Connect with us

Location

ಸೆ.29 ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆಸೆ.29 ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

Published

on

ಬೆಂಗಳೂರು: ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ (Karnataka Bandh) ಇರಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಘೋಷಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕನ್ನಡ ಒಕ್ಕೂಟ ಮಾಡುತ್ತಿರುವ ಬಂದ್. ಹೀಗಾಗಿ ಅಖಂಡ ಕರ್ನಾಟ ಬಂದ್ ಇರಲಿದೆ. ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ನ ಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು.
ಸೋಮವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಸಂಪೂರ್ಣ ತೀರ್ಮಾನಕ್ಕೆ ಬರುತ್ತೇವೆ. ಸೆಪ್ಟೆಂಬರ್ 29ರಂದು ಕನ್ನಡ ಒಕ್ಕೂಟದ ಆಶ್ರಯದಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾಹಿತಿಗಳು, ವ್ಯಾಪಾರಿಗಳು ಎಲ್ಲರೂ ಇದಕ್ಕೆ ಬೆಂಬಲ ಕೊಡಬೇಕು ಎಂದು ಹೇಳಿದರು.
Continue Reading
Click to comment

Leave a Reply

Your email address will not be published. Required fields are marked *

Mysore

ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ ಅರ್ಪಣ ಕಾರ್ಯಕ್ರಮ

Published

on

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಪ್ ಮೈಸೂರು ದಿನ ಪತ್ರಿಕೆ ಸಂಸ್ಥಾಪಕ ಸಂಪಾದಕರು ಡಾ.ಕೆ.ಬಿ.ಗಣಪತಿ ಜು.13 ದೈವದಿನರಾದರೂ
ಲೇಖಕರು ಬರಹಗಾರಾದ ಇವರಿಗೆ ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳನ್ನು ಸರ್ಕಾರಗಳು ನೀಡಿದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಅತಿ ಹೆಚ್ಚು ಪ್ರಶಸ್ತಿಗಳನ್ನು ಸ್ವೀಕರಿಸಿದ ಗಣ್ಯರು ಮಾಧ್ಯಮ ಲೋಕದಲ್ಲಿ ಕಿರಿಯರಿಗೆ ಬೆನ್ನೆಲುಬಾಗಿದ್ದವರು ರಾಜ್ಯದ ಹಿರಿಯ ಪತ್ರಕರ್ತರು ದಿವಂಗತ
ಡಾ.ಕೆ.ಬಿ.ಗಣಪತಿ ಶ್ರದ್ದಾಂಜಲಿಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಕೆ.ದೀಪಕ್ ರವರು ಚಾಮರಾಜ ಕ್ಷೇತ್ರದ ಹರೀಶ್ ಗೌಡರು ಶಾಸಕರು ಮಾಜಿ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಹೇಂದ್ರರವರು ಸ್ಟಾರ್ ಆಫ್ ಮೈಸೂರು ಮೈಸೂರು ಮಿತ್ರ ದಿನಪತ್ರಿಕೆಯ ಪ್ರಸಾರಾಣಧಿಕಾರಿ ಗೋಪಿನಾಥ್ ರವರು ಹಾಗೂ ಅಧಿಕೃತ ಪತ್ರಕರ್ತರ ಸಂಘದ ಪಿ.ಸುರೇಶ್ ರವರುಚಿಕ್ಕ ಗಡಿಯಾರ ವೃತ್ತದಲ್ಲಿ ಪತ್ರಿಕೆಯ ವಿತರಕರು ಸಂಘ ಸಂಸ್ಥೆಯ ಪದಾಧಿಕಾರಿಗಳು ದಿನಪತ್ರಿಕೆಯ ವ್ಯವಸ್ಥಾಪಕರು ಹಿರಿಯ ಪತ್ರಿಕ ವಿತರಕರು (ಏಜೆಂಟರ್ ಗಳು ) ದಿನಪತ್ರಿಕೆ ಮಾರಾಟ ಮಾಡುವ ಅಂಗಡಿಯ ಮಾಲೀಕರುಗಳು ಪತ್ರಿಕಾ ಸಮುದಾಯದ ಎಲ್ಲರೂ ಶ್ರದ್ಧ ಭಕ್ತಿಯಿಂದ ಮೌನವಾಗಿ ಅಂತರಾಳದಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ನಮ್ಮ ಪತ್ರಿಕೆ ನಮ್ಮ ಹಿರಿಯರು ಪತ್ರಕರ್ತರನ್ನು ಎಂದೆಂದೂ ಗೌರವಿಸುವ ಅವರಿಲ್ಲದೆ ನಾವಿಲ್ಲ ಕೆಬಿಜಿಯವರು ಮೈಸೂರಿನ ನಗರ ಪತ್ರಿಕ ವಿತರಕರ ಸಂಘಕ್ಕೆ ಇವರ ಕೊಡುಗೆ ಅಪಾರ ವಿತರಕರ ಹಿತಕ್ಕಾಗಿ ಸಾಕಷ್ಟು ಶ್ರಮಿಸಿದವರು ಕಾರ್ಯ ಕ್ರಮಗಳನ್ನು ಮಾಡಲು ಅನುದಾನವನ್ನು ನೀಡಿ ಪತ್ರಿಕೆಯ ವಿತರಕರಿಗೆ ಅತಿ ಹೆಚ್ಚು ಲಾಭದಾಯಕದ ಕಮಿಷನ್ ನೀಡುವ ಮುಖಾಂತರ ಜೀವನ ನಡೆಸಲು ಪತ್ರಿಕ ವಿತರಕರ ಹಿತ ಕಾಪಾಡಿದವರು ಅವರ ನೆರಳಿನಲ್ಲಿ ನಾವು ಬದುಕನ್ನು ಆರಂಭಿಸಿದ್ದೇವೆ.

