Connect with us

Education

ಹಾಸನದ 6 ತಾಲ್ಲೂಕುಗಳ ಪ್ರೌಢಶಾಲೆವರೆಗೆ ರಜೆ

Published

on

ಹಾಸನ: ಕರ್ನಾಟಕ ಬಂದ್ ಹಿನ್ನೆಲೆ ಶುಕ್ರವಾರ ಜಿಲ್ಲೆಯ ಆರು ತಾಲೂಕುಗಳಲ್ಲಿ ೧ ರಿಂದ ೧೦ನೇ ತರಗತಿವರೆಗೆ ಖಾಸಗಿ,ಅನುದಾನ
ರಹಿತ ಸೇರಿದಂತೆ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


ಹಾಸನ, ಅರಕಲಗೂಡು, ಚನ್ನರಾಯಪಟ್ಟಣ, ಬೇಲೂರು, ಸಕಲೇಶಪುರ, ಆಲೂರು ಬಿಇಒಗಳು ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ಆದರೆ ಅರಸೀಕೆರೆ ಮತ್ತು ಹೊಳೆನರಸೀಪುರ ತಾಲೂಕಿನಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ.


ಬಂದ್‌ಗೆ ಕರೆ ನೀಡಿರುವವರಿಂದ ಶಾಲೆಗಳಿಗೆ ರಜೆ ನೀಡುವಂತೆ ಒತ್ತಾಯ ಬಂದರೆ ಆಯಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ತಮ್ಮ ಹಂತದಲ್ಲೇ ರಜೆ ಘೋಷಿಸಿ ಸದರಿ ದಿನದ ಶಾಲೆಯನ್ನು ಬೇರೆ ದಿನದಂದು ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ(ಆಡಳಿತ) ಬಸವೇಗೌಡ ತಿಳಿಸಿದ್ದಾರೆ.
ಪ್ರಾಂಶುಪಾಲರಿಗೆ ಅಧಿಕಾರ: ಹಾಗೆಯೇ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳನ್ನು ಶುಕ್ರವಾರ ಬಂದ್ ಮಾಡುವಂತೆ ಒತ್ತಾಯ ಬಂದಲ್ಲಿ ತಮ್ಮ ಹಂತದಲ್ಲಿಯೇ ಕಾಲೇಜುಗಳಿಗೆ ರಜೆ ನೀಡಿ ಆ ದಿನದ ಕಾರ್ಯಭಾರವನ್ನು ಮುಂಬರುವ ಯಾವುದಾದರೂ ರಜೆ ದಿನದಂದು ಸರಿದೂಗಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಸಿ.ಎಂ. ಮಹಾಲಿಂಗಯ್ಯ ಅವರು ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Education

ಪದವೀಧರರಿಗೆ ಗುಡ್ ನ್ಯೂಸ್ : 8283 ಹುದ್ದೆಗಳ ನೇಮಕಾತಿಗೆ SBI ಅರ್ಜಿ ಆಹ್ವಾನ.

Published

on

ನವಂಬರ್ 17 2023 ರಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ನೇಮಕಾತಿ 2023 ಗಾಗಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ.

ಕ್ಲರಿಕಲ್ ಕೆಡರ್ ನಲ್ಲಿ ಜೂನಿಯರ್ ಅಸೋಸಿಯೇಟ್ (ಗ್ರಾಹಕರ ಬೆಂಬಲ ಮತ್ತು ಮಾರಾಟ) ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಬಿ ಐ ನ ಅಧಿಕೃತ ವೆಬ್ಸೈಟ್ sbi.co ಗಮನಿಸಬಹುದು.

ಈ ನೇಮಕಾತಿ ಡ್ರೈವ್ ಕ್ಲೆರಿಕಲ್ ಕೇಡರ್ ನಲ್ಲಿ ಜೂನಿಯರ್ ಅಸೋಸಿಯೇಟ್ 8283 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ನೋಂದಣಿ ಪ್ರಕ್ರಿಯೆ ನವೆಂಬರ್ 17ರಂದು ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 7.2023 ರಂದು ಕೊನೆಗೊಳ್ಳುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿಯ ಆರಂಭಿಕ ದಿನಾಂಕ ನವೆಂಬರ್ 17-2023
ಅಪ್ಲಿಕೇಶನ್ ಕೊನೆಯ ದಿನಾಂಕ ಡಿಸೆಂಬರ್ 07-2023
ಪೂರ್ವಭಾವಿ ಪರೀಕ್ಷೆ ಜನವರಿ 23
ಮುಖ್ಯ ಪರೀಕ್ಷೆ ಫೆಬ್ರವರಿ 2024

