Connect with us

Education

ದೇಶ ಹಾಗೂ ವಿಶ್ವ ಕಟ್ಟುವಲ್ಲಿ ಶಿಕ್ಷಕರು ಮಹತ್ತರ ಪಾತ್ರ

Published

on

ಮಂಡ್ಯ: ದೇಶ ಹಾಗೂ ವಿಶ್ವವನ್ನು ರಚನಾತ್ಮಕವಾಗಿ ಕಟ್ಟುವಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸಿದ್ದಾರೆ. ಶಿಕ್ಷಕ ವೃತ್ತಿ ಪವಿತ್ರವಾಗಿದೆ ಎಂದು ಅಸೋಸಿಯೇಷನ್ ಅಲಯನ್ಸ್ ಕ್ಲಬ್‌ ಅಂತರರಾಷ್ಟ್ರೀಯ ನಿರ್ದೇಶಕ ಡಾ.ನಾಗರಾಜ ವಿ ಭೈರಿ ಹೇಳಿದರು.

ನಗರದ ಕರ್ನಾಟಕ ಸಂಘದ ಕೆ.ವಿ. ಶಂಕರಗೌಡ ಸಭಾಂಗಣದಲ್ಲಿ ಮಂಡ್ಯ ಸಕ್ಕರೆ ನಾಡು ಅಲಯನ್ಸ್ ಕ್ಲಬ್ ವಿಶ್ವ ಶಿಕ್ಷಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ -2024 ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ವಿಶ್ವದಲ್ಲಿ ನಡೆದಿರುವ ಅಭಿವೃದ್ಧಿ ಕ್ರಾಂತಿಗೆ ಶಿಕ್ಷಕರು ನೀಡಿದ ಮಾರ್ಗದರ್ಶನ ಹಾಗೂ ಕಲಿಸುವಿಕೆ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಲಯನ್ಸ್ ಕ್ಲಬ್‌ ದೇಶೀಯ ಸಂಸ್ಥೆಯಾಗಿದ್ದು ಸದಸ್ಯರು ಅಗತ್ಯವಿರುವ ಜನರಿಗೆ ನೆರವಾಗುವ ಮೂಲಕ ಸಹಕಾರ ನೀಡುತ್ತಿದ್ದಾರೆ.ಮಂಡ್ಯದಲ್ಲಿ ಮೂವತ್ತು ಕ್ಲಬ್‌ಗಳು ರಚನಾತ್ಮಕವಾಗಿ ಸೇವಾ ಮಾಡುತ್ತಿದ್ದಾರೆ ಎಂದರು.
ಬಳಿಕ ಮಾತನಾಡಿದ ಜಿಲ್ಲಾ ರಾಜ್ಯಪಾಲ ಕೆ.ಟಿ.ಹನುಮಂತು ಮಾತನಾಡಿ,ಮನುಷ್ಯ ಎಷ್ಟೇ ದೊಡ್ಡವನಾದರೂ ಗುರುವಿನ ಮಾರ್ಗದರ್ಶನ ಬೇಕು.ಎಷ್ಟೋ ಜನ ಉತ್ತಮ ವಾಗಿ ಎಲೆಮರೆಕಾಯಿ ಹಾಗೆ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಅವರನ್ನು ಗುರುತಿಸಿರುವುದಿಲ್ಲ. ಅಂತಹವರನ್ನು ಅಲಯನ್ಸ್ ಸಂಸ್ಥೆ ಗುರ್ತಿಸಿ ಗೌರವಿಸುವ ಕೆಲಸ ಮಾಡಿವೆ.ಇಷ್ಟಾಗಿಯೂ ಶಿಕ್ಷಕರ ಸಮಸ್ಯೆಗಳು ಬೆಟ್ಟದಷ್ಟಿವೆ.ಇವುಗಳನ್ನು ಪರಿಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಕ್ಕರೆ ನಾಡು ಅಲಯನ್ಸ್ ಕ್ಲಬ್ ಅಧ್ಯಕ್ಷೆ ಸಿ.ಕೆ.ನವ್ಯಶ್ರೀ ವಹಿಸಿ ಮಾತನಾಡಿದರು.

