Connect with us

Mysore

ಅ.10ರಂದು ಭಾರತದಲ್ಲಿನ ಮಾನವತೆ ವಿಕಾಸಕ್ಕೆ ಇರುವ ಸವಾಲುಗಳು ಸಂವಾದ

Published

on

ಮೈಸೂರು: ಅಂಗಳ ಸಾಹಿತ್ಯ ಬಳಗ, ಈದಿನ, ಕಾಮ್ ಮತ್ತು ಮೈಸೂರು ವಿವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ಸಹಯೋಗದಲ್ಲಿ ಅ.10ರಂದು ಭಾರತದಲ್ಲಿನ ಮಾನವತೆ ವಿಕಾಸಕ್ಕೆ ಇರುವ ಸವಾಲುಗಳು ವಿಶೇಷ ಉಪನ್ಯಾಸ ಮತ್ತು ಮುಕ್ತ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಶೋದಕ ವರಹಳ್ಳಿ ಆನಂದ ಹೇಳಿದರು.

ಶನಿವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಮಾನಸಗಂಗೋತ್ರಿಯ ಇಎಂಎಂಆರ್ ಸಿ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಸನಾತನ ಧರ್ಮದ ಕುರಿತು ವಿಶೇಷ ಉಪನ್ಯಾಸ ನೀಡುವರು. ಮಹಿಳಾ ಹೋರಾಟಗಾರ್ತಿ ಈ.ರತಿರಾವ್ ಅಧ್ಯಕ್ಷತೆ ವಹಿಸುವರು. ಲೇಖಕ ನಾ.ದಿವಾಕರ್ ಭಾಗವಹಿಸುವರು ಎಂದರು.

ಸನಾತನ ಧರ್ಮದ ಕುರಿತು ಸಾರ್ವಜನಿಕವಾಗಿ ಪರ ವಿರೋಧ ಚರ್ಚೆಯಾಗುತ್ತಿದೆ. ಈ ಬಗ್ಗೆ ಸ್ಪಷ್ಟತೆ ನೀಡುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹೀಗಾಗಿ ಸಂಸ್ಕೃತಿ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಸನಾತನ ಧರ್ಮದ ಕುರಿತ ವಿಡಿಯೋ ಪ್ರದರ್ಶನದ ಮತ್ತು ಮುಕ್ತ ಸಂವಾದ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇದೆ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಸಂಶೋಧಕರ ಸಂಘದ ಕಾರ್ಯಾಧ್ಯಕ್ಷ ಕಲ್ಲಹಳ್ಳಿ ಕುಮಾರ್, ಅಂಗಳ ಸಾಹಿತ್ಯ ಬಳಗದ ಸಂಜಯ್ ಕುಮಾರ್, ಸಂಶೋಧಕರ ಸಂಘದ ಉಪಾಧ್ಯಕ್ಷ ಎಂ.ಲಿಂಗರಾಜು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ಜೂಜಾಡುತ್ತಿದ್ದ ನಾಲ್ವರ ಬಂಧನ

Published

on

ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.

ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

Continue Reading

Mysore

ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.

Published

on

ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.

ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Continue Reading

Mysore

ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ

Published

on

ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.

ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

Trending

error: Content is protected !!