Connect with us

Chikmagalur

ಅಕ್ರಮ ಶೆಡ್ ತೆರವುಗೊಳಿಸಿ, ಮೂಲ ಸೌಕರ್ಯ ಕಲ್ಪಿಸಿ : ಎ.ಸಿ ಕುಮಾರ್

Published

on

ಚಿಕ್ಕಮಗಳೂರು : ನಗರದ ಐಜಿ ರಸ್ತೆಯಲ್ಲಿರುವ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಅನಧಿಕೃತವಾಗಿ ಶೆಡ್‌ಗಳನ್ನು ನಿರ್ಮಿಸಲು ಅವಕಾಶ ಕಲ್ಪಿಸಿರುವ ನಗರಸಭೆ ಮತ್ತು ಕೆಎಸ್‌ಆರ್‌ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅನಧಿಕೃತ ಶೆಡ್‌ಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಮೂಲ ಸೌಕರ್ಯ ಒದಗಿಸಬೇಕು ಎಂದು ನಗರಸಭೆಯ ಸದಸ್ಯ ಎ.ಸಿ ಕುಮಾರ್ ಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಬಳಿಕ ಮಾತನಾಡಿ, ನಗರದ ಐಜಿ ರಸ್ತೆಯಲ್ಲಿನ ಹಳೆ ಜೈಲು ಕಾಂಪೌಂಡ್ ಒಳಗಿರುವ ಕೆಎಸ್‌ಆರ್‌ಟಿಸಿಯ ಗ್ರಾಮಾಂತರ ಬಸ್ ನಿಲ್ದಾಣದ ಜಾಗದಲ್ಲಿ ಐಜಿ ರಸ್ತೆಗೆ ಅಭಿಮುಖವಾಗಿ ಹೋಟೆಲ್ ಮತ್ತು ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸ್ಥಳದಲ್ಲಿ ಅನಧಿಕೃತವಾಗಿ ತಗಡಿನ ಶೀಟಿನ ಶೆಡ್‌ಗಳನ್ನು ಚರಂಡಿಯ ಅಂಚಿಗೆ ನಿರ್ಮಿಸಿ, ಪಾದಚಾರಿಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ದಿನನಿತ್ಯದ ಗ್ರಾಮೀಣ ಪ್ರದೇಶದಿಂದ ಸಾವಿರಾರು ಸಂಖ್ಯೆಯ ಶಾಲಾ ಮಕ್ಕಳು, ಸಾರ್ವಜನಿಕರು ಓಡಾಡುವ ಜನದಟ್ಟಣೆಯ ಪ್ರದೇಶವಾಗಿದ್ದು, ಇಲ್ಲಿ ವಾಹನದ ದಟ್ಟಣೆ ಕೂಡ ಅಧಿಕವಾಗಿರುತ್ತದೆ. ಕಾನೂನಿನ ನಿಯಮಗಳನ್ನ ಉಲ್ಲಂಘಿಸಿ ಯಾವುದೇ ಸೆಟ್ ಬ್ಯಾಕ್ ಬಿಡದೆ ಅನಧಿಕೃತವಾಗಿ ಶೆಡ್‌ಗಳನ್ನ ನಿರ್ಮಿಸಿದ್ದಾರೆ. ಈ ಶೆಡ್‌ನಲ್ಲಿ ತೆರೆದಿರುವ ಯಾವುದೇ ಹೋಟೆಲ್ ಸುರಕ್ಷತೆಯ ಕ್ರಮಗಳನ್ನು ಹೊಂದಿಲ್ಲ. ಆದ್ದರಿಂದ ಈ ರೀತಿಯ ತಾತ್ಕಾಲಿಕ ಶೆಡ್‌ನಲ್ಲಿ ಹೋಟೆಲ್ ಮತ್ತು ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ. ಕೂಡಲೇ ಕಾನೂನು ಬಾಹಿರವಾಗಿರುವ ಇವುಗಳನ್ನು ತೆರವುಗೊಳಿಸಬೇಕು. ಈ ಜಾಗವನ್ನು ಇಲಾಖೆಯವರು ವಹಿಸಿಕೊಂಡು ನಾಲ್ಕು ವರ್ಷಗಳು ಕಳೆದರೂ ಸಹ ಬಸ್ ನಿಲ್ದಾಣಕ್ಕೆ ಬೇಕಾದ ಮೂಲ ಸೌಕರ್ಯ ಕಲ್ಪಿಸಿಲ್ಲ, ಸಂಬAಧಪಟ್ಟ ಅಧಿಕಾರಿಗಳು ಈ ಜಾಗದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

Continue Reading
Click to comment

Leave a Reply

Your email address will not be published. Required fields are marked *

Chikmagalur

ಜಿಲ್ಲಾ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿ.ಟಿ.ರವಿ

Published

on

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್‌ಸಿ ಡಾ.ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಆಸ್ಪತ್ರೆಯ ದುಸ್ಥಿತಿ ಕಂಡು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ. ರವಿ ಅವರಿಗೆ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಸಂಕಷ್ಟಗಳನ್ನು ಬಿಚ್ಚಿಟ್ಟರು. “ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ಬಂದರೆ, ಇಲ್ಲಿನ ವೈದ್ಯರು ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದುಕೊಡುತ್ತಿದ್ದಾರೆ. ಬಡವರು ಹಣಕ್ಕೆ ಎಲ್ಲಿ ಹೋಗಬೇಕು?” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಟ್ಟರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಸಿ.ಟಿ. ರವಿ ಅವರು ಜಿಲ್ಲಾ ಸರ್ಜನ್ ಹಾಗೂ ವೈದ್ಯರ ವಿರುದ್ಧ ಸ್ಥಳದಲ್ಲೇ ಗರಂ ಆದರು.


ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ಜನ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಡವರ ಬದುಕು ದುಸ್ತರ

“ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.


ಆದ್ಯತೆ ಯಾವುದು?: “ನಿಮಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ?” ಎಂದು ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.

ಡಯಾಲಿಸಿಸ್ ಸಮಸ್ಯೆ: ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣವನ್ನೂ ನೀಡಿಲ್ಲ. ಇದರಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.


ತುರ್ತು ಕ್ರಮಕ್ಕೆ ಆಗ್ರಹ: ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದರು.

Continue Reading

Chikmagalur

ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ

Published

on

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ.

ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ.

ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಘಟನೆ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಚಿರತೆ ಭೀತಿಯನ್ನು ಹೆಚ್ಚಿಸಿದ್ದು, ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

Continue Reading

Chikmagalur

ಬದುಕಿದ್ದಾಗಲೇ ಅಧಿಕಾರಿಗಳಿಗೆ ತನ್ನ ತಿಥಿಗೆ ಆಹ್ವಾನ ನೀಡಿದ ಗಂಧದ ಬೆಳೆಗಾರ

Published

on

ಚಿಕ್ಕಮಗಳೂರು :  ತರೀಕೆರೆ ತಾಲೂಕಿನ ಗಂಧದ ಬೆಳೆಗಾರ ವಿಶುಕುಮಾರ್ ರಿಂದ ಅಧಿಕಾರಿಗಳಿಗೆ ಆಹ್ವಾನ ಮಾಡಿದರು.ವಾರದ ಹಿಂದೆ ದಯಾಮರಣಕ್ಕೆ ಮನವಿ ಮಾಡಿದ್ದ ಬೆಳೆಗಾರ  ಬದುಕಿದ್ದಾಗಲೇ ಅಧಿಕಾರಿಗಳಿಗೆ ತನ್ನ ತಿಥಿಗೆ ಆಹ್ವಾನ ನೀಡಿದ ಗಂಧದ ಬೆಳೆಗಾರ.

ನಾಳೆ ಬೆಳಗ್ಗೆ 10ಕ್ಕೆ ಸಂತಾಪ ಸಭೆ, ಮಧ್ಯಾಹ್ನ 1 ಗಂಟೆಗೆ ಊಟಕ್ಕೆ ಕರೆದ ಬೆಳೆಗಾರ,ಸಿಸಿಎಫ್ ರನ್ನ ಭೇಟಿ ಮಾಡಿಸಿ, ಇಲ್ಲ ಶಿವಮೊಗ್ಗ ಸಿಸಿಎಫ್ ಕಚೇರಿ ಬಳಿ ಕಾರಿನಲ್ಲೇ ಆತ್ಮಹತ್ಯೆ ಬೆದರಿಕೆ.

ಸಂತಾಪ ಸಭೆಯಲ್ಲಿ ಭಾಗವಹಿಸುವವರು ಎನ್.ಎಚ್.ಎ.ಐ.ನ ಅಧಿಕಾರಿಗಳು, ಅರಣ್ಯ ಇಲಾಖೆಯ ಭಷ್ಟ ಅಧಿಕಾರಿಗಳು, ಪೊಲೀಸ್ ಇಲಾಖೆಯ ಒಳ್ಳೆಯ ಅಧಿಕಾರಿಗಳು, ವಿಶೇಷ ಭೂಸ್ವಾದೀನ ಅಧಿಕಾರಿಗಳು, ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟಕ್ಕೆ ಬೇಸತ್ತು ವಿಭಿನ್ನ ರೀತಿ ಆಕ್ರೋಶ.

ಗಂಧದ ಬೆಳೆಗೆ ಸೂಕ್ತ ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ಬೆಳೆಗಾರನ ಆಕ್ರೋಶ. ರಾಷ್ಟ್ರೀಯ ಹೆದ್ದಾರಿಗೆ ಇವರ ಜಮೀನು, ಗಂಧದ ಮರಗಳು ಹೋಗುತ್ತಿವೆ. ಸೂಕ್ತ ಪರಿಹಾರ ನೀಡದಿದ್ದಕ್ಕೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ.

ಒಂದು ಗಂಧದ ಮರಕ್ಕೆ 420 ರೂ ನಿಗದಿ ಮಾಡಿರುವ ಅರಣ್ಯಾಧಿಕಾರಿಗಳು, 1 ಮಾವಿನ ಮರಕ್ಕೆ 63 ಸಾವಿರ, ತೆಂಗಿಗೆ 37 ಸಾವಿರ, ಬೇವಿಗೆ 2200, ನಿಂಬೆ ಗಿಡಕ್ಕೆ 3400 ರೂ , ಒಂದು ಶ್ರೀಗಂಧದ ಮರಕ್ಕೆ ಕೇವಲ 420 ರೂ ನಿಗದಿ ಮಾಡಿರುವ ಅಧಿಕಾರಿಗಳು ಕೋರ್ಟ್ 25 ಸಾವಿರ ನಿಗಧಿ ಮಾಡಿ ವೈಜ್ಞಾನಿಕ ದರ ನೀಡುವಂತೆ ಸೂಚಿಸಿದ್ದರು ಮಾಡದ ಆರೋಪ , ಬೆಳೆಗಾರ ಅಧಿಕಾರಿಗಳ ನಡೆಗೆ ಬೇಸತ್ತು ವಿಭಿನ್ನ ಶೈಲಿಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

Continue Reading

Trending

error: Content is protected !!