Location
ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ*
*ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ*
*ರಾಜ್ಯ ಸರ್ಕಾರ ಪಾಕ್ ಪರ ಘೋಷಿಣೆ ಕೂಗಿದವರ ರಕ್ಷಣೆ ಮಾಡಿ, ನೈತಿಕವಾಗಿ ದಿವಾಳಿಯಾಗಿದೆ: ಬಸವರಾಜ ಬೊಮ್ಮಾಯಿ*
ಬೆಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿರುವುದರ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೋರವಾಗಿದೆ. ಈಗ ಪಾಕಿಸ್ತಾನ ಪರ ಘೋಷಣೆ ಕೂಗಿದವರ ರಕ್ಷಣೆ ಮಾತನಾಡುತ್ತ ನೈತಿಕವಾಗಿ ದಿವಾಳಿಯಾಗಿದ್ದಾರೆ. ಇವರು ಪ್ರಜಾಪ್ರಭುತ್ವ ಕ್ಕೆ ದಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ವಿಧಾನ ಸೌಧದಲ್ಲಿಯೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ದೇಶದ ರಕ್ಷಣೆಗೆ ಇದು ಆಪತ್ತು ಉಂಟು ಮಾಡಿದೆ. ಅಧಿವೇಶವನ ಮುಗಿದ ತಕ್ಷಣ ಇದೆಲ್ಲ ಮರೆತು ಹೋಗುತ್ತಾರೆ ಎಂದು ಕಾಂಗ್ರೆಸ್ ನವರು ಅಂದುಕೊಂಡಿದ್ದಾರೆ. ಆದರೆ, ಇದನ್ನು ರಾಜ್ಯದ ಜನರು ಮರೆಯುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.
ಪಾಕ್ ಪರವಾಗಿ ಸರ್ಕಾರ ನಿಲ್ಲುತ್ತದೆ ಅಂದರೆ, ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ಈ ಸರ್ಕಾರ ಎಷ್ಟು ಬೇಗ ತೊಲಗುತ್ತದೆ ರಾಜ್ಯಕ್ಕೆ ಅಷ್ಟು ಒಳ್ಳೆಯದಾಗುತ್ತದೆ.
ಪಾಕಿಸ್ತಾನದ ಪರ ಘೊಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ತೋರಿಸಲಾಗಿದೆ. ಇವರು ಎಫ್ ಎಸ್ ಎಲ್ ವರದಿ ಕತೆ ಏಕೆ ಹೇಳುತ್ತಿದ್ದಾರೆ. ಈ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಘಟನೆ ನಡೆದು 48 ಗಂಟೆ ಕಳೆದರೂ ಯಾರನ್ನೂ ಬಂಧಿಸಿಲ್ಲ. ಬೇರೆ ಘಟನೆ ನಡೆದಾಗ ಎಫ್ ಎಸ್ ಎಲ್ ವರದಿಗಾಗಿ ಕಾಯದೇ ಮೊದಲು ಬಂಧಿಸುತ್ತಿದ್ದರು. ಇದರಲ್ಲಿ ಏನೂ ಇಲ್ಲ ಅಂದರೆ ಪೊಲಿಸರು ಏಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ರಾಜ್ಯದ ಜನರು ಪಾಕಿಸ್ತಾನ ಪರವಾದವನ್ನು ಆಯ್ಕೆ ಮಾಡಿಲ್ಲ. ಇದು ಕನ್ನಡಿಗರ ಹಾಗೂ ಭಾರತೀಯರ ಹಾಗೂ ಸಂವಿಧಾನ ವಿರೋಧಿ ಸರ್ಕಾರ ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹರಿಪ್ರಸಾದ್ ಹೇಳಿಕೆ ಕಾಂಗ್ರೆಸ್ನವರ ಆಂತರಿಕ ಮನಸ್ಥಿತಿ ಏನಿದೆ ಎನ್ನುವುದನ್ನು ತೋರಿಸುತ್ತದೆ. ಪಾಕಿಸ್ತಾನದ ಭಯೋತ್ಪಾದಕರು ಪ್ರತಿದಿನ ನಮ್ಮ ಸೈನಿಕರನ್ನು ಕೊಲ್ಲುತ್ತಾರೆ. ಅವರನ್ನು ನಮ್ಮ ಸ್ನೇಹಿತರು ಎಂದು ಹೇಳಿಕೊಳ್ಳಲಾಗುತ್ತದೆಯೇ, ಇವರ ಹೇಳಿಕೆಯನ್ನು ನೋಡಿದರೆ, ದೇಶದ್ರೋಹಿಗಳು ಎಂದು ಕರೆಯಬೇಕಾಗುತ್ತದೆ ಎಂದರು.
