Connect with us

Mysore

ಸಮರ್ಪಕ ಕುಡಿಯುವ ನೀರು ಒದಗಿಸದೇ ತಾಲ್ಲೂಕು ಆಡಳಿತದ ವಿಫಲ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Published

on

ಸಾಲಿಗ್ರಾಮ : ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲ್ಲೂಕು ಬರ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ತಾಲ್ಲೂಕು ಆಡಳಿತ ಮೇವು, ಗೋಶಾಲೆ, ತೆರೆಯದೇ, ಸಮರ್ಪಕ ಕುಡಿಯುವ ನೀರು ಒದಗಿಸದೇ ಸಂಪೂರ್ಣವಾಗಿ ವಿಫಲವಾಗಿದ್ದು, ತಾಲ್ಲೂಕು ಆಡಳಿತದ ವಿರುದ್ದ ಹಾಗೂ ತಹಸೀಲ್ದಾರ್ ಸಿ. ಎಸ್.ಪೂರ್ಣಿಮಾ ಅವರ ವರ್ತನೆಯ ವಿರುದ್ದ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬುಬೆಳೆಗಾರರ ಸಂಘ ಇಂದು ಪಟ್ಟಣದ ತಾಲ್ಲೂಕು ಕಚೇರಿ ಎದುರಿನಲ್ಲಿ ರೈತರು, ಪ್ರಗತಿಪರರು, ಉಗ್ರ ಪ್ರತಿಭಟನೆ ಮಾಡಿ ತಾಲ್ಲೂಕು ಆಡಳಿತ ಕಚೇರಿಗೆ ಮುತ್ತಿಗೆಹಾಕುವ ಪ್ರಯತ್ನ ನಡೆಯಿತು.

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬುಬೆಳೆಗಾರರ ಸಂಘ ಸದಸ್ಯರು, ವಿವಿಧ  ರೈತ ಸಂಘಟನೆಯ ಸದಸ್ಯರು ತಾಲ್ಲೂಕು ಕಚೇರಿ ಆವರಣದಲ್ಲಿ ಜಮಾವಣೆಗೊಂಡು ಮಹಾತ್ಮಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ತಾಲ್ಲೂಕು ಕಚೇರಿ ಒಳಗೆ ಮುತ್ತಿಗೆ ಹಾಕಲು ನುಗ್ಗುವ ಯತ್ನ ಮಾಡಿದಾಗ ಸ್ಥಳದಲ್ಲಿದ್ದ ಪೊಲೀಸರು ಬಿಗಿ ಭದ್ರತೆಯಿಂದ ತಡೆದರು. ಈ ವೇಳೆ ರೈತ ಸಂಘಟನೆ ಮುಖಂಡರು ಪೊಲೀಸರೊಂದಿಗೆ ಮಾತಿನ ಚಕಮುಖಿ ನಡೆಸಿದರು. ನಾವು ನ್ಯಾಯ ಕೇಳಲು ಬಂದಿದ್ದೇವೆ, ಇಲ್ಲಿ ಯಾರು ಲಾಂಗು, ಮಚ್ಷು ತಂದಿಲ್ಲ , ತಡೆಯ ಬೇಡಿ ಒಳಗೆ ಬಿಡಿ ಎಂದು ಪೊಲೀಸರ ವಿರುದ್ದ ಗುಡುಗಿದರು.