ಅರ್ಹತೆಯ ಮಾನದಂಡ
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ ಇಂಟಿಗ್ರೇಟೆಡ್ ಡಿಗ್ರಿ (IDD) ಪ್ರಮಾಣ ಪತ್ರವನ್ನು ಹೊಂದಿರುವ ಅಭ್ಯರ್ಥಿಗಳು ಐಡಿಡಿ ಪಾಸ್ ಮಾಡುವ ದಿನಾಂಕ ಡಿಸೆಂಬರ್ 31-2023 ರಂದು ಅಥವಾ ಅದಕ್ಕಿಂತ ಮೊದಲು ಎಂದು ಖಚಿತ ಪಡಿಸಿಕೊಳ್ಳಬೇಕು ವಯಸ್ಸಿನ ಮಿತಿ 20 ವರ್ಷದಿಂದ 28 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ
ಆಯ್ಕೆ ಪ್ರಕ್ರಿಯೆ ಆನ್ಲೈನ್ ಪರೀಕ್ಷೆ (ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ) ಮತ್ತು ನಿರ್ದಿಷ್ಟ ಪಡಿಸಿದ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ನೂರು ಅಂಕಗಳಿಗೆ ಆಬ್ಜೆಕ್ಟಿವ್ ಪರೀಕ್ಷೆಗಳನ್ನು ಒಳಗೊಂಡಿರುವ ಆನ್ಲೈನ್ ಪೂರ್ವಭಾವಿ ಪರೀಕ್ಷೆಯನ್ನು ಆನ್ಲೈನ್ ನಲ್ಲಿ ನಡೆಸಲಾಗುತ್ತದೆ. ಈ ಪರೀಕ್ಷೆಯು ಒಂದು ಗಂಟೆ ಅವಧಿಯ ಮೂರು ವಿಭಾಗಗಳನ್ನು ಒಳಗೊಂಡಿರುತ್ತದೆ, ಇಂಗ್ಲಿಷ್ ಭಾಷೆ ಸಂಖ್ಯಾತ್ಮಕ ಸಾಮರ್ಥ್ಯ ಮತ್ತು ತಾರ್ಕಿಕ ಸಾಮರ್ಥ್ಯ.

ಅರ್ಜಿ ಶುಲ್ಕ
ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ 750ರೂ. OBC/EWS ವರ್ಗಕ್ಕೆ, SC/ ST / PwBD / ESM / DESM ಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ

Continue Reading

Education

ಬೆಂಗಳೂರು BEML ನಲ್ಲಿ ಗ್ರೂಪ್ ಸಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 23,910 ರಿಂದ 85ಸಾವಿರವರೆಗೆ ವೇತನ. ಸಂಪೂರ್ಣ ವಿವರ ಇಲ್ಲಿದೆ.

Published

on

BEML Jobs : ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ರಕ್ಷಣಾ ಸಚಿವಾಲಯದ ಅಡಿಯಲ್ಲಿ ‘ಶೆಡ್ಯೂಲ್ ‘ಎ’ ಕಂಪನಿ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್, ರಕ್ಷಣೆ, ರೈಲು, ವಿದ್ಯುತ್, ಗಣಿಗಾರಿಕೆ ಮತ್ತು ಬ್ಯಾಂಕ್ ಆಫ್ ಬರೋಡ ಮೂಲಸೌಕರ್ಯಗಳಂತಹ ಭಾರತದ ಪ್ರಮುಖ ಕ್ಷೇತ್ರಗಳಿಗೆ ಸೇವೆ ಸಲ್ಲಿಸುತ್ತದೆ. ತನ್ನ ಉತ್ಪಾದನಾ ಸಂಪನ್ನೇನರ್ ಹುದ್ದೆಗಳಿಗೆ ಘಟಕಗಳು, ಮಾರ್ಕೆಟಿಂಗ್ ವಿಭಾಗಗಳಿಗೆ ಅಗತ್ಯ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಹೊರಡಿಸಿದೆ ಒಟ್ಟು 119 ಟೆಕ್ನಿಕಲ್, ನಾನ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಹತೆ, ಇತರೆ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ ಈ ರೀತಿ ಇದೆ :-
1) ಡಿಪ್ಲೊಮ ಟ್ರೈನಿ ( ಮೆಕ್ಯಾನಿಕಲ್, ಇಲೆಕ್ನಿಕಲ್, ಸಿವಿಲ್)
2) ಐಟಿಐ ಟ್ರೈನಿ (ಟರ್ನರ್, ಮಷಿನಿಸ್ಟ್)
3) ಸ್ಟಾಫ್ ನರ್ಸ್

