗವಾಗಿ ಜನವರಿ 26ರ ರಂದು ಬೇಲೂರು ತಾಲೂಕಿನ ಅರೇಳ್ಳಿಯಲ್ಲಿ 207ನೇ ಭೀಮ ಕೋರೇಗಾಂವ್ ವಿಜಯೋತ್ಸವ ಆಚರಿಸಲಾಗುವುದು ಎಂದು ದಲಿತ ಮುಖಂಡರಾದ ಅರೆಹಳ್ಳಿ ನಿಂಗರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಭೀಮ ಕೋರೆಂಗಾವ್ ಯುದ್ಧ ದಲಿತರ ಸ್ವಾಭಿಮಾನದ ಪ್ರತೀಕವಾಗಿದೆ ಕೇವಲ ೫೦೦ ಜನ ಮಹರ್ ಸೈನಿಕರು ೨೮,೦೦೦ ಪೇಶ್ವೆ ಸೈನಿಕರನ್ನು ಬಗ್ಗುಬಡಿದ ವಿಜಯದ ದಿನವೇ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಪ್ರತಿ ವರ್ಷವೂ ಹರೇಹಳ್ಳಿಯಲ್ಲಿ ಆಚರಿಸಲಾಗುತ್ತಿದ್ದು ಅದೇ ರೀತಿ ಈ ವರ್ಷವೂ ವಿಜೃಂಭಣೆಯ ಉತ್ಸವ ನಡೆಯಲಿದೆ ಎಂದರು. ಜನವರಿ ೨೬ ರಂದು ಬೆಳಗ್ಗೆ ೧೧ ಗಂಟೆಗೆ ಅಂಬೇಡ್ಕರ್ ವೃತ್ತದ ಬಳಿ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೊರಡಲಿರುವ ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಅನುಯಾಯಿಗಳು ಭಾಗವಹಿಸಲಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದ್ದು, ಅಂಬೇಡ್ಕರ್ ಭಾವಚಿತ್ರ ಹಾಗೂ ವಿಜಯ ಸ್ತಂಭದ ಮೆರವಣಿಗೆ ನಡೆಯಲಿದೆ ಎಂದರು.

ಅದೇ ದಿನ ಸಂಜೆ ೬ ಸುಮಾರಿಗೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮಕ್ಕೆ, ಬಾಬಾಸಾಹೇಬ್ ಅಂಬೇಡ್ಕರ್ ವಿಚಾರವಾದಿ ಬಿ.ಗೋಪಾಲ್, ಅಂಬೇಡ್ಕರ್ ಅನುಯಾಯಿ ಹಾಗೂ ನಟ ಚೇತನ್ ಅಹಿಂಸಾ, ಹಾಸ್ಯನಟ ಸಾಧುಕೋಕಿಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ಭೀಮ ಕೋರೆಗಾಂವ್ ವಿಜಯೋತ್ಸವ ವಿಚಾರಗಳನ್ನು ಹಂಚಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಊಟ ಹಾಗೂ ಉಪಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಅಂಬೇಡ್ಕರ್ ಅಭಿಮಾನಿಗಳು, ಸಾರ್ವಜನಿಕರು, ಅರೆಹಳ್ಳಿ ಗ್ರಾಮಸ್ಥರು ಹಾಗೂ ಆ ಭಾಗದ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯೋತ್ಸವ ಸಮಿತಿಯ ಅಧ್ಯಕ್ಷ ಎಸ್. ವಿರೂಪಾಕ್ಷ, ಲಿಂಗರಾಜು, ವಿಜಯೋತ್ಸವ ಸಮಿತಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ್, ರಮೇಶ್, ಸಿದರಾಜು, ದಿನೇಶ್, ಸೋಮಶೇಖರ್ ಕುಮಾರ್ ಇತರರು ಉಪಸ್ಥಿತರಿದ್ದರು.