ತಾಲ್ಲೂಕು ಕಚೇರಿ ಬಾಗಿಲಲ್ಲೇ  ಧರಣಿ ಕುಳಿತ ರಾಜ್ಯ ರೈತ ಸಂಘಟನೆಗಳ ಒಕ್ಜೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬುಬೆಳೆಗಾರರ ಸಂಘ ಪದಾಧಿಕಾರಿಗಳು, ಸದಸ್ಯರು ತಾಲ್ಲೂಕು ಆಡಳಿತ ವಿರುದ್ದ ದಿಕ್ಕಾರದ ಘೋಷಣೆ ಕೂಗಿದರು. ಬರ ನಿರ್ವಹಣೆ ಮಾಡದೆ , ರೈತರ ಜಾನುವಾರುಗಳಿಗೆ ಮೇವು ಬ್ಯಾಂಕ್ ತೆರೆಯದೆ , ಸಮರ್ಪಕವಾಗಿ ಕುಡಿಯುವ ನೀರು ಒದಗಿಸದೆ, ಗೋಶಾಲೆ ಅರಂಭಿಸದೆ, ತಾಲ್ಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ಆವಳಿ ತಾಲ್ಲೂಕಿನ ತಾಲ್ಲೂಕು ಆಡಳಿತ ಸಂಪೂರ್ಣವಾಗಿ ಭ್ರಷ್ಟಚಾರದ ಕೇಂದ್ರವಾಗಿದೆ, ಆಡಳಿತ ಯಂತ್ರ ಕುಸಿದಿದೆ, ಎಂದು ರಾಜ್ಯ ರೈತ ಸಂಘಟನೆಗಳ ಒಕ್ಜೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ತಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಗಂಭೀರ ಆರೋಪ ಮಾಡಿದರು.
ಮೈಸೂರು-ಚಾಮರಾಜನಗರ ಜಿಲ್ಲೆಯಲ್ಲಿ ೧೦ ಸಾವಿರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡಿದೆ, ಹೊಸದಾಗಿ ಯುವ. ಕೃಷಿಗಾರರು ವಿದ್ಯುತ್ ಸಂಪರ್ಕ ಇಲ್ಲದೆ  ಬೀದಿಗೆ ಬಂದಿದ್ದಾರೆ, ಆಕ್ರಮ ಸಕ್ರಮ ಮತ್ತೆ ಮರು ಜಾರಿ ಮಾಡುವಂತೆ ಈ ಸಂದರ್ಭದಲ್ಲಿ ಹಕ್ಕೊತ್ತಾಯ ಮಾಡಿದ ಅವರು ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು, ಮಂತ್ರಿಗಳು ಶಾಸಕರು ಹೇಳುತ್ತಾರೆ ರೈತರ ಮನೆ ಭಾಗಿಲಿಗೆ ಸರ್ಕಾರದ ಆಡಳಿತ ಎನ್ನುತ್ತಾರೆ, ಎಲ್ಲಿದೆ ನಿಮ್ಮ ಆಡಳಿತ ತೋರಿಸಿ, ರೈತರ ಜಾನುವಾರುಗಳಿಗೆ ಮೇವು ಬ್ಯಾಂಕ್, ಕುಡಿಯುವ ನೀರು ಒದಗಿಸದೇ ಇರುವುದೇ ನಿಮ್ಮ ಆಡಳಿತ ಎಂದು ರಾಜ್ಯಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.


ರೈತರಿಗೆ ಬರ ಪರಿಹಾರ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ  ಸರ್ಕಾರ ರಾಜಕಾರಣ ಮಾಡುತ್ತಿವೆ, ನಾವು ಕೇಳುತ್ತಿರುವುದು ಎನ್.ಡಿಆರ್.ಎಫ್ ಮತ್ತು ಎಸ್.ಡಿ.ಆರ್.ಫ್ ಹಣವನ್ನ ನಿಮ್ಮ ಹಣವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ರಾಜ್ಯ ಉಪಾಧ್ಯಕ್ಷ ಅಂಕನಹಳ್ಳಿ ತಿಮ್ಮಪ್ಪ ಮಾತನಾಡಿ ತಾಲೂಕು ಆಡಳಿದ ವೈಪಲ್ಯ ಹಾಗೂ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಅವರು ರೈತರೊಂದಿಗೆ ನಡೆದು ಕೊಳ್ಳುವ ವರ್ತನೆಯನ್ನು ಖಂಡಿಸಿದರು. ತಾಲ್ಲೂಕು ಕಚೇರಿಯಲ್ಲಿ ಲಂಚ ಕೊಡದೇ ಯಾವುದೇ ಕೆಲಸಗಳು ನಡೆಯುತ್ತಿಲ್ಲ, ಜನನ- ಮರಣ ಪತ್ರ ಪಡೆಯಲು ನಾಲ್ಕೈದು ತಿಂಗಳು ಸತಾಯಿಸುತ್ತಾರೆ. ಅದೇ ಲಂಚ ಕೊಟ್ಟರೇ ವಾರದಲ್ಲಿ ಸಿಗುತ್ತದೆ ಎಂದು ಆಕ್ರೋಶ ಭರಿತವಾಗಿ ಮಾತನಾಡಿದ ಅವರು
ರೈತರ ಪರವಾಗಿ ತಾಲ್ಲೂಕಿನ ಅಧಿಕಾರಿಗಳು ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕೆ.ಆರ್.ನಗರ ತಾಲ್ಲೂಕು ಕಛೇರಿಯಿಂದ ಡಿಸಿ ಕಛೇರಿಯವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಳಿಕ ರೈತಮುಖಂಡರೊಟ್ಟಿಗೆ ೧೧ ಅಂಶಗಳ ಬೇಡಿಕೆ, ಹಕ್ಕೊತ್ತಾಯದ ಮನವಿ ಪತ್ರವನ್ನು ರಾಜ್ಯದ ಸರ್ಕಾರಕ್ಕೆ ಕಳುಹಿಸುವಂತೆ ತಹಸೀಲ್ದಾರ್ ಪೂರ್ಣಿಮಾ ಮತ್ತು ಸಾಲಿಗ್ರಾಮ ತಹಸೀಲ್ದಾರ್ ನರಗುಂದ ಅವರಿಗೆ ನೀಡಲಾಯಿತು.