ನಂತರ ಜಿಲ್ಲಾ ಸಂಪುಟ ಕಾರ್ಯದರ್ಶಿ ಕೆ.ಎಸ್.ಚಂದ್ರಶೇಖರ್ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಬಿ. ಹೊಸೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಬೋರೇಗೌಡ, ಎಲೆಚಾಕನಹಳ್ಳಿ ಸರ್ಕಾರಿ ಪ್ರೌಢಶಾಲೆ ಎ. ಬಸವರಾಜು, ಮಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಮಸಿಂಗಯ್ಯ, ಶಿವಪುರ ಶಾಲೆ ಎಂ.ಎಚ್.ದಯಾನಂದ,ಜೋಡಿ ಹೊಡಗಟ್ಟ ಸರ್ಕಾರಿ ಪ್ರೌಢಶಾಲೆಯ ಕೆ.ಟಿ. ನಾರಾಯಣ ಅರಸ್, ಪಾಂಡವಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತೋಟಗಾರಿಕಾ ಶಿಕ್ಷಕ ಚನ್ನೇಗೌಡ, ಚಿಕ್ಕರಸಿನಕೆರೆ ಪ್ರೌಢಶಾಲೆ ಎಸ್.ರುದ್ರಪ್ಪ,ಕೃಷ್ಣರಾಜಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಸಹಶಿಕ್ಷಕರಾದ ಬಿ.ಎಂ. ಕೃಷ್ಣೇಗೌಡ, ಮಳವಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಅಣ್ಣಯ್ಯ, ಪಿ. ಇ.ಎಸ್ ವಿಜ್ಞಾನ, ಕಲಾ, ವಾಣಿಜ್ಯ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ಎಂ. ಮಂಜುನಾಥ್, ಮಂಡ್ಯ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ (ಕಲ್ಲು ಕಟ್ಟಡ) ಉಪನ್ಯಾಸಕಿ ಡಾ. ಕೆ.ಆರ್. ರೂಪಶ್ರೀ, ಮಂಡ್ಯ ನಗರದ ಪೊಲೀಸ್ ಕಾಲೋನಿಯ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅರುಣ್ ಕುಮಾರ್, ಹೊಳಲು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಪುಟ್ಟಸ್ವಾಮಯ್ಯ, ಹೆಚ್. ಮಲ್ಲಿಗೆರೆ ಬಿ.ಎಲ್.ಎಸ್ ಪ್ರೌಢಶಾಲೆ ಸಹಶಿಕ್ಷಕ ಎನ್. ಗೋಪಿನಾಥ್, ಶ್ರೀರಂಗಪಟ್ಟಣ ತಾಲೂಕಿನ ಪಿ. ನೇರಳಕೆರೆ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕಿ ಅನಿತಾ ಮನೋಹರಿ, ನಾಗಮಂಗಲ ತಾಲೂಕು ಬೋಗಾದಿ ಪ್ರೌಢಶಾಲಾ ಶಿಕ್ಷಕಿ ಎಚ್. ಇ. ಇಂದ್ರಮ್ಮ, ಕೀಲಾರ ಗ್ರಾಮದ ನಿವೃತ್ತ ಶಿಕ್ಷಕ ಕೆ.ಜಿ. ಲಕ್ಷ್ಮಣ, ಸಂತೆಕಸಲಗೆರೆ ಪ್ರಾಥಮಿಕ ಶಾಲೆ ಸಹಶಿಕ್ಷಕಿ ಹೆಚ್. ಶೋಭಾ, ಹುಳ್ಳೇನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಹಶಿಕ್ಷಕ ಎಂ.ಸಿ. ಗೋವಿಂದ, ಟಿ. ಮಲ್ಲಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಸಿ. ಸುನಿತಾ, ಮದ್ದೂರು ತಾಲೂಕು ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಎಸ್. ವಿಜಯಲಕ್ಷ್ಮಿರವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲ ಕೆ.ಟಿ..ಹನುಮಂತು,ಒಂದನೇ ಉಪ ರಾಜ್ಯಪಾಲ ಕೆ.ಆರ್. ಶಶಿಧರ ಈಚಗೆರೆ, ಜಿಲ್ಲಾ ಸಂಪುಟ ಕಾರ್ಯದರ್ಶಿ ಕೆ.ಎಸ್. ಚಂದ್ರಶೇಖರ್, ಸಕ್ಕರೆ ನಾಡು ಅಲಯನ್ಸ್ ಕ್ಲಬ್ ಕಾರ್ಯದರ್ಶಿ ಕೆ.ಎಂ. ಕುಮಾರ್, ಖಜಾಂಚಿ ಬಿ.ಎನ್. ಚಂದ್ರಶೇಖರ್, ಜಿಲ್ಲಾಧ್ಯಕ್ಷರಾದ ಎಚ್. ಪಿ. ದಯಾನಂದ, ಉಪಾಧ್ಯಕ್ಷ ಕೆ.ಎಂ. ಸಿದ್ದರಾಜು, ವಲಯಾಧ್ಯಕ್ಷ ಎಂ. ಲೋಕೇಶ್, ಪ್ರತಿಭಾಂಜಲಿ ಡೇವಿಡ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಸಂತಕುಮಾರ,ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಡಿ.ರಮೇಶ್,ತಾಲ್ಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಎಸ್. ವಿಜಯಕುಮಾರ್ ಹಾಗೂ ಸಿದ್ದೇಗೌಡ ಇದ್ದರು.