ವಯೋಮಿತಿ ವಿವರ ಈ ರೀತಿ ಇದೆ:-

ಡಿಪ್ಲೊಮ ಟ್ರೈನಿ ಮತ್ತು ಐಟಿಐ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 29 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
ಸ್ಟಾಫ್ ನರ್ಸ್ ಹುದ್ದೆಗೆ 30 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು, ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ:- ಸ್ಪರ್ಧಾತ್ಮಕ ಆನ್‌ಲೈನ್ ಲಿಖಿತ ಪರೀಕ್ಷೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18.10.2023 (ಸಂಜೆ 06 ಗಂಟೆವರೆಗೆ)

ಅರ್ಜಿ ಶುಲ್ಕ ವಿವರ:-

ಅರ್ಜಿ ಶುಲ್ಕ ರೂ.200. ಅನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.

Advt_KP_S_06_2023.pdf

https://www.bemlindia.in/

https://exmegov.com/

ಆನ್‌ಲೈನ್/ಆಫ್‌ಲೈನ್ ಮೂಲಕ ಯಾವುದೇ ಕೆಲಸಕ್ಕೆ ಅರ್ಜಿ ಸಲ್ಲಿಸುವ ಮೊದಲು, ದಯವಿಟ್ಟು ಅವರ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದಿ ಮತ್ತು ಇಲ್ಲಿ ಪ್ರಕಟಿಸಲಾಗಿದೆ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ಮತ್ತು ಅರ್ಜಿಯನ್ನು ಸಲ್ಲಿಸಿ, ನೀವು ತಪ್ಪಾಗಿ ಓದುವ ಮೂಲಕ ಅಥವಾ ಮಾಹಿತಿಯನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗಿರುವುದಿಲ್ಲ.

 

Continue Reading

Education

ವಿಶ್ವವಿದ್ಯಾಲಯ ಸದ್ಯದರಲ್ಲೇ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಿದೆ.

Published

on

ಮೈಸೂರು: ಪ್ರಶ್ನೆ ಪತ್ರಿಕೆ ಮಾರಾಟವಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಿಕಾಂ ಕಂಪ್ಯೂಟರ್ ಇನ್ ಬ್ಯುಸಿನೆಸ್ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲು ನಿರ್ಧರಿಸಿದೆ. ವಿಶ್ವವಿದ್ಯಾಲಯ ಸದ್ಯದರಲ್ಲೇ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಿದೆ.

ಪ್ರಶ್ನೆ ಪತ್ರಿಕೆ ಮಾರಾಟ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನವೀನ್, ಮುರುಳೀಧರ್ ಬಂಧಿತ ಆರೋಪಿಗಳು.

ಪ್ರಶ್ನೆ ಪತ್ರಿಕೆ ಮಾರಾಟ

ಪರೀಕ್ಷೆಗೆ ಒಂದು ದಿನ ಮೊದಲೇ ವಿಶ್ವವಿದ್ಯಾಲಯದ ಬಿಕಾಂನ ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆ ಮಾರಾಟವಾಗಿತ್ತು. ಕೆಎಸ್‌ ಓಯು ಮಂಗಳೂರು ಕೇಂದ್ರದ ಸಿಬ್ಬಂದಿ 2000 ರೂ.ಗೆ ಮಾರಾಟ ಮಾಡಿದ್ದಾರೆ.

ಆರೋಪಿಗಳನ್ನು ಪರಿಶೀಲನೆ ಮಾಡಲು ಹಣ ನೀಡಿ ಪ್ರಶ್ನೆ ಪತ್ರಿಕೆ ಖರೀದಿಸಿದ್ದು, ಪರೀಕ್ಷೆ ದಿನ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ಮಾರಾಟವಾದ ಪ್ರಶ್ನೆ ಪತ್ರಿಕೆ ಎರಡು ಒಂದೇ ಆಗಿದ್ದವು. ಈ ಬಗ್ಗೆ ವಿದ್ಯಾರ್ಥಿ ಚಂದು.ಹೆಚ್.ಎಸ್. ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Continue Reading

Trending

error: Content is protected !!