ರೈತರು ತಾಲ್ಲೂಕು ಕಚೇರಿ ಭಾಗಿಲಲ್ಲಿ ಪ್ರತಿಭಟನೆ : ದಿಕ್ಕಾರದ ಘೋಷಣೆ ಕೂಗುತ್ತಿರುವಾಗ ಸ್ಥಳಕ್ಜೆ ಆಗಮಿಸಿದ ತಹಸೀಲ್ದಾರ್ ಪೂರ್ಣಿಮಾ ಅವರು ರಾಜ್ಯ ರೈತ ಸಂಘಟನೆಗಳ ಮುಖಂಡರ  ಜೊತೆ ಚರ್ಚಿಸಿದರು. ಬರ ಹಿನ್ನೆಲೆಯಲ್ಲಿ ಮೇವು, ಬ್ಯಾಂಕ್ ತೆರೆಯದೇ ಇರಲು ಪಶುವೈದ್ಯ ಇಲಾಖೆಯ ಅಧಿಕಾರಿಗಳು ೩೬ ವಾರಗಳ ವರೆವಿಗೂ ಮೇವು ಇದೆ ಎಂಬ ವರದಿ ಹಿನ್ನೆಲೆಯಲ್ಲಿ ತೆರದಿಲ, ಎಂದು ತಹಸೀಲ್ದಾರ್ ಪೂರ್ಣಿಮಾ ಸಮಜಾಯಿಷಿ ಉತ್ತರ ನೀಡಿದಾಗ ರೈತ ಸಂಘಟನೆಗಳು, ರಾಜ್ಯ ಕಬ್ಬುಬೆಳೆಗಾರರು ತೀವ್ರವಾಗಿ ಖಂಡಿಸಿದರು. ತಾಲ್ಲೂಕಿನಲ್ಲಿ ಮಳೆಯಾಗದೇ ಎಲ್ಲಿಂದ ಮೇವು ಬೆಳೆಯಲು ಸಾದ್ಯ, ಯಾರೊ ಒಂದಿಬ್ಬರು ಪಂಪ್ ಸೆಟ್ ನಲ್ಲಿ ಜೊಳ ಬೆಳೆದರೆ ಅದು ಎಲ್ಲರೂ  ಬೆಳೆದ ಹಾಗೇನೆ,ನಿಮ್ಮಂತಹ ಅಧಿಕಾರಿಗಳು ರೈತರ ಜಮೀನಿಗೆ ಬೇಟಿ ಕೊಡಿ, ಇಲ್ಲಸಲ್ಲದ ಪಟ್ಟಿಮಾಡಿ ಉತ್ತರ ಕೊಡಬೇಡಿ ಎಂದು ಪ್ರಶ್ನೆ ಮಾಡಿದರು.


ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಹಾಡ್ಯ ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹರ್ಷಕುಮಾರ್, ಕಬ್ಬು ಬೆಳೆಗಾರರ ಸಂಘದ ಚಾಮರಾಜನಗರ ಜಿಲ್ಲಾಧ್ಯಕ್ಷ ನಾಗರಾಜು,, ನಂದೀಶ್ ಕಟ್ಟೆಪುರ, ಕಬ್ಬು ಬೆಳೆಗಾರರ ಸಂಘದ ಗೌರವಧ್ಯಕ್ಷ ಮಾಯಿಗೌಡ್ರು, ತಾ.ಪ್ರಧಾನ ಕಾರ್ಯದರ್ಶಿ ಹರಂಬಳ್ಳಿ ರಮೇಶ್, ಪದಾಧಿಕಾರಿಗಳಾದ ಬಾಲು ಶಿವಣ್ಣಗೌಡ, ನಾಗರಾಜು, ಚೀರನಹಳ್ಳಿ ಕಾಳೇಗೌಡ್ರು, ಆಮ್ ಅದ್ಮಿ ಪಕ್ಷದ ತಾಲೂಕು ಅಧ್ಯಕ್ಷ ಎಂ.ಜೆ.ನಾಗರಾಜೇಗೌಡ, ಅಖಂಡ ಕರ್ನಾಟಕ ಸೇವಾದಳ ಅಧ್ಯಕ್ಷ ಶಿವುಗೌಡ ಸೇರಿದಂತೆ ನೂರಾರು ರೈತರು ಇದ್ದರು.
ಕೆ.ಆರ್.ನಗರ ಪೊಲೀಸರ ಇನ್ಸ್ ಪೆಕ್ಟರ್ ಪಿ.ಸಂತೋಷ್ ಹಾಗೂ ಸಾಲಿಗ್ರಾಮ ಪೊಲೀಸ್ ಇನ್ಸ್ ಪೆಕ್ಟರ್ ಕೃಷ್ಣರಾಜು ಜಂಟಿಯಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಿದ್ದರು.

 

ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ

Published

on

ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಮೇವು ಮೇಯುತ್ತಿರುವಾಗ ಘಟನೆ ಸಂಭವಿಸಿದೆ. ಕಾಡು ಹಂದಿಗಳನ್ನು ಬೇಡೆಯಾಡಲು ಕಿಡಿಗೇಡಿಗಳು ಸಿಡಿಮದ್ದನ್ನು ಅಳವಡಿಸಿದ್ದಾರೆ ಎಂಬುದನ್ನು ತಿಳಿಯದೇ ರೈತ ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್‌ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ವೇಳೆ ಸಿಡಿಮದ್ದು ಹಠಾತ್ತನೇ ಸಿಡಿದ ಪರಿಣಾಮ ಹಸುವಿನ ಬಾಯಿ ಛಿದ್ರ ಛಿದ್ರವಾಗಿದೆ. ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ರೈತ ಚನ್ನನಂಜೇಗೌಡ ಕಂಗಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು, ಗಂಭೀರ ಗಾಯಗೊಂಡಿರುವ ಹಸುವಿಗೆ ಸೂಕ್ತ ಪರಿಹಾರ ನೀಡಬೇಕು. ಸಿಡಿಮದ್ದನ್ನು ಅಳವಡಿಸಿದ್ದ ಕಿಡಿಗೇಡಿಗಳನ್ನು ಹಿಡಿದು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Continue Reading

Mysore

ಎಚ್‌ಸಿಎಂ ಮನೆಗೆ ದಸಂಸ ಮುಖಂಡರಿಂದ ಮುತ್ತಿಗೆ ಯತ್ನ

Published

on

ಮೈಸೂರು: ಸಚಿವ ಡಾ. ಹೆಚ್ ಸಿ ಮಹದೇವಪ್ಪ ನಿವಾಸಕ್ಕೆ ದಲಿತ ಸಂಘರ್ಷ ಸಮಿತಿ ಮುಖಂಡರಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮೈಸೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ದಸಂಸ ಕಾರ್ಯಕರ್ತರು ರಾಜ್ಯ ಸರ್ಕಾರರವನ್ನು ಎಷ್ಟೇ ಮನವಿ ಮಾಡಿದರೂ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಬೇಸತ್ತು ಸಚಿವ ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಚಿವ‌ ಮಹದೇವಪ್ಪ ನಿವಾಸಕ್ಕೆ ಕೂಡಲೇ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ.