ಆದರ್ಶ ವ್ಯಕ್ತಿಯಾದ ಡಾಕ್ಟರ್ ಕೆ.ಬಿ. ಗಣಪತಿ ಇವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತನ ಕೃಪೆ ಇರಲಿ ಎಂದೆಂದೂ
ಎಂದು ಹೃದಯಪೂರ್ವಕ ಶ್ರದ್ಧಾಂಜಲಿ ಸಲ್ಲಿಸಲಾಯಿತು ಆತ್ಮೀಯ ಮೈಸೂರು ನಗರ ಪತ್ರಿಕ ವಿತರಕರ ಸಂಘ ಸಂಸ್ಥೆಯ ಪದಾಧಿಕಾರಿಗಳು ವಿತರಕರು ಭಾಗವಹಿಸಿದರು ಎಲ್ಲರಿಗೂ  ಧನ್ಯವಾದಗಳು

Continue Reading

Kodagu

ಚಿಕ್ಕಮ್ಮನ ಮೇಲೆ ಗುದ್ದಲಿಯಿಂದ ಹಲ್ಲೆ: ಆರೋಪಿ ಆರೆಸ್ಟ್‌

Published

on

ಮಡಿಕೇರಿ: ಪೊನ್ನಂಪೇಟೆ ತಾಲೂಕಿನ ಬೆಸಗೂರು ಗ್ರಾಮದಲ್ಲಿ ಸ್ವಂತ ಚಿಕ್ಕಮ್ಮನನ್ನೇ ಗುದ್ದಲಿಯಿಂದ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊನ್ನಂಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ?

ಅರಮಣಮಾಡ ಸಚಿನ್‌(42) ಎಂಬಾತ ಅರಮಣಮಾಡ ಬಾಗು(56) ಎಂಬುವವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದನು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಹಿಂದಿನಿಂದಲೂ ಪರಸ್ಪರ ವೈಶ್ಯಮ್ಯವಿದ್ದು, ಇಂದು ಗದ್ದೆಗೆ ತೆರಳುವ ಹಾದಿಗಾಗಿ ಇವರಿಬ್ಬರ ಮಧ್ಯೆ ಗಲಾಟೆ ನಡೆದು ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿತ್ತು. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

 