Continue Reading

Hassan

ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ

Published

on

ಹಾಸನ: ನಗರದ ಡೈರಿ ವೃತ್ತ, ಅರಸೀಕೆರೆ ರಸ್ತೆ ಬಳಿ ಕೈಗಾರಿಕ ಪ್ರದೇಶದಲ್ಲಿ ಸಣ್ಣ ಕೈಗಾರಿಕ ಇಂಡಸ್ಟ್ರೀಯಸ್ ಅಸೋಸಿಯೇಷನ್ ಭವನದ ೨ನೇ ಅಂತಸ್ಥಿನ ಭವನದ ಶಂಕುಸ್ಥಾಪನೆ ಸಮಾರಂಭಕ್ಕೆ ಶುಕ್ರವಾರದಂದು ಗುದ್ದಲಿ ಪೂಜೆ ಸಲ್ಲಿಸಿ ಕಟ್ಟಡ ನಿರ್ಮಾಣಕ್ಕೆ ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡರು ಚಾಲನೆ ನೀಡಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿ, ನಗರಸಭೆ ಅಧ್ಯಕ್ಷರಾದ ಎಂ. ಚಂದ್ರೇಗೌಡ ಮಾತನಾಡಿ, ಎರಡನೇ ಅಂತಸ್ಥಿತನ ನೂತನ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿದೆ. ಈ ಕಟ್ಟಡ ಸಂಘಕ್ಕೆ ಉಪಯೋಗವಾಗಲಿ ಎಂದು ಶುಭ ಹಾರೈಸುವುದಾಗಿ ಹೇಳಿದರು.

ಎಫ್.ಕೆ.ಸಿ.ಸಿ.ಐ. ಐಟಿ-ಬಿಟಿ ಸಮಿತಿ ಅಧ್ಯಕ್ಷ ಹೆಚ್.ಎ. ಕಿರಣ್ ಮಾತನಾಡಿ, ಸಂಘದ ಎರಡನೇ ಹಂತದ ಶಿಲನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ಕಳೆದ ಎರಡು ದಶಕಗಳಿಂದ ನಮ್ಮ ಸಂಘದ ಕಾರ್ಯಕ್ರಮಗಳು ಹಾಗೂ ಕಾರ್ಯವ್ಯಾಪ್ತಿ ಜಿಲ್ಲಾಧ್ಯಂತ ಹರಡಿದೆ. ಎರಡು ಸಾವಿರ ಜನ ಇದ್ದಂತಹ ಉದ್ಯಮಿಗಳು ಜಿಲ್ಲಾಧ್ಯಂತ ಈಗ ೨೦ ಸಾವಿರಕ್ಕೂ ಹೆಚ್ಚುಜನ ಉದ್ಯಮಿಗಳು ಇದ್ದಾರೆ. ಈ ಭಾಗವು ಕೂಡ ನಗರಸಭೆ ವ್ಯಾಪ್ತಿಗೆ ಸೇರಿದ್ದು, ಇ-ಖಾತೆ ವಿಚಾರವಾಗಿಯೂ ಕೂಡ ನಗರಸಭೆ ಅಧ್ಯಕ್ಷರು ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದರು.

ನಿರ್ಮಾಣವಾಗುತ್ತಿರುವ ಎರಡನೇ ಅಂತಸ್ಥಿನ ಕಟ್ಟಡವು ಕೈಗಾರಿಕ ಉದ್ಯಮಿಗಳ ಕಾರ್ಯಕ್ರಮಕ್ಕೆ ಮತ್ತು ಇಂಡಸ್ಟ್ರಿಯಲ್ ಕಾರ್ಯಕ್ರಮ ನಡೆಸುವುದಕ್ಕೆ ಒಂದು ಹಾಲ್ ನಿರ್ಮಾಣ ಮಾಡಲಾಗುತ್ತಿದೆ. ಮೊದಲನೇ ಅಂತಸ್ಥನ್ನು ಸ್ಕಿಲ್ ಡೆವಲಪ್ ಮೆಂಟ್ ಗೆ ಈಗಾಗಲೇ ಉದ್ಘಾಟನೆಗೊಂಡಿದೆ. ಉದ್ಯಮಿಗಳ ಹಲವಾರು ಜನರಿಗೆ ಕಾರ್ಯಕ್ರಮವನ್ನು ಸದ್ಯದಲ್ಲೆ ಮಾಡಲಾಗುವುದು ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಹೆಚ್.ಎ.ಡಿ.ಎಸ್.ಎಸ್.ಐ.ಎ. ಅಧ್ಯಕ್ಷ ಆರ್. ಶಿವರಾಮ್, ಉಪಾಧ್ಯಕ್ಷ ಪ್ರಕಾಶ್ ಎಸ್. ಯಾಜಿ, ಪ್ರಧಾನ ಕಾರ್ಯದರ್ಶಿ ಎನ್. ಸುದರ್ಶನ್, ಲಘು ಒದ್ಯೋಗ ಭಾರತೀ ಪ್ರಸನ್ನ ಕುಮಾರ್ ಮತ್ತು ಶಿವಾನಂದ್ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!