ದಲಿತ ಸಂಘರ್ಷ ಸಮಿತಿ ಮುಖಂಡರಾದ ಚೋರನಹಳ್ಳಿ ಶಿವಣ್ಣ, ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದ್ದು ಎಲ್ಲರನ್ನು ಪೊಲೀಸರು ಬಂಧಿಸಿದ್ದಾರೆ.

Continue Reading

Mysore

ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿ

Published

on

ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಮೈಸೂರು ಕೈಗಾರಿಕೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್,ಸದಸ್ಯರಾದ ಗೌತಮ್ ಸಾಲೇಚ ಮತ್ತು ರಿತೇಶ್ ಗೌಡ ಭೇಟಿ ಮಾಡಿ ಮೈಸೂರು ರಫ್ತು ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಬೇಸ್ ಮೆಂಟ್ನಲ್ಲಿ ನಿಲ್ಲಿಸಿದ್ದು ಪುನಾರಂಭಿಸಲು ಕೆ.ಐ.ಎ.ಡಿ.ಬಿ.ಗೆ ಆದೇಶಿಸಲು ವಿನಂತಿಸಿದರು .

ಕಾಮಗಾರಿ 2019 ರಲ್ಲಿ ಆದೇಶ ಪಡೆದ ಗುತ್ತಿಗೆದಾರರು 2021 ರಲ್ಲಿ ಬೇಸ್ ಮೆಂಟ್ ವರೆಗೆ ಮಾತ್ರ ಮಾಡಿ ನಿಲ್ಲಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಟ್ಟಡ ಮಳೆಗೆ ಶಿಥಿಲವಾಗುತ್ತಿದೆ. ಕೇಂದ್ರ ಸರ್ಕಾರದ 3 ಕೋಟಿ ರೂಪಾಯಿ
ರಾಜ್ಯ ಸರ್ಕಾರದ 1 ಕೋಟಿ ರೂಪಾಯಿ ಮೈಸೂರು ಕೈಗಾರಿಕೆಗಳ ಸಂಘದ 50 ಲಕ್ಷ ರೂಪಾಯಿ ಕೆ.ಐ.ಎ.ಡಿ.ಬಿ.ಗೆ ವಿ.ಐ.ಪಿ.ಸಿ ಮೂಲಕ ನೀಡಿ 20020 ರಲ್ಲಿ ಕಟ್ಟಡ ಪೂರ್ಣ ಗೊಳಿಸುವ ಭರವಸೆ ಹುಸಿಯಾಗಿದೆ.

ಕೂಡಲೇ ಕಾಮಗಾರಿ ಪುನಾರಂಬಿಸುವಂತೆ ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯ ನಿರ್ವಾಹಕ ಮಹೇಶ್ ಅವರಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೂರವಾಣಿಯಲ್ಲಿ ಸೂಚಿಸಿದರು.

ಜಿತೋ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಸ್ಟಾರ್ ಏರ್ ಲೈನ್ಸ್ ಮಾಲೀಕ ಶ್ರೀ ಸಂಜಯ್ ಗೋದಾವತ್ ಮೈಸೂರಿನಲ್ಲಿ ಅವರ ವಿಮಾನ ಸೇವೆಯನ್ನು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಪೂರ್ಣಗೊಂಡ ಬಳಿಕ ಒದಗಿಸಲಾಗುವುದು ಎಂದು ತಿಳಿಸಿದ ವಿಷಯವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಇತು.

ಇದಕ್ಕೆ ಪ್ರಕ್ರಿಯಿಸಿದ ಮುಖ್ಯ ಕಾರ್ಯದರ್ಶಿಗಳು ವಿಮಾನಗಳ ಸದ್ಭಳಕೆ ದಿಕ್ಕಿನಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಸೂಕ್ತ ಪ್ರಚಾರ ಮಾಡಬೇಕೆಂದರು.

Continue Reading

Trending

error: Content is protected !!