Politics
ಚೆನ್ನಮ್ಮ ದೇವೇಗೌಡ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರ ಸಂತಾಪ
Politics
ಕುಟುಂಬದ ಆಧಾರಸ್ತಂಭ ಕಳೆದುಕೊಂಡೆವು: ನಿಖಿಲ್ ಕುಮಾರಸ್ವಾಮಿ ಭಾವುಕ ನುಡಿ
ಬೆಂಗಳೂರು: “ನಮ್ಮ ಹೆಮ್ಮೆಯ ಅಜ್ಜಿ, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಸಾಹೇಬರ ಧರ್ಮಪತ್ನಿ ಚೆನ್ನಮ್ಮನವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆ ಇಡೀ ಕುಟುಂಬಕ್ಕೆ ಮತ್ತು ನನಗೆ ತುಂಬಲಾರದ ನಷ್ಟ ತಂದಿದೆ” ಎಂದು ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಹೆಮ್ಮೆಯ ಅಜ್ಜಿ, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಸಾಹೇಬರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆ ಇಡೀ ಕುಟುಂಬಕ್ಕೆ ಮತ್ತು ನನಗೆ ತುಂಬಲಾರದ ನಷ್ಟ ತಂದಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಅಜ್ಜಿ ಕೇವಲ ನಮಗೆ ಅಜ್ಜಿಯಾಗಿರಲಿಲ್ಲ; ಇಡೀ ಕುಟುಂಬವನ್ನು ಒಟ್ಟಾಗಿ ಹಿಡಿದಿಟ್ಟಿದ್ದ ಗಟ್ಟಿ ನೆಲೆ ಅವರು. ನಮ್ಮ ಮನೆಯ ದೊಡ್ಡ ಆಧಾರಸ್ತಂಭ. ಮನೆಗೆ ಬಂದ ಯಾರೊಬ್ಬರನ್ನೂ ಅವರು ಹಸಿದ ಹೊಟ್ಟೆಯಲ್ಲಿ ಕಳುಹಿಸುತ್ತಿರಲಿಲ್ಲ; ಬಂದವರೆಲ್ಲರಿಗೂ ಪ್ರೀತಿಯಿಂದ ಉಣಬಡಿಸುತ್ತಿದ್ದ ಅವರ ಆ ಕೈಗಳು ಸಾಕ್ಷಾತ್ ಅನ್ನಪೂರ್ಣೇಶ್ವರಿಯ ಸ್ವರೂಪವಾಗಿತ್ತು. ಅವರ ಆತಿಥ್ಯ, ಸರಳತೆ ಮತ್ತು ಮಮತೆಯ ಮಾತುಗಳು ನನ್ನ ಜೀವನದ ದೊಡ್ಡ ಸ್ಪೂರ್ತಿ. ಅವರು ಕಲಿಸಿದ ಬದುಕಿನ ಪಾಠಗಳು, ತೋರಿದ ಪ್ರೀತಿ ನನ್ನಲ್ಲಿ ಶಾಶ್ವತವಾಗಿ ಜೀವಂತವಾಗಿರುತ್ತದೆ ಎಂದು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.
ನಮ್ಮ ಇಡೀ ಕುಟುಂಬದ ದಾರಿದೀಪವಾಗಿದ್ದ ಅಜ್ಜಿಯ ಆತ್ಮಕ್ಕೆ ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ. ಅವರ ಅಗಲಿಕೆಯ ಈ ತೀವ್ರ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ನಮ್ಮ ಇಡೀ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
Politics
ಚೆನ್ನಮ್ಮ ನಿಧನ| ಕಳೆದ ಒಂದು ವರ್ಷದಿಂದ ಉಸಿರಾಟದ ಸಮಸ್ಯೆ ಇತ್ತು: ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ನಿಧನರಾಗಿದ್ದು, ರಾಜಕೀಯ ನಾಯಕರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಬಳಿ ಮಾತನಾಡಿದ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು, ಚೆನ್ನಮ್ಮ ಅವರಿಗೆ ಕಳೆದ ಒಂದು ವರ್ಷದಿಂದ ಉಸಿರಾಟದ ಸಮಸ್ಯೆ ಇತ್ತು. ಆರು ತಿಂಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ 10 ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿತ್ತು ಎಂದು ತಿಳಿಸಿದ್ದಾರೆ.

ದೇವೇಗೌಡರು ಹಾಗೂ ಚೆನ್ನಮ್ಮ ಅವರದ್ದು ಅನನ್ಯವಾದ ದಾಂಪತ್ಯ ಸಂಬಂಧವಾಗಿತ್ತು ಎಂದು ಅವರು ಸ್ಮರಿಸಿದ್ದಾರೆ.
ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ನಿಧನದಿಂದ ಕುಟುಂಬಸ್ಥರಿಗೆ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೇರಿದಂತೆ ಮುಂದಿನ ಕಾರ್ಯಕ್ರಮಗಳ ಬಗ್ಗೆ ಕುಟುಂಬಸ್ಥರು ಚರ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Politics
ಬಿಡದಿ ಟೌನ್ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ
-
State5 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Hassan19 hours agoಚೆನ್ನಮ್ಮ ಅಂತ್ಯಕ್ರಿಯೆ: ಹಾಸನದಲ್ಲಿ 5 ತಾತ್ಕಾಲಿಕ ಹೆಲಿಪ್ಯಾಡ್ಗಳ ನಿರ್ಮಾಣ
-
Chamarajanagar24 hours agoಅಕ್ರಮ ಮದ್ಯ ಸಾಗಾಟ: ಬೈಕ್, ಮಾಲು ಸಮೇತ ಆರೋಪಿ ಬಂಧನ
-
National4 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Chikmagalur18 hours agoಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹14.67 ಲಕ್ಷ ವಂಚನೆ: ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು
-
Kodagu22 hours agoಭಾಗಮಂಡಲ ಮೇಲ್ಸೇತುವೆ ಮತ್ತು ಸುತ್ತಲಿನ ಅಭಿವೃದ್ಧಿಗೆ 3 ಕೋಟಿ ಅನುದಾನ
-
Kodagu17 hours ago“ಭಾಗಮಂಡಲ ಕಾಮಗಾರಿಗೆ ₹3 ಕೋಟಿ: ಪೊನ್ನಣ್ಣ ಕೋರಿಕೆಗೆ ಅನುದಾನ”
-
Hassan5 hours agoಚೆನ್ನಮ್ಮ ಅಂತಿಮ ದರ್ಶನಕ್ಕೆ ಪ್ರಜ್ವಲ್ ಬರಲ್ಲ:
