Connect with us

State

ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್‌!!!

Published

on

School Holidays: ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಶಾಲಾ ಕಾಲೇಜುಗಳಿಗೆ ಕೆಲವು ಸಾರ್ವಜನಿಕ ರಜೆಗಳಿವೆ. ಅವುಗಳು ಎಷ್ಟಿವೆ ಎಂದು ನೋಡೋಣ.

ಬಿಡುವಿಲ್ಲದ ಕೆಲಸದ ನಡುವೆ ರಜೆ ದಿನಗಳಲ್ಲಿ ವಿಶ್ರಾಂತಿ ಪಡೆಯುವುದು ಸಾಮಾನ್ಯವಾಗಿದ್ದು. ಈ ಕಾರಣಕ್ಕಾಗಿಯೇ ಶಾಲೆ ಕಾಲೇಜುಗಳಿಗೆ ಹೋಗುವವರು ಹಾಗೂ ಕಂಪನಿಗಳಿಗೆ ಹೋಗುವವರು ರಜೆ ದಿನಗಳಿಗಾಗಿ ಕಾಯುತ್ತ ಕೂರುವುದುಂಟು. ಜನವರಿ ತಿಂಗಳ ಅಂತ್ಯದೊಂದಿಗೆ ರಜೆಗಳ ಸೀಸನ್ ಕೂಡ ಮುಗಿದು ಹೋಗುತ್ತದೆ. ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿ ಸಂಕ್ರಾತಿ, ರಿಪಬ್ಲಿಕ್ ಡೇ ಇತರೆ ಹಬ್ಬಗಳಿಗೆ ರಜೆಯು ಸಿಕ್ಕಿತ್ತು. ಜನವರಿಯಂತೆ ಫೆಬ್ರವರಿ ತಿಂಗಳಲ್ಲಿಯೂ ರಜೆ ದಿನಗಳಿವೆ. ಒಟ್ಟು ಎಷ್ಟು ರಜೆ ದಿನಗಳಿವೆ ಎಂದು ನೋಡೋಣ.

ಫೆಬ್ರವರಿ ತಿಂಗಳಲ್ಲಿ ಭಾನುವಾರಗಳ ಜೊತೆಗೆ ಇನ್ನು ಹಲವು ರಜೆ ದಿನಗಳಿವೆ. ಫೆ.14 ರಂದು ಸರಸ್ಪತಿ ಪೂಜೆ, ವಸಂತ ಪಂಚಮಿ, ನಂತರ ಫೆ.19 ರಂದು ಶಿವಾಜಿ ಜಯಂತಿ ಇದೆ. ಗುರು ರವಿದಾಸ್ ನಿಮಿತ್ತ ಫೆ.24 ರಂದು ಶಾಲಾ ಕಾಲೇಜುಗಳಿಗೆ ರಜೆ ಇರುತ್ತದೆ. ಗಮನಿಸಬೇಕಾದ ಅಂಶವೆಂದರೆ ಈ ರಜೆ ದಿನಗಳು ದೇಶಾದ್ಯಂತ ಎಲ್ಲ ಶಾಲಾ ಕಾಲೇಜುಗಳಿಗೂ ಅನ್ವಯವಾಗುವುದಿಲ್ಲ. ಈ ಹಬ್ಬಗಳ ಆಚರಣೆಯನ್ನು ಮಾಡುವ ಪ್ರದೇಶಗಳಲ್ಲಿ ಮಾತ್ರ ಅನ್ವಯವಾಗುತ್ತವೆ.

ವಸಂತ ಪಂಚಮಿ: ಈ ಹಬ್ಬವು ಸಾಮಾನ್ಯವಾಗಿ ಫೆಬ್ರವರಿಯಲ್ಲಿ ಬರುವ ಹಬ್ಬವಾಗಿದೆ. ಈ ಹಬ್ಬವನ್ನು ಸರಸ್ಪತಿ ಹಬ್ಬ ಎಂತಲೂ ಕರೆಯುತ್ತಾರೆ. ಹಿಂದೂಗಳ ಮಹೋನ್ನತ ಹಬ್ಬಗಳಲ್ಲಿ ಇದು ಒಂದಾಗಿದೆ. ಶಿಕ್ಷಣ, ಜ್ಞಾನ, ಸಂಗೀತದ ಪ್ರತಿ ರುಪವಾಗಿರುವ ಶಾರದೆಯ ಆಶೀರ್ವಾದವನ್ನು ಪಡೆಯಲು ಈ ಹಬ್ಬವನ್ನು ಆಚರಿಸುತ್ತೇವೆ .