Continue Reading

Kodagu

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಮೇಲೆ ಎಫ್ಐಆರ್ ದಾಖಲು

Published

on

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರ ಮೇಲೆ ಬ್ರಹ್ಮಗಿರಿ ಕೊಡವ ವಾರ ಪತ್ರಿಕೆಯ ಸಂಪಾದಕಿ ಉಳಿಯಂಡ ಡಾಟಿ ಪೂವಯ್ಯ ಅವರು ನೀಡಿದ ದೂರಿನ್ವಯ ಭಾರತೀಯ ನ್ಯಾಯ ಸಂಹಿತೆ (BNS) U\S 75(1)(iv) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಶುಕ್ರವಾರ(ಜು.18) ಪಿರ್ಯಾದಿಯವರು ಮಡಿಕೇರಿ ನಗರ ಮಹಿಳಾ ಠಾಣೆಗೆ ಹಾಜರಾಗಿ ನೀಡಿದ ಪುಕಾರಿನ ಸಾರಾಂಶವೇನೆಂದರೆ,ಪಿರ್ಯಾದಿಯವರ 38 ವರ್ಷಗಳಿಂದ ಬ್ರಹ್ಮಗಿರಿ ಕೊಡವ ವಾರ ಪತ್ರಿಕೆಯಲ್ಲಿ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸಿಕೊಂಡಿದ್ದು, ವೈಯಕ್ತಿಕ ದ್ವೇಷ ಎಂಬಂತೆ ಮಾನಹಾನಿ ಮಾಡುವ ಉದ್ದೇಶದಿಂದ ಪೂಮಾಲೆ ಪತ್ರಿಕೆಯ ಸಂಪಾದಕ ಮತ್ತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜನಿಕಂಡ ಮಹೇಶ್ ನಾಚಯ್ಯ ಅವರ ವ್ಯಾಟ್ಸ್ ಅಪ್ ನಂಬರ್ ನಿಂದ ದಿನಾಂಕ 6-07-2025ರಂದು ಸಾಮಾಜಿಕ ಜಾಲತಾಣವಾದ ವ್ಯಾಟ್ಸ್ ಅಪ್ ಗುಂಪುಗಳಲ್ಲಿ ಹಾಗೂ ಬೇರೆಯವರ ವೈಯಕ್ತಿಕ ವ್ಯಾಟ್ಸ್ ಅಪ್ ನಂಬರ್ ಳಿಗೆ ಪಿರ್ಯಾದಿಯವರನ್ನು ಕೊಡವ ಭಾಷೆಯಲ್ಲಿ “ಎಲ್ಲಾ ಬೆತ್ತಲೆ ಆನವಡ ಕೊಣಿ ನೋಟಿಯಪ್ಪ(ಎಲ್ಲಾ ಬೆತ್ತಲಾದವಳ ಚೆಲ್ಲಾಟ ನೋಡ್ರಪ್ಪಾ) ಎಂಬುದಾಗಿ ತೀರಾ ಆಕ್ಷೇಪಕಾರಿಯಾಗಿಯೂ ಆಘಾತಕಾರಿಯಾಗಿಯೂ ಟಿಪ್ಪಣಿ ಬರೆದು ಸುಮಾರು20 ವರ್ಷಗಳ ಹಿಂದೆ ಆಗಿಹೋದ ಘಟನೆಯನ್ನೂ,ಅಂದೂ ನ್ಯಾಯಾಲಯ ನಿರಪರಾಧಿ ಎಂದು ಘೋಷಿಸಿರುವುದನ್ನು ಲೆಕ್ಕಿಸದೆ ವ್ಯಾಪಕ ಅಪಪ್ರಚಾರ ಮಾಡಿ ತೇಜೋವಧೆ ಮಾಡಿ ಪಿರ್ಯಾದಿಯವರಿಗೆ ಮಾನಸಿಕ ಹಿಂಸೆ ಅನುಭವಿಸುವಂತೆ ಮಾಡಿರುತ್ತಾರೆ.

ತಪ್ಪಿತಸ್ಥೆ ಅಲ್ಲವೆಂದು ಘನವೆತ್ತ ಮಡಿಕೇರಿ ನ್ಯಾಯಾಲಯ ತೀರ್ಪು ಹೊರಡಿಸಿರುವುದನ್ನು ಮರೆಮಾಚಿ ಕುತಂತ್ರಿಗಳು ಪಿರ್ಯಾದಿಯವರ ಮೇಲೆ ಆರೋಪಿಸಿದ್ದ ಹಳೆ ವದಂತಿಗಳನ್ನು ಫೋಟೋ ಸಹಿತ ಪ್ರಕಟಿಸಿ ಎಲ್ಲಾ ಗ್ರೂಪ್ ಗಳಿಗೆ ಹರಡಿ ಆರೋಪ ,ಅಸಹ್ಯಕರ ಲೈಂಗಿಕ ಅರ್ಥ ಛಾಯೆ ಬರುವಂತೆ ಶಬ್ದ ಬಳಸಿ ಆಕ್ಷೇಪವಾದ ವಾಕ್ಯಗಳನ್ನು ದುರುದ್ದೇಶದಿಂದ ಬಳಸಿ ಲೈಂಗಿಕವಾಗಿ ಬಣ್ಣದ ಟೀಕೆಗಳ ಪದಗಳನ್ನು ಉಪಯೋಗಿಸಿ ಕಿರುಕುಳ ಕೊಟ್ಟದ್ದು ಪಿರ್ಯಾದಿಯವರನ್ನು ಕಳಂಕಿತ ಮಹಿಳೆ ಎಂಬಂತೆ ಬಿಂಬಿಸಿ ಮಾನಸಿ ಆಘಾತ ಉಂಟುಮಾಡಿರುತ್ತಾರೆ.

ಇದರಿಂದ ಮಾನಸಿಕವಾಗಿ ಬಹಳಷ್ಟು ನೊಂದಿರುವ ಪಿರ್ಯಾದಿ ತುಂಬಾ ಕುಗ್ಗಿ ಹೋಗಿರುತ್ತೇನೆ.ಆದ್ದರಿಂದ ಅಜ್ಜನಿಕಂಡ ಮಹೇಶ್‌ ನಾಚಯ್ಯವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕಾಗಿ ಕೊಟ್ಟ ಪುಕಾರಿಗೆ FIR ದಾಖಲಾಗಿದೆ.

Continue Reading

Trending

error: Content is protected !!