Continue Reading

Education

Free Coaching : ಮಾಸಿಕ 5,000ರೂ. ಜೊತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ಸರ್ಕಾರದಿಂದ ಉಚಿತ ತರಬೇತಿ

Published

on

Free Coaching for KAS, Banking, SSC 2025 – ಸಮಾಜ ಕಲ್ಯಾಣ ಇಲಾಖೆಯಿಂದ ಸರ್ಕಾರಿ ನೌಕರಿಗಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

2024-25ನೇ ಸಾಲಿಗೆ ಸಂಪೂರ್ಣ ಉಚಿತ ತರಬೇತಿಯನ್ನು ಅರ್ಹ ಅಭ್ಯರ್ಥಿಗಳಿಗೆ ನೀಡುತ್ತಿದ್ದು, ಅರ್ಜಿ ಸಲ್ಲಿಸುವ ಹಾಗೂ ಉಚಿತ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಯಾವ ಯಾವ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು?

ಈ ಯೋಜನೆಯ ಅಡಿಯಲ್ಲಿ KAS, SSC, Banking, ರೈಲ್ವೆ, ನ್ಯಾಯಾಂಗ ಸೇವೆ ಸೇರಿದಂತೆ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುತ್ತದೆ. ಇದರ ಜೊತೆಗೆ ಮಾಸಿಕ 5,000ರೂ. ಆರ್ಥಿಕ ಸಹಾಯ ನೀಡಲಾಗುವುದು.

ಯಾವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು?

SC ಹಾಗೂ ST ವರ್ಗಕ್ಕೆ ಸೇರಿದವರಾಗಿದ್ದು, ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆಧಾಯವು 5 ಲಕ್ಷ ರೂ. ಒಳಗೆ ಇರಬೇಕು ಹಾಗೂ ಅಭ್ಯರ್ಥಿಯ ವಯಸ್ಸು 21 ರಿಂದ 37 ವರ್ಷದ ಒಳಗಿರಬೇಕು.

ಆಯ್ಕೆ ಮಾಡಿಕೊಳ್ಳುವ ವಿಧಾನ – ಸಾಮಾನ್ಯ ಪ್ರವೇಶ ಪರೀಕ್ಷೆ ಮುಕಾಂತರ

2024-25ನೇ ಸಾಲಿಗೆ ಸಮಾಜ ಕಲ್ಯಾಣ ವತಿಯಿಂದ SC / ST ವಿದ್ಯಾರ್ಥಿಗಳಿಗಾಗಿ KAS / Banking / IBPS / SSC / Judicial Services & Group-C ಪರೀಕ್ಷೆಗಳಿಗೆ Free Coaching ನೀಡಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಫೆಬ್ರವರಿ 2025:

ಅರ್ಜಿ ಸಲ್ಲಿಸಲು ಜಾಲತಾಣದ ವಿಳಾಸ : https://swdservices.karnataka.gov.in/IGCCD

Continue Reading

Education

ದ್ವಿಚಕ್ರ ವಾಹನ ಖರೀದಿಸಲು ಕೇಂದ್ರದಿಂದ 32,500ರೂ. ತನಕ ಸಹಾಯಧನ : ಅರ್ಜಿ ಸಲ್ಲಿಸೋದು ಹೇಗೆ?

Published

on

PM E Drive Scheme : ದೇಶದಲ್ಲಿ ವಿದ್ಯುತ್ ಚಲನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಾನ್ಯ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟವು ಸೆಪ್ಟೆಂಬರ್ 11, 2024ರಂದು PM ಎಲೆಕ್ಟ್ರಿಕ್ ಡ್ರೈವ್ ಎಂಬ ಯೋಜನೆಗೆ ಅನುಮೋದನೆ ನೀಡಿತು. ಈ ಯೋಜನೆಯು ಎರಡು ವರ್ಷದ ಅವಧಿಯಲ್ಲಿ ಒಟ್ಟು ₹10,900 ಕೋಟಿ ಆರ್ಥಿಕ ವೆಚ್ಚವನ್ನು ಹೊಂದಿದೆ.