ಶಿವಾಜಿ ಜಯಂತಿ:
ಮರಾಠರು ಎಂದಾಗ ತಕ್ಷಣ ನೆನಪಾಗುವುದು ಶಿವಾಜಿ. ಮರಾಠರಿಗೆ ಶಿವಾಜಿಯ ದೈವ. ಶಿವಾಜಿಯು 17 ವರ್ಷದವನಾಗಿದ್ದಾಗಲೆ ಕತ್ತಿ ಹಿಡಿದು ಹೊರಡಿದವನು ಶಿವಾಜಿ. ಬಿಜಾಪುರ ಸಾಮ್ರಾಜ್ಯದ ಟೋರ್ನಾ ಕೋಟೆಯನ್ನು ವಶಪಡಿಸಿಕೊಂಡಿದ್ದರು. ಬಳಿಕ ಕೊಂಡಾಣ ಮತ್ತು ರಾಯಘಡ ಕೋಟೆಗಳನ್ನು ಸ್ವಾಧೀನಪಡಿಸಿಕೊಂಡರು. ನಂತರ ಪುಣೆಯ ಸಂಪೂರ್ಣ ಪ್ರದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ತಮ್ಮದೇ ವಿಶೇಷವಾದ ಯುದ್ಧ ತಂತ್ರಗಳನ್ನು ಅಳವಡಿಸಿಕೊಂಡು ಶತ್ರುಗಳಿಗೆ ಸಿಂಹ ಸ್ವಪ್ನವಾಗಿತ್ತಿದ್ದರು. ಗೆರಿಲ್ಲಾ ಯುದ್ಧವನ್ನು ಜಗತ್ತಿಗೆ ಮೊದಲು ಪರಿಚಯಿಸಿದ್ದು ಶಿವಾಜಿ. ಈ ಕಾರಣಕ್ಕೆ ಫೆಬ್ರವರಿ 19 ರಂದು ಮಹಾರಾಷ್ಟ್ರ ಮತ್ತು ಇತರ ಹಲವು ಸ್ಥಳಗಳಲ್ಲಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಗಳು ನಡೆಯುತ್ತವೆ. ಈ ಕಾರಣಕ್ಕಾಗಿ ರಜೆಯನ್ನು ಘೋಷಿಸಲಾಗುತ್ತದೆ.

ಗುರು ಗೋವಿಂದ ಜಯಂತಿ;:
ಫೆ.24 ರ ಮಾಘ ಪೂರ್ಣಿಮ ದಂದು ಗುರು ಗೋವಿಂದ ಜಯಂತಿಯನ್ನು ಆಚರಿಸಲಾಗುತ್ತದೆ. ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ, ಉತ್ತರ ಪ್ರದೇಶ ಗಳಲ್ಲಿ ಬಹು ಅದ್ಧೂರಿಯಿಂದ ಆಚರಿಸಲಾಗುತ್ತದೆ. ಗುರು ಗೋವಿಂದರು ಜಾತಿ ವ್ಯವಸ್ಥೆಯ ವಿರುದ್ದ ಹೋರಾಡಿದವರು. ಇವರು ಮಾನವ ಕುಲಕ್ಕೆ ನೀಡಿದ ಬೋಧನೆ ಹಾಗೂ ತತ್ವಗಳನ್ನು ಜನ್ಮದಿದಂದು ನೆನಪಿಸಿ ಕೊಳ್ಳಲಾಗುತ್ತದೆ .

ಇವುಗಳು ಪ್ರಮುಖವಾದ ರಜೆ ದಿನಗಳು ಇವುಗಳನ್ನು ಬಿಟ್ಟು ಫೆಬ್ರವರಿಯಲ್ಲಿ ಸಿಬಿಎಸ್ಸಿಯ 10 ಮತ್ತು 12 ನೇ ತರಗತಿಗಳಿಗೆ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಉತ್ತಮ ಪಡಿಸಿಕೊಳ್ಳಬೇಕು. ಈ ರಜೆ ದಿನಗಳು ರೆಸ್ಟ್ ಮಾಡಲು ಅನುಕೂಲವಾಗುತ್ತವೆ. ಇವುಗಳನ್ನು ಬಿಟ್ಟು ಎರಡನೇ ಮತ್ತು ನಾಲ್ಕನೇ ಶನಿವಾರದ ಜೊತೆಗೆ ಭಾನುವಾರ ರಜೆಗಳಿವೆ.