Kodagu
ಕೊಡಗು ಜಿಲ್ಲೆಯಲ್ಲಿ ಶೇ. 74.65 ರಷ್ಟು ಮತದಾನ
ಮಡಿಕೇರಿ .ಏ .27 : ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೊಡಗು ಜಿಲ್ಲೆಯಲ್ಲಿ ಮತದಾನ ಶೇ. 74.65 ರಷ್ಟು ಮತದಾನವಾಗಿದೆ. ಜಿಲ್ಲೆಯ ಎರಡು ವಿಧಾನ ಸಭಾ ವ್ಯಾಪ್ತಿಯಲ್ಲಿರುವ ಒಟ್ಟು ಮತದಾರರ ಪೈಕಿ 172924 ಪುರುಷರು ಹಾಗೂ 178539 ಮಹಿಳೆಯರು ಸೇರಿ ಒಟ್ಟು 351463 ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.
ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾನ ದಾಖಲಾದ ವಿವರ ನೋಡುವುದಾದರೆ, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 88196 ಪುರುಷರು ಹಾಗೂ 91841 ಮಹಿಳೆಯರು ಸೇರಿದಂತೆ ಒಟ್ಟು 180037 ಮತದಾರರು ತಮ್ಮ ಮತದಾನ ಮಾಡಿದ್ದು, ಶೇ. 75.41 ರಷ್ಟು ಮತದಾನ ದಾಖಲಾಗಿದೆ.
ಅದೆ ರೀತಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 84728 ಪುರುಷರು ಹಾಗೂ 86698 ಮಹಿಳೆಯರು ಸೇರಿದಂತೆ ಒಟ್ಟು 171426 ಮತದಾರರು ತಮ್ಮ ಮತದಾನ ಮಾಡಿದ್ದು, ಶೇ. 73.88 ರಷ್ಟು ಮತದಾನ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
Mysore
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ
ಸಾಲಿಗ್ರಾಮ : ಮಾಜಿ ಸಚಿವ ಎಚ್ ಡಿ ರೇವಣ್ಣ ರವರ ಧರ್ಮ ಪತ್ನಿ ಶ್ರೀಮತಿ ಭವಾನಿ ರೇವಣ್ಣ ರವರ ಸಹೋದರ ಸಾಲಿಗ್ರಾಮ ನಿವಾಸಿ ಎಸ್ ಎಸ್ ಪ್ರಕಾಶ್ 55 ವರ್ಷ ಇವರು ಸಾವನಪ್ಪಿದ್ದು, ಅಂತ್ಯಕ್ರಿಯೆಯು ಇಂದು ನೆರವೇರಿಸಿದರು.
ಮೃತರಿಗೆ ಪತ್ನಿ ಹಾಗೂ ಇಬ್ಬರು ಅವಳಿ ಹೆಣ್ಣು ಮಕ್ಕಳು ಇದ್ದು, ಸಹೋದರಿ ಯರಾದ ರಾಜೇಶ್ವರಿ, ಶ್ರೀಮತಿ ಭವಾನಿ ರೇವಣ್ಣ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಇವರ ಅಂತ್ಯಕ್ರಿಯೆಯು ಸ್ವಗ್ರಾಮ ಸಾಲಿಗ್ರಾಮದ ದಡದಹಳ್ಳಿ ಗ್ರಾಮದಲ್ಲಿರುವ ತೋಟದಲ್ಲಿ ನೆರವೇರಿಸಿದರು.