ಪಿ. ಎಂ. ಇ ಡ್ರೈವ್ ಯೋಜನೆಯ ಉದ್ದೇಶ :

ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳಿಂದ ಪರಿಸರದ ಮಾಲಿನ್ಯದ ಹೆಚ್ಚಾಗುತ್ತಿದ್ದೂ, ಇದನ್ನು ಹತೋಟಿಗೆ ತರಲು ಮತ್ತು ವಿದ್ಯುತ್ ಚಾಲಿತ ವಾಹನ ಉಪಯೋಗವನ್ನು ಹೆಚ್ಚಿಸುವ ಉದ್ದೇಶ ಈ ಯೋಜನೆಯದ್ದಾಗಿದೆ.

ಈ ಯೋಜನೆಯ ಅಡಿಯಲ್ಲಿ ವಿವಿಧ ವಿದ್ಯುತ್ ಚಾಲಿತ ವಾಹನಗಳನ್ನು ಖರೀದಿಸಲು ಕೇಂದ್ರ ಸರ್ಕಾರವು 32,500ರೂ. ವರೆಗೆ ಸಬ್ಸಿಡಿ ನೀಡುತ್ತಿದೆ.

ಯಾವ ವಾಹನಗಳಿಗೆ ಎಷ್ಟು ಸಬ್ಸಿಡಿ ?

• ಎಲೆಕ್ಟ್ರಿಕ್ ದ್ವಿ-ಚಕ್ರ ವಾಹನ ಖರೀದಿಸುವವರಿಗೆ ಮೊದಲ ವರ್ಷದಲ್ಲಿ 10,000ರೂ. ಹಾಗೂ ಎರಡನೇ ವರ್ಷ 5,000ರೂ. ನೀಡಲಾಗುವುದು.
• ತ್ರಿ-ಚಕ್ರ ವಾಹನಗಳಿಗೆ ಮೊದಲ ವರ್ಷ 25,000ರೂ. ಹಾಗೂ ಎರಡನೇ ವರ್ಷ 12,500ರೂ. ನೀಡಲಾಗುತ್ತದೆ.

ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯ ಅಡಿಯಲ್ಲಿ ಲಾಭ ಪಡೆಯಲು ಮೊದಲು ನಿಮ್ಮ ವಿದ್ಯುತ್ ವಾಹನವನ್ನು ನಿಮ್ಮ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಣಿ ಮಾಡಿಸಿರಿ. ನಂತರದಲ್ಲಿ ನಿಮ್ಮ ವಾಹನದ ಡಿಲರ್ ನಿಮ್ಮ ಆಧಾರ್ ಸಂಖ್ಯೆ ಬಳಸಿ ನಿಮಗೆ e-Voucher ನೀಡುತ್ತಾರೆ.

ಇದರ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ – https://pmedrive.heavyindustries.gov.in/

Continue Reading

Education

ಈ ವರ್ಷದ ಸಂಕ್ರಾಂತಿ ಹಬ್ಬಕ್ಕೆ ಸರ್ಕಾರದಿಂದ ಮಹಿಳೆಯರಿಗೆ ಕೊಡುಗೆ : ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ!

Published

on

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತಹ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಇಲ್ಲಿಯವರೆಗೆ 15 ಕಂತಿನಲ್ಲಿ 30,000ರೂ. ನೀಡಲಾಗಿದೆ.

ಈ ಯೋಜನೆಯ ಹಣವನ್ನು ಪ್ರತಿ ತಿಂಗಳು ಅರ್ಹ ಮಹಿಳಾ ಪಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆಯ (DBT – Direct Benefit Transfer) ಮುಕಾಂತರ 2,000ರೂ. ಹಣವನ್ನು ಜಮಾ ಮಾಡಲಾಗುತ್ತಿದೆ.

16ನೇ ಕಂತಿನ ಹಣವನ್ನು ಯಾವಾಗ ಜಮಾ ಮಾಡಲಾಗುವುದು?

ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರತಿ ತಿಂಗಳು 11ನೇ ತಾರೀಕಿನಿಂದ 16ನೇ ತಾರೀಕಿನ ಒಳಗಾಗಿ ಜಮಾ ಮಾಡಲಾಗುತ್ತಿದೆ. ಅದೇ ರೀತಿ ಈ 16ನೇ ಕಂತಿನ 2,000ರೂ. ಹಣವನ್ನು ಜನವರಿ 11, 2025ರಿಂದ ಜನವರಿ 16, 2025ನೇ ತಾರೀಕಿನ ಒಳಗಾಗಿ ಜಮಾ ಮಾಡಲಾಗುವುದು…

Continue Reading

Trending

error: Content is protected !!