Continue Reading
Click to comment

Leave a Reply

Your email address will not be published. Required fields are marked *

State

ನಾಳೆ KSCA ಚುನಾವಣಾ ಮತದಾನ: ವೆಂಕಟೇಶ್‌ ಪ್ರಸಾದ್ v/s ಬ್ರಿಜೇಶ್ ಪಟೇಲ್ ಬಣಗಳ ಮಧ್ಯೆ ಜಿದ್ದಾಜಿದ್ದಿ

Published

on

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್  ಚುನಾವಣಾ ಮತದಾನ ನಾಳೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಬಣ ಮ ಬ್ರಿಜೇಶ್ ಪಟೇಲ್  ಬಣಗಳ ಮಧ್ಯೆ  ಭಾರೀ ಹಣಾಹಣಿ ನಡೆದಿದೆ.
ಚುನಾವಣೆಯನ್ನು ಸುತ್ತುವರಿದ ವಿವಾದಗಳ ನಡುವೆ ಇಂದು ಪ್ರಸಾದ್ ಬಣವೂ ಕೆಎಸ್‌ಸಿಎ ಸದಸ್ಯರೊಂದಿಗೆ ಸಂವಾದ ನಡೆಸಿತು.

ಪ್ಯಾಲೇಸ್ ಮೈದಾನದಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಕೆಎಸ್‌ಸಿಎ ಸದಸ್ಯರು ಪಾಲ್ಗೊಂಡಿದ್ದರು. ಟೀಂ ಗೇಮ್ ಚೇಂಜರ್ಸ್ ಪರವಾಗಿ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬ್ರಿಜೇಶ್ ಬಣದ ಆಡಳಿತದ ವೈಫಲ್ಯಗಳನ್ನು ಪ್ರಸಾದ್ ಬಣವು ಪಿಪಿಟಿ ಮೂಲಕ ಸದಸ್ಯರಿಗೆ ವಿವರಣೆ ನೀಡಿತ್ತು.

ಸಂವಾದದ ನಂತರ ಮಾತನಾಡಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರಸ್ತುತ ಆಡಳಿತದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೆಂಕಟೇಶ್ ಪ್ರಸಾದ್ ತಂಡ ಗೆಲ್ಲಲೇಬೇಕು. ರಾಜ್ಯದಲ್ಲಿ ಕ್ರಿಕೆಟ್ ಉದ್ಧಾರ ಆಗಬೇಕಾದರೆ ಬದಲಾವಣೆ ಅನಿವಾರ್ಯ. ನಾವು ಅಧಿಕಾರದಲ್ಲಿದ್ದಾಗ ಎರಡು ಹೆಜ್ಜೆ ಮುಂದೆ ಇಟ್ಟಿದ್ದೇವೆ. ಈಗ 10 ಹೆಜ್ಜೆ ಹಿಂದೆ ಹೋಗಿದ್ದೇವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ಫ್ರಾಸ್ಟ್ರಕ್ಚರ್ ಬದಲಾಗಬೇಕು. ಪ್ರಸಾದ್ ತಂಡ ಇದನ್ನು ಸಾಧಿಸುವ ಸಾಮರ್ಥ್ಯ ಹೊಂದಿದೆ. ಕೆಎಸ್‌ಸಿಎನಲ್ಲಿ ದುಡ್ಡಿಗೆ ಕೊರತೆಯಿಲ್ಲ. ಆದರೆ ಕ್ರಿಕೆಟ್ ಬೆಳವಣಿಗೆ ಆಗಬೇಕು. ಮತ ಕೇವಲ ಕ್ಲಬ್‌ಗೆ ಅಲ್ಲ. ಕ್ರಿಕೆಟ್ ಕನಸು ಕಟ್ಟಿಕೊಂಡಿರುವ ಮಕ್ಕಳಿಗಾಗಿ ಎಂದು ಹೇಳಿದರು.

ಇನ್ನೂ ನಾಳೆ ನಿರ್ಣಾಯಕ ದಿನವಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ಆರಂಭವಾಗಲಿದೆ. ಅಲ್ಲದೇ ನಾಳೆಯೇ ಕೆಎಸ್‌ಸಿಎ ಹೊಸ ಆಡಳಿತ ನಿರ್ಧಾರವಾಗಲಿದ್ದು, ಪ್ರಸಾದ್-ಬ್ರಿಜೇಶ್ ಬಣಗಳ ನಡುವೆ ಕಠಿಣ ಪೈಪೋಟಿ ಎದುರಾಗಲಿದೆ.