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಸಚಿವ ಎಚ್. ಡಿ. ರೇವಣ್ಣ, ಶಾಸಕರಾದ ಜಿ ಟಿ ದೇವೇಗೌಡ, ಡಿ. ರವಿಶಂಕರ್, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಮಾಜಿ ಸಚಿವ ಸಾರಾಮಹೇಶ್, ನವನಗರ ಬ್ಯಾಂಕ್ ಅಧ್ಯಕ್ಷ ಬಸಂತ್, ದಿನೇಶ್ ನಂಜಪ್ಪ, ಕೆ ಪಿ ಸಿ ಸಿ ಕಾರ್ಯಕಾರಿ ಸಮಿತಿ ಸದಸ್ಯ ದೊಡ್ಡಸ್ವಾಮಿಗೌಡ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸಾರಾ ನಂದೀಶ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯಎಂ ಟಿ ಕುಮಾರ್, ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್ ಎಂ ಸೋಮಣ್ಣ, ಡಾಕ್ಟರ್ ಮಂಜುನಾಥ್, ಸೂರಜ್ ರೇವಣ್ಣ, ಹಾಸನ ಕೆ.ಎಂ. ಎಫ್.ಎಂ ಡಿ ಮಹೇಶ್,ಬೇಲೂರು ಮಾಜಿ ಶಾಸಕ ನಿಂಗೇಶ್, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ, ಅರಕಲಗೂಡು ಶಾಸಕ ಎ. ಮಂಜು,ಮಡಿಕೇರಿ ಜಿಲ್ಲಾ ವೈದ್ಯಾಧಿಕಾರಿ ಡಾ : ಸತೀಶ್,ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರು ಸೇರಿದಂತೆ ಹೊಳೆನರಸೀಪುರ, ಹಾಗೂ ಹಾಸನ ಜಿಲ್ಲೆಯ ಕಾರ್ಯಕರ್ತರುಗಳು, ಸಾಲಿಗ್ರಾಮ ಸುತ್ತ ಮುತ್ತಲಿನ ಕಾರ್ಯಕರ್ತರು, ಸಹಸ್ರಾರು ಸಂಖ್ಯೆ ಯಲ್ಲಿ ಸಾರ್ವಜನಿಕರು ಆಗಮಿಸಿ ಅಂತಿಮ ದರ್ಶನ ಪಡೆದರು. ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಸಿದರು.
Hassan
ಪೆನ್ ಡ್ರೈವ್ ಪ್ರಕರಣ ಕುರಿತು ಪೊಲೀಸ್ ಇಲಾಖೆಗೆ ದೂರು ಎಷ್ಟೆ ಪ್ರಬಾವಿ ಆಗಿದ್ರು ಬಂಧಿಸಲಿ: ಹೆಚ್.ಎಸ್. ಲಿಂಗೇಗೌಡ
ಹಾಸನ : ಈಗಾಗಲೇ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿ ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಅವರು ಎಷ್ಟೆ ಪ್ರಭಾವಿ ಆಗಿದ್ದರೂ ಕೂಡಲೇ ಬಂದಿಸಬೇಕು. ಪೆನ್ ಡ್ರೈವ್ ಪ್ರಕರಣದ ಬಗ್ಗೆ ತಮ್ಮ ಪಕ್ಷದ ವತಿಯಿಂದ ಪೊಲೀಸ್ ಇಲಾಖೆಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹೆಚ್.ಎಸ್. ಲಿಂಗೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪೆನ್ ಡ್ರೈವ್ ಪ್ರಕರಣದಿಂದ ಹಾಸನ ಜಿಲ್ಲೆಯ ಗೌರವ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹಾಳಾಗುತ್ತಿದೆ ಜೊತೆಗೆ ಒಂದಲ್ಲ ಎರಡಲ್ಲ ನೂರಾರು ಮಹಿಳೆಯರ ಮಾನ ಮರ್ಯಾದೆ ಕೂಡ ಬೀದಿಯಲ್ಲಿ ಹರಾಜ್ ಆಗುತ್ತದ್ದು, ಈ ಘಟನೆ ಬಗ್ಗೆ ಕೂಡಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪೊಲೀಸ್ ಇಲಾಖೆ ಕೂಡಲೇ ವಿಡಿಯೋದ ಮೂಲ ಹಾಗೂ ವಿಡಿಯೋದಲ್ಲಿರುವ ಮಹಿಳೆಯರ ಬಗ್ಗೆ ತನಿಖೆ ನಡೆಸಿ ವೀಡಿಯೋ ಯಾರು ಮಾಡಿದ್ದು, ಎಂಬುದನ್ನು ಪತ್ತೆ ಹಚ್ಚಿ ಅವರು ಎಂಥಾ ಪ್ರಭಾವಿಗಳಾಗಿದ್ದರು ಅವರ ವಿರುದ್ಧ ಕೂಡ ಕೇಸು ದಾಖಲಿಸಿ ಜೈಲಿಗಟ್ಟುವ ಕೆಲಸ ಮಾಡಬೇಕು ಇಲ್ಲವಾದರೆ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷಿತ ಇಲ್ಲ ಎಂಬುದು ಸಾಬೀತಾಗುತ್ತದೆ ಎಂದರು.
ತಮ್ಮ ಕಾಮದಾಟಕ್ಕೆ ತಮ್ಮ ಕಷ್ಟ ಹೇಳಿಕೊಳ್ಳಲು ಬಂದ ಮಹಿಳೆಯರನ್ನು ಎಲ್ಲ ಸಲದ ಆಮಿಷಗಳನ್ನು ಒಡ್ಡಿ ಬಳಸಿಕೊಂಡಿರುವ ಅನೇಕ ಉದಾಹರಣೆಗಳಿವೆ. ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದಿದೆ ವಿಡಿಯೋ ಒರಿಜಿನಲ್ ಅಥವಾ ಎಡಿಟಿಂಗ್ ವಿಡಿಯೋ ಇದೆಯಾ ಎಂಬುದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಪ್ರಜ್ವಲ್ ರೇವಣ್ಣ ನವರ ಕಾರು ಚಾಲಕ ಕಾರ್ತಿಕ್ ರವರು ಡಿ ನಮ್ಮ ೧೩ ಎಕರೆ ಜಮೀನನ್ನ ಅಕ್ರಮವಾಗಿ ಬರೆಸಿಕೊಂಡಿದಾರೆ ಎಂದು ಮಾಧ್ಯಮಗಳ ಮುಂದೆ ಹೇಳುವಾಗ ಅನೇಕ ಕರ್ಮಕಾಂಡಗಳನ್ನು ಮಾಡಿದ್ದಾರೆ ಎಂದು ಹೇಳಿರುತ್ತಾರೆ. ಆದರಿಂದ ಅವರ ಕಾರಿನ ಚಾಲಕ ಕಾರ್ತಿಕ್ ನವರನ್ನು ವಿಚಾರಣೆಗೊಳಪಡಿಸಿ ಸಂತ್ರಸ್ತ ಮಹಿಳೆಯರ ವಸ್ತು ಸ್ಥಿತಿ ಬಗ್ಗೆ ತಿಳಿದುಕೊಳ್ಳಬೇಕು ಎಂದು ಆಗ್ರಹಿಸಿದರು.
-
State3 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State3 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Hassan1 day ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Health3 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Uncategorized5 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State3 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.
-
Education3 months ago
ಎಸ್ಎಸ್ಎಲ್ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ
-
State3 months ago
KPSC: ಗೆಜೆಟೆಡ್ ಪ್ರೊಬೆಷನರಿ ಹುದ್ದೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ!!!