Continue Reading

State

ಡಿವೈಡರ್‌ಗೆ ಕಾರ್‌ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Published

on

ಧಾರವಾಡ: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಹೊತ್ತಿ ಉರಿದ ಕಾರಿನಿಂದ ಹೊರಬರಲು ಸಾಧ್ಯವಾಗದೇ ಇನ್ಸ್‌ಪೆಕ್ಟರ್ ಕೂಡ ಅದರ ಒಳಗೆ ಸಜೀವವಾಗಿ ದಹನವಾಗಿದ್ದಾರೆ.

ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ.

ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು.

ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

State

SSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…

Published

on

ಕರ್ನಾಟಕದಲ್ಲಿ SSLC ಪಾಸ್ ಮಾಡಿದವರಿಗೆ ಇದೀಗ ಸರ್ಕಾರದ ವಿವಿಧ ಇಲಾಖೆಗಳಡಿ ಕೆಲಸ ಪಡೆಯುವ ದೊಡ್ಡ ಅವಕಾಶ ದೊರಕಿದೆ. ಕಡಿಮೆ ವಿದ್ಯಾರ್ಹತೆಯಲ್ಲೇ ಸ್ಥಿರ ಸರ್ಕಾರಿ ಉದ್ಯೋಗ ಪಡೆಯಲು ಹಲವು ಹುದ್ದೆಗಳು ಲಭ್ಯವಾಗಿದ್ದು, ಯುವಕರಿಗೆ ಭದ್ರ ಭವಿಷ್ಯ ನಿರ್ಮಿಸಿಕೊಳ್ಳಲು ಇದು ಮಹತ್ವದ ಅವಕಾಶವಾಗಿದೆ.

ಹುದ್ದೆಗಳ ವಿವರ:
•ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಜೈಲು ವಾರ್ಡರ್ ಹುದ್ದೆಗಳು
•ಅಂಚೆ ಇಲಾಖೆಯ GDS, ಪೋಸ್ಟ್‌ಮನ್ ಮತ್ತು MTS ಹುದ್ದೆಗಳು
•KSRTC, BMTC ಮೊದಲಾದ ಸಾರಿಗೆ ಸಂಸ್ಥೆಗಳಲ್ಲಿ ಕಂಡಕ್ಟರ್/ಡ್ರೈವರ್ ಹುದ್ದೆಗಳು
•ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು
•ವಿವಿಧ ಇಲಾಖೆಗಳ ಪಿಯೋನ್, ಅಟೆಂಡರ್, ಕ್ಲರ್ಕ್ ಮತ್ತು ಗ್ರೂಪ್–D ಹುದ್ದೆಗಳು

ವೇತನ: ₹18,000 ರಿಂದ ₹32,000ರವರೆಗೆ

ಅರ್ಹತೆ:
•ಕನಿಷ್ಠ SSLC ಪಾಸ್ ಆಗಿರಬೇಕು
•ವಯೋಮಿತಿ;18ರಿಂದ 35ವರ್ಷ
•ಕೆಲವು ಹುದ್ದೆಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯ
•ಡ್ರೈವರ್ ಹುದ್ದೆಗೆ ಮಾನ್ಯ ಡ್ರೈವಿಂಗ್ ಲೈಸೆನ್ಸ್

ಅರ್ಜಿ ಹೇಗೆ ಸಲ್ಲಿಸಬೇಕು?
•ಅಧಿಕೃತ ಪ್ರಕಟಣೆ ಹೊರಬಂದ ನಂತರ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಹಾಕಬಹುದು
•ಆಧಾರ್, SSLC ಮಾರ್ಕ್ಸ್ ಕಾರ್ಡ್, ಜಾತಿ ಪ್ರಮಾಣಪತ್ರ, ವಿಳಾಸ ದೃಢೀಕರಣ ಮುಂತಾದ ದಾಖಲಾತಿಗಳು ಅಗತ್ಯ
•ಶುಲ್ಕವನ್ನು ಆನ್‌ಲೈನ್ ಪಾವತಿಸಿ ಅರ್ಜಿ ಪೂರ್ಣಗೊಳಿಸಬಹುದು
•ಆಯ್ಕೆ ಪ್ರಕ್ರಿಯೆಯಲ್ಲಿ ಪರೀಕ್ಷೆ/ದೈಹಿಕ ಪರೀಕ್ಷೆ ಇರಬಹುದು

ಸರ್ಕಾರಿ ಉದ್ಯೋಗ ಎಂದರೆ ಸ್ಥಿರತೆ, ಭದ್ರತೆ ಮತ್ತು ಉತ್ತಮ ಭವಿಷ್ಯ. ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ಅಗತ್ಯವಿರುವರಿಗೆ ಕಳುಹಿಸಿ.

Continue Reading

Trending

error: Content